Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಬಾಲಕಿಯ ಕೆನ್ನೆಗೆ ಬಿಸಿ ಚಮಚದಿಂದ ಬರೆಯಿಟ್ಟು ಅಂಗನವಾಡಿ ಸಹಾಯಕಿ ಕ್ರೂರತ್ವ ಮೆರೆದಿದ್ದಾಳೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.ಈ ಒಂದು ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ. ಬಾಲಕಿಯ ಕೆನ್ನೆಗೆ ಸಹಾಯಕಿ ಅನ್ನದ ಚಮಚದಿಂದಬರೆಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಿನ್ನೆ ನಡೆದಿದೆ. ಬರೆಯಿಂದ ಪ್ರೀತಿ ಎಂಬ ಬಾಲಕಿಯ ಕೆನ್ನೆಗೆ ಗಾಯವಾಗಿದೆ. ಅಂಗನವಾಡಿ ಕಾರ್ಯಕರ್ತೆ ಶೋಭಾ, ಸಹಾಯಕಿ ಶಾರವ್ವಅವರನ್ನು ತಕ್ಷಣ ಅಮಾನತುಗೊಳಿಸಿ ಸಿಡಿಪಿಒ ಕಾಶಿಬಾಯಿ ಆದೇಶಿಸಿದ್ದಾರೆ. ಬರೆ ಹಾಕಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಬೆಂಗಳೂರು : ಎಲ್ಲವೂ ಫ್ರೀಯಾಗಿ ಕೊಡುತ್ತಾ ಹೋದರೆ ಸರ್ಕಾರ ನಡೆಸುವುದು ಹೇಗೆ? ಎಂದು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ ವಿಚಾರವಾಗಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿದ್ದರು. ಇದೀಗ ಜಲಮಂಡಳಿ ನೀರಿನ ದರ ಏರಿಕೆ ಕುರಿತಂತೆ 3 ಮಾದರಿ ದರ ಪರಿಷ್ಕರಣೆಯ ಪಟ್ಟಿಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೀಘ್ರದಲ್ಲಿ ದರ ಏರಿಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ. ಹೌದು ಕಾವೇರಿ ನೀರಿನ ದರ ಏರಿಕೆಗೆ ಸಂಬಂಧಿಸಿದಂತೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ. ಕೆ.ಶಿವಕುಮಾರ್ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಇದೀಗ ಪ್ರಸ್ತಾವನೆ ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಒಂದೆರಡು ದಿನದಲ್ಲಿ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ. ಜಲ ಮಂಡಳಿಯು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಕಳೆದ 14 ವರ್ಷದಿಂದ ನಗರದಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಮಂಡಳಿಯು ಪ್ರತಿ ತಿಂಗಳು…
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹಗರಣದ ಕಿಂಗ್ ಪಿನ್ ಶ್ರೀಕಿಯನ್ನು ಬಂಧಿಸಲಾಗಿದ್ದು, ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗು ಸಹ ತೀವ್ರ ಸಂಕಷ್ಟ ತಂದೊಡ್ಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ. ಹೌದು ಬಿಟ್ ಕಾಯಿನ್ ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆ.7 ರಂದು ವಿಚಾರಣೆಗೆ ಬರು ವಂತೆ ಸೆಕ್ಷನ್ 41ರಡಿ SIT ನೋಟಿಸ್ ನೀಡಿದೆ. ಸಾಮಾನ್ಯವಾಗಿ ಆರೋಪಿ ತರಿಗೆ ಈ ಸೆಕ್ಷನ್ ಅಡಿ ತನಿಖಾ ಧಿಕಾರಿ ನೋಟಿಸ್ ನೀಡು ತ್ತಾರೆ. ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ 2ನೇ ಬಾರಿಗೆ ಎಸ್ಐಟಿ ವಿಚಾರಣೆಗೆ ಕರೆದಿರುವುದು…
ಬೆಂಗಳೂರು : ಆನೆಗಳ ಚಲನವಲನಗಳ ಮೇಲೆ ನಿಗಾವಹಿಸಲು ಅರಣ್ಯ ಇಲಾಖೆ ಸಹಯೋಗದೊಂದಿಗೆ ಇನ್ ಫಿಕ್ಷನ್ ಲ್ಯಾಬ್ ಸಂಸ್ಥೆ ಅಭಿವೃದ್ಧಿ ಮಾಡಿರುವ ದೇಶೀಯ ಕರ್ನಾ ಟಕ-ಪರಿಶೋಧಿತ ಪತ್ತೆ (ಕೆಪಿ ಟ್ರ್ಯಾಕರ್) ಹೆಸರಿನ ರೇಡಿಯೋ ಕಾಲರ್ ಅನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಲೋಕಾರ್ಪಣೆ ಮಾಡಿದರು. ಅರಣ್ಯ ಭವನದಲ್ಲಿ ಬುಧವಾರ ಏರ್ಪ ಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ರೇಡಿಯೋ ಕಾಲರ್ ಅನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇ ಶದ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಖಂಡ್ರೆ, ಕೊಡಗು, ಚಿಕ್ಕಮಗಳೂರು, ಹಾಸನ ಸೇರಿ ಮತ್ತಿತರಜಿಲ್ಲೆಗಳಲ್ಲಿ ಆನೆಗಳು ನಾಡಿಗೆ ಬರುವುದನ್ನು ತಡೆಯಲು, ಚಲನವಲನದ ಮೇಲೆ ನಿಗಾವಹಿಸಲು ಆನೆಗಳ ಗುಂಪಿನ ನಾಯಕಿಗೆ ಅಳವಡಿಸ ಲಾಗುವುದು. ಅದರಿಂದ ಆನೆಗಳ ಸಂಚಾರದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾ ಗುವುದು ಎಂದರು. ಆನೆ ಮಾನವ ಸಂಘರ್ಷದಲ್ಲಿ ಹೆಚ್ಚಿನ ಸಾವು ನೋವು ಆಗುತ್ತಿವೆ. ಆನೆಗಳ ಚಲನ ವಲನ ತಿಳಿಯಲು ರೇಡಿಯೋ ಕಾಲರ್ ಬಳಸುತ್ತಿದ್ದೇವೆ. ಇಷ್ಟು ದಿನ ವಿದೇಶದ ರೇಡಿಯೋ ಕಾಲರ್ ಗಳನ್ನು ಬಳಸುತ್ತಿದ್ದೆವು 50…
ಬೆಂಗಳೂರು : ರಾಜ್ಯದಲ್ಲಿನ ಆಸ್ತಿ ದಸ್ತಾವೇಜು ನೋಂದಣಿ ಪ್ರಕ್ರಿಯೆ ಹಾಗೂ ಇಸಿ/ಸಿಸಿ ಸೇವೆ ನೀಡುವ ಕಾವೇರಿ 2.0 ತಂತ್ರಾಂಶದಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಏಳನೇ ಸಾರ್ವಜನಿಕರು ಪರದಾಡುವಂತಾಗಿದೆ.ಕಳೆದ ಒಂದು ವಾರದಿಂದ ಇದ್ದ ಸರ್ವರ್ ಸಮಸ್ಯೆ ಬುಧವಾರವೂ ಮುಂದುವರೆದಿದ್ದು, ಬೆಳಗ್ಗೆಯೂ ಕಾವೇರಿ 2.0 ತಂತ್ರಾಂಶದ ನಾಗರಿಕರ ಲಾಗಿನ್ ತೆರೆದುಕೊಳ್ಳಲಿಲ್ಲ. ಉಪ ನೋಂದಣಾಧಿಕಾರಿಗಳ ಲಾಗಿನ್ ತೆರೆದು ಕೊಂಡಿದ್ದರೂ ತಾಂತ್ರಿಕ ಸಮಸ್ಯೆ ಮುಂದು ವರೆದಿದ್ದರಿಂದಗೊಂದಲಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಆದರೆ ಸಂಜೆ ವೇಳೆಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶವನ್ನೀಗ ಪೂರ್ಣ ಪುನಃಸ್ಥಾಪಿಸಲಾಗಿದೆ ಎಂದಿದ್ದಾರೆ. ಕಳೆದ 1 ವಾರದಿಂದ DDoS ದಾಳಿಯಿಂದ ಸಮಸ್ಯೆಗೆ ತುತ್ತಾಗಿದ್ದ ಕಾವೇರಿ 2.0 ತಂತ್ರಾಂಶ ಈಗ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗಿದೆ ಮತ್ತು ಈ ತಂತ್ರಾಂಶ ಇದೀಗ ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು EC/CC ಸೇವೆಗಳ ಮೇಲೆ ಪರಿಣಾಮ…
ಚಿಕ್ಕಮಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಚಿಕ್ಕಮಂಗಳೂರು ಜಿಲ್ಲೆಯ 6 ಮೋಸ್ಟ ವಾಂಟೆಡ್ ನಕ್ಸಲರು ಶರಣಾಗತಿಯಾಗಿದ್ದರು ಬಳಿದ ಕೆಲವು ದಿನಗಳ ಹಿಂದೆ ನಕ್ಸಲ್ ರವೀಂದ್ರ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶರಣಾಗತಿಯಾಗಿದ್ದ. ಇದರ ಬೆನ್ನಲ್ಲೇ ಕಾಡಿನಲ್ಲಿ 1 ನಾಡ ಬಂದೂಕು 10 ಕಾರ್ಟ್ರೇಜ್ ಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ಹೌದು ಹುಲಗಾರುಬಯಲು ಅರಣ್ಯದಲ್ಲಿ ನಾಡ ಬಂದು ಪತ್ತೆಯಾಗಿದೆ. 