Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ದಲಿತ ಯುವಕನೊಬ್ಬ ದೇಗುಳಕ್ಕೆ ಪ್ರವೇಶಿಸಿದ್ದಾನೆ ಎಂದು ದೇಗುಲದ ಅರ್ಚಕ ದೇವಸ್ಥಾನಕ್ಕೆ ಬೀಗ ಹಾಕಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದಲಿತ ಯುವಕ ಪ್ರವೇಶಿಸಿದ್ದಕ್ಕೆ ದೇವಾಲಯಕ್ಕೆ ಅರ್ಚಕ ಬೀಗ ಹಾಕಿದ್ದಾರೆ. ಎರಡು ಸಮುದಾಯದ ನಡುವೆ ಅಸಮಾಧಾನವಾಗದಂತೆ ದೇಗುಲಕ್ಕೆ ಅರ್ಚಕ ಬೀಗ ಜಡೆದಿದ್ದಾರೆ. ತಿರುಮಲ್ಲೇಶ್ವರ ಸ್ವಾಮಿ ದೇವಾಲಯ ಪ್ರವೇಶ ಮಾಡಿದ್ದ ದಲಿತ ಯುವಕ ದೇಗುಲಕ್ಕೆ ಬೀಗ ಹಾಕಿ ಕಂದಾಯ ಅಧಿಕಾರಿಗಳಿಗೆ ಅರ್ಚಕ ಬೀಈಗ ನೀಡಿದ್ದಾರೆ. ನರಸೀಪುರದಲ್ಲಿ ಕುರುಬ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹಾಗಾಗಿ ಚಿಕ್ಕಮಗಳೂರು ತಹಶೀಲ್ದಾರ ನೇತೃತ್ವದಲ್ಲಿ ಸಭೆ ನಡೆದಿದ್ದು, ದಲಿತರು ಕುರುಬ ಸಮುದಾಯದವರ ಸಭೆ ಎನ್ನು ನಡೆಸಿದ್ದಾರೆ. ಎಲ್ಲರಿಗೂ ಮುಕ್ತ ಪ್ರವೇಶ ನೀಡುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.ಹಾಗಾಗಿ ಎಂದಿನಂತೆ ನರಸೀಪುರ ಗ್ರಾಮದ ದೇವಾಲಯದಲ್ಲಿ ಪೂಜೆ ಪುನಸ್ಕಾರ ನಡೆಯಿತು.
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಿಸಿಬಿಯಿಂದ 71 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಕೇರಳ ಮೂಲದ ಓರ್ವ ಆರೋಪಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸ್ ಅರೆಸ್ಟ್ ಮಾಡಿದ್ದಾರೆ. ಖಚಿತ ಮಾಹಿತಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಚಂದ್ರನಗರದಲ್ಲಿ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿಯ ವೇಳೆ15.15 ಗ್ರಾಂ ಎಂಡಿಎಂಎ ಕ್ರಿಸ್ಟಲ್, 550 ಹೈಡ್ರೋ ಗಾಂಜಾ, 2 ಕೆಜಿ 273 ಗ್ರಾಂ ಗಾಂಜಾ, ತೂಕದ ಯಂತ್ರ ಮತ್ತು ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಿಂದ ಕಡಿಮೆ ಬೆಲೆಗೆ ಬಂಧಿತ ಆರೋಪಿಗಳು ತಂದಿದ್ದರು ಎನ್ನಲಾಗಿದೆ. ಜೈಲಿನಲ್ಲಿರುವ ಮತ್ತೊಬ್ಬ ಆರೋಪಿ ಕೂಡ ಈ ಒಂದು ದಂದಧೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಹಾಗಾಗಿ ಜೈಲಿನಲ್ಲಿರುವ ಆರೋಪಿ ಫೋನಿನಲ್ಲಿ ಸಹಚರನಿಗೆ ಮಾಹಿತಿ ನೀಡುತ್ತಿದ್ದ ಆತನ ಸೂಚನೆಯ ಮೇರೆಗೆ ಪೋರ್ಟರ್ ಮೂಲಕ ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು. ಆರೋಪಿಗಳನ್ನು ಬಂಧಿಸಿ ಸಿಸಿಬಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಸುಧೀರ್ಘವಾಗಿ ವಾದ ಮಂಡಿಸಿದ್ದಾರೆ. ಇಂದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಸಮ್ಮುಖದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರಗೌಡ, ಮತ್ತು ಇನ್ನುಳಿದ ಆರೋಪಿಗಳ ಪರ ವಕೀಲರು ಕೂಡ ವಾದ ಮಂಡಿಸಿದ್ದಾರೆ.ಇನ್ನು ಸರ್ಕಾರದ ಪರವಾಗಿ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಲಿದ್ದು, ಇಂದು ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ದರ್ಶನ್ ಪವಿತ್ರ ಗೌಡ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ.ಇನ್ನುಳಿದಂತೆ ನಾಗರಾಜು, ಲಕ್ಷ್ಮಣ್ ಪರ ವಾದ ಮಂಡಿಸಿದ್ದರೆ. ಇವರೆಲ್ಲರ ವಾದಕ್ಕೆ ಎಸ್ ಪಿ ಪಿ ಪ್ರಸನ್ ಕುಮಾರ್ ಪ್ರತಿವಾದ ಮಾಡಲಿದ್ದಾರೆ. ಅರ್ಹತೆ ಆಧಾರದಲ್ಲಿ ಬೇಲ್ ನೀಡದಂತೆ ಅವರು ಮನವಿ ಸಲ್ಲಿಸಲಿದ್ದಾರೆ. ಜಾಮೀನು…
