Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಈಕೆ ಅಂತಿಂಥ ಭಿಕ್ಷುಕಿಯಲ್ಲ, ಚಿಕ್ಕ ಚಿಕ್ಕ ಕಂದಮ್ಮಗಳಿರುವ ಮಹಿಳೆಯರನ್ನು ಪರಿಚಯಿಸಿಕೊಂಡು ಬಳಿಕ ಅವರಿಂದ ಮಗುವನ್ನು ಅಪಹರಿಸಿ ಭಿಕ್ಷಾಟನೆ ಮಾಡುತ್ತಿದ್ದ ಕಳ್ಳ ಬಿಕ್ಷುಕಿಯನ್ನು ಇದೀಗ ಚಾಮರಾಜನಗರ ಜಿಲ್ಲೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಭೀಕ್ಷಾಟನೆ ಮಾಡುತ್ತಿದ್ದ ಆರೋಪಿಯನ್ನು ರಾಧಾ (28) ಎಂದು ತಿಳಿದುಬಂದಿದೆ. ಈಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಮನಗರ ಮೂಲದ ಅನಿತಾಳನ್ನು ತನ್ನ ಹೆಸರು, ವಿಳಾಸ ತಿಳಿಸದೆ ಪರಿಚಯ ಮಾಡಿಕೊಂಡಿದ್ದಳು. ಅನಿತಾಳ ಮಗುವನ್ನು ಭಿಕ್ಷೆ ಬೇಡಲು ಪಡೆದುಕೊಂಡು ಹಣ ಕೊಟ್ಟು ಆಸೆ ತೋರಿಸಿದ್ದಳು. ಬಳಿಕ ನವೆಂಬರ್ 14ರಂದು ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಅನಿತಾಳಿಂದ ಮಗುವನ್ನು ಅಪಹರಿಸಿ ಪರಾರಿಯಾಗಿದ್ದಳು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ಆರೋಪಿ ರಾಧಾ ಸಿಕ್ಕಿಬಿದ್ದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಧಾಳನ್ನು ವಿಚಾರಣೆಗೊಳಪಡಿಸಿದಾಗ ಮಗುವನ್ನು ಅಪಹರಿಸಿಕೊಂಡು ಹೋಗಿ ಕಳೆದ 4 ದಿನಗಳಿಂದ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾಗಿ ತಿಳಿಸಿದ್ದಾಳೆ. ಪೊಲೀಸರು ಈಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.…
ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ಸುಲಿಗೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನವೀನ್ ಕುಮಾರ್ ಕಟೀಲು ಹಾಗೂ ಇತರರ ವಿರುದ್ಧ ಈ ಕುರಿತಂತೆ ಕೇಸ್ ದಾಖಲಾಗಿತ್ತು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಇಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಇಡಿಯನ್ನು ಬಳಸಿಕೊಂಡು ಚುನಾವಣಾ ಹಣ ಸಂಗ್ರಹಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ವಿರುದ್ಧ ಈ ಒಂದು ಆರೋಪವಿದೆ. ಸಾರ್ವಜನಿಕ ಹಿತಾಸಕ್ತಿಯಿಂದ ದೂರು ದಾಖಲಿಸಲಾಗಿದೆ. ಆಡಳಿತ ಪಕ್ಷ ಸಿಬಿಐ, ಇಡಿಯನ್ನು ಬಳಸಿ ಹಣ ಸುಲಿಗೆ ಮಾಡುತ್ತಿದೆ. ಪ್ರತಿ ನಾಗರಿಕನು ಇದರಿಂದ ನೊಂದಿರುವುದರಿಂದ ದೂರು ದಾಖಲಿಸಬಹುದು ಎಂದು ವಾದಿಸಿದರು. ನವೀನ್ ಕುಮಾರ್ ಕಟೀಲು ಪರ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದು, ಸುಲಿಗೆಗೆ ಒಳಗಾದಂತಹ ಸಂತ್ರಸ್ತರು ಯಾರು ದೂರು ನೀಡಿಲ್ಲ.ದೂರುದಾರರು ಸಂತ್ರಸ್ತರು ಅಲ್ಲದಿರುವುದರಿಂದ ದೂರು…
