Author: kannadanewsnow05

ದಕ್ಷಿಣಕನ್ನಡ : ಕಾಲೇಜಿಗೆ ಬೈಕ್ ತಂದಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕನೊಬ್ಬ ಹಿಗ್ಗಾ ಮುಗ್ಗಾ ಥಳಿಸಿ, ಹಲ್ಲೆ ಮಾಡಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬನ ದೇಹದ ಹಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜದಲ್ಲಿ ಕಾಲೇಜಿಗೆ ಬೈಕ್ ತಂದಿದ್ದಕ್ಕೆ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಥಳಿತಕ್ಕೆ ಒಳಗಾಗದ ಓರ್ವ ವಿದ್ಯಾರ್ಥಿಯ ಕೈಯಲ್ಲಿ ರಕ್ತ ಹೆಪ್ಪುಗಟ್ಟಿದೆ. ಕೇವಲ ಕಾಲೇಜಿಗೆ ಬೈಕ್ ತಂದಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕ ಈ ರೀತಿ ಹಲ್ಲೆ ಮಾಡಿದ್ದಾನೆ. ಕೂಡಲೇ ವಿದ್ಯಾರ್ಥಿಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಇದೀಗ ಇಂದು ಸ್ಕೂಟರ್ ಗೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಸವಾರನೊಬ್ಬ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಮೆಜೆಸ್ಟಿಕ್ ನಿಂದ ಸಿಕೆಪಾಳ್ಯ ಕಡೆಗೆ ಬಿಎಂಟಿಸಿ ಬಸ್ ಹೊರಟಿತ್ತು. ಕೆ ಆರ್ ಸರ್ಕಲ್ ಇಂದ ನೃಪತುಂಗ ರೋಡ್ ನಲ್ಲಿ ಸವಾರ ಬರುತ್ತಿದ್ದ, ಈ ವೇಳೆ ಸ್ಕೂಟರಿಗೆ ಸೈಡ್ ಬಿಡಲಿಲ್ಲ ಎನ್ನುವ ಕಾರಣಕ್ಕೆ ಬಿಎಂಟಿಸಿ ಚಾಲಕ ಕುಶಾಲ್ ಕುಮಾರ್ ಎನ್ನುವವರ ಮೇಲೆ ಸ್ಕೂಟರ್ ಸವಾರ ಹಲ್ಲೆ ಮಾಡಿದ್ದಾನೆ. ಬಳಿಕ ಬಸ್ ಚಾಲಕ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಎಂಟಿಸಿ ಬಸ್ ಚಾಲಕ ಕುಶಾಲ್ ಕುಮಾರ್ ಅವರ ಕೊರಳಪಟ್ಟಿಗೆ ಕೈಹಾಕಿ ಹಲ್ಲೆ ಮಾಡಿದ್ದಾನೆ. ಕುತ್ತಿಗೆ ಹಾಗೂ ಕೈ ಮತ್ತು ದೇಹದ ಹಲವು ಭಾಗಗಳ ಮೇಲೆ ಹಲ್ಲೆ ಮಾಡಿದ್ದು ಚಾಲಕನಿಗೆ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಘಟನೆ ಕುರಿತಂತೆ ಹಲಸೂರು ಗೇಟ್…

Read More

ಬೆಳಗಾವಿ : ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕುರಿತಂತೆ ವಿರೋಧ ಪಕ್ಷದವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಬಿಪಿಎಲ್ ರೆಕಾರ್ಡ್ ಹೊಂದಿರುವವರ ಜೊತೆಗೆ ಎಪಿಎಲ್ ಕಾರ್ಡ್ ಹೊಂದಿರುವವರೆಗೂ ಗೃಹಲಕ್ಷ್ಮಿ ಹಣ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಗ್ರಹಲಕ್ಷ್ಮಿ ಹಣ ಬರುವುದಿಲ್ಲ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಆದ ಕುಟುಂಬದ ಮನೆಯ ಯಜಮಾನಿ ಕೂಡ 2 ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಬಡತನ ರೇಖೆಗಿಂತ ಮೇಲಿನ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ.ಆದರೆ, ಇವರುಗಳು ಆದಾಯ ತೆರಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ಸದ್ಯ ಅರ್ಹರಲ್ಲದವರ ಬಿಪಿಎಲ್ ಕಾಡುಗಳನ್ನು ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡುಗಳಿಗೆ ಬದಲಾಯಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮಧ್ಯ ಸರ್ಕಾರದ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ಗಳನ್ನು ಅಷ್ಟೇ ರದ್ದು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್‌ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್‌ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಸಿಎಂ ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಅಲ್ಲದೇ ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ…

