Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಭಾರಿ ದುರಂತ ಒಂದು ತಪ್ಪಿದ್ದು 110 ಪ್ರಯಾಣಿಕರನ್ನು ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ, ಪ್ರಪಾತಕ್ಕೆ ಬೀಳುವ ಮುನ್ನ ಕೂದಲಿ ಅಂತರದಲ್ಲಿ ಪಾರಾಗಿರುವ ಘಟನೆ, ಕನಕಪುರದ ಸಂಗಮ ಘಾಟ್ ಬಳಿ ನಡೆದಿದೆ. ಹೌದು ಹೊಸ ವರ್ಷದ ದಿನ ಭಾರಿ ದುರಂತ ತಪ್ಪಿದೆ. ಕನಕಪುರದ ಸಂಗಮ ಘಾಟ್ ಬಳಿ ಬಸ್ ಬ್ರೇಕ್ ಫೇಲ್ ಆಗಿದೆ. ಬಸ್ ನಲ್ಲಿದ್ದ 110 ಪ್ರಯಾಣಿಕರು ಜಸ್ಟ್ ಮಿಸ್ ಆಗಿದ್ದಾರೆ. ಬ್ರೇಕ್ ಫೇಲ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಪಾತಕ್ಕೆ ಬೀಳುತ್ತಿದ್ದ ಬಸ್ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ತಡೆಗೋಡೆಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಅದೃಷ್ಟವಶಾತ್ 110 ಪ್ರಯಾಣಿಕರು ಬಚಾವ್ ಆಗಿದ್ದಾರೆ.
ಯಾದಗಿರಿ : ಹೊಸ ವರ್ಷಾಚರಣೆಯ ಸಂಭ್ರಮದ ಹೊತ್ತಲ್ಲೇ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಭೀಕರ ವಾದಂತಹ ಕೊಲೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಚಗುಂಡಾಳ್ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಚಾಕುವಿನಿಂದ ಕತ್ತು ಕೊಯ್ದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಸುರಪುರ ತಾಲೂಕಿನ ಮಾಚಗುಂಡಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಶರಣಪ್ಪ ಮೇಟಿ (28) ಎನ್ನುವ ವ್ಯಕ್ತಿಯ ಬರ್ಬರ ಕೊಲೆಯಾಗಿದೆ.ಶರಣಪ್ಪಗೆ ಚಾಕುವಿನಿಂದ ಮನಬಂದಂತೆ ಇರಿದು ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಕುತ್ತಿಗೆ ಬಳಿಗೆ ಚಾಕು ಬಿಟ್ಟು ಪಾತಕಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಒಂದು ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನೆ ಕುರಿತಂತೆ ಸುರಪುರ ಠಾಣೆ ಪೊಲೀಸರು, ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ರಾಯಚೂರು : ಕಳೆದ ವರ್ಷ ಬಳ್ಳಾರಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಿತ್ತು. ಇದೀಗ ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು, ನಿನ್ನೆ ಕೊಪ್ಪಳದಲ್ಲಿ ಓರ್ವ ಬಾಣಂತಿ ಸಾವನಪ್ಪಿದ್ದರೆ, ಇಂದು ನಸುಕಿನ ವೇಳೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಮತ್ತೋರ್ವ ಬಾಣಂತಿ ಹಾಗೂ ಮಗು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶಿವಲಿಂಗಮ್ಮ ಎನ್ನುವ ಬಾಣಂತಿ ಸಾವನಪ್ಪಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮಗು ಹಾಗು ಬಾಣಂತಿ ಶಿವಲಿಂಗಮ್ಮ (21) ಸಾವನ್ನಪ್ಪಿದ್ದಾ. ಜಿಲ್ಲೆಯಲ್ಲಿ ಅಕ್ಟೋಬರ್ ನಿಂದ ಇದುವರೆಗೂ 11 ಬಾಣಂತಿಯ ಸಾವಾಗಿದೆ. ದೇವದುರ್ಗ ತಾಲೂಕಿನ ಮಸದಾಪುರ ಗ್ರಾಮದ ನಿವಾಸಿ ಶಿವಲಿಂಗಮ್ಮ ಡಿಸೆಂಬರ್ 27 ರಂದು ಸಿಜೇರಿಯನ್ ಮೂಲಕ ಶಿವಲಿಂಗಮ್ಮಗೆ ಹೆರಿಗೆ ಆಗಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಶಿವಲಿಂಗಮ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ 5 ಗಂಟೆಗೆ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಸಾವನ್ನಪ್ಪಿದೆ. ವೈದ್ಯರ ನಿರ್ಲಕ್ಷದಿಂದಲೇ ಬಾಣಂತಿ ಶಿವಲಿಂಗಮ್ಮ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗುತ್ತಿದೆ.…
ಬೆಂಗಳೂರು : ಕ್ಯಾನ್ಸರ್ ಹಿನ್ನೆಲೆಯಲ್ಲಿ ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಅವರು ಅಮೆರಿಕಾಗೆ ಶಸ್ತ್ರಚಿಕಿತ್ಸೆಗೆ ಎಂದು ತೆರಳಿದ್ದರು. ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ನಟ ಶಿವರಾಜಕುಮಾರ್ ಅವರು ಮಾರಕ ಕಾಯಿಲೆಯಾದ ಕ್ಯಾನ್ಸರ್ ಅನ್ನು ಗೆದ್ದಿದ್ದಾರೆ. ಈ ಕುರಿತು ಅವರ ಪತ್ನಿ ಗೀತಾ ಅವರು ಮಾಹಿತಿ ಹಂಚಿಕೊಂಡಿದ್ದು, ಶಿವರಾಜಕುಮಾರ್ ಅವರ ಎಲ್ಲಾ ಹೆಲ್ತ್ ರಿಪೋರ್ಟ್ ನೆಗೆಟಿವ್ ಆಗಿದ್ದು ಕ್ಯಾನ್ಸರ್ ಫ್ರೀ ಎಂದು ವರದಿ ಬಂದಿದೆ. ಕ್ಯಾನ್ಸರ್ ಫ್ರೀ ಎಂದು ಶಿವಣ್ಣ ಪತ್ನಿ ಗೀತಾ ಶಿವರಾಜಕುಮಾರ್ ಮಾಹಿತಿ ನೀಡಿದ್ದಾರೆ ಇದೆ ವೇಳೆ ಶಿವರಾಜ್ ಕುಮಾರ್ ಹೊಸ ವರ್ಷದ ಶುಭಾಶಯಗಳು ತಿಳಿಸಿದರು. ಶಸ್ತ್ರ ಚಿಕಿತ್ಸೆ ಬಳಿಕನಟ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಿಂದ ಹೊರಡುವಾಗ ನಾನು ಸ್ವಲ್ಪ ತಮೋಶನಲ್ ಆಗಿದೆ ಭಯ ಎನ್ನುವುದು ಮನುಷ್ಯನಿಗೆ ಇರುತ್ತದೆ. ಭಯಣಿಗಿಸುವ ಅಭಿಮಾನಿಗಳು ಸಹಕಲಾವಿದರು ಇದ್ದಾರೆ ಕೆಲವರು ಸ್ನೇಹಿತರು ಸಂಬಂಧಿಕರು ಡಾಕ್ಟರ್ಸ್ ಇರುತ್ತಾರೆ. ಕಿಮೋ ತೆರಪಿಯಲ್ಲಿ 45 ಸಿನಿಮಾ ಶೂಟ್ ಮಾಡಿರುವುದು ಗೀತಾ…
