Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ನಿನ್ನೆ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು. ಇದೀಗ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಧನ್ಕರ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ. ಹೌದು ನಿನ್ನೆ ಅನಾರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಸಂವಿಧಾನದ 67(A) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ʻಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ. ತಿಮ್ಮಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ತಂದೆ ಹಾಗೂ ಇಬ್ಬರು ಪುತ್ರಿಯರು ಹೊಟ್ಟೆ ನೋವಿನಿಂದ ನರಳಾಡಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಾಶಕ ಸಿಂಪಡನೇ ಮಾಡಿದ್ದ ಚವಳೆಕಾಯಿ ಪಲ್ಯವನ್ನು ತಿಂದಿದ್ದಾರೆ ಎಂದು ಸಂಕಿಸಲಾಗಿದೆ. ಹೌದು ಹೊಲದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಹೊಲದಲ್ಲಿ ಬೆಳೆದಿದ್ದ ಚವಳೆಕಾಯಿ ಗಿಡಕ್ಕೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿತ್ತು. ಆ ಚವಳೆಕಾಯಿ ಎಣ್ಣೆ ಪಲ್ಯ ಮಾಡಿ ಇವರು ಸೇವಿಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ ಎಂದು ಮೃತರ ಸಂಬಂಧಿಸಿದ ತಿಮ್ಮಯ್ಯ ಮಾಹಿತಿ ನೀಡಿದ್ದಾರೆ. ಸಿರಿವಾರ ತಾಲೂಕಿನ ಕೆ.ತಿಮಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಘಟನೆಯಲ್ಲಿ ರಮೇಶ್ ಮತ್ತು ಅವರ ಮಕ್ಕಳ ನಾಗರತ್ನ ದೀಪ ಮೃತಪಟ್ಟಿದ್ದಾರೆ. ಇನ್ನುಳಿದ ಪತ್ನಿ ಪದ್ಮಾವತಿ, ಮತ್ತಿಬ್ಬರು ಮಕ್ಕಳಾದ ಕೃಷ್ಣ ಹಾಗೂ ಚೈತ್ರಾಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಬೆಂಗಳೂರಿನ ಸುಮಾರು 40ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಸಂದೇಶ ಬಂದಿತ್ತು. ಇದೀಗ ಇಂದು ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಬೆಂಗಳೂರಿನ ವರ್ತೂರು ಸಮೀಪದ ಕ್ರೀಸಲಿಸ್ ಹೈ ಶಾಲೆಗೆ ಬೆದರಿಕೆ ವಿಮಲ್ ಸಂದೇಶ ಬಂದಿದ್ದು ಮುಂಜಾಗ್ರತೆಯಿಂದ ಶಾಲಾ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ ತಕ್ಷಣ ಶಾಲೆಗೆ ವರ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದಾರೆ. ಅಲ್ಲದೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು : ಮುಡಾದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ಇಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದರು. ಈ ಒಂದು ಪ್ರಕರಣದಿಂದ ಸದ್ಯ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಇದೀಗ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಿಂದ ಇಡಿ ಅರ್ಜಿ ಮಾಡಿರುವ ವಿಚಾರವಾಗಿ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರು. ನನ್ನ ಪತ್ನಿ ಪಾತ್ರವೂ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅದೇ ಸತ್ಯವಾಗಿದೆ. ಬಿಜೆಪಿ ಕ್ಷಮೆ ಕೇಳಬೇಕೆಂದು ಕೈ ನಾಯಕರು ಹೇಳಿಕೆ ನೀಡಿರುವ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪುನಿಂದ ಬಿಜೆಪಿ ಅವರಿಗೆ ಅರ್ಥ ಆಗಿದೆ. ಪ್ರಕರಣದಲ್ಲಿ ಸತ್ಯಾಸತ್ಯತೆ, ನ್ಯಾಯ, ಅನ್ಯಾಯದ ತೀರ್ಮಾನ ಆಗಿದೆ ಸುಪ್ರೀಂಕೋರ್ಟ್ ತೀರ್ಪಿನಿಂದ ಖುಷಿ ಆಗಿದೆ ಅಂತ ಅಲ್ಲ, ಆದರೆ ನ್ಯಾಯ…
ಮೈಸೂರು : ನಿನ್ನೆ ತಾನೆ ಕಲ್ಬುರ್ಗಿ ಜಿಲ್ಲೆಯ ಶಹಬಾದ್ ನಲ್ಲಿ ಹಾಸನ್ ಸೋಲಾಪುರ್ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಹೋಗಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು ಪ್ರಯಾಣಿಕರು ಭಯದಿಂದ ರೈಲಿನಿಂದ ಕೆಳಗೆ ಇಳಿಯುತ್ತಿದ್ದರು. ಈ ಒಂದು ಘಟನೆ ಇದೀಗ ಮಾಸುವ ಮುನ್ನವೇ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೌದು ಕುವೆಂಪು ಎಕ್ಸ್ಪ್ರೆಸ್ ರೈಲಿನ ಎರಡು ಭೋಗಿಗಳಲ್ಲಿ ಬೆಂಕು ಕಾಣಿಸಿಕೊಂಡಿದೆ. ತರೀಕೆರೆ ರೈಲ್ವೆ ಸ್ಟೇಷನ್ ನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದಿದ್ದಾರೆ ಕೂಡಲೇ ತರೀಕೆರೆ ರೈಲ್ವೆ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ತಾನೆ, ಬೆಂಗಳೂರಿನ ಪೀಣ್ಯದ ಎರಡನೇ ಹಂತದಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದ ಐದು ಜನರ ಮೇಲೆ ಬಿಎಂಟಿಸಿ ಬಸ್ ಹರಿದು ಓರ್ವ ಯುವತಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಬೆಂಗಳೂರಲ್ಲಿ ಇಂದು ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಹೌದು ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರೇಷ್ಮೆ ಸಂಸ್ಥೆಯ ಮೆಟ್ರೋ ಸ್ಟೇಷನ್ ಬಳಿ ಈ ಒಂದು ಘಟನೆ ನಡೆದಿದೆ. ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಆತನನ್ನು ಶಿಫ್ಟ್ ಮಾಡಲಾಗಿದೆ. ಕೆಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. KA 01 4168 ಸಂಖ್ಯೆಯ ಬಿಎಂಟಿಸಿ ಬಸ್ ನಿಂದ ಈ ಅಪಘಾತ ಸಂಭವಿಸಿದೆ.
ಕಲಬುರ್ಗಿ : ಕಲಬುರ್ಗಿಯಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ. ಹೌದು ಜಿಲ್ಲೆಯ ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಅಭಿಷೇಕ್ ಎಂಬಾತನ ಮೇಲೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಜೊತೆಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ವೈರಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನವದೆಹಲಿ : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ , ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಜುಲೈ 24 ಅಂದರೆ ಗುರುವಾರಕ್ಕೆ ಅರ್ಜಿ ವಿಚಾರಣೆ ಮುಂದೂದೆ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಿನ್ನೆ ರಾತ್ರಿ ಈ ಕೇಸ್ ನನಗೆ ಬಂದಿದೆ.ಬೇರೊಂದು ಕೋರ್ಟ್ ನಲ್ಲಿ ಕಪಿಲ್ ಸಿಬಲ್ ಬ್ಯುಸಿಯಾಗಿದ್ದಾರೆ. ಒಂದು ದಿನ ಕಾಲಾವಕಾಶ ನೀಡುವಂತೆ ಎಂದು ದರ್ಶನ್ ಪರ ಹೊಸ ವಕೀಲ ಸಿದ್ಧಾರ್ಥ ದವೆ ಮನವಿ ಮಾಡಿದರು. ಹಾಗಾಗಿ ಸುಪ್ರೀಂ ಕೋರ್ಟ್ ಜಡ್ಜ್ ಈ ಒಂದು ಅರ್ಜೆಯ ವಿಚಾರಣೆಯನ್ನು ಜುಲೈ 24ಕ್ಕೆ ಮಂದೂಡಿ…
ಬೆಂಗಳೂರು : ಬೆಂಗಳೂರಿನ ಜನತೆಗೆ BMRCL ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಆರ್ ವಿ ರೋಡ್ ನಿಂದ ಬೊಮ್ಮಸಂದ್ರ ಮೆಟ್ರೋ ಸಂಚಾರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಯಲ್ಲೋ ಲೈನ್ ಮೆಟ್ರೋ ಸಂಚಾರ ಆರಂಭವಾಗಲಿದೆ. ಈಗಾಗಲೇ ವಾಣಿಜ್ಯ ಸಂಚಾರಕ್ಕೆ ಬಿಎಮ್ಆರ್ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತವಾಗಿ ಇಂದು ಸುರಕ್ಷತಾ ಆಯುಕ್ತರಿಂದ ಪರಿಶೀಲನೆ ನಡೆಯಲಿದೆ. ಇಂದಿನಿಂದ ಜುಲೈ 25 ರವರೆಗೆ CMRC ಸುರಕ್ಷತಾ ಪರೀಕ್ಷೆ ನಡೆಸಲಿದೆ. CMRC ಕಮಿಷನರ್ ಎಂ ಚೌದರಿ ನೇತೃತ್ವದಲ್ಲಿ ಸುರಕ್ಷತಾ ಪರಿಶೀಲನೆ ನಡೆಯಲಿದೆ. ಈ ಮಾರ್ಗದ 16 ನಿಲ್ದಾಣಗಳಲ್ಲೂ ಸುರಕ್ಷತಾ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಬೆಂಗಳೂರು ಜನತೆಗೆ ಇದೀಗ ಮತ್ತೊಂದು ಮೆಟ್ರೋ ಸೇವೆ ಅರಭವಾಗಲಿದೆ.
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದು, ಈ ವೇಳೆ ಸ್ಪೋಟಕ ಸಂಗತಿಗಳು ಬಯಲಾಗಿದೆ ಎಂದು ತಿಳಿದುಬಂದಿದೆ. ಬಿಕ್ಲು ಶಿವನನ್ನು ಎತ್ತಲು ಗ್ಯಾಂಗ್ ಕಾರು ಖರೀದಿ ಮಾಡಿತ್ತು. ಎರಡುವರೆ ಲಕ್ಷ ಕೊಟ್ಟು ಸ್ಕಾರ್ಪಿಯೋ ಕಾರನ್ನು ಖರೀದಿಸಿ ಸುತ್ತಾಟ ನಡೆಸಿದ್ದರು. ಈ ಕಾರನ್ನು ಕನ್ನಡಪರ ಹೋರಾಟಗಾರ ಆರ್ಡಿ ಅನಿಲ್ ಕೊಡಿಸಿದ್ದು ಎನ್ನಲಾಗಿದ್ರ್. ಫೆಬ್ರವರಿ ಇಂದ ಶಿವನ ಚಲನವಲನವನ್ನು ಆರೋಪಿಗಳು ಗಮನಿಸುತ್ತಿದ್ದರು. ಬಿಕ್ಲು ಶಿವನನ್ನು ಮುಗಿಸಲು ಆರೋಪಿಗಳು ಭಯಾನಕ ಸ್ಕೆಚ್ ಹಾಕಿದ್ದರು. ಆತನನ್ನು ಗಮನಿಸಲು ಇಬ್ಬರನ್ನು ದಿನವೊಂದಕ್ಕೆ 1 ಸಾವಿರ ಕೊಟ್ಟು ಇಬ್ಬರನ್ನು ಅಬ್ಬಸರ್ವ್ ಮಾಡಲು ಬಿಟ್ಟಿದ್ದರು. ಆದರೆ ಒಬ್ಬ ಮಾಡುತ್ತಿರುವ ಕೆಲಸ ಮತ್ತೊಬ್ಬನಿಗೆ ಗೊತ್ತೇ ಇರಲಿಲ್ಲ. ಇನ್ನು ಪೊಲೀಸರು ಮತ್ತೊಂದು ವಿಷಯ ಪತ್ತೆ ಮಾಡಿದ್ದು, ಶಿವು ಹತ್ಯೆಯ ಹಿಂದಿನ ದಿನ ಮತ್ತೊಂದು ಕಾರಣ ಪತ್ತೆ ಹಚ್ಚಿದ್ದಾರೆ. ಅದೊಂದು ಜಗಳದಿಂದ ಬಿಕ್ಲು ಶಿವನಿಗೆ ಜಗ್ಗ ಮುಹೂರ್ತ ಇಟ್ಟಿದ್ದ ಎನ್ನಲಾಗಿದೆ. ಜಗ್ಗನ ಬಗ್ಗೆ ಶಿವು ಫೇಸ್ಬುಕ್ನಲ್ಲಿ…