Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಇತ್ತೀಚೆಗೆ ಬೆಂಗಳೂರಿನ ಹಲವು ಶಾಲೆಗಳಿಗೆ ನಿರಂತರವಾಗಿ ಬೆದರಿಕೆ ಸಂದೇಶ ಬಂದಿದ್ದ ಪ್ರಕರಣ ನಡೆದಿತ್ತು. ಇದೀಗ ಕಲಬುರ್ಗಿಯ MLC ಬಿಜಿ ಪಾಟೀಲ್ ಒಡೆತನದ ಖಾಸಗಿ ಶಾಲೆ ಒಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಕಲ್ಬುರ್ಗಿಯ ಕರುಣೆಶ್ವರ ನಗರದ ಶಾಲೆಗೆ ಬಾಂಬ್ ಬೆದರಿಕೆ ಈ ಮೇಲೆ ಸಂದೇಶವನ್ನು ಬಂದಿದೆ ತಮಿಳುನಾಡಿನಿಂದ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಪೋಟಿಸುವುದಾಗಿ ಈ ಒಂದು ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಿದೆ. ಕೂಡಲೇ ಶಾಲೆಗೆ ಅಶೋಕ್ ನಗರ ಪೊಲೀಸರು ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಲಾಗುತ್ತಿದೆ. ವಿಧಾನ ಪರಿಷತ್ ಸದಸ್ಯರಾದ ಬಿಜಿ ಪಾಟೀಲ್ ಒಡೆತನದ ಶಾಲೆ ಎಂದು ತಿಳಿದುಬಂದಿದೆ. ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯದಳ ಶ್ವಾನದಳ ಪರಿಶೀಲನೆ ನಡೆಸಿದೆ. ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಮೆಲ್…
ಬೆಳಗಾವಿ : ಇಂದು ಬೆಳಗಾವಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರಕ್ ಗೆ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ವೈದ್ಯೆ ಒಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವೈದ್ಯೆಯನ್ನು ಸಂಗನಕೇರಿ ಗ್ರಾಮದ ಡಾ. ಆಶಾ ಕೋಳಿ (32) ಎಂದು ತಿಳಿದುಬಂದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಈ ಒಂದು ಭೀಕರವಾದಂತಹ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಟ್ರಕ್ಕಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಈ ಒಂದು ಘಟನೆಯಲ್ಲಿ ವೈದಯ ಪತಿ ಡಾ.ಭೀಮಪ್ಪ ಕೋಳಿ ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳಿಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಕಳ್ಳತನ ಮಾಡಿ ಬಾಲಿವುಡ್ ನಟಿಗೆ 3 ಕೋಟಿ ಮನೆಯ ಗಿಫ್ಟ್ : ಬೆಂಗಳೂರಲ್ಲಿ ಕುಖ್ಯಾತ ಅಂತಾರಾಜ್ಯ ಕಳ್ಳನ ಬಂಧನ!
ಬೆಂಗಳೂರು : ಬೆಂಗಳೂರಿನಲ್ಲಿ ಅಂತರಾಜ್ಯ ಕುಖ್ಯಾತ ಖತರ್ನಾಕ್ ಕಳ್ಳನನ್ನು ಮಡಿವಾಳ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಈತ ಎಂತಹ ಖತರ್ನಾಕ್ ಕಳ್ಳ ಎಂದರೆ, ಕಳ್ಳತನವೇ ಈತನ ಪ್ರೊಫೆಷನಲ್ ವೃತ್ತಿಯಾಗಿದ್ದು, ತಾನು 400 ಚದರ ಅಡಿ ಮನೆಯಲ್ಲಿ ಇದ್ದರು ಸಹ, ಇದೇ ಕಳ್ಳತನವನ್ನು ಮಾಡಿ ಬಾಲಿವುಡ್ ನಟಿಗೆ 3 ಕೋಟಿ ರೂಪಾಯಿ ಬಂಗಲೆ ಗಿಫ್ಟ್ ನೀಡಿದ್ದಾನೆ. ಸದ್ಯ ಈತನನ್ನು ಮಡಿವಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ಇದು ಅಂತ ರಾಜ್ಯ ಕಳ್ಳ ಪಂಚಾಕ್ಷರಿಯ ಕಥೆಯಾಗಿದ್ದು ಬಾಲಿವುಡ್ ನ ಖ್ಯಾತ ನಟಿ ಜೊತೆ ಕಳ್ಳನಿಗೆ ನಂಟಿತ್ತು ಎನ್ನಲಾಗಿದೆ. ಕಳ್ಳತನ ಮಾಡಿದ ಹಣದಲ್ಲೇ ಸುಮಾರು 3 ಕೋಟಿಯ ಮನೆಯನ್ನು ಕಟ್ಟಿಸಿ ಕೊಟ್ಟಿದ್ದಾನೆ. ಬಾಲಿವುಡ್ ನಟಿಗೆ ಕಳ್ಳ ಪಂಚಾಕ್ಷರಿ ಮನೆ ಕಟ್ಟಿಸಿ ಕೊಟ್ಟಿದ್ದಾನೆ. ಮದುವೆಯಾಗಿದ್ದರು ಕೂಡ ಬಾಲಿವುಡ್ ನಟಿ ಈತನ ಗರ್ಲ್ ಫ್ರೆಂಡ್ ಆಗಿದ್ದಳು. ತಾನಿರೋದು 400 ಅಡಿಯ ಅಡಿಯಲ್ಲಿ ಸಣ್ಣ ಮನೆಯಲ್ಲಿ ಆದರೆ ಆಕೆಗೆ ಮಾತ್ರ ಬಂಗಲೆ ಕಟ್ಟಿಸಿ ಕೊಟ್ಟಿದ್ದಾನೆ. 2003ರಿಂದ ಆದ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಾರಿ ನಿರ್ದೇಶನಾಲಯ ಕಚೇರಿಯ ಅಧಿಕಾರಿಗಳು 50:50 ಅನುಪಾತ ಮಾದರಿಯ ಸೈಟ್ ಹಂಚಿಕೆಯ ಮೂಲವನ್ನು ಕೆದಕಿದ್ದು, ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಸಿಎಂ ಆಗಿದ್ದಾಗಿನಿದಾಗಲು ಈ ಒಂದು 50:50 ಅನುಪಾತದಲ್ಲಿ ಸೈಟ್ ಹಂಚಿಕೆಯಾಗಿದೆ ಎಂದು ಮುಡಾ ತನಿಖೆಯ ವೇಳೆ ಬಹಿರಂಗವಾಗಿದೆ. ಹೌದು 2016 ರಿಂದಲೂ ಈ 50-50 ಸೈಟ್ ಹಂಚಿಕೆಯಾಗಿದೆ. ಸಿದ್ದರಾಮಯ್ಯ ಮೊದಲು ಅವಧಿಯಲ್ಲಿ 50:50 ಸೈಟ್ ಹಂಚಿಕೆಯಾಗಿದೆ. 2022ರ ಅವಧಿಯಲ್ಲಿ ದಿನೇಶ್ ಅವರಿಂದ 812 ಸೈಟ್ ಹಂಚಿಕೆಯಾಗಿದೆ. 550 ದಿನದಲ್ಲಿ ಬರೋಬ್ಬರಿ 812ಸೆಂಟ್ ಹಂಚಿದ ಮಾಜಿ ಆಯುಕ್ತ ದಿನೇಶ್. ದಿನೇಶ್ ಅವಧಿಯ 50:50 ಸೈಟ್ ಸೀಜ್ ಗೆ ಇಡಿ ಸಿದ್ಧತೆ ಮಾಡಿಕೊಂಡಿದ್ದು ಪ್ರತಿನಿತ್ಯವೂ ಮೂಡಾದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. 2016 ರಲ್ಲಿ ಆಯುಕ್ತರಾಗಿದ್ದ ಮಹೇಶದಿಂದ 8ಸೈಟ್, 2018ರಲ್ಲಿ ಕಾಂತರಾಜುರಿಂದ 10 ಸೈಟ್ ಹಾಗೂ 2020ರ ಅವಧಿಯಲ್ಲಿ ನಟೇಶ್ ರಿಂದ 58 ಸೈಟ್ ಹಂಚಿಕೆಯಾಗಿದೆ.
ನವದೆಹಲಿ : ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ಇದೀಗ ದೆಹಲಿ ಅಂಗಳಕ್ಕೂ ತಲುಪಿದ್ದು, ಬಿಜೆಪಿಯ ರೆಬೆಲ್ಸ್ ನಾಯಕರು ಇಂದು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಅವರನ್ನು ಭೇಟಿಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಇದೀಗ ರೆಬೆಲ್ಸ್ ನಾಯಕರು ಹೈಕಮಾಂಡ್ಗೆ ದೂರು ನೀಡಿದ್ದಾರೆ.ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಸದಂತೆ ಹೈಕಮಾಂಡ್ ಅವರಲ್ಲಿ ಮನವಿ ಮಾಡಿದ್ದಾರೆ. ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ರಮೇಶ್ ಜಾರಕಿಹೊಳಿ ಹಾಗೂ ಕುಮಾರ್ ಬಂಗಾರಪ್ಪ ಅವರು ಚರ್ಚಿಸಿದ್ದಾರೆ. ರಾಜ್ಯದ ಸ್ಥಿತಿ ಹೈಕಮಾಂಡ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ರೀತಿಯಲ್ಲಿ ಹತಾಶೆ ಭಾವನೆಯಲ್ಲಿ ಮಾತನಾಡಲ್ಲ. ನಮ್ಮ ಪಕ್ಷದ ಹೈಕಮಾಂಡ್ಗೆ ಮನವರಿಕೆ ಮಾಡಿಕೊಂಡಿದ್ದೇವೆ ಅವರು ಏನು ನಿರ್ಧಾರ ಮಾಡುತ್ತಾರೆ ತಲೆಬಾಗಿ ಸ್ವೀಕರಿಸುತ್ತೇವೆ. ವಿಜಯೇಂದ್ರ ಕರ್ಮಕಾಂಡ ಬಿಚ್ಚಿಡುವ ಬಗ್ಗೆ ಯತ್ನಾಳ್ ಅವರನ್ನೇ ಕೇಳಿ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ರಮೇಶ್…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಈ ಹಿಂದೆ ಶಿಕ್ಷೆ ಮೂರು ವರ್ಷ ಬಿಟ್ಟು ಈಗ 10 ವರ್ಷ ಮಾಡಿದ್ದೇವೆ.ದಂಡದ ಮತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಬಿಲ್ ಅನ್ನು ರಾಜ್ಯಪಾಲರಿಗೆ ಕಳುಹಿಸಿದ್ದೇವೆ. ಇವತ್ತು ಪರಿಶೀಲಿಸಿ ರಾಜಪಾಲರು ಅಂಕಿತ ಹಾಕಬಹುದು. ಕಾನೂನಿನ ತೊಡಕುಗಳನ್ನು ಸರಿಪಡಿಸಿದ್ದೇವೆ. ಕಾನೂನಿನ ತೊಂದರೆ ಬರುವುದಿಲ್ಲ ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಗೋ ಹತ್ಯೆ ಮಾಡುವವರನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿಕೆ ಕುರಿತಾಗಿ ಮಂಕಾಳು ವೈದ್ಯ ವಯಕ್ತಿಕವಾಗಿ ಹೇಳಿರುತ್ತಾರೆ. ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿರುವ ವಿಚಾರವಾಗಿ ಆ ಬಗ್ಗೆ ನನಗೆ…