ಧಾರವಾಡ : ಧಾರವಾಡದಲ್ಲಿ ವಿಚಿತ್ರವಾದಂತಹ ಘಟನೆ ಒಂದು ನಡೆದಿದ್ದು, ಇಬ್ಬರು ಮಹಿಳೆಯರು ಪರಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಹೆತ್ತ ಮಕ್ಕಳನ್ನೇ ಕಿಡ್ನ್ಯಾಪ್ ಮಾಡಿ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.ಇದೀಗ ಬೆಂಗಳೂರಿನಲ್ಲಿ ಮಕ್ಕಳ ಸಮೇತ ಇಬ್ಬರು ತಾಯಂದಿರು ಹಾಗೂ ಅವರ ಪ್ರಿಯಕರರು ಪತ್ತೆಯಾಗಿದ್ದು, ಪೊಲೀಸರು 6 ಮಕ್ಕಳು ರಕ್ಷಣೆ ಮಾಡಿ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ರೇಷ್ಮಾ ಮತ್ತು ಪ್ರಿಯಾಂಕ ಎಂಬವರಿಂದ ಕಿಡ್ನ್ಯಾಪ್ ನಡೆದಿದೆ ಎಂದು ತಿಳಿದುಬಂದಿದೆ. ಮಕ್ಕಳನ್ನು ಹಾಸ್ಟೆಲಿಗೆ ಸೇರಿಸುವುದಾಗಿ ಕರೆದೋಯ್ದಿದ್ದರು. ನವೆಂಬರ್ 7 ರದ್ದು ಇಬ್ಬರು ತಾಯಂದಿರು ಹಾಗೂ 6 ಮಕ್ಕಳು ನಾಪತ್ತೆಯಾಗುತ್ತಾರೆ. ಈ ಕುರಿತಂತೆ ಧಾರವಾಡದ ವಿದ್ಯಾಗಿರಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗುತ್ತದೆ. ಇದೀಗ ವಿದ್ಯಾಗಿರಿ ಠಾಣೆಯ ಪೊಲೀಸರು ನಾಪತ್ತೆಯಾಗಿದ್ದ 6 ಮಕ್ಕಳ ರಕ್ಷಣೆ ಮಾಡಿದ್ದಾರೆ. ರೇಷ್ಮಾ, ಪ್ರಿಯಾಂಕಾ ಸಾಂಬ್ರಾಣಿ ಎಂಬುವುದರಿಂದ ಈ ಒಂದು ಅಪಹರಣ ಕೃತ್ಯ ನಡೆದಿದೆ. ಅನ್ಯ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಮುತ್ತುರಾಜ್ ಸುನಿಲ್ ಎಂಬಾತರೊಂದಿಗೆ…
ತಮಿಳುನಾಡು : ಹಾಡು ಹಗಲೇ ಕೋರ್ಟ್ ಆವರಣದಲ್ಲಿ ವಕೀಲನ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರು ನ್ಯಾಯಾಲಯದ ಆವರಣದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ವಕೀಲ ಕಣ್ಣನ್ (30) ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ದಾಳಿ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಕೀಲ ಕಣ್ಣನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಥಳೀಯರು ವಕೀಲನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇದಿಗ ಸಾವು ಬದುಕಿನ ನಡುವೆ ಗಾಯಾಳು ಕಣ್ಣನ್ ಹೋರಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೊಸೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ವಕೀಲ ಕಣ್ಣನ್ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ.ಕಳೆದ ನವೆಂಬರ್ 12 ರಂದು ಈ ಘಟನೆ ನಡೆದಿದ್ದು ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ, ಆಫ್ರೀನ್ ಬಾನು (5) ಸಾವನ್ನಪ್ಪಿದ್ದಾಳೆ. ತಾಜ್ ನಗರದ ಮಹಮದ್ ಗೌಸ್ ಮತ್ತು ತಾಹೇರ ಬಾನು ದಂಪತಿ ಪುತ್ರಿ ಆಫ್ರೀನ್ ಬಾನು ಎಂದು ತಿಳಿದುಬಂದಿದ್ದು, ನವೆಂಬರ್ 12ರ ಸಂಜೆ ಸ್ನಾನ ಮಾಡಲು ತಾಹೇರ ಅವರು ಬಕೆಟ್ನಲ್ಲಿ ನೀರು ಹಾಕಿ ವಾಟರ್ ಹೀಟರ್ ಹಚ್ಚಿ ಬಿಸಿ ಮಾಡಿದ್ದರು. ನೀರು ಬಿಸಿಯಾದ ಬಳಕ ವಾಟರ್ ಹೀಟರ್ ಬಂದ್ ಮಾಡಿದ್ದರು. ಮೂವರೂ ಮಕ್ಕಳು ಅಲ್ಲಿಯೇ ಆಟವಾಡುತ್ತಿದ್ದರು. ಒಳಗೆ ಹೋಗಿ ಬಟ್ಟೆ ತರುವ ವೇಳೆಗೆ ಆಫ್ರೀನಾ ಬಾನು ಬಿಸಿ ನೀರಿನ ಬಕೆಟ್ನಲ್ಲಿ ಬಿದ್ದಳು. ದೇಹದಲ್ಲಿ ಭಾಗಶಃ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಮಗಳಿಗೆ…
ಬೆಂಗಳೂರು : ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ…
ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕುರಿತಂತೆ ವಿವಾದ ಭುಗಿಲೆದ್ದಿದ್ದು, ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಡವರ ಮನೆಗೆ ಕನ್ನ ಹಾಕಿದಿರಲ್ಲ ನಿಮಗೆ ನಾಚಿಕೆ ಆಗಲ್ವಾ? ಸಿದ್ದರಾಮಯ್ಯನವರೇ ನಿಮಗೆ ಸಾಮಾನ್ಯ ಪ್ರಜ್ಞೆಯು ಇಲ್ವಲ್ಲ? ಬಡವರ ಅನ್ನ ಕಿತ್ತುಕೊಳ್ಳುತ್ತಿದ್ದೀರಿ ಅಲ್ವಾ, ದೇವರು ಒಳ್ಳೆಯದು ಮಾಡ್ತಾನ? ಇದು ಪಾಪಿಗಳ ಸರಕಾರ ಎಂದು ಕಿಡಿ ಕಾರಿದರು. ರಾಜ್ಯದಲ್ಲಿ 22 ಲಕ್ಷ ಕಾರ್ಡ್ ಗಳು ಇವೆಯಂತೆ. ಕಾರ್ಡ್ ರದ್ದು ಮಾಡಬೇಕಾದರೆ ನೀವು ನೋಟಿಸ್ ಕೊಡಬೇಕಲ್ವಾ ಬಂದು ನೋಟಿಸ್ ಕೊಡಬೇಕು ಎಂಬ ಕಾಮನ್ಸೆನ್ಸ್ ಕೂಡ ಇಲ್ವಾ ನಿಮಗೆ? ನ್ಯಾಯಬೆಲೆ ಅಂಗಡಿಗೆ ಹೋದರೆ ಸಿದ್ದರಾಮಯ್ಯ ಅವರನ್ನೇ ಕೇಳಿ ಅಂತಾರಂತೆ ಸರ್ಕಾರ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಅನುದಾನ ಕೊಡುತ್ತಿಲ್ಲ.ಹೀಗಾಗಿ ಸಿಎಂ ಸಿದ್ದರಾಮಯ್ಯ ಮನೆಗೆ ಯಾವ ಶಾಸಕರು ಹೋಗುತ್ತಿಲ್ಲ. ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ 10 ಸಾವಿರ ಕೋಟಿ ಉಳಿಸಬಹುದು. ಅದೇ ಹಣವನ್ನು ಶಾಸಕರಿಗೆ ನೀಡಿ ಸಮಾಧಾನಪಡಿಸಬಹುದು. ಅದಕ್ಕಾಗಿ ಬಿಪಿಎಲ್ ಕಾರ್ಡ್ ತೆಗೆಯುತ್ತಿದ್ದಾರೆ. ಬಿಪಿಎಲ್…
ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲಿ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಗ್ರಾಮದ ಸುಮಾರು 30ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿದ್ದಾರೆ.