Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಪ್ರೀತಿಸಿದ ಅಪ್ರಾಪ್ತೆ ಯುವತಿಯನ್ನು ಆಕೆಯ ಮನೆಯವರು ಮದುವೆ ಮಾಡಿಕೊಡಲು ಒಪ್ಪದೇ ಇದ್ದುದ್ದರಿಂದ ಮನನೊಂದ ಯುವಕನೊಬ್ಬ ಯುವತಿಯ ಮನೆಯ ಮುಂದೇನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಜಯನಗರ ಬಳಿಯ ಚೆನ್ನಪ್ಪನಪಾಳ್ಯದಲ್ಲಿ ಘಟನೆ ನಡೆದಿದೆ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಜುನಾಥ್ (32) ಎಂದು ತಿಳಿದುಬಂದಿದೆ. ಕೆಲ ತಿಂಗಳಿಂದ ಪಕ್ಕದ ಮನೆ ಹುಡುಗಿಯನ್ನು ಮಂಜುನಾಥ ಪ್ರೀತಿಸುತ್ತಿದ್ ಮದುವೆ ಮಾಡಿ ಕೊಡಲು ಯುವತಿ ಮನೆಯವರನ್ನು ಮಂಜುನಾಥ ಕೇಳಿದ್ದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಣೆ ಮಾಡಿದ್ದರೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಯುವತಿಯ ಮನೆಯ ಮುಂದೆ ಚಾಲಕ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಪ್ರಾಪ್ತೆ ಯಾಗಿದ್ದರಿಂದ ಮದುವೆಗೆ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು 2024-25ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ. 6.00 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ಸೈಟ್ sevasindhu.karnataka.gov.in ಮೂಲಕ ದಿನಾಂಕ: 25/12/2024 ರೊಳಗಾಗಿ ಸಲ್ಲಿಸಬೇಕು. ನಂತರ ಸಂಬಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದುಕೊಂಡು, ಅರ್ಜಿಯೊಂದಿಗೆ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.…
ರಾಯಚೂರು : ನಾವೆಲ್ಲರೂ ರಾಜಾಹುಲಿ ಸಿನಿಮಾ ವನ್ನು ನೋಡಿದ್ದೇವೆ. ಅದರಲ್ಲಿ ನಟ ಯಶ್ ಅವರು ಹಾಗೂ ಆತನ ಬಾಲ್ಯ ಸ್ನೇಹಿತ ಒಂದೇ ಹುಡುಗಿಯನ್ನು ಪ್ರೀತಿಸುತ್ತಿರುತ್ತಾರೆ. ಆದರೆ ಆಕೆಯು ನಟ ಯಶ್ ಅವರನ್ನ ಪ್ರೀತಿಸುತ್ತಿದ್ದಳು. ಹೀಗಾಗಿ ಈ ಒಂದು ಹುಡುಗಿಯ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ಆಗಿ ಹೊಡೆದಾಡಿಕೊಳ್ಳುತ್ತಾರೆ. ಆದರೆ ಇಂಥದ್ದೇ ಸ್ಟೈಲ್ ನಲ್ಲಿ ರಾಯಚೂರಿನಲ್ಲಿ ಒಂದು ಘಟನೆ ನಡೆದಿದ್ದು, ಒಂದೇ ಹುಡುಗಿಯನ್ನು ಇಬ್ಬರು ಬಾಲ್ಯ ಸ್ನೇಹಿತರು ಪ್ರೀತಿಸುತ್ತಿದ್ದರು. ಈ ವೇಳೆ ಇದೆ ವಿಚಾರವಾಗಿ ಸ್ನೇಹಿತ ತನ್ನ ಇನ್ನೊಬ್ಬ ಬಾಲ್ಯ ಸ್ನೇಹಿತನನ್ನು ಮಾತುಕತೆಗೆ ಕರೆಸುತ್ತಾನೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಒಬ್ಬ ಸ್ನೇಹಿತ ತನ್ನ ಸಹಚರರೊಂದಿಗೆ ಸೇರಿ ಬಾಲ್ಯ ಸ್ನೇಹಿತನನ್ನೇ ಕೊಲ್ಲುತ್ತಾನೆ.ಮೃತನನ್ನು ಸಮೀರ್ ಎಂದು ಗುರುತಿಸಲಾಗಿದೆ.ನವೆಂಬರ್ 26ರಂದು ಈ ಒಂದು ಘಟನೆ ನಡೆದಿದ್ದು, ಇದೀಗ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.…
