Author: kannadanewsnow05

ಬೆಂಗಳೂರು : ಕೋವಿಡ್ ಹಗರಣದ ತನಿಖೆಗೆ ಸಂಬಂಧಪಟ್ಟಂತೆ ನ್ಯಾ.ಕುನ್ಹಾ ವರದಿಗೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಭೆ ನಡೆಯಿತು. ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ವರದಿಯ ಆಧಾರದ ಮೇಲೆ ನಾವು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು. ಸಂಪುಟ ಉಪ ಸಮಿತಿ ಸಭೆಯ ಅಂತ್ಯವಾದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಭೆಯಲ್ಲಿ ನ್ಯಾ.ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಶಿಫಾರಸಿನ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದ್ದಾರೆ. ಎಫ್ಐಆರ್ ಸೇರಿದಂತೆ ಪ್ರತಿಯೊಂದು ವಿಚಾರಣೆ ಮಾಡಬಹುದು. ಹಿಂದೆ ಚಾಮರಾಜನಗರಕ್ಕೂ ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೆವು ಮುಂದೆ ಬೆಳಗಾವಿಯಲ್ಲಿ ಸಂಪುಟ ಸಮಿತಿ ಸಭೆ ಮಾಡುತ್ತೇವೆ. ಬಿಬಿಎಂಪಿಯ ವ್ಯಾಪ್ತಿಯಲ್ಲಿ 84 ಲಕ್ಷ ಆರ್ಟಿಪಿಸಿಆರ್ ಟೆಸ್ಟ್ ಮಾಡಿದ್ದಾರೆ 84 ಲಕ್ಷ ಆರ್ ಟಿ ಪಿ ಸಿ ಆರ್ ಟೆಸ್ಟಿಗೆ 500 ಕೋಟಿ ರೂಪಾಯಿ ಆಗಿದೆ. ಈ ಸಂಬಂಧ…

Read More

ಚಾಮರಾಜನಗರ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಈ ಒಂದು ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು ವರದಿ ಬಂದ ಬಳಿಕ ಇದರಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ನಿನ್ನೆ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲೂ ಚರ್ಚೆ ಮಾಡಿದ್ದೇವೆ. ಇದಕ್ಕೆ ಕಮಿಟಿಯನ್ನು ರಚಿಸಿದ್ದೇವೆ. ಅವರು ವರದಿ ಕೊಡುತ್ತಾರೆ. ವರದಿಯ ಬಳಿಕ ತಪ್ಪಿತಸ್ಥ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಡ್ರಗ್ ಕಂಟ್ರೋಲರ್ ನನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಯಾರು ಔಷಧಿಯನ್ನು ಸಪ್ಲೈ ಮಾಡಿದ್ದಾರಲ್ಲ ಅವರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗಿದೆ ಎಂದು ಚಾಮರಾಜನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಾಣಂತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು, ಇಂದು…

Read More

ಬೆಂಗಳೂರು : ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಬೃಹತ್ ಗಾತ್ರದ ಮರದ ಕೊಂಬೆ ಒಂದು ಹಠಾತ್ತನೆ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರಿನಲ್ಲಿ ಚಲಿಸುತ್ತಿದ್ದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಮಗು ಸೇರಿ ಉಳಿದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ಯಾಲೇಸ್ ರೋಡ್ ಅಂಡರ್ ಪಾಸ್ ಬಳಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದಿದೆ. ಕಾರು ಸಂಪೂರ್ಣ ಜಖಂ ಆಗಿದ್ದು, ಚಾಲಕ ಕಾರ್ತಿಕ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಗುವಿನ ಸಮೇತ ಆರ್ ಟಿ ನಗರದ ಕಡೆಗೆ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಡನ್ ಆಗಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಉಳಿದ ನಾಲ್ವರು ಪಾರಾಗಿದ್ದಾರೆ. ಪೊಲೀಸರು ಬಂದು ರಸ್ತೆಯನ್ನು ಕ್ಲಿಯರ್ ಮಾಡಿದ ಬಳಿಕ, ಸುಮಾರು ಒಂದು ಗಂಟೆಗೆ ಬಿಬಿಎಂಪಿ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದಾರೆ.

Read More

ಬೆಂಗಳೂರು : ಕೊರಿಯರ್ ಮುಖಾಂತರ ರಾಜ್ಯದ ವಿವಿಧ ಭಾಗಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿವಿಧ ಕೊರಿಯರ್ ಏಜೆನ್ಸಿಗಳ ಮೇಲೆ ಸಿಸಿ ಬೇಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ಇಂದು ಬೆಂಗಳೂರಿನ ಕೊರಿಯರ್ ಏಜೆನ್ಸಿ ಗಳ ಮೇಲೆ ಸಿಸಿಬಿ ದಾಳಿ ಮಾಡಿದೆ. ಕೊರಿಯರ್ ಮೂಲಕ ಮಾದಕ ವಸ್ತುಗಳನ್ನು ಸಾಕಾಟ ಮಾಡಲಾಗುತ್ತಿದೆ. ಬೆಂಗಳೂರು ಸಿಸಿಬಿ ಪೊಲೀಸ್ ರಿಂದ ಸ್ಪೆಷಲ್ ಡ್ರೈವ್ ಮೂಲಕ ತನಿಖೆ ಮಾಡುತ್ತಿದ್ದು, ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೊರಿಯರ್ ಏಜೆನ್ಸಿಯಲ್ಲಿ ಡಾಗ್ ಸ್ಕ್ವಾರ್ ನಿಂದ ತನಿಖೆ ನಡೆಸುತ್ತಿದ್ದಾರೆ.ಡ್ರಗ್ಸ್ ಮಾರಾಟಕ್ಕೆ ಬ್ರೇಕ್ ಹಾಕಲು ಸಿಸಿಬಿ ಮುಂದಾಗಿದೆ. ಇತ್ತೀಚಿಗೆ ಕೊರಿಯರ್ ಮುಖಾಂತರ ಹಾಗೂ ಪೋಸ್ಟ್ ಗಳ ಮುಖಾಂತರ ಡ್ರಗ್ಸ್ ಬೆಂಗಳೂರಿಗೆ ಬರುತ್ತಿತ್ತು.ಅಲ್ಲದೆ ಈಗಾಗಲೇ ಸಿಸಿಬಿ ಪೊಲೀಸರು ಹಲವು ಕಾರ್ಯಾಚರಣೆ ಮಾಡಿ ಡ್ರಗ್ ಪೇಡ್ಲರ್ ಗಳನ್ನು ಕೂಡ ಅರೆಸ್ಟ್ ಮಾಡಿದ್ದಾರೆ.

Read More

ಬಳ್ಳಾರಿ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಈ ಒಂದು ಪ್ರಕರಣಕ್ಕೆ ಲೋಕಾಯುಕ್ತ ಎಂಟ್ರಿ ಆಗಿದೆ. ಇದೀಗ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿ, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದೆ. ಬಾಣಂತಿಯರ ಸಾವಿನ ತನಿಖೆಗೆ ಇಳಿದ ಲೋಕಾಯುಕ್ತ ಇಂದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ತಂಡದವರು ಇದೀಗ ಭೇಟಿ ನೀಡಿದ್ದಾರೆ. ಸರಣಿ ಸಾವಿನ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದುವರೆಗೂ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಸೇರಿ ಇದುವರೆಗೆ ಬಳ್ಳಾರಿಯಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದು, ಸಾರ್ವಜನಿಕರು ಆಸ್ಪತ್ರೆಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಒಂದು ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಯ್ಯ ಎಂಬ ಬಾಣಂತಿ ಮಹಿಳೆ ಸಾವನ್ನಪ್ಪಿದ್ದಾರೆ. ಬಾಣಂತಿಯರ ಸಾವಿಗೆ ಗ್ಲುಕೋಸ್ ಸಹಿತ ‘IV ಗ್ಲೋಕೋಸ್’ ಕಾರಣ!…

Read More

ಬೆಳಗಾವಿ : ಇತ್ತೀಚೆಗೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿಯೇ ಎಸ್ ಡಿ ಎ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಒಂದು ಘಟನೆ ಇಡೀ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ಇದೀಗ ಎಎಸ್ಐ ಒಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಂತಹ ASI ಅವರನ್ನ ಶಂಭು ಮೇತ್ರಿ (52) ಎಂದು ತಿಳಿದುಬಂದಿದೆ.ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಶನಿವಾರ ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

