Author: kannadanewsnow05

ಕಲಬುರ್ಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ನಡೆದಿದ್ದು, ಗಂಡನಿಂದಲೇ ಹೆಂಡತಿಯನ್ನು ಪರವಾಗಿ ಕೊಲೆ ಮಾಡಲಾಗಿದೆ ಭಯಾನಕ ಮರ್ಡರ್ ಆಗಿದ್ದು ಕಲ್ಬುರ್ಗಿಯಲಪುರದಲ್ಲಿ ಈ5 ಒಂದು ಮಹಿಳೆಯ ಬರಹತ್ಯೆಯಾಗಿದೆ. ಕೊಲೆಯಾದ ಮಹಿಳೆಯನ್ನು ಶೈಲಾ (28) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಪತಿ ಅಕ್ಷಯ ಎಂದು ತಿಳಿದುಬಂದಿದೆ. ಇನ್ನು ಕೊಲೆ ಮಾಡುತ್ತಿರುವ ಭಯಾನಕ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು ಲೈವ್ ತೋರಿಸಿದ್ದಾನೆ ಲೈವ್ ಮರ್ಡರ್ ದೃಶ್ಯ ಇದೀಗ ಬೆಚ್ಚಿ ಬೀಳಿಸುವಂತಿದೆ. ಅಫ್ಜಲ್ಪುರ ತಾಲೂಕಿನ ಬಳೂರಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಪತ್ನಿ ಕತ್ತು ಸೀಳಿ ದೇಹದ ಮೇಲೆ ಕಾರು ಹತ್ತಿಸಿ, ಪತಿ ಅಟ್ಟಹಾಸ ಮೆರೆದಿದ್ದಾನೆ. ಬಳ್ಳೂರಗಿ ಗ್ರಾಮಕ್ಕೆ ಹೆಂಡತಿಯನ್ನು ಕರೆತಂದು ಕೊಲೆ ಮಾಡಿದ್ದಾನೆ. ನಡು ರಸ್ತೆಯಲ್ಲಿಯೇ ಬರಬರವಾಗಿ ಪಾಪಿ ಪತಿ ಕೊಲೆ ಮಾಡಿದ್ದಾನೆ ಮಹಿಳೆಯ ದೇಹದ ಮೇಲೆ ಕಾರು ಹತ್ತಿಸಿದ್ದಾನೆ. ಮೂಲತಃ ಅಕ್ಷಯ ಮತ್ತು ಶೈಲ ಮಹಾರಾಷ್ಟ್ರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದು ಆಫ್ಜಲ್ಪುರ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟೀಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸ್ ಹಾಗೂ ಜಾರಿ ನಿರ್ದೇಶನಲಯಕ್ಕೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಹೈಕೋರ್ಟ್ ವಿಚಾರಣೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಅಲ್ಲದೇ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಬೀ ರಿಪೋರ್ಟ್ ವಿಚಾರಣಾ ಸಮಿತಿ ವರದಿಯಂತಿದೆ ಎಂದು ವಾದ ಮಡಿಸಲಾಯಿತು. ದೂರುದಾರ ಪರವಾಗಿ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ಹೈಕೋರ್ಟ್ ವಿಚಾರಣೆ ಮುಂದೂಡಿತು.

Read More

ಬೆಂಗಳೂರು : ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ ಕೇಳಿ ಬಂದಿದ್ದು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಮಂತ್ ಕುಮಾರ್ ಸಿಂಗ್ ಆದೇಶ ನೀಡಿದ್ದಾರೆ. ಮಹಿಳಾ ರೌಡಿಶೀಟರ್ ಗೆ ಅಶ್ಲೀಲ ಸಂದೇಶ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದ ಪಾಪಣ್ಣ ಕರೆ ಮಾಡಿ, ವಾಟ್ಸಪ್ ಸಂದೇಶ ಕಳುಹಿಸಿದ್ದ ಆರೋಪ ಕೇಳಿ ಬಂದಿದೆ. ಪಾಪಣ್ಣ ಮೇಲಿನ ಆರೋಪಗಳ ಕುರಿತು ತನಿಖೆಗೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