ಮೈಸೂರು : ವಿದ್ಯಾರ್ಥಿಗಳಿಗೆ ತಾಯಿಯೇ ಮೊದಲ ಗುರುವಾದರೆ, ಇನ್ನು ಶಿಕ್ಷಣ ನೀಡುವ ಶಿಕ್ಷಕ ಎರಡನೇ ಗುರು ಎಂದು ಹೇಳಲಾಗುತ್ತದೆ. ಆದರೆ ಇನ್ನೊಬ್ಬ ಶಿಕ್ಷಕ ತಾನು ಪಾಠ ಮಾಡಬೇಕಿದ್ದ ವಿದ್ಯಾರ್ಥಿನಿಗೆ ಪ್ರೇಮ ಪಾಠ ಹೇಳಿ ಹಾಗೆನೇ ಪ್ರೀತಿಸಿ ಮದುವೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹೌದು ನಗರದ ಖಾಸಗಿ ಬಿಎಡ್ ಉಪನ್ಯಾಸಕರಾಗಿದ್ದ ತಾಲೂಕಿನ ಬೆಂಕಿಪುರ ನಿವಾಸಿ ಯಶೋಧ್ ಕುಮಾರ್ ಹಾಗೂ ನಗರಕ್ಕೆ ಸಮೀಪದ ಹಳೆಯೂರಿನ (ಚಿಕ್ಕಹುಣಸೂರು) ಸಜ್ಜೇಗೌಡರ ಪುತ್ರಿ ಪೂರ್ಣಿಮಾ ಮದುವೆ ಮಾಡಿಕೊಂಡಿದ್ದಾರೆ. ಅಲ್ಲದೆ ರಕ್ಷಣೆಗಾಗಿ ಪೊಲೀಸರ ಮೊರೆಗೆ ಹೋಗಿದ್ದಾರೆ. ಮಗಳನ್ನು ಶಿಕ್ಷಕಿಯನ್ನಾಗಿಸಬೇಕೆಂಬ ಆಸೆಯಿಂದ ಬೀದಿ ಬದಿ ಸೊಪ್ಪು ವ್ಯಾಪಾರ ಮಾಡಿ, ಜೀವನ ನಡೆಸುತ್ತಿದ್ದ ಸಜ್ಜೇಗೌಡ, ಸಾಲ ಮಾಡಿ ಪೂರ್ಣಿಮಾಳನ್ನು ನಗರದ ಖಾಸಗಿ ಡಿಎಡ್ ಕಾಲೇಜಿಗೆ ದಾಖಲಿಸಿದ್ದರು. ಪೂರ್ಣಿಮಾ ಬಿಎಡ್ ಮುಗಿಸಿ ಮನೆಯಲ್ಲಿದ್ದಳು. ವ್ಯಾಸಂಗ ಮಾಡುತ್ತಿದ್ದಾಗಲೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಮಾಹಿತಿ ತಿಳಿದ ಪೋಷಕರು, ಮಗಳಿಗೆ ತಿಳಿಹೇಳಿ ಎಚ್ಚರಿಸಿದ್ದರಲ್ಲದೆ ವಿರೋಧ ವ್ಯಕ್ತಪಡಿಸಿದ್ದರು. ಡಿ.26ರ ಗುರುವಾರ ಕಾಲೇಜಿನಿಂದ ಸರ್ಟಿಫಿಕೇಟ್ ತರುವುದಾಗಿ ಹೇಳಿ ಹೋದ…
ಹಾಸನ : ಹಾಸನದಲ್ಲಿ ಪ್ರಿಯತಮೆ ಇಂದಲೇ ಪ್ರಿಯಕರನಿಗೆ ಚಾಕು ಇರಿದ ಘಟನೆ ನಡೆದಿದ್ದು, ಚಾಕು ಇರಿತಕ್ಕೆ ಒಳಗಾದಂತಹ ಪ್ರಿಯಕರ ಮನು ಕುಮಾರ್ ಸ್ಥಿತಿ ಇದೀಗ ಗಂಭೀರವಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ರಾತ್ರಿ 12.30ಕ್ಕೆ ಈ ಘಟನೆ ನಡೆದಿದೆ. ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರಿಗೆ ಆತನ ಪ್ರಿಯತಮೆ ಚಾಕು ಇರಿದಿದ್ದಾಳೆ. ಸದ್ಯ ಪ್ರಿಯತಮೆ ವಿರುದ್ಧ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಖಾಸಗಿ ಹೋಟೆಲ್ ನಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಿಯತಮೆ ಹಾಗೂ ಮನೋ ಕುಮಾರ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ ಅವರು ವೈಮನಸ್ಸಿಂದ ದೂರವಾಗಿದ್ದರು. ನಿನ್ನೆ ಹೊಸ ವರ್ಷಾಚರಣೆ ಪಾರ್ಟಿ ಮುಗಿದ ಸಂದರ್ಭದಲ್ಲಿ ಮನುಕುಮಾರ್ ಮನೆಗೆ ತೆರಳುತ್ತಿದ್ದ ವೇಳೆ ಯುವತಿ ಮನುಕುಮಾರಿಗೆ ಚಾಕು ಇರಿದಿದ್ದಾಳೆ. ತಡರಾತ್ರಿ 12:30 ಗಂಟೆಗೆ ಯುವತಿ ಖಾಸಗಿ ಹೋಟೆಲಿಗೆ ಬಂದಿದ್ದಾಳೆ. ಈ ವೇಳೆ ಅಲ್ಲಿಗೆ ಬಿದ್ದಿದ್ದ ಪಾಸ್ ತೆಗೆದುಕೊಂಡು ಹೋಟೆಲ್ ಒಳಗೆ…
