Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇದೀಗ ಗೃಹ ಸಚಿವರ ಕ್ಷೇತ್ರದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದೀಗ ಆತ್ಮಹತ್ಯೆಗಳಿಗೆ ಕಡಿವಾಣ ಬಿದ್ದಿಲ್ಲ. ತುಮಕೂರಲ್ಲಿ ಒಬ್ಬ ಆಟೋ ಚಾಲಕ ಹಾಗೂ ಓರ್ವ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಸುಗ್ರೀವಾಜ್ಞೆ ಜಾರಿ ಬಳಿಕವು ಮೈಕ್ರೋ ಟಾರ್ಚರ್ ನಿಂತಿಲ್ಲ. ಇದೀಗ ಗೃಹ ಸಚಿವರ ತವರಿನಲ್ಲಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆ ಎಂದು ತುಮಕೂರಿನಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ ಎಂದು ತಿಳಿದುಬಂದಿದೆ. ಫೈನಾನ್ಸ್ ಕಿರುಕುಳಕ್ಕೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು…
ಚಿಕ್ಕಬಳ್ಳಾಪುರ : ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು ರೈತನ ಮಗ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಿಳಿಸಿದರು. ನಾನು ಯಾವ ರಾಜಕಾರಣಿ ಬಗ್ಗೆಯೂ ಲಘುವಾಗಿ ಮಾತನಾಡಿಲ್ಲ. ಯಾವುದೇ ಪಕ್ಷ ಯಾವುದೇ ಜಾತಿಯ ನಾಯಕರ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಕೊನೆಯ ಉಸಿರು ಇರುವಾಗಲೇ ಏನಾದರೂ ಒಳ್ಳೆಯದು ಮಾಡಬೇಕು. ಕರ್ನಾಟಕಕ್ಕೆ ಏನಾದರೂ ಒಳ್ಳೆಯದು ಮಾಡಬೇಕು ನಾನು ರೈತನ ಮಗ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಕೆಂಪುಕೋಟೆ ಮೇಲೆ ಒಂದು ಬಾರಿ ಬಾವುಟ ಹಾರಿಸಿದ್ದೇನೆ. ನನ್ನ ಶಕ್ತಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಆಗಿದ್ದರು.ಆದರೆ ಸ್ವಲ್ಪ ವ್ಯತ್ಯಾಸವಾದ ಕಾರಣ ತಕ್ಷಣ ನಾನೇ ಬಗೆಹರಿಸಿಕೊಂಡೆ ಮಠ, ಒಕ್ಕಲಿಗ ಸಮಾಜವನ್ನು ಸಮರ್ಪಕವಾಗಿ ಮುನ್ನಡೆಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದರು.
ಕಲಬುರ್ಗಿ : ಇ-ಕಾರ್ಮಸ್ ಕಂಪನಿಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ ಯುವಕನೊಬ್ಬ ಮನನೊಂದು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ತೇಲ್ಕೂರ ಗ್ರಾಮದ ನಿವಾಸಿ ನೀಲಕಂಠಯ್ಯ ಚನ್ನಬಸ್ಸಯ್ಯ ಮಠಪತಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಅಮೇಜಾನ್ ಇ-ಕಾರ್ಮಸ್ ಕಂಪನಿಯ ಡೆಲಿವರಿ ಬಾಯ್ ಆಗಿದ ನೀಲಕಂಠಯ್ಯ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸೇಡಂ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕಕ್ಕೇರಿ ಗ್ರಾಮದಲ್ಲಿ ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಯುವಕ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ. ಮನೆ ನಿರ್ಮಾಣಕ್ಕೆ ಎಂದು ಯುವಕ 8 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ನಿನ್ನೆ ರಾತ್ರಿ ವಿಷಯ ಸೇವಿಸಿರುವ ಗೋವಿಂದ ವಡ್ಡರ್ (34) ಸಾವನ್ನಪ್ಪಿದ್ದಾನೆ. ಮೃತನ ಸಾವಿಗೆ ಪರಿಹಾರ ನೀಡುವಂತೆ ಇದೀಗ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಬಂಧಿಸಲು ತೆರಳಿದ್ದ ವೇಳೆ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಮನೆ ಠಾಣೆ ರೌಡಿ ರವಿ ಅಲಿಯಾಸ್ ಗುಂಡನ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ವಿವಿಧ ಕೇಸ್ ಗಳಲ್ಲಿ ರೌಡಿಶೀಟರ್ ರವಿ ಬೇಕಾಗಿದ್ದ ಹೊಸಮನೆ ಠಾಣೆಯ ಪಿಎಸ್ಐ ಕೃಷ್ಣ ರವಿ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಬಂಧಿಸಲು ಹೋದಾಗ ಸಿಬ್ಬಂದಿ ಮೇಲೆ ರವಿ ಹಲ್ಲೆಗೆ ಯತ್ನಿಸಿದ್ದಾನೆ. ಕಾನ್ಸ್ಟೇಬಲ್ ಆದರ್ಶ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಕೃಷ್ಣ ಅವರು ಆತ್ಮ ರಕ್ಷಣೆಗಾಗಿ ರವಿ ಕಾಲಿಗೆ ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ ಮತ್ತು ಕಾನ್ಸ್ಟೇಬಲ್ ಅನ್ನು ಸದ್ಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ : ಉಡುಪಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮಲ್ಪೆ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯ ಸಮೀಪ ನಿಲ್ಲಿಸಲಾಗಿದ್ದ ಬೋಟ್ಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 15 ಲಕ್ಷ ರೂ.ನಷ್ಟವಾಗಿದೆ ಎಂದು ತಿಳಿದುಬಂದಿದೆ. ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡೀಸೆಲ್, ಜಿಪಿಎಸ್, ಫಿಶ್ ಫೈಂಡರ್, ಲೈಫ್ ಜಾಕೆಟ್, ವಾಟರ್ ಟ್ಯಾಂಕರ್, ಬಾಕ್ಸ್ ಮುಂತಾದ ವಸ್ತುಗಳಿದ್ದವು. ಬೆಂಕಿ ತಗುಲಿದ ಸಂದರ್ಭದಲ್ಲಿ ಸ್ಥಳೀಯ ದೋಣಿಯವರು ಗಮನಿಸಿ ಮಾಹಿತಿ ನೀಡಿದ್ದರಿಂದ ಸಕಾಲದಲ್ಲಿ ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಮಲ್ಪೆಯ ಜನಾರ್ದನ ಟಿ.ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಸಣ್ಣಟ್ರಾಲ್ (ಫಿಶಿಂಗ್) ಬೋಟು ಸುಟ್ಟುಹೋಗಿದೆ. ಮೀನುಗಾರಿಕೆ ಮುಗಿಸಿ ಬಂದು ಬೋಟ್ ಅನ್ನು ದಕ್ಕೆಯಲ್ಲಿ ನಿಲ್ಲಿಸಲಾಗಿತ್ತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಬೋಟಿನ ಸುತ್ತ ಸುಮಾರು 25ರಿಂದ 30 ಬೋಟುಗಳು ನಿಂತಿದ್ದವು. ರಾತ್ರಿ ಸಮಯ ಸಮುದ್ರದ ನೀರಿನ ಮಟ್ಟ ಏರಿಕೆ ಇರುವುದರಿಂದ ಇತರ ಯಾವುದೇ ಬೋಟ್ಗಳಿಗೆ ಬೆಂಕಿ ವ್ಯಾಪಿಸಿಲ್ಲ
ದಾವಣಗೆರೆ : ಮರಾಠ ಎಂದರೆ ಮುಸ್ಲಿಂ ವಿರೋಧಿಗಳು ಎಂದು ಯುವ ಜನತೆ ತಲೆಯಲ್ಲಿ ತುಂಬಿದೆ. ಯುವಜನಾಂಗ ಸ್ವಲ್ಪ ಶಾಂತ ಮನಸ್ಸಿನಿಂದ ಶಿವಾಜಿಯ ಬಗ್ಗೆ ಓದಬೇಕು ಶಿವಾಜಿ ಮಹಾರಾಜ ಮುಸ್ಲಿಂ ವಿರೋಧಿ ಅಲ್ಲ ಎಂದು ದಾವಣಗೆರೆಯಲ್ಲಿ ತುಳಜಾಭವಾನಿ ಭವನ ಉದ್ಘಾಟನಾ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು. ಬಹುತೇಕರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಚಾರ ಬಂದರೂ ನಂಬುತ್ತಾರೆ. ಶಿವಾಜಿ ಜೊತೆ ಯಾರಿದ್ದಾರೆಂದು ಕೆಲ ಮುಸ್ಲಿಂ ನಾಯಕರ ಹೆಸರನ್ನು ಸಂತೋಷ್ ಲಾಡ್ ಇದೆ ವೇಳೆ ತಿಳಿಸಿದರು.ಪ್ರತಿಯೊಬ್ಬರು ಇಂದು ಆಸ್ತಿ ಹಕ್ಕು ಪಡೆಯಲು ಕಾರಣ ಡಾ.ಅಂಬೇಡ್ಕರ್. ಬಿ.ಆರ್ ಅಂಬೇಡ್ಕರ್ ಒಂದು ಜಾತಿ ಸಮುದಾಯಕ್ಕೆ ಸೀಮಿತರಾದವರಲ್ಲ. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೋ ಇಟ್ಟುಕೊಳ್ಳಬೇಕು ಎಂದು ದಾವಣಗೆರೆಯಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು.
