Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಬಾಲಕಿಯು ಗರ್ಭಿಣಿಯಾಗಿರುವ ಹಾಗೂ ಗರ್ಭಪಾತ ಮಾಡಿರುವ ಕುರಿತು ಮಾಹಿತಿ ಮುಚ್ಚಿಟ್ಟಿದ್ದ ಆರೋಪಕ್ಕೆ ಗುರಿಯಾಗಿದ್ದ ವೈದ್ಯೆಯೊಬ್ಬರ ವಿರುದ್ಧ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್ ತನಿಖಾಧಿಕಾರಿಗಳ ಅನುಮಾನಾಸ್ಪದ ಕಥೆ ನಂಬಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. https://kannadanewsnow.com/kannada/856-crores-to-the-districts-to-solve-the-water-problem-released-by-minister-krishna-byregowda/ ಅಂಕೋಲಾದ ಕೃಷ್ಣಾರೆಡ್ಡಿ ಮಂಕ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ್ ಅವರಿದ್ದ ಧಾರವಾಡ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿದಾರ ವೈದ್ಯರನ್ನು ಪ್ರಕರಣದಿಂದ ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದೆ. https://kannadanewsnow.com/kannada/court-orders-registration-of-case-against-kpccs-spokesperson-lakshmana-for-making-baseless-allegations-against-pratap-simha/ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂತ್ರಸ್ತೆ ಆಕೆಯ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕಾರವಾರದ ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ್ದ ಹೊರರೋಗಿಗಳ ರಶೀದಿ ತಂದಿದ್ದು, ಅದರಲ್ಲಿ ಆಕೆಯ ವಯಸ್ಸು 18 ಎಂಬುದಾಗಿ ಇತ್ತು. ಆದ್ದರಿಂದ ಗರ್ಭಪಾತ ಮಾಡಿದ್ದು, ದೂರು ನೀಡುವ ಪ್ರಮೇಯ ಉಂಟಾಗಿಲ್ಲ. ಆದ್ದರಿಂದ ಪ್ರಕರಣದಿಂದ ಅರ್ಜಿದಾರರನ್ನು ಮುಕ್ತಗೊಳಿಸಬೇಕು ಎಂದು ಕೋರಿದ್ದರು. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂತ್ರಸ್ತೆಯು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ರಶೀದಿಯೊಂದಿಗೆ ಪಾಲಕರು ಹಾಗೂ ಮೊದಲನೇ…
ಬೆಂಗಳೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಮ್. ಲಕ್ಷ್ಮಣ ಆಧಾರ ರಹಿತ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಮಾನನಷ್ಟ ಮೊಕದಮ್ಮೆ ಹಾಕಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣ ಸಮಯದಲ್ಲಿ 60 ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಪಾದನೆ ಮಾಡಿ, ಕೊಡಗಿನ ಬೇನಾಮಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ಕುರಿತು ಐಟಿ, ಇಡಿಗೆ ದೂರು ಸಲ್ಲಿಸುತ್ತೇನೆ ಎಂದು ಲಕ್ಷ್ಮಣ್ ಅವರು 2023 ರ ಜೂನ್ 16 ಹಾಗೂ 20ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ. https://kannadanewsnow.com/kannada/bjp-offered-rs-50-crore-to-each-congress-mla-siddaramaiah/ 2023ರ ಡಿಸೆಂಬರ್ 13ರಂದು ಸಂಸತ್ ಲೋಕಸಭೆಯಲ್ಲಿ ಮೈಸೂರಿನ ಮನೋರಂಜನ್ ಮತ್ತು ಆತನ ಸ್ನೇಹಿತ ಸಾಗರ್ ಶಾ ಅವರು ಹೊಗೆ ಬಾಂಬ್ ಸ್ಫೋಟಿಸಿದ್ದು, ಆ ಕೃತ್ಯ ಎಸಗಲು ಅವರಿಗೆ ಪ್ರತಾಪ್ ಸಿಂಹ ತರಬೇತಿ ನೀಡಿರುವ ಬಗ್ಗೆ 5 ನಿಮಿಷದ ವಿಡಿಯೋ ತಮ್ಮ ಬಳಿ ಇದೆ. ಅದನ್ನು…
ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. https://kannadanewsnow.com/kannada/bengaluru-cafe-ied-blast-3-5-hour-surgery-for-injured-woman/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದು, ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು. https://kannadanewsnow.com/kannada/caste-census-report-to-be-decided-after-cabinet-discussions-siddaramaiah/ ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು. https://kannadanewsnow.com/kannada/big-news-cooker-bomb-blast-resembles-cafe-blast-explosive-information-revealed-during-khaki-inspection/