Read More

ಕಲ್ಬುರ್ಗಿ : ಕಲ್ಬುರ್ಗಿ ಸೆಂಟ್ರಲ್ ಜೈಲಿನಲ್ಲಿ ಮತ್ತಷ್ಟು ಕರ್ಮಕಾಂಡದ ವಿಡಿಯೋಗಳು ಈಗ ಬಯಲಾಗಿದೆ. ಕೈದಿಗಳು, ಎಣ್ಣೆ ಹೊಡೆಯುತ್ತಾ ಸಿಗರೇಟ್ ಸೇದುತ್ತ ಎಂಜಾಯ್ ಮಾಡುತ್ತಿದ್ದು, ಹಾಗೂ ಗುಟ್ಕಾ ಗಳ ರಾಶಿ ರಾಶಿ ವಿಡಿಯೋ ಇದೀಗ ವೈರಲ್ ಆಗಿದೆ. ಹಿರೇವಿಚಾರವಾಗಿ ಜೈಲಿನ ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ನನ್ನ ವಿರುದ್ಧ ಷಡ್ಯಂತರ ಮಾಡಿರೋದು ಪಕ್ಕಾ ಎಂದು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೆಲ್ಲವೂ ಪಕ್ಕಾ ಪ್ಲಾನ್ ಮಾಡಿಯೇ ಮಾಡುತ್ತಿದ್ದಾರೆ. ಅಕ್ಟೋಬರ್ 14ರಂದು ನಾನು ಜೈಲಿನ ಅಧೀಕ್ಷಕಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಮರುದಿನ ಅಂದರೆ ಅಕ್ಟೊಬರ್ 15, 16 ಮತ್ತು 17ರಂದು ನಮ್ಮ ಹಿರಿಯ ಅಧಿಕಾರಿಗಳೇ ಜೈಲಿಗೆ ತನಿಖೆ ನಡೆಸಲು ಬಂದಿದ್ದರು. ಅಲ್ಲಿಯವರೆಗೂ ನಾನು ಯಾರನ್ನು ಭೇಟಿಯಾಗಿಲ್ಲ. ವೈರಲ್ ಆದಂತಹ ವಿಡಿಯೋದಲ್ಲಿ ಅಕ್ಟೋಬರ್ 15 ರ ದಿನಾಂಕ ಇದೆ. ಅಂದರೆ ಇವರು ನನ್ನ ವಿರುದ್ಧ ಷಡ್ಯಂತರ ಮಾಡುತ್ತಿರುವುದು ಪಕ್ಕಾ ಆಗಿದೆ. ಆದಷ್ಟು ಬೇಗ ಎಲ್ಲವನ್ನೂ ವಿವರಿಸುತ್ತೇನೆ. ಇದರ ಹಿಂದಿನ ಷಡ್ಯಂತ್ರವೇನು ಅನ್ನೋದನ್ನ ಶೀಘ್ರವೇ ಹೇಳುತ್ತೇನೆ ಎಂದು…

Read More

ರಾಯಚೂರು : ಎರಡು ಬಣಗಳ ಬಡಿದಾಟ ನಡೆಯುತ್ತಿದ್ದರು, ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬ್ಳೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಸೆಪ್ಟೆಂಬರ್ 6 ರಂದು ಎರಡು ಬಣಗಳ ನಡುವೆ ಗಲಾಟೆ ನಡೆದಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಮಿರ್ಜಾಪುರ ಗ್ರಾಮದಲ್ಲಿ ಎರಡು ಬನಗಳ ನಡುವೆ ಗಲಾಟೆ ನಡೆದಿತ್ತು. ಈ ಒಂದು ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು 6 ಜನರು ಗಾಯಗೊಂಡಿದ್ದರು. ಗಲಾಟೆಯ ವೇಳೆ ಕುಟುಂಬಸ್ಥರು ಪೊಲೀಸರಿಗೆ ಕರೆ ಮಾಡಿದ್ದರು. ಆದರೂ ಪಿಎಸ್ಐ ಅವಿನಾಶ್ ಸೂಕ್ತ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.ಪಿಎಸ್ಐ ಅವಿನಾಶ್ ಕಾಂಬಳೆ ನಿರ್ಲಕ್ಷ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬಳೆ ಸಸ್ಪೆಂಡ್ ಆಗಿದ್ದಾರೆ. ಬಳ್ಳಾರಿ ವಲಯ ಐಜಿಪಿ ಲೋಕೇಶ್ ಕುಮಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Read More

