Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಮಾಡಿದ ತ್ಯಾಗ ಬಹಳ ದೊಡ್ಡದು ಎಂದು ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಭದ್ರತೆಗೆ ಮಾಡಿದ್ದಷ್ಟು ತ್ಯಾಗ ಯಾರು ಮಾಡಿಲ್ಲ. ಆ ಬಗ್ಗೆ ನಾವು ಬೇರೆಯವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾವೇನು ಪಹಲ್ಗಾಮ್ ದುರ್ಘಟನೆಯ ಬಗ್ಗೆ ಮೃದು ಧೋರಣೆ ತೋರಿಲ್ಲ ಎಂದು ಅವರು ತಿಳಿಸಿದರು. ನಮ್ಮ ನಾಯಕರು ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ಹೇಳಿದ್ದಾರೆ. ಇದು ದೇಶದ ಭದ್ರತೆಯ ವಿಚಾರ ಎಚ್ಚರಿಕೆಯಿಂದ ಮಾತನಾಡಬೇಕು. ಈ ವಿಚಾರದಲ್ಲಿ ಪಕ್ಷಾತೀತವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಚಾಮರಾಜನಗರ : ಸಂಬಂಧಿ ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ ಕಾಲಿಗೆ ಪೆಟ್ಟಾಗಿದೆ. ಈ ವೇಳೆ ಮಗುವಿಗೆ ಏನಾಗಿದೆಯೋ ಏನೋ ಎಂಬ ಭೀತಿಯಲ್ಲಿ 12 ವರ್ಷದ ಬಾಲಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಜ್ವಲ್ (12) ಎಂದು ತಿಳಿದುಬಂದಿದ್ದು, ಬಾಲಕ ಪ್ರಜ್ವಲ್ ಲೊಕ್ಕನಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಶೀಲಾ ರವರ ಪುತ್ರ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿದ್ದು, ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗುವಿಗೆ ಏನಾದರೂ ಆಗಿದೆಯೇ ಎಂಬ ಭೀತಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಘಟನೆ ತಿಳಿದು ಅಕ್ಕಪಕ್ಕದ ಮನೆಯವರು ತಕ್ಷಣ ಪ್ರಜ್ವಲ್ ನನ್ನು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ…
ಮಂಡ್ಯ : ತನ್ನ ಇಬ್ಬರು ಮಕ್ಕಳೊಂದಿಗೆ ತಂದೆ ಒಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಮಂಡ್ಯ ಜಿಲ್ಲೆಯ ವಿ ಸಿ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಂದೆ ಕುಮಾರಸ್ವಾಮಿ (36) ಹಾಗು ಮಕ್ಕಳಾದ ಅದ್ವೈತ, ಅಕ್ಷರ ಮೃತರು ಎಂದು ತಿಳಿದುಬಂದಿದೆ. ಮೃತರು ಮೈಸೂರು ಜಿಲ್ಲೆಯ ಕೆ.ಆರ್ ನಗರ ಮೂಲದವರು ಎಂದು ತಿಳಿದುಬಂದಿದೆ. ಏಪ್ರಿಲ್ 17 ರಂದು ಕೆ ಆರ್ ಎಸ್ ನಲ್ಲಿ ಇದ್ದೇನೆ ಎಂದು ಹೇಳಿ ಕುಮಾರಸ್ವಾಮಿ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇಂದು KRS ನಾರ್ತ್ ಬ್ಯಾಂಕ್ ಬಳಿಯ ವಿ.ಸಿ ನಾಲೆಯಲ್ಲಿ ಶವ ಪತ್ತೆಯಾಗಿದೆ. ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಕೃಷ್ಣರಾಜಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇರುವುದು ಇದೀಗ ಮತ್ತೊಮ್ಮೆ ಬಯಲಾಗಿದೆ. ಹೌದು ಗಡಿ ಭಾಗದಲ್ಲಿ ಸೇನಾವಾಹನಗಳ ಚಲನವಲನಗಳ ಕುರಿತಂತೆ ಭಾರತೀಯ ಸೇನಾಧಿಕಾರಿಯಂತೆ ಗಡಿಭಾಗದ ಟೋಲ್ ಪ್ಲಾಜ ಗಳಿಗೆ ನಿರಂತರವಾಗಿ ಕರೆ ಬರುತ್ತಿದ್ದು, ಐಎಸ್ಐ ಕರೆ ಮಾಡಿ ಮಾಹಿತಿ ಕೇಳುತ್ತಿದೆ ಎನ್ನಲಾಗಿದೆ. ಸೇನಾ ವಾಹನಗಳ ಚಲನವಲನಗಳನ್ನು ಕೇಳುತ್ತಿರುವ ಐಎಸ್ಐ ಭಾರತೀಯ ಸೇನೆಗೆ ನಿರಂತರವಾಗಿ ಕರೆಗಳು ಬರುತ್ತಿವೆ. ಪಾಕಿಸ್ತಾನದ ಮತ್ತೊಂದು ಕುತಂತ್ರ ಈ ಮೂಲಕ ಬಟಾ ಬಯಲಾಗಿದೆ. ಗಡಿಭಾಗದ ಟೋಲ್ ಪ್ಲಾಜಗಳಿಗೆ ಐಎಸ್ಐ ನಿರಂತರವಾಗಿ ಕರೆ ಮಾಡುತ್ತಿದೆ. ಭಾರತೀಯ ಸೇನಾಧಿಕಾರಿಗಳಂತೆ ಫೋನ್ ಕರೆ ಮಾಡಿ ಸೇನಾ ವಾಹನಗಳ ಚಲನೆಯ ಮಾಹಿತಿ ಕೇಳುತ್ತಿದೆ ಎನ್ನಲಾಗಿದೆ. ಇನ್ನು ಉಗ್ರ ಮನೆಗಳನ್ನು ದ್ವಂಸ ಮಾಡಿದ್ದರ ಹಿನ್ನೆಲೆಯಲ್ಲಿ ಅಧಿಕಾರ ತಿಳಿಸಿಕೊಳ್ಳುವುದಕ್ಕೆ ಉಗ್ರರು ಮತ್ತೆ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 84 ಪ್ರವಾಸಿ ತಾಣಗಳ ಪೈಕಿ…
ರಾಯಚೂರು : ಕೋರ್ಟ್ನಲ್ಲಿ ಪೋಕ್ಸೋ ಪ್ರಕರಣದ ವಿಚಾರಣೆಯ ವೇಳೆ ಮರ್ಯಾದ ಹತ್ಯೆ ಬೆಳಕಿಗೆ ಬಂದಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ್ದಕ್ಕೆ ತಂದೆಯೇ ಮಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳನ್ನು ತಂದೆ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿತ್ತು. ಪುತ್ರಿ ರೇಣುಕಾ (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ. 2024 ಸೆಪ್ಟೆಂಬರ್ 21ರನ್ನು ಮಗಳನ್ನು ಕೊಲೆ ಮಾಡಿ ಲಕ್ಕಪ್ಪ ಶವವನ್ನು ಕೃಷ್ಣಾ ನದಿಗೆ ಎಸೆದಿದ್ದ ಮಗಳ ಶವವನ್ನು ಮೂಟೆ ಕಟ್ಟಿ ನದಿಗೆ ಎಸೆದಿದ್ದ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸುತ್ತಿದ್ದಳು. ಮದುವೆಗೆ ವಿರೋಧ ಮಾಡಿದ್ದಕ್ಕೆ ಇಬ್ಬರು ಗ್ರಾಮವನ್ನು ಬಿಟ್ಟು ಓಡಿ ಹೋಗಿದ್ದರು. ಮಗಳು 17 ವರ್ಷದವಳಾಗಿದ್ದರಿಂದ ತಂದೆ ಲಕ್ಕಪ್ಪ ಠಾಣೆಗೆ ದೂರು ನೀಡಿದ್ದರು. ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣದ ಅಡಿ ತಂದೆ ದೂರು…
ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ. ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ…
ಜಮ್ಮು ಕಾಶ್ಮೀರ : ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆ ಕಾಶ್ಮೀರದಲ್ಲಿರುವ ಹಲವು ಉಗ್ರರ ಮನೆಗಳನ್ನು ದ್ವಂಸಗೊಳಿಸಿದೆ. ಇದರ ಪ್ರತಿಕಾರಕ್ಕಾಗಿ ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇದೀಗ ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣಗಳ ಪ್ರವೇಶಕ್ಕೆ ಕೇಂದ್ರ ಸರ್ಕಾ ನಿಷೇಧ ಹೇರಿದೆ. ಹೌದು ಉಗ್ರರ ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಪ್ರತಿಕಾರಕ್ಕೆ ಸಂಚು ರೂಪಿಸಿದ್ದು, ಕಾಶ್ಮೀರ ಪ್ರವಾಸಿ ತಾಣಗಳನ್ನು ಗುರುಯಾಗಿಸಿಕೊಂಡು ಉಗ್ರರು ದಾಳಿಗೆ ಮತ್ತೆ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ. ಸ್ಲೀಪರ್ ಸೆಲ್ ಮೂಲಕ ಮಾಹಿತಿ ಪಡೆದು ದಾಳಿಗೆ ಉಗ್ರರು ಸಂಚು ರೂಪಿಸಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಕೇಂದ್ರ ಸರ್ಕಾರ ಇದೀಗ ಅಲರ್ಟ್ ಆಗಿದೆ. ಹಾಗಾಗಿ ಜಮ್ಮು ಕಾಶ್ಮೀರದ 84 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ಸ್ಥಾನಗಳಲ್ಲಿ ಪ್ರವೇಶ ನಿಷೇಧಿಸಿದೆ.
ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ.ಇತ್ತೀಚಿಗೆ ಅವರ ಅಂತ್ಯಕ್ರಿಯೆ ಕೂಡ ನೆರೆವೆರಿದ್ದು, ಸರ್ಕಾರ ಸಹ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದೆ. ಇದಿಗ ಮೃತ ಮಂಜುನಾಥ್ ಪತ್ನಿ ಪಲ್ಲವಿ ಅವರು ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಲಾಂನಲ್ಲಿ ಭಯೋತ್ಪಾದಕರು ನನ್ನ ಪತಿಯನ್ನು ಕೊಂದಾಗ, ನಮ್ಮನ್ನು ಸಾಯಿಸಿ ಎಂದು ನಾನು ಮತ್ತು ನನ್ನ ಮಗ ಕೂಗಿ ಭಯೋತ್ಪಾದಕರನ್ನು ಕೇಳಿದ್ದು ಹೌದು. ಆಗ ಆ ಉಗ್ರರು ‘ಮೋದಿಗೆ ಹೋಗಿಹೇಳಿ’ ಎಂದಿದ್ದೂ ಹೌದು. ಆದರೆ, ನಾನು ಈ ಮಾತುಗಳನ್ನು ಹೇಳಿದ್ದಕ್ಕೆ ಅನೇಕ ನೆಗೆಟಿವ್ ಕಾಮೆಂಟ್ಸ್ ಬರುತ್ತಿದೆ ಎಂದು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಪತ್ನಿ ಪಲ್ಲವಿ ಹೇಳಿದ್ದಾರೆ. ನಾನು ಈ ಮಾತುಗಳನ್ನೆಲ್ಲಾ ವಿಡಿಯೋ ಮಾಡಿಟ್ಟುಕೊಳ್ಳಬೇಕಿತ್ತೇನು ಎಂದು ಪ್ರಶ್ನಿಸಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಅಂತಹ ಸನ್ನಿವೇಶದಲ್ಲಿ…
ನವದೆಹಲಿ : ಪಾಕಿಸ್ತಾನ ಸೇನೆಯ ಕರಾಳ ಮುಖ ಮತ್ತೊಮ್ಮೆ ಬಯಲಾಗಿದ್ದು ಪಹಲ್ಗಾಮ್ ನಲ್ಲಿ , ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇರುವುದು ಮತ್ತೊಮ್ಮೆ ಬಯಲಾಗಿದೆ. ಹೌದು ಪಲ್ಗಾಂ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನ್ ಸೇನಾಧಿಕಾರಿ ಕೈವಾಡ ದೃಢವಾಗಿದೆ. ಅರೆಸೇನಾಪಡೆ ಕಮಾಂಡೊ ಹಾಶಿಂ ಮುಸಾ ಉಗ್ರರ ಗುಂಡಿನ ದಾಳಿಯ ಹಿಂದೆ ಆತನ ಕೈವಾಡ ಇರುವುದು ಇದೀಗ ದೃಢವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡುವ ಮುನ್ನ ಉಗ್ರರಿಗೆ ಹಾಶೀಂ ಮುಸಾ ತರಬೇತಿ ನೀಡಿದ್ದ ಎನ್ನಲಾಗಿದೆ. ದಾಳಿಯ ಬಳಿಕ ಉಗ್ರರು ತಪ್ಪಿಸಿಕೊಳ್ಳಲು ರೂಟ್ ಮ್ಯಾಪ್ ಸಹ ಹಾಶಿಮ್ ಮುಸಾ ನೀಡಿದ ಎನ್ನಲಾಗಿದೆ. ಪಾಕಿಸ್ತಾನ ಮೂಲದ ಎಲ್ಇಟಿ ಜೊತೆ ಕೆಲಸ ಮಾಡುತ್ತಿರುವ ಕಟ್ಟಾ ಭಯೋತ್ಪಾದಕ ಮೂಸಾನನ್ನು, ಸ್ಥಳೀಯರಲ್ಲದವರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಸಂಘಟನೆಯ ಮಾಸ್ಟರ್ಮೈಂಡ್ಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಿದ್ದಾರೆ.ವಿಶೇಷ ಸೇವಾ ಗುಂಪು (SSG) ನಂತಹ ಪಾಕಿಸ್ತಾನದ ವಿಶೇಷ ಪಡೆಗಳು ಅವನನ್ನು ಎಲ್ಇಟಿಗೆ ಎರವಲು…
ಉಡುಪಿ : ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ಎಂದು ತಿಳಿದುಬಂದಿದೆ. ಕಾರಿನಲ್ಲೇ ಎನ್ ಆರ್ ದಿಲೀಪ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ…