ಬೆಂಗಳೂರು : ವಿದ್ಯುತ್ ತರ ಏರಿಸುವ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KSRC)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. 2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್ಸಿ ಮೂಲಗಳು ತಿಳಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು,…
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಶಾಸಕರು, ಸಚಿವರು ಭಾಗಿಯಾಗಿದ್ದರು. 20 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲಾಗಿದೆ. ಆ ಮೂಲಕ ಕಟ್ಟಡ ನಿರ್ಮಾಣದ ಕನಸಿಗೆ ಬೆಲೆ ಏರಿಕೆಯ ಹೊರೆ ತಟ್ಟಿದೆ. ಸಚಿವ ಸಂಪುಟ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸಂಪುಟ ಸಭೆಯಲ್ಲಿ 20 ವಿಷಯಗಳ ಬಗ್ಗೆ ಇಂದು ಚರ್ಚೆಯಾಗಿದೆ. ಉಪಖನಿಜ ರಿಯಾಯಿತಿ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದ್ದು, ಅಕ್ರಮ ಕಲ್ಲು ಗಣಿಗಾರಿಕೆ ವಿಚಾರ ಬಗ್ಗೆ ಚರ್ಚೆಯಾಗಿದೆ.ರಾಯಲ್ಟಿ ಪರಿಷ್ಕರಣೆ ಮಾಡಲು ಸಮ್ಮತಿ ಸೂಚಿಸಾಲಾಗಿದೆ.ಕಟ್ಟಡ ಕಲ್ಲು,ಮೈನಿಂಗ್ ಸ್ಟೋನ್ ರಾಜಧನ ಹೆಚ್ಚಳ ಮಾಡಿದ್ದು, ಪ್ರತಿಟನ್ ಗೆ 80 ರೂ ರಾಯಲ್ಟಿ ನಿಗದಿ ಮಾಡಲಾಗಿದೆ. ಇದರಿಂದ 311.55 ಕೋಟಿ ಹೆಚ್ಚುವರಿ ಸಂಗ್ರಹವಾಗಲಿದೆ.ಮೊದಲು ಮೆಟ್ರಿಕ್ ಟನ್ 70 ರೂ ಇತ್ತು ಈಗ 10 ರೂ ಪ್ರತಿ ಮೆಟ್ರಿಕ್ ಟನ್ ಗೆ ಹೆಚ್ಚಳ ಮಾಡಲಾಗಿದೆ.…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ಹಾಗೂ ಡಿ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಸ್ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆಯ ವೇಳೆ ಪೊಲೀಸರ ಎಸ್ ಪಿ ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ಅಕ್ಟೋಬರ್ 30ರ ತಮ್ಮ ಆದೇಶದ ಬಗ್ಗೆ ಎರಡು ನಿಮಿಷ ವಾದಿಸುತ್ತೇನೆ ಎಂದು ಹೇಳಿ, ತಕ್ಷಣ ಸರ್ಜರಿ ಆಗದಿದ್ದರೆ ಲಕ್ವ ಹೊಡೆಯುತ್ತದೆ ಎಂದು ವಾದಿಸಿದ್ದರು. ಮೊದಲ ಮೆಡಿಕಲ್ ರಿಪೋರ್ಟ್ ಅನ್ನು ನಾನು ಓದಬಯಸುತ್ತೇನೆ. ಒಂದು ವಾರದ ಬಳಿಕ ವೈದ್ಯರ ವರದಿ ಸಲ್ಲಿಸಿದ್ದರು. ನವೆಂಬರ್ 6 ಮತ್ತು 11ರಂದು 2 ವರದಿ ಸಲ್ಲಿಸಿದ್ದಾರೆ. ದರ್ಶನ್ ಅವರನ್ನು ಸರ್ಜರಿಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಮೊದಲ ವರಿದಿಯಲ್ಲಿ ಹೀಗೆ ಎಂದು ವೈದ್ಯರು ಹೇಳಿದ್ದರು. ಅದಾದ 15 ದಿನದ ಬಳಿಕವೂ ದರ್ಶನ್ ಅವರನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಪಿಯಲ್ಲಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ಡಿಬಿ ನಟೇಶ್ ಅವರು ಇಡಿ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದಲ್ಲಿ ಇಡಿ ತನಿಖೆ ತಡೆಯಾಜ್ಞೆ ಕುರಿ ಅರ್ಜಿ ಮೋಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಡಿ ಯಿಂದ ಲೋಕಾಯುಕ್ತ ಪೊಲೀಸರಿಗೆ ಪತ್ರದ ಬೆನ್ನಲ್ಲೆ ಅವರು ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 28 ಮತ್ತು 29 ರಂದು ಈಡಿ ತಮ್ಮ ಹೇಳಿಕೆ ಪಡೆದಿರುವುದು ಕಾನೂನುಬಾಹಿರ. ಹಾಗಾಗಿ ಪಿಎಮ್ಎಲ್ಎ ಕಾಯ್ದೆಯ ಅಡಿ ಶೋಧನೆಯನ್ನು ರದ್ದು ಪಡಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಾರಿ ನಿರ್ದೇಶನಲಯ ನೀಡಿದ್ದ ಪಡಿಸಲು ನಟೇಶ್ ಅವರು ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
BREAKING : ಉತ್ತರಪ್ರದೇಶದಲ್ಲಿ ಭೀಕರ ಅಪಘಾತ :ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು, ಸ್ಥಳದಲ್ಲೇ ಐವರ ದುರ್ಮರಣ!
ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತವಾಗಿದ್ದು, ಪಿಲಿಭಿತ್-ತನಕ್ಪುರ ರಸ್ತೆಯ ನಿಯೋರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಸುಮಾರು 11 ಜನರನ್ನು ಹೊತ್ತೊಯ್ಯುತ್ತಿದ್ದ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುನ್ನಿ (65), ಮಂಜೂರ್ ಅಹ್ಮದ್ (60), ಬಹಿಯುದ್ದೀನ್ (55), ಷರೀಫ್ ಅಹ್ಮದ್ (60), ಸಾಹೇ ಆಲಂ (35), ಮತ್ತು ರಕೀಮ್ (11) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಮೂವರನ್ನು ಹೆಚ್ಚು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಬಿಡುಗಡೆಗೊಳಿಸಲಾಯಿತು. ಉತ್ತರಾಖಂಡದ ಖತಿಮಾ ಜಿಲ್ಲೆಯ ಜಮೂರ್ ಗ್ರಾಮದ ನಿವಾಸಿಗಳಾದ ಸಂತ್ರಸ್ತರು, ಪಿಲಿಭಿತ್ನ ಚಂದೋಯ್ ಗ್ರಾಮದಲ್ಲಿ ನಡೆದ ವಿವಾಹದ ನಂತರದ ಆಚರಣೆಯಿಂದ ಹಿಂತಿರುಗುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು. ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್…
ಉಡುಪಿ : ಕಳೆದ ಆಗಸ್ಟ್ 24ರಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಗೆ ಮಾದಕ ದ್ರವ್ಯ ನೀಡಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು ನೀಡಿ ಆದೇಶಸಿದೆ. ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಅಲ್ತಾಫ್ ಗೆ ನ್ಯಾಯಾಲಯದಿಂದ ಜಾಮೀನು ನೀಡಲಾಗಿದ್ದು, ಉಡುಪಿ ಜಿಲ್ಲಾ ಹೆಚ್ಚುವರಿ ಕೋರ್ಟಿನಿಂದ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಆಗಸ್ಟ್ 24ರಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಿಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹಿನ್ನೆಲೆಯಲ್ಲಿ ಇವತ್ತಿಯೂ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿ ಅಲ್ತಾಫ್ ಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು…