ಕಲಬುರ್ಗಿ : ಕಲ್ಬುರ್ಗಿಯ ಸೆಂಟ್ರಲ್ ಜೈಲಿನ ಕರ್ಮಕಾಂಡ ಬಯಲಾಗಿದೆ. ಸೆಂಟ್ರಲ್ ಜೈಲಿನೊಳಗಡೆ ಕೈದಿಗಳು ಎಣ್ಣೆ ಪಾರ್ಟಿ ಮಾಡುತ್ತಾ ಸಿಗರೇಟ್ ಸಿಗುತ್ತಾ ಬಿಂದಾಸ್ ಆಗಿದ್ದಾರೆ. ಅಲ್ಲದೆ ಸೆಲ್ ಒಳಗಡೆ ಕಂತೆ ಕಂತೆ ನೋಟು ಎಣಿಸಿಕೊಳ್ಳುತ್ತಿದ್ದಾರೆ. ಕೈದಿಗಳು ಮೋಜು ಮಾಸ್ತಿ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ಕಲ್ಬುರ್ಗಿ ಸೆಂಟ್ರಲ್ ಜೈಲಿನ ಮತ್ತಷ್ಟು ವಿಡಿಯೋಗಳು ಇದೀಗ ವೈರಲ್ ಆಗಿದೆ. ನಿನ್ನೆ ಕಲಬುರ್ಗಿ ಜೈಲಿನಿಂದ ಆರು ಕೈದಿಗಳ ಸ್ಥಳಾಂತರ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೈದಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಎರಡು ತಿಂಗಳ ಹಿಂದಿನ ವಿಡಿಯೋ ಕೈದಿಗಳು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸ್ಮಾರ್ಟ್ ಫೋನ್ ಗಳು, ಬಿಡಿ ಸಿಗರೇಟ್, ರಾಶಿ ಹಾಕಿರುವ ವಿಡಿಯೋಗಳು ವೈರಲ್ ಆಗಿವೆ. ಜೈಲು ಮುಖ್ಯ ಅಧಿಕ್ಷಕಿ ಅನಿತಾ ಅವರನ್ನು ಟಾರ್ಗೆಟ್ ಮಾಡಿ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ಮುಖ್ಯ ಅಧಿಕ್ಷಕಿ ಅನಿತಾ ಅವರ ವರ್ಗಾವಣೆಗೆ ಈ ಒಂದು ಹುನ್ನಾರ ನಡೆದಿದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಕ್ಟೋಬರ್ 14ರಂದು ಅನಿತಾ ಅವರು ಜೈಲು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವು ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಮುಡಾದಲ್ಲಿ ಸೈಟ್ ಕ್ರಯ ಆಗುವ ಮುನ್ನವೇ ಅಗ್ರಿಮೆಂಟ್ ಸೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಕೋಟ್ಯಾಂತರ ರೂಪಾಯಿಗೆ ಬೆಲೆಬಾಳುವ ಸೈಟ್ಗಳನ್ನು ಕೇವಲ 3 ಸಾವಿರಕ್ಕೆ ಮಾರಾಟ ಮಾಡಿದ್ದು ಇದರಿಂದ ಸರ್ಕಾರಕ್ಕೆ 300 ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಮೈಸೂರಿನ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ 23 ನಿವೇಶನಗಳನ್ನು ಕೇವಲ 3 ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಮುಡಾದ ವಿರುದ್ಧ ಕೇಳಿಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.ಮುಡಾ ಮಾಜಿ ಆಯುಕ್ತ ‌ದಿನೇಶ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕ ಬಡಾವಣೆಯ ಮಂಜುನಾಥ್​​ನಿಂದ ಮಹಾ ಭೂಗಳ್ಳತನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಮುಡಾ ಮಾಜಿ ಆಯುಕ್ತ ‌ದಿನೇಶ್…

Read More