ಶಿವಮೊಗ್ಗ : ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತ ದೇಹ ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತ ದೇಹಗಳು ಪತ್ತೆಯಾಗಿವೆ. ಕೊಳೆತ ಸ್ಥಿತಿಯಲ್ಲಿ ಮೂವರು ಅಪರಿಚಿತ ಮೃತ ದೇಹಗಳು ಪತ್ತೆಯಾಗಿವೆ. ಸಕ್ರೆಬೈಲ್ ಆನೆ ಬಿಡಾರದ 10n3 ಮೈಲಿಕಲ್ಲಿನ ಬಳಿ ಮೂವರು ಅಪರಿಚಿತ ಮೃತ ದೇಹಗಳು ಪತ್ತೆಯಾಗಿವೆ. ಶಿವಮೊಗ್ಗ ತಾಲೂಕಿನ 10ನೇ ಮೈಲಿಕಲ್ಲಿನ ಬ್ಯಾಕ್ ವಾಟರ್ ಬಳಿ ಮೃತ ದೇಹಗಳು ಪತ್ತೆಯಾಗಿದ್ದು ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆಯ ಪೊಲೀಸರುಪೇಟೆ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ನಾಲ್ವರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲದಲ್ಲಿ ತಡರಾತ್ರಿ ಅತ್ಯಾಚಾರ ನಡೆದಿದೆ.ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು ನಂತರ ಹಳೆ ಪರಿಚಯ ರೀತಿ ಮಾತನಾಡಿ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಊಟಕ್ಕೆ ಎಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬೆಳಿಗ್ಗೆ 5 ಗಂಟೆಗೆ ಮೊಬೈಲ್ ಪರ್ಸ ಕಿತ್ತುಕೊಂಡು ಕಳಿಸಿದ್ದರು. ನಂತರ 112 ಗೆ ಫೋನ್ ಮಾಡಿ ಸಂತ್ರಸ್ತ ಮಹಿಳೆ ಮಾಹಿತಿ ನೀಡಿದಳು. ಸಾಮೂಹಿಕ ಅತ್ಯಾಚಾರ ಎಂದು ಕೋರಮಂಗಲ ಪೊಲೀಸರು ಇದೀಗ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಸಂಭಂದ ಮೂರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಗಾಳ ಹಾಗೂ ಉತ್ತರ ಪ್ರದೇಶದ ಮೂಲದ ಅಜಿತ್ ವಿಶ್ವಾಸ ಹಾಗೂ…
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಶಕ್ತಿ ಯೋಜನೆ ಕೂಡ ಒಂದು. ಆರಂಭದಲ್ಲಿ ಈ ಒಂದು ಶಕ್ತಿ ಯೋಜನೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ರಾಜ್ಯದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಯೋಜನೆ ಜಾರಿ ಆದಾಗಿನಿಂದ ಇಂದಿನವರೆಗೂ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುವ ಸಂಖ್ಯೆ ಕಡಿಮೆಯಾಗಿಲ್ಲ. ಇದೀಗ ಕೆಎಸ್ಆರ್ಟಿಸಿಯ ಮೈಸೂರು ವಿಭಾಗ ಪುರುಷರಿಗೆ ಸೀಟ್ ಬಿಟ್ಟು ಕೊಡಿ ಎಂದು ಅಧಿಕೃತ ಆದೇಶ ಹೊರಡಿಸಿದೆ. ಹೌದು ಈ ಕುರಿತು KSRTC ಮೈಸೂರು ವಿಭಾಗ ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ…