Read More

ಚಿತ್ರದುರ್ಗ : ಪೌತಿ ಖಾತೆ ಮಾಡಿ ಕೊಡಲು ವ್ಯಕ್ತಿ ಒಬ್ಬರ ಬಳಿ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ. ಕಚೇರಿಯಲ್ಲಿ 10,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದಿದ್ದಾನೆ. ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎನ್ನುವ ವ್ಯಕ್ತಿಯನ್ನು ಸಹ ಇದೀಗ ಬಂಧಿಸಲಾಗಿದೆ. ಲೋಕಾಯುಕ್ತ ಎಸ್‌ಪಿ ವಾಸುದೇವ್ ರಾವ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಚಾಮರಾಜನಗರ : ಈಕೆ ಅಂತಿಂಥ ಭಿಕ್ಷುಕಿಯಲ್ಲ, ಚಿಕ್ಕ ಚಿಕ್ಕ ಕಂದಮ್ಮಗಳಿರುವ ಮಹಿಳೆಯರನ್ನು ಪರಿಚಯಿಸಿಕೊಂಡು ಬಳಿಕ ಅವರಿಂದ ಮಗುವನ್ನು ಅಪಹರಿಸಿ ಭಿಕ್ಷಾಟನೆ ಮಾಡುತ್ತಿದ್ದ ಕಳ್ಳ ಬಿಕ್ಷುಕಿಯನ್ನು ಇದೀಗ ಚಾಮರಾಜನಗರ ಜಿಲ್ಲೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಭೀಕ್ಷಾಟನೆ ಮಾಡುತ್ತಿದ್ದ ಆರೋಪಿಯನ್ನು ರಾಧಾ (28) ಎಂದು ತಿಳಿದುಬಂದಿದೆ. ಈಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಮನಗರ ಮೂಲದ ಅನಿತಾಳನ್ನು ತನ್ನ ಹೆಸರು, ವಿಳಾಸ ತಿಳಿಸದೆ ಪರಿಚಯ ಮಾಡಿಕೊಂಡಿದ್ದಳು. ಅನಿತಾಳ ಮಗುವನ್ನು ಭಿಕ್ಷೆ ಬೇಡಲು ಪಡೆದುಕೊಂಡು ಹಣ ಕೊಟ್ಟು ಆಸೆ ತೋರಿಸಿದ್ದಳು. ಬಳಿಕ ನವೆಂಬರ್ 14ರಂದು ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಅನಿತಾಳಿಂದ ಮಗುವನ್ನು ಅಪಹರಿಸಿ ಪರಾರಿಯಾಗಿದ್ದಳು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ಆರೋಪಿ ರಾಧಾ ಸಿಕ್ಕಿಬಿದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಧಾಳನ್ನು ವಿಚಾರಣೆಗೊಳಪಡಿಸಿದಾಗ ಮಗುವನ್ನು ಅಪಹರಿಸಿಕೊಂಡು ಹೋಗಿ ಕಳೆದ 4 ದಿನಗಳಿಂದ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾಗಿ ತಿಳಿಸಿದ್ದಾಳೆ. ಪೊಲೀಸರು ಈಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.…

Read More

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನವೀನ್ ಕುಮಾರ್ ಕಟೀಲು ಹಾಗೂ ಇತರರ ವಿರುದ್ಧ ಈ ಕುರಿತಂತೆ ಕೇಸ್ ದಾಖಲಾಗಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಇಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಇಡಿಯನ್ನು ಬಳಸಿಕೊಂಡು ಚುನಾವಣಾ ಹಣ ಸಂಗ್ರಹಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ವಿರುದ್ಧ ಈ ಒಂದು ಆರೋಪವಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ದೂರು ದಾಖಲಿಸಲಾಗಿದೆ. ಆಡಳಿತ ಪಕ್ಷ ಸಿಬಿಐ, ಇಡಿಯನ್ನು ಬಳಸಿ ಹಣ ಸುಲಿಗೆ ಮಾಡುತ್ತಿದೆ. ಪ್ರತಿ ನಾಗರಿಕನು ಇದರಿಂದ ನೊಂದಿರುವುದರಿಂದ ದೂರು ದಾಖಲಿಸಬಹುದು ಎಂದು ವಾದಿಸಿದರು. ನವೀನ್ ಕುಮಾರ್ ಕಟೀಲು ಪರ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದು, ಸುಲಿಗೆಗೆ ಒಳಗಾದಂತಹ ಸಂತ್ರಸ್ತರು ಯಾರು ದೂರು ನೀಡಿಲ್ಲ.ದೂರುದಾರರು ಸಂತ್ರಸ್ತರು ಅಲ್ಲದಿರುವುದರಿಂದ ದೂರು…

