Author: kannadanewsnow05

ಬೆಂಗಳೂರು : ಮದ್ಯದ ಅಮಲಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪುತ್ರ ಕಿರಿಕ್ ಮಾಡಿದ್ದು, ಕುಣಿಗಲ್ ತಹಸೀಲ್ದಾರ್ ರಶ್ಮಿ ಕಾರಿಗೆ ಅಡ್ಡ ಬಂದು ಪುಂಡಾಟ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲ್ಯಾಂಕೋ ಟೋಲ್ ಬಳಿ ಈ ಒಂದು ಘಟನೆ ನಡೆದಿದೆ. ನೆಲಮಂಗಲದ ಉದ್ಯಮಿ ಡಾಬಾ ರಾಜಣ್ಣ ಪುತ್ರ ರವಿ ಗೌಡನಿಂದ ಈ ಒಂದು ಕೃತ್ಯ ನಡೆದಿದೆ. ರವಿಗೌಡನ ಪುಂಡಾಟ ನೋಡಿ ತಕ್ಷಣ 112ಕ್ಕೆ ಕರೆ ಮಾಡಿ ತಹಶೀಲ್ದಾರ್ ರಶ್ಮಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರವಿ ಗೌಡನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಹಶೀಲ್ದಾರ್ ರಶ್ಮಿ ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನೆಲಮಂಗಲದಲ್ಲಿ ರವಿಗೌಡ ಈ ಕೃತ್ಯ ಎಸಗಿದ್ದಾನೆ. ಆರೋಪಿ ರವಿ ಗೌಡಗೆ ಸೇರಿದ ಕಾರನ್ನು ಇದೀಗ ನೆಲಮಂಗಲ ಠಾಣೆ ಪೋಲೀಸರು ಸೀಜ್ ಮಾಡಿದ್ದಾರೆ. KA 03 MW 1 ಡಿಫೆಕ್ಟಿವ್ ನಂಬರ್ ಪ್ಲೇಟ್ ಬಳಸುತ್ತಿದ್ದ. ತಮ್ಮ ಕಾರಿಗೆ ಟೆಂಟೆಡ್ ಗ್ಲಾಸ್ ಬಳಸಿ ಆರೋಪಿ ರವಿ ಗೌಡ ಅಡ್ಡಾಡುತ್ತಿದ್ದ.ಸರ್ಕಾರಿ…

Read More

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ KSRTC ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಶೇ.25 ರಷ್ಟು ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇಂದು ಬೆಂಗಳೂರಿನಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಲ್ಲಸಂದ್ರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ರುಚಿತಾ (25) ಎಂದು ತಿಳಿದು ಬಂದಿದೆ. ರುಚಿತಾ ಬಯೋಕಾನ್ ಕಂಪನಿಯ ಜೂನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಮಲ್ಲಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ರುಚಿತ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ರುಚಿತ ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಬೆಸ್ತರಹಳ್ಳಿ ನಿವಾಸಿ ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ರುಚಿತಾ ತಂದೆ ತಾಯಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಮಗಳು ಫೋನ್ ಕಾಲ್ ರಿಸೀವ್ ಮಾಡದ ಹಿನ್ನೆಲೆಯಲ್ಲಿ ಅನುಮಾನ ಕೊಂಡು ಮನೆಗೆ…

Read More

ಬೆಳಗಾವಿ : ಮನೆಯಲ್ಲಿ ಹೇಳದೆ ಕಾರು ತೆಗದುಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಘಟಪ್ರಭಾ ನದಿಗೆ ಕಾರಿನ ಸಮೇತ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತ ಕಿರಣ್ ನಾವಲಗಿ (45) ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ್ ನಾವಲಗಿ ಡಿಸೆಂಬರ್ 30ರಂದು ಮನೆಯಲ್ಲಿ ಯಾರಿಗೂ ತಿಳಿಸದೆ ಮನೆ ತೊರೆದಿದ್ದರು. ಕಿರಣ್ ಅವರಿಗೆ ಉದ್ಯಮದಲ್ಲಿ ನಷ್ಟವಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಸ್ಯ ಕ್ರೇನ್ ಸಹಾಯದಿಂದ ನದಿಗೆ ಬಿದ್ದಂತಹ ಕಾರನ್ನು ಪೊಲೀಸರು ಮೇಲೆತ್ತಿದ್ದಾರೆ. ಘಟನೆ ಕುರಿತಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ನಿನ್ನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದೆ. ಪಿಎಸ್ಐ ಶಶಿಧರ್ ವಣ್ಣೂರ್ ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ…

Read More

ಹಾವೇರಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಲ್ಲದೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇಳಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೌದು ಅಪ್ರಾಪ್ತ ಬಾಲಕಿಗೆ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದ್ದು, ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು ಅಪ್ರಾಪ್ತ ಬಾಲಕಿಗೆ ಒತ್ತಾಯ ಮಾಡಿರುವ ಆರೋಪ ಕೇಳಿ ಬಂದಿದೆ. ಲೈಂಗಿಕ ದೌರ್ಜನ್ಯ ಎಸಗಿ, ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಆರೋಪಿ ಮದುವೆ ಆಗುತ್ತೇನೆ ಅಂತ ಬೆದರಿಕೆ ಹಾಕಿದ ಆರೋಪ ಕೂಡ ಕೇಳಿಬಂದಿದೆ. ಈ ಕುರಿತಂತೆ ಕರ್ಜಗಿ ಗ್ರಾಮದ ಇಬ್ಬರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದ್ದು, ಮಹಬೂಬ್ ಅಲಿ (28) ಹಾಗೂ ಸೋಯಲ್ ಸಾಬ್ (20) ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್…

Read More

ಬೆಂಗಳೂರು : ಹೊಸ ವರ್ಷಕ್ಕೆ ಸಂಪುಟ ಪುನರಚನೆ ಆಗುತ್ತಾ ಎನ್ನುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದು, ಸಚಿವ ಸಂಪುಟ ಪುನಾರಚಣೆ ಕುರಿತಂತೆ ಹೈ ಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ತಿಳಿಸಿದರು. ಈ ಮೂಲಕ ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಕ್ಕೆ ಸಂಪುಟದಲ್ಲಿ ಸರ್ಜರಿ ಮಾಡುತ್ತೀರಾ, ಸಂಪುಟ ಪುನಾರಚನೆ ಆಗುತ್ತಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟ ಪುನರ್ ರಚನೆ ಕುರಿತಂತೆ ಹೈಕಮಾಂಡ್ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು. ಹಾಗಾಗಿ ಸಿಎಂ ಹೇಳಿಕೆಯಿಂದ ಇದೀಗ ಸಂಪುಟ ಸಭೆ ಪುನಾರಚನೆ ಮತ್ತೆ ಜೀವ ಪಡೆದಿದೆ. ಹೊಸ ವರ್ಷದಲ್ಲಿ ಹೊಸ ತಂಡ ಕಟ್ಟುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಸಂಪುಟ ಪುನರಚನೆ ಬಗ್ಗೆ ಬೆಳವಣಿಗೆ ಆಗಿದ್ದು, ಕೆಲ ಪ್ರಭಾವಿ ನಾಯಕರು ತಡೆದಿಂದಾಗಿ ಈ ಒಂದು…

Read More

ಬೆಂಗಳೂರು : ಹೊಸ ವರ್ಷದ ಶುಭಾಶಯ ತಿಳಿಸಲು ಐಪಿಎಸ್, ಐಎಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ವರ್ಗ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುವಜನತೆ ನಮ್ಮ ಆಸ್ತಿ, ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಭೇಟಿಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದು, ಹೊಸ ವರ್ಷದ ಶುಭಾಶಯ ತಿಳಿಸಲು ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದರು. ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ. ಪ್ರಾದೇಶಿಕ ಅಸಮತೋಲನ ಅಸಮಾನತೆ ತೊಡೆಯಲು ಸಹಕಾರ ಬೇಕು. ಈ ವರ್ಷದ ಕಾರ್ಯ ಕ್ಷಮತೆ ಹೆಚ್ಚಿಸಿಕೊಳ್ಳೋಣ ಯುವಜನತೆ ನಮ್ಮ ಆಸ್ತಿ ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಿ ಎಂದು ಸಲಹೆ ನೀಡಿದರು. ಬದುಕಿನಲ್ಲಿ ಏಳು ಬೀಳು ಸಹಜ. ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ…

Read More

ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ…

Read More

ನವದೆಹಲಿ : ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶದ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ನವದೆಹಲಿಯಲ್ಲಿ ಕೂಡ ಇಂತಹದ್ದೇ ಘಟನೆ ನಡೆದಿದ್ದು, ಪತ್ನಿಯ ಕಿರುಕುಳಕ್ಕೆ ಬೇಸತ್ತು ಬೇಕರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಪುನೀತ್ ಖುರಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲ್ ಟೌನ್ ನ ಕಲ್ಯಾಣ ವಿಹಾರ್ ಪ್ರದೇಶದ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ಪುನೀತ್ ಖುರಾನ್, ಬೇಕರಿ ಮಾಲೀಕತ್ವದ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆತ್ಮಹತ್ಯೆಗೂ ಮುನ್ನ ಪುನೀತ್ ಖುರಾನ್ ಗೆ ಪತ್ನಿ ಕರೆ ಮಾಡಿದ್ದಳು. ತನಗೆ ಮತ್ತು ತನ್ನ ಕುಟುಂಬವನ್ನು ಅವಮಾನಿಸಿದ್ದಾನೆ ಎಂದು ಆರೋಪಿಸಿರುವ ಆಕೆ, ಮೊಬೈಲ್ ನಲ್ಲಿ ಮಾತನಾಡುವ ವೇಳೆ ತನ್ನ ಹಾಗೂ ಪುನೀತ್…

Read More