ಮಂಗಳೂರು : ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯಕ್ಷಗಾನ ಯುವ ಕಲಾವಿದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದ ಅರ್ಕುಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ(21) ಎಂದು ಗುರುತಿಸಲಾಗಿದೆ. ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗದ ಉದ್ದೇಶದಿಂದ ಮಂಗಳೂರು ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರು.ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿಯೂ ಯಕ್ಷಗಾನ ಕಲಾಸಕ್ತರ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಯಕ್ಷಗಾನ ಕಲಾವಿದರ ಸಮುದಾಯದಲ್ಲಿ ಶೋಕದ ಛಾಯೆ ಆವರಿಸಿದೆ. ಪ್ರವಿತ್ ಆಚಾರ್ಯ ಪಡೀಲ್ ಅಥವಾ ಬಿ.ಸಿ. ರೋಡ್ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು.ಎಂದಿನಂತೆ ಮಂಗಳವಾರ ಪ್ರವಿತ್ ಸಂಜೆ ಕಾಲೇಜು ಮುಗಿಸಿ ಬಿ.ಸಿ. ರೋಡ್ನಲ್ಲಿದ್ದ ಬೈಕ್ ಹತ್ತಿ ಮಂಗಳೂರಿನತ್ತ ಬರುತ್ತಿದ್ದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್ಗೆ ಡಿಕ್ಕಿ…
ಬೆಂಗಳೂರು : ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಬೆಳ್ಳಂದೂರು ಪಬ್ ಒಂದರಲ್ಲಿ ಯುವತಿಯ ಜೊತೆಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಬೇಡವೆಂದು ನಿರಾಕರಿಸಿದರು ಕೂಡ ಮದ್ಯ ಸೇವಿಸಲು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ ಹೌದು ಬೆಂಗಳೂರಿನ ಬೆಳ್ಳಂದೂರಿನ ಪಬ್ನಲ್ಲಿ ಯುವತಿಯ ಜೊತೆಗೆ ಯುವಕ ಅಸಭ್ಯ ವರ್ತನೆ ತೋರಿದ್ದಾನೆ. ಪಾರ್ಟಿ ಮಾಡುತ್ತಿದ್ದ ಯುವತಿಗೆ ಮದ್ಯ ಸೇವಿಸಲು ಕಿಡಿಗೇಡಿ ಒಬ್ಬ ಪೀಡಿಸುತ್ತಿದ್ದ. ಈ ವೇಳೆ ಮದ್ಯ ಬೇಡ ಎಂದು ಯುವತಿ ನಿರಾಕರಣೆ ಮಾಡಿದ್ದಾಳೆ.ಕುಡಿಯಲೇ ಬೇಕು ಎಂದು ಯುವಕ ಆಸಭ್ಯವಾಗಿ ವರ್ತಿಸುತ್ತಿದ್ದ. ಪಬ್ ಸಿಬ್ಬಂದಿ ಬರುತ್ತಿದ್ದಂತೆ ಯುವಕ ಸ್ಥಳದಿಂದ ಪರಾರಿ ಆಗಿದ್ದಾನೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ FIR ದಾಖಲಾಗಿದೆ.
ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯುವಜನತೆ ತಡರಾತ್ರಿ ರಾಜ್ಯದ ಎಲ್ಲೆಡೆ 2025 ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿತು. ಆದರೆ ಇದೇ ಹೊಸ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿ ಒಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದ ಗಣೇಶ ಮಂದಿರದ ಬಳಿ ನಡೆದಿದೆ. ಹೌದು ನ್ಯೂ ಇಯರ್ ಪಾರ್ಟಿ ಬಳಿಕ ವ್ಯಕ್ತಿಗೆ ದುಷ್ಕರ್ಮಿಗಳು ಚಾಕು ಇರಿದು ಗಾಯಗೋಳಿಸಿರುವ ಘಟನೆ ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ತಡರಾತ್ರಿ 2.30 ಗಂಟೆಗೆ ಈ ಒಂದು ಘಟನೆ ನಡೆದಿದೆ. ಕುಶಾಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ನ್ಯೂ ಇಯರ್ ಪಾರ್ಟಿ ಬಳಿಕ ಕುಡಿದ ಅಮಲಿನಲ್ಲಿ ಗಲಾಟೆ ಆಗಿದೆ. ಗಾಯಾಳು ಕುಶಾಲನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಪಿ ಅಗ್ರಹಾರದ ಗಣೇಶ ದೇವಾಲಯದ ಬಳಿ ಈ ಒಂದು ಘಟನೆ ನಡೆದಿದೆ.ಕೆ ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿನ್ನೆ ಮಧ್ಯರಾತ್ರಿ 12 ಗಂಟೆಗೆ ಎಲ್ಲೆಡೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ, 2025 ಹೊಸ ವರ್ಷವನ್ನು ಸ್ವಾಗತಿಸಿ ರಾಜ್ಯದ ಯುವಜನರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಯುವಕ ಮತ್ತು ಯುವತಿಯರು ಮದ್ಯದ ಅಮಲಿನಲ್ಲಿ ತೇಲಾಡಿ, ಹೊಸ ವರ್ಷವನ್ನು ಸ್ವಾಗತಿಸಿದರು. ಈ ಒಂದು ಸಂಭ್ರಮಾಚರಣೆ ವೇಳೆ ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ. ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದ ಯುವಜನತೆಗೆ ಅಭಿನಂದನೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ಹೊಸ ವರ್ಷದ ಆಚರಣೆಯಲ್ಲಿ ಜನ ಭಾಗವಹಿಸಿದ್ದರು. ಸಂಭ್ರಮಾಚರಣೆಯ ವೇಳೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪೊಲೀಸರು ಕ್ರಮ ಕೈಗೊಂಡಿದ್ದರು. ನಾನು ಎಲ್ಲಿಯೂ ಭೇಟಿ ನೀಡಿಲ್ಲ ಎಲ್ಲರೂ ಶಾಂತಿಯಿಂದ ಹೊಸ ವರ್ಷ ಆಚರಣೆ ಮಾಡಿದ್ದಾರೆ. ರಾಜ್ಯದ ಯುವಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜಿ.ಪರಮೇಶ್ವರ್ ತಿಳಿಸಿದರು. ಡಿಕೆ ಸುರೇಶ್ ಸಹೋದರಿ ಎಂದು ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…