Read More

ಧಾರವಾಡ : ಧಾರವಾಡದಲ್ಲಿ ವಿಚಿತ್ರವಾದಂತಹ ಘಟನೆ ಒಂದು ನಡೆದಿದ್ದು, ಇಬ್ಬರು ಮಹಿಳೆಯರು ಪರಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಹೆತ್ತ ಮಕ್ಕಳನ್ನೇ ಕಿಡ್ನ್ಯಾಪ್ ಮಾಡಿ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.ಇದೀಗ ಬೆಂಗಳೂರಿನಲ್ಲಿ ಮಕ್ಕಳ ಸಮೇತ ಇಬ್ಬರು ತಾಯಂದಿರು ಹಾಗೂ ಅವರ ಪ್ರಿಯಕರರು ಪತ್ತೆಯಾಗಿದ್ದು, ಪೊಲೀಸರು 6 ಮಕ್ಕಳು ರಕ್ಷಣೆ ಮಾಡಿ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ರೇಷ್ಮಾ ಮತ್ತು ಪ್ರಿಯಾಂಕ ಎಂಬವರಿಂದ ಕಿಡ್ನ್ಯಾಪ್ ನಡೆದಿದೆ ಎಂದು ತಿಳಿದುಬಂದಿದೆ. ಮಕ್ಕಳನ್ನು ಹಾಸ್ಟೆಲಿಗೆ ಸೇರಿಸುವುದಾಗಿ ಕರೆದೋಯ್ದಿದ್ದರು. ನವೆಂಬರ್ 7 ರದ್ದು ಇಬ್ಬರು ತಾಯಂದಿರು ಹಾಗೂ 6 ಮಕ್ಕಳು ನಾಪತ್ತೆಯಾಗುತ್ತಾರೆ. ಈ ಕುರಿತಂತೆ ಧಾರವಾಡದ ವಿದ್ಯಾಗಿರಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗುತ್ತದೆ. ಇದೀಗ ವಿದ್ಯಾಗಿರಿ ಠಾಣೆಯ ಪೊಲೀಸರು ನಾಪತ್ತೆಯಾಗಿದ್ದ 6 ಮಕ್ಕಳ ರಕ್ಷಣೆ ಮಾಡಿದ್ದಾರೆ. ರೇಷ್ಮಾ, ಪ್ರಿಯಾಂಕಾ ಸಾಂಬ್ರಾಣಿ ಎಂಬುವುದರಿಂದ ಈ ಒಂದು ಅಪಹರಣ ಕೃತ್ಯ ನಡೆದಿದೆ. ಅನ್ಯ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಮುತ್ತುರಾಜ್ ಸುನಿಲ್ ಎಂಬಾತರೊಂದಿಗೆ…

Read More

ತಮಿಳುನಾಡು : ಹಾಡು ಹಗಲೇ ಕೋರ್ಟ್ ಆವರಣದಲ್ಲಿ ವಕೀಲನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರು ನ್ಯಾಯಾಲಯದ ಆವರಣದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ವಕೀಲ ಕಣ್ಣನ್ (30) ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ದಾಳಿ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಕೀಲ ಕಣ್ಣನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ವಕೀಲನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇದಿಗ ಸಾವು ಬದುಕಿನ ನಡುವೆ ಗಾಯಾಳು ಕಣ್ಣನ್ ಹೋರಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೊಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ವಕೀಲ ಕಣ್ಣನ್ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ.ಕಳೆದ ನವೆಂಬರ್ 12 ರಂದು ಈ ಘಟನೆ ನಡೆದಿದ್ದು ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ, ಆಫ್ರೀನ್ ಬಾನು (5) ಸಾವನ್ನಪ್ಪಿದ್ದಾಳೆ. ತಾಜ್ ನಗರದ ಮಹಮದ್ ಗೌಸ್ ಮತ್ತು ತಾಹೇರ ಬಾನು ದಂಪತಿ ಪುತ್ರಿ ಆಫ್ರೀನ್ ಬಾನು ಎಂದು ತಿಳಿದುಬಂದಿದ್ದು, ನವೆಂಬರ್ 12ರ ಸಂಜೆ ಸ್ನಾನ ಮಾಡಲು ತಾಹೇರ ಅವರು ಬಕೆಟ್‌ನಲ್ಲಿ ನೀರು ಹಾಕಿ ವಾಟರ್ ಹೀಟರ್ ಹಚ್ಚಿ ಬಿಸಿ ಮಾಡಿದ್ದರು. ನೀರು ಬಿಸಿಯಾದ ಬಳಕ ವಾಟರ್ ಹೀಟರ್ ಬಂದ್ ಮಾಡಿದ್ದರು. ಮೂವರೂ ಮಕ್ಕಳು ಅಲ್ಲಿಯೇ ಆಟವಾಡುತ್ತಿದ್ದರು. ಒಳಗೆ ಹೋಗಿ ಬಟ್ಟೆ ತರುವ ವೇಳೆಗೆ ಆಫ್ರೀನಾ ಬಾನು ಬಿಸಿ ನೀರಿನ ಬಕೆಟ್‌ನಲ್ಲಿ ಬಿದ್ದಳು. ದೇಹದಲ್ಲಿ ಭಾಗಶಃ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಮಗಳಿಗೆ…

Read More