1 ನಾಡ ಬಂದು 10 ಕಾಲಿ ಕಾಟ್ರೇಜ್ ಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಶ್ರೀಗೀರಿ ತಾಲೂಕಿನ ಗ್ರಾಮದಲ್ಲಿ ಪತ್ತೆಯಾಗಿವೆ. ಕಳೆದ ಶನಿವಾರ ನಕ್ಸಲ್ ರವೀಂದ್ರ ಶರಣಾಗತಿಯಾಗಿದ್ದ. ಶಸ್ತ್ರ ರೈತವಾಗಿ ನಕ್ಷಲ್ ರವೀಂದ್ರ ಶರಣಾಗತಿಯಾಗಿದ್ದ ಶರಣಾಗತಿಗೂ ಮೊದಲೇ ಕಾಡಿನಲ್ಲಿ ಬಂದು ಎಸೆದಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ ಒಂದು ಬಂದೂಕು ಹತ್ತು ಕಾಲಿ ಕಾದ್ರೇಜ್ ಗಳನ್ನು ಪೊಲೀಸರು ಸದ್ಯಕ್ಕೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರ್ಗಿ : ಕಳೆದ ಡಿಸೆಂಬರ್ 26 ರಂದು ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿ ಆಗಿರುವ ರಾಜು ಕಪನೂರ್ ನವರಿಗೆ ಕಲ್ಬುರ್ಗಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ರಾಜು ಕಪನೂರ್ ಗೆ ತನ್ನ ಹುಟ್ಟು ಹಬ್ಬದ ದಿನದಂದೇ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಹತ್ತಿರ ಶಸ್ತ್ರಾಸ್ತ್ರಗಳಿದ್ದಲ್ಲಿ ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒಪ್ಪಿಸಬೇಕು. ಅವರು ಸಾಕ್ಷಿ ನಾಶಪಡಿಸಲು ಪ್ರಯತ್ನಿಸದೆ, ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿಯು ಅವರಿಗೆ ನಿರ್ದಿಷ್ಟವಾಗಿ ಸಮನ್ಸ್ ನೀಡಿದಾಗ ತನಿಖಾ ಉದ್ದೇಶಕ್ಕಾಗಿ ಹೊರತುಪಡಿಸಿ ಯಾವುದೇ ಕಾರಣಕ್ಕೂ ಬೀದರ್ ಜಿಲ್ಲೆಗೆ ಪ್ರವೇಶ ಮಾಡಬಾರದು. ತನಿಖೆ ಪೂರ್ಣಗೊಂಡ ನಂತರ…
ಬೆಂಗಳೂರು : ಲೋಕಾಯುಕ್ತ ಕಚೇರಿ ಬಳಿ ಕೆಆರ್ಎಸ್ ಪಕ್ಷದಿಂದ ಪ್ರತಿಭಟನೆ ವಿಚಾರವಾಗಿ ಇದೀಗ ಪ್ರತಿಭಟನೆ ನಡೆಸಿದ್ದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಅನುಮತಿ ಪಡೆಯದೆ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ. ಪ್ರತಿಭಟನೆ ನಡೆಸಿದ 15 ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.ಲೋಕಾಯುಕ್ತರು ಆಸ್ತಿ ಘೋಷಿಸಬೇಕು ಎಂದು KRS ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಬೆಂಗಳೂರು : ರೂಪ ಮೌದ್ಗಿಲ್ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 5ನೇ ACMM ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ಹಾಗಾಗಿ ಇಂದು ರೋಹಿಣಿ ಸಿಂಧೂರಿಗೆ ಕೋರ್ಟಿಗೆ ಹಾಜರಾಗಿದ್ದರು. ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರಾದ ವಿಜಯಕುಮಾರ್ ಜಾಟ್ಲ ಅವರು ಇಬ್ಬರು ಅಧಿಕಾರಿಗಳಿಗೆ ONE MINUTE APAOLOGY ಪುಸ್ತಕ ಓದುವಂತೆ ಜಡ್ಜ್ ಸಲಹೆ ನೀಡಿದರು. ಇಂದು ಬೆಂಗಳೂರಿನ 5ನೇ ACMM ಕೋರ್ಟ್ ನಲ್ಲಿ ಸಾಕ್ಷಿ ವಿಚಾರಣೆ ನಡೆಯಿತು. ರೋಹಿಣಿ ಸಿಂಧೂರಿ ಮತ್ತು ರೂಪಾ ಕೋರ್ಟಿಗೆ ಹಾಜರಾಗಿದ್ದಾರೆ. ರೂಪಾ ಪರ ವಕೀಲ ಪ್ರಸನ್ನ ಕುಮಾರ್ ಅವರಿಂದ ಪಾಟೀಸವಾಲು ಹಾಕಿದ್ದು, 45 ನಿಮಿಷಗಳ ಕಾಲ ರೋಹಿಣಿ ಸಿಂಧೂರಿ ಪಾಟೀಸವಾಲು ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ನ್ಯಾಯಾಧೀಶರು ವಿಜಯಕುಮಾರ್ ಜಾಟ್ಲ ಸಲಹೆ ನೀಡಿದ್ದು. ಇಬ್ಬರು ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯರ್ಥ ಮಾಡುವ ಬದಲು ರಾಜಿ ಸಾಧ್ಯವೇ ಎನ್ನುವುದನ್ನು ಯೋಚಿಸಿ. ಒನ್…
ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು. ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್…