ಬೆಳಗಾವಿ : ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಗೂಗಲ್ ಮ್ಯಾಪ್ ನಂಬಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ. ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ. ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್…
ಬೆಂಗಳೂರು : ಕಳೆದ ತಿಂಗಳಲ್ಲಿ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದು, ಈ ಘಟನೆ ಮಾಸು ಮುನ್ನವೇ ಇಂದು ಬಳ್ಳಾರಿಯಲ್ಲಿ ಮತ್ತೊರ್ವ ಬಾಣಂತಿ ಸಾವನಪ್ಪಿದ್ದಾಳೆ. ಈ ಎಲ್ಲಾ ಪ್ರಕರಣಗಳ ಸಂಬಂಧಪಟ್ಟಂತೆ ಇದರಲ್ಲಿ ನನ್ನ ತಪ್ಪಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನನ್ನ ತಪ್ಪಿದ್ದರೆ ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಬಿಜೆಪಿಯವರು ಲೋಕಾಯುಕ್ತಕ್ಕೆ ಖಂಡಿತವಾಗಿ ದೂರು ಕೊಡಲಿ. ಇದರಲ್ಲಿ ನನ್ನ ಪ್ರತಿಷ್ಠೆ ಏನೂ ಇಲ್ಲ ಇದು ಜೀವದ ವಿಚಾರವಾಗಿದೆ ಎಂದು ಅವರು ತಿಳಿಸಿದರು. ರಾಜೀನಾಮೆಯಿಂದ ಸರಿಯಾಗುತ್ತೆ ಅಂದರೆ ನಾನು ರಾಜೀನಾಮೆ ನೀಡಲು ಸಿದ್ಧ. ಆದರೆ ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂತಹ ಸಾವು ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. 2024ರಲ್ಲಿ ರಾಜ್ಯದಲ್ಲಿ ಇದುವರೆಗೂ 327 ಮೆಟರ್ನಲ್ ಸಾವಾಗಿದೆ ಎಲ್ಲವನ್ನು ಪರಿಶೀಲಿಸಲು ಹೇಳಿದ್ದೇವೆ ಎಂದರು. ಇಂಥ ಪ್ರಕರಣದಲ್ಲಿ ಸಹನೆ ಇರಬಾರದು ಕಠಿಣ ಕ್ರಮ ಆಗಬೇಕು ಫಾರ್ಮಸ್ಯುಟಿಕಲ್ ಕಂಪನಿಗಳನ್ನು ರಕ್ಷಿಸುವ…
ಉಡುಪಿ : ಉಡುಪಿಯಲ್ಲಿ ಹೋಟೆಲ್ ಬಾಣಸಿಗನೊಬ್ಬನ ಭೀಕರ ಕೊಲೆಯಾಗಿದ್ದು, ದುಷ್ಕರ್ಮಿಗಳು ಬಿಯರ್ ಬಾಟಲ್ ಒಡೆದು ಅದರ ಗಾಜಿನಿಂದ ಬಾಣಸಿಗನ ಕತ್ತು ಸೀಳಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉಡುಪಿಯ ಮಣಿಪಾಲ ಅನಂತ ಕಲ್ಯಾಣನಗರ ಸಮೀಪ ನಡೆದಿದೆ. ಇನ್ನೂ ಕೊಲೆಯಾದ ಬಾಣಸಿಗನನ್ನು ಕೇರಳದ ಕಾಸರಗೋಡಿನ ಶ್ರೀಧರ್ ನಾಯಕ ಎಂದು ತಿಳಿದುಬಂದಿದೆ. ಮಣಿಪಾಲದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದು, ಬೆಳಗ್ಗೆ ಬಾಡಿಗೆ ಮನೆಯಿಂದ ಹೋಟೆಲ್ಗೆ ಹೋಗುತ್ತಿದ್ದರು ಎಂಬ ಮಾಹಿತಿಯಿದೆ. ದುಷ್ಕರ್ಮಿಗಳು ಕುತ್ತಿಗೆಯನ್ನು ಬಿಯರ್ ಬಾಟಲಿಯಿಂದ ಕೊಯ್ದು ಹತ್ಯೆ ಮಾಡಿರುವುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಡಾ. ಕೆ.ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ಕೊಲೆ ಯಾವ ಕಾರಣಕ್ಕೆ ನಡೆದಿದೆ ಮತ್ತು ಯಾರು ಮಾಡಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಈ ಕುರಿತು ಸಭೆ ಮಾಡಿದ್ದೇನೆ. ಡ್ರಗ್ಸ್ ಕಂಟ್ರೋಲರ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ತಿಳಿಸಿದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿದೆ. ಯಾವ ಕಾರಣಕ್ಕೆ ಸಾವು ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ಕೆಲ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಲವೇ ಕ್ಷಣಗಳಲ್ಲಿ ‘ಸಂಪುಟ ಸಭೆ’ ಆರಂಭ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.ಈ ಒಂದು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪ್ರಮುಖ ನಿರ್ಧಾರಗಳನ್ನು ಕೂಡ ಈ ಒಂದು ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದನು ಪ್ರಶ್ನಿಸಿ, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಹೈಕೋರ್ಟ್ ಜನವರಿ 25 ಕ್ಕೆ ಮುಂದೂಡಿ ಆದೇಶಿಸಿದೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ. ಈ ಒಂದು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಪ್ರಮುಖ ನಿರ್ಧಾರಗಳನ್ನು ಕೂಡ ಈ ಒಂದು ಸಭೆಯಲ್ಲಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಪ್ರಮುಖವಾಗಿ ಮುಡಾ ವಿಚಾರದಲ್ಲಿ ಇಡಿ ಇಂದ ಲೋಕಾಯುಕ್ತಕ್ಕೆ ಪತ್ರ ವ್ಯವಹಾರ ಮಾಡಿರುವ ಕುರಿತಾಗಿ ಅನೌಪಚಾರಿಕ ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಅಲ್ಲದೆ ಇಡಿ ವಿರುದ್ಧ ಮುಂದಿನ ಕಾನೂನು ಹೋರಾಟದ ಕುರಿತು ಕೂಡ ಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಇನ್ನೂ ಕೆಲವೇ ದಿನಗಳಲ್ಲಿ…
ಮೈಸೂರು : ಮೈಸೂರು ಜಿಲ್ಲೆಗೆ ಪ್ರವಾಸ ಮಾಡುತ್ತಿರುವ ಪ್ರವಾಸಿಗರಿಗೆ ಇದೀಗ ಭಾರಿ ನಿರಾಸೆಯಾಗಿದೆ. ಕಾರಣ ಮೈಸೂರು ಅರಮನೆಯಲ್ಲಿರುವ ಚಿನ್ನದ ಅಂಬಾರಿ ವೀಕ್ಷಣೆಗೆ ಇದೀಗ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ ಹಾಗಾಗಿ ಮೈಸೂರು ಜಿಲ್ಲೆ ಪ್ರವಾಸ ಕೈಗೊಂಡವರಿಗೆ ಸಹಜವಾಗಿ ನಿರಾಸೆಯಾಗಿದೆ. ಹೌದು ಬಲ್ಲ ಮೂಲಗಳ ಮಾಹಿತಿಗಳ ಪ್ರಕಾರ ಅಂಬಾರಿ ವೀಕ್ಷಣೆಗೆ ನಿರ್ಬಂಧ ಹೇರಿದ್ದು ಪ್ರವಾಸಿಗರಲ್ಲಿ ನಿರಾಸೆ ಉಂಟು ಮಾಡಿದೆ. ಅಂಬಾರಿ ಕೆಳಗೆ ಹಾಗೂ ಹಿಂಭಾಗ ಮರದ ಕೆಲಸ, ಸೇರಿದಂತೆ ವಿವಿಧ ಕಾಮಗಾರಿ ಕೆಲಸ ಇರವುದರಿಂದ ವೀಕ್ಷಣೆಗೆ ಬ್ರೇಕ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿ ವೀಕ್ಷಣೆಗೆ ಅವಕಾಶವಿಲ್ಲ. ಆದ್ದರಿಂದ ಸಹಜವಾಗಿ ಮೈಸೂರು ಅರಮನೆಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರಾಸೆಯಾಗಿದೆ.
ಕಲಬುರ್ಗಿ : ಆನ್ಲೈನ್ ಗೇಮ್ ಚಟ ಹತ್ತಿಸಿಕೊಂಡ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಅದರಿಂದ ಹೊರಬರಲಾರದೆ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಎಂದು ಹೇಳಲಾಗುತ್ತಿದೆ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ. ಆನ್ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