ಈ ವೇಳೆ ಅವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ವಾಂತಿ ಭೇದಿಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿದ್ದು, ಘಟನೆ ಕುರಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಕೋಲಾರ : ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಲ್ಲಿ ಹಲವು ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಎಪಿಲ್ ಕಾರ್ಡಿಗೆ ವರ್ಗಾವಣೆಯಾಗಿವೆ. ಈ ಕುರಿತಾಗಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ, ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ಆಗಲಿ ಎಪಿಎಲ್ ಕಾರ್ಡ್ ಗಳನ್ನು ಆಗಲಿ ರದ್ದು ಮಾಡಲ್ಲ ಆದರೆ ಕಾಡುಗಳ ಪರಿಶೀಲನೆ ನಡೆಯುತ್ತದೆ ಎಂದು ಸ್ಪಷ್ಟನೆ ನೀಡಿದರು. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಇಂದ ಎಪಿಎಲ್ ಗೆ ಕಾರ್ಡ್ ಗಳ ವರ್ಗಾವಣೆ ವಿಚಾರವಾಗಿ ಕೋಲಾರದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದ್ದು, ಬಿಪಿಎಲ್ ಗೆ ಅರ್ಹರಲ್ಲದೆ ಇರುವವರ ಕಾರ್ಡ್ ಗಳು ಬದಲಾವಣೆ ಆಗುತ್ತದೆ ಹೊರತು ಯಾವುದೇ ಕಾರಣಕ್ಕೂ ಎಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಅರ್ಹರಲ್ಲದವರನ್ನು ಎಪಿಎಲ್ ಕಾರ್ಡ್ ಗೆ ಬದಲಾವಣೆ ಮಾಡುತ್ತೇವೆ ಎಂದು ಅವರು ತಿಳಿಸಿದರು. ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇಕಡ 50ಕ್ಕೂ ಅಧಿಕ ಬಿಪಿಎಲ್ ಕಾರ್ಡುಗಳು ಇಲ್ಲ. ಕರ್ನಾಟಕ ಆರ್ಥಿಕವಾಗಿ ಸುಭದ್ರವಿರುವ…
ಹುಬ್ಬಳ್ಳಿ : ಈಗಾಗಲೇ ಅನುದಾನದ ವಿಚಾರವಾಗಿ ಸರ್ಕಾರದ ವಿರುದ್ಧ ಸ್ವತಹ ಕಾಂಗ್ರೆಸ್ ಶಾಸಕರೇ ತಿರುಗಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಾಂಗ್ರೆಸ್ ಶಾಸಕರಿಂದಲೇ ಪತನವಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವಾಗ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಗೊತ್ತಿಲ್ಲ. ಅನುದಾನದ ವಿಚಾರವಾಗಿ ನಿನ್ನೆ ಶಾಸಕ ಗವಿಯಪ್ಪ ಮಾತನಾಡಿದ್ದಾರೆ. ಈ ಹಿಂದೆ ಶಾಸಕ ರಾಜುಕಾಗೆ ಸಹ ಇದೇ ವಿಚಾರವಾಗಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಅವರದ್ದೇ ಶಾಸಕರು ಕುದಿಯುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಹಿಂದೆ ಶಾಸಕ ರಾಜುಕಾಗೆ ರಾಜೀನಾಮೆ ನೀಡೋದಾಗಿ ಕೂಡ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಶಾಸಕರಿಂದಲೇ ಸಿದ್ದರಾಮಯ್ಯ ಸರ್ಕಾರ ಬಿದ್ದು ಹೋಗುತ್ತದೆ. ಅವರ ತಪ್ಪಿನಿಂದಲೇ ಯಾವಾಗ ಬೇಕಾದರೂ ಸರ್ಕಾರ ಪತನವಾಗಬಹುದು ಎಂದರು. ಇನ್ನು 100 ಕೋಟಿ ಆಫರ್ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಹಿಟ್ ಅಂಡ್ ರನ್ ರೀತಿ ಹೇಳಿಕೆ ನೀಡುತ್ತಿದ್ದಾರೆ. 50…