ಚಿಕ್ಕಬಳ್ಳಾಪುರ : ಪತ್ನಿಗೆ ಅಕ್ರಮ ಸಂಬಂಧವೇ ಇದೆ ಎಂದು ಪತಿಯೊಬ್ಬ ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪತ್ನಿಯ ಸಹೋದರ ಮಾರಕಾಸ್ತ್ರಗಳಿಂದ ಐದಾರು ಜನರು ಸೇರಿ ಸ್ವಂತ ಅಕ್ಕನ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೋಟಲೂರು ಎಂಬಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಕ್ರಾಸ್ ಬಳಿ ಕೊಲೆಯಾಗಿದೆ. ಘೋಷನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಸುಭಾಷ್ ವಿರುದ್ಧ ಅನೈತಿಕ ಸಂಬಂಧ ಇಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿತ್ತು. ಐದು ಜನ ಸ್ನೇಹಿತರ ಜೊತೆ ಗೋಡೆ ಬಾಮೈದ ಅಟ್ಟಾಡಿಸಿ ಕೊಲೆ ಮಾಡಿದ್ದಾನೆ. ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ಘಟನೆ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಂಡ್ಯ : ನಿನ್ನೆ ಮಂಡ್ಯ ಜಿಲ್ಲೆಯ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ ಸಂಭವಿಸಿದ್ದು, ವಿಸಿ ನಾಲಿಗೆ ಬಿದ್ದಿದ್ದ ಇಂಡಿಕಾ ಕಾರಿನಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 15 ಅಡಿ ಆಳದಲ್ಲಿ ಸಿಲುಕಿದ್ದ ಕಾರಣ ಇದೀಗ ಕ್ರೇನ್ ಮೂಲಕ ಕಾರನ್ನು ಮೇಲೆ ಎತ್ತಲಾಗಿದೆ.ಇಂದು ಇನ್ನೊಬ್ಬನ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ ಮೂರಕ್ಕೇರಿದೆ. ಹೌದು ಮಂಡ್ಯ ತಾಲೂಕಿನ ಮಾಚನಹಳ್ಳಿ ಸಮೀಪ ತಿಬ್ಬನಹಳ್ಳಿ ಬಳಿ ವಿಸಿ ನಾಳೆಯಲ್ಲಿ ಪೀರ್ ಖಾನ್ ಶವ ಪತ್ತೆಯಾಗಿದೆ. ಮಂಡ್ಯದ ಹಾಲಹಳ್ಳಿ ನಿವಾಸಿಯಾಗಿರುವ ಪೀರ್ ಖಾನ್ ನಿನ್ನೆ ಫಯಾಜ್ ಸಂಪಾದನೆ ಪತಿಯಾಗಿತ್ತು ಮಂಡ್ಯ ತಾಲೂಕಿನ ಮಾಚನಹಳ್ಳಿ ಬಳಿ ಈ ಒಂದು ಕಾರು ನಾಲಿಗೆ ಬಿದ್ದು ಪಲ್ಟಿಯಾಗಿ ಬಿದ್ದಿತ್ತು. ಘಟನೆಯಲ್ಲಿ ಕಾರಿನ ಮಾಲೀಕ ಫಯಾಜ್ (40) ಸಾವನ್ನಪ್ಪಿದ್ದಾರೆ. ನಯಾಜ್ ಎಂಬುವರನ್ನು ರಕ್ಷಿಸಲಾಗಿದ್ದು, ಅಸ್ಲಂಪಾಷಾ ಮತ್ತು ಪೀರ್ಖಾನ್ ಸೇರಿದಂತೆ ಇಬ್ಬರು ನಾಪತ್ತೆಯಾಗಿದ್ದರು. ನಿನ್ನೆ ಅಸ್ಲಂ ಪಾಷಾ ಮೃತದೇಹ ಹೊರತೆಗೆಯಲಾಗಿತ್ತು. ಇದೀಗ ಇಂದು ಪೀರ್ ಖಾನ್ ಮೃತದೇಹವನ್ನು ಹೊರ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಇದೀಗ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉತ್ತರ ಭಾರತದಿಂದ ಬಂದಂತಹ ಕಳ್ಳರ ಗ್ಯಾಂಗ್ ಮೇಲೆ ಹುಬ್ಬಳ್ಳಿಯ ಬೆಂಡಿಗಿರಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಇಬ್ಬರು ಕಳ್ಳರ ಕಾಲಿಗೆ ಗುಂಡೇಟು ತಗುಲಿರುವ ಘಟನೆ ವರದಿಯಾಗಿದೆ. ಹೌದು ಹುಬ್ಬಳ್ಳಿಯಲ್ಲಿ ನಟೋರಿಯಸ್ ಕಳ್ಳರ ಕಾಲಿಗೆ ಗುಂಡೇಟು ಬಿದ್ದಿದ್ದು, ಹುಬ್ಬಳ್ಳಿಯ ಬಿಡ್ನಾಳ್ ಬಳಿ ಬೆಂಡಿಗೇರಿ ಪೊಲೀಸ್ರಿಂದ ಫೈರಿಂಗ್ ನಡೆಸಲಾಗಿದೆ. ಗುಜರಾತ್ ಮೂಲದ ನಿಲೇಶ್ ಮತ್ತು ದೀಪಕ್ ಕಾಲಿಗೆ ಗುಂಡೇಟು ತಗುಲಿದೆ. ಗುಜರಾತ್ ಮೂಲದಿಂದ ಐವರ ಗುಂಪು ಕಟ್ಟಿಕೊಂಡು ಈ ಗ್ಯಾಂಗ್ ಹುಬ್ಬಳ್ಳಿಗೆ ಬಂದಿತ್ತು. ಒಂದು ತಿಂಗಳಲ್ಲಿ 5 ಕಳ್ಳತನ ಕೇಸ್ ನಲ್ಲಿ ಈ ಒಂದು ಕಳ್ಳರ ತಂಡ ಭಾಗಿಯಾಗಿತ್ತು. ಮನೆ ಕಳ್ಳತನ ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ನಿನ್ನೆ ರಾತ್ರಿ ನಮಗೆ ಮಾಹಿತಿ ಬಂದ ತಕ್ಷಣ ನಾವು ಘಟನಾ ಸ್ಥಳಕ್ಕೆ ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ನಾವು ಫೈರಿಂಗ್ ಮಾಡಿದಾಗ ನೀಲೇಶ್ ಮತ್ತು ದೀಪಕ್ ಮೇಲೆ ಫೈರಿಂಗ್ ಮಾಡಿದ್ದೇವೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಮತ್ತು ಕಂಡಕ್ಟರ್ ಗಳ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳು ಬಿಎಂಟಿಸಿ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಂತಿನಗರ ಬಳಿ ನಡೆದಿದೆ. ಹೌದು ಪಾನಮತ್ತ ಇಬ್ಬರು ವ್ಯಕ್ತಿಗಳಿಂದ ಬಿಎಂಟಿಸಿ ಬಸ್ ನಲ್ಲಿ ಗಲಾಟೆ ನಡೆದಿದ್ದು, ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಎನ್ನುವವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರ ಬಳಿ ಈ ಒಂದು ಘಟನೆ ನಡೆದಿದೆ. ಗೋಪಾಲ ಹಾಗೂ ಹನುಮಂತಯ್ಯನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಮೆಜೆಸ್ಟಿಕ್ ನಿಂದ ಗಂಗೊಂಡನಹಳ್ಳಿಗೆ ಬರುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಪಾನಮತ್ತರಾಗಿ ಇಬ್ಬರು ಬಿಎಂಟಿಸಿ ಬಸ್ನಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಮೇಲೆ ಗೋಪಾಲ್ ಮತ್ತು ಹನುಮಂತಯ್ಯ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು…