ಹಾಸನ : ಹಲವು ಸಮುದಾಯಗಳ ವಿರುದ್ಧದ ನಡೆಯು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/big-news-cooker-bomb-blast-resembles-cafe-blast-explosive-information-revealed-during-khaki-inspection/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿಗಳ ಅತ್ತಿ ವರದಿ ಸಲ್ಲಿಕೆಯಾಗಿರುವ ಪ್ರಶ್ನೆಗೆ ಉತ್ತರಿಸಿ ಜಯಪ್ರಕಾಶ್ ಹೆಗಡೆ ಅವರು ವರದಿಯನ್ನು ಸಲ್ಲಿಸಿದ್ದಾರೆ ಇದುವರೆಗೂ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ ಈ ಕುರಿತಂತೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/modi-government-has-decided-to-appoint-25-private-sector-experts-for-key-posts-at-the-centre/ ಬಿಜೆಪಿಯು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು. ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು…
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಡೆಸುತ್ತಿರುವ ಪರಿಶೀಲನ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದ್ದು 2022 ರಲ್ಲಿ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಬ್ಲಾಸ್ಟಿಗೂ ಸಾಮ್ಯತೆ ಇದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/modi-government-has-decided-to-appoint-25-private-sector-experts-for-key-posts-at-the-centre/ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆಯಾ ಎಂದು ಇದೀಗ ಖಾಕಿ ಪಡೆ ಪರಿಶೀಲನೆ ನಡೆಸುತ್ತಿದೆ.ಎರಡಕ್ಕೂ ಸಾಮ್ಯತೆ ಇರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಸಾಮ್ಯತೆ ಇರುವ ಹಲವಾರು ಅಂಶಗಳು ಪತ್ತೆಯಾಗಿವೆ. ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಬಳಸಿದ ಸ್ಪೋಟಕ ವಸ್ತುಗಳನ್ನು ಕೂಡ ಈ ಒಂದು ಸ್ಫೋಟದಲ್ಲಿ ಬಳಸಲಾಗಿದೆ. ಎರಡು ಕಡೆ ಬ್ಲಾಸ್ಟ್ ನಲ್ಲಿ ಒಂದೇ ಮಾದರಿ ಹೊಗೆ ಬಂದಿದ್ದು ಸ್ಫೋಟಕ್ಕೆ ಬ್ಯಾಟರಿ ಡಿಟೋನೇಟರ್, ನಟ್ಟು, ಬೋಲ್ಟ್, ಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/update-rameswaram-cafe-bomb-blast-central-intelligence-agency-visits-late-at-night/ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಸ್ಫೋಟದ ರೂವಾರಿಯ…
ಬೆಂಗಳೂರು : ನಾಳೆಯಿಂದ ಮಾರ್ಚ್ 6ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ. https://kannadanewsnow.com/kannada/update-rameswaram-cafe-bomb-blast-central-intelligence-agency-visits-late-at-night/ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. https://kannadanewsnow.com/kannada/panchamitra-portal-launched-these-services-of-gram-panchayats-will-now-be-available-online/ ಬಿಬಿಎಂಪಿಯ 145 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 228 ನಮ್ಮ ಕ್ಲಿನಿಕ್ಗಳಲ್ಲಿ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಹಾಗೂ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಮಾಲ್ಗಳು, ಖಾಸಗಿ ನರ್ಸಿಂಗ್ ಹೋಮ್ ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣ ಇನ್ನು ಮುಂತಾದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಬೂತ್ ರಚಿಸಲಾಗಿದೆ. https://kannadanewsnow.com/kannada/%e0%b2%b0%e0%b2%be%e0%b2%ae%e0%b3%87%e0%b2%b6%e0%b3%8d%e0%b2%b5%e0%b2%b0%e0%b2%82-%e0%b2%95%e0%b3%86%e0%b2%ab%e0%b3%86-%e0%b2%b8%e0%b3%8d%e0%b2%ab%e0%b3%8b%e0%b2%9f-%e0%b2%98%e0%b2%9f%e0%b2%a8/ ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ ಕಡೆ ಟ್ರಾನ್ಸಿಟ್ ಬೂತ್ಗಳನ್ನು ತೆರೆಯಲಾಗುವುದು. ಲಸಿಕಾ ಕಾರ್ಯಕರ್ತೆಯರು ಇಲ್ಲಿ ಕಂಡು ಬರುವ…
ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಕೇಂದ್ರ ಗುಪ್ತಶರ ಇಲಾಖೆಯ ಭೇಟಿ ನೀಡಿ ಸ್ಥಳದಲ್ಲಿ ಸ್ಯಾಂಪಲ್ ಗಳನ್ನು ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/panchamitra-portal-launched-these-services-of-gram-panchayats-will-now-be-available-online/ ರಾಮೇಶ್ವರಂ ಕೆಫೆಗೆ ತಡರಾತ್ರಿ ಕೇಂದ್ರ ಗುಪ್ತಚರ ಇಲಾಖೆ ಭೇಟಿ ನೀಡಿದೆ ರಾಮೇಶ್ವರಂ ಕೆಫೆಯಲ್ಲಿ ಪರಿಶೀಲನೆ ನಡೆಸಿ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದು ಪ್ರಕರಣದ ಗಂಭೀರತೆ ಅರಿತು ಕೇಂದ್ರ ತನಿಖ ತಂಡಗಳು ಭೇಟಿ ನೀಡಿವೆ. FSL ತಂಡ, NIA ತಂಡ, ಐ ಬಿ ತಂಡ ಭೇಟಿ ನೀಡಿ ಸ್ಥಳದಲ್ಲಿ ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/%e0%b2%b0%e0%b2%be%e0%b2%ae%e0%b3%87%e0%b2%b6%e0%b3%8d%e0%b2%b5%e0%b2%b0%e0%b2%82-%e0%b2%95%e0%b3%86%e0%b2%ab%e0%b3%86-%e0%b2%b8%e0%b3%8d%e0%b2%ab%e0%b3%8b%e0%b2%9f-%e0%b2%98%e0%b2%9f%e0%b2%a8/ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದು, ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಶಂಕೆ ಮೇರೆಗೆ ವಿಚಾರಣೆಗೆ ಒಳಪಡಿಸಲಾಗಿದ್ದವರ ಪೈಕಿ ಓರ್ವ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/public-exams-for-classes-5-8-and-9-to-begin-from-march-11-education-department/ ಬೆಳಗ್ಗೆ ಸುಮಾರು…
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. https://kannadanewsnow.com/kannada/public-exams-for-classes-5-8-and-9-to-begin-from-march-11-education-department/ ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದು, ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಶಂಕೆ ಮೇರೆಗೆ ವಿಚಾರಣೆಗೊಳಪಡಿಸಲಾಗಿದ್ದವರ ಪೈಕಿ ಓರ್ವ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rameshwaram-cafe-blast-accused-who-ordered-rava-idli-identified-uapa-case-filed/ ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಟೋಪಿ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ. https://kannadanewsnow.com/kannada/rameswaram-cafe-blast-case-governor-gehlot-vijayendra-meet-injured/ ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ…
ಹಾಸನ : ಇತ್ತೀಚಿಗೆ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೇರೆ ಪಕ್ಷದವರು ಮತ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ಗೆ ಯಾರು ಮತ ಹಾಕಿದ್ದಾರೆ ಎಂಬುದು ಕುರಿತು ಮಾಹಿತಿ ಇಲ್ಲ ಆದರೆ ಮತ ಹಾಕಿದವರಿಗೆ ಸರ್ಕಾರ ಬೆಂಬಲ ನೀಡುತ್ತದೆ ಎಂದು ತಿಳಿಸಿದರು. https://kannadanewsnow.com/kannada/due-to-non-payment-of-fees-google-india-thinking-to-remove-many-apps/ ಕಾಂಗ್ರೆಸ್ ಗೆ ಮತ ಹಾಕಿದವರಿಗೆ ಸರ್ಕಾರದಿಂದ ಬೆಂಬಲ ನೀಡುತ್ತೇವೆ ಜೆಡಿಎಸ್ ಜೊತೆ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ಆದ್ದರಿಂದ ಅವರ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಬೆಂಬಲ ನೀಡುತ್ತದೆ ಎಂದು ಹಾಸನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/611-grams-of-gold-worth-rs-37-lakh-seized-at-bengaluru-airport-foreign-passenger-seized/ ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭೆಯ ನಾಲ್ಕು ಸ್ಥಾನಗಳು ಹೀಗೆ ಚುನಾವಣೆ ನಡೆದಿತ್ತು ಇದರಲ್ಲಿ ಅಜಯ್ ಮಕೆನ್ ಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಮತ ಹಾಕುವ ಮೂಲಕ ಬಾರಿ ಸಂಚಲನ ಸೃಷ್ಟಿಸಿದ್ದಾರೆ. ಇದನ್ನು ವಿರೋಧಿಸಿದ ಬಿಜೆಪಿ ನಾಯಕರು ಅವರ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕ ನಿಂದ 37 ಲಕ್ಷ ಮೌಲ್ಯದ 611 ಗ್ರಾಂ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/strict-action-will-be-taken-against-those-who-raised-pro-pakistan-slogans-based-on-fsl-report-siddaramaiah/ 37 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳ್ಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 611 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/heres-the-importance-of-rose-water-in-taking-care-of-your-skin/ ಶ್ರೀಲಂಕಾ ಏರ್ ಲೈನ್ಸ್ ನಿಂದ ಪ್ರಯಾಣಿಕ ಬಂದಿದ್ದ ಈ ವೇಳೆ ವಿಚಾರಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದ ತಕ್ಷಣ ಆತನನ್ನು ಪರಿಶೀಲನೆ ನಡೆಸಿದ್ದಾರೆ.ಪ್ರಯಾಣಿಕನ ತಪಾಸಣೆಯ ವೇಳೆ 37 ಲಕ್ಷ ಮೌಲ್ಯದ 611 ಗ್ರಾಂ ಚಿನ್ನವನ್ನು ಪಡಿಸಿಕೊಂಡಿದ್ದಾರೆ. ಇದೀಗ ಆರೋಪಿಯನ್ನು ವಶಪಡಿಸಿಕೊಂಡು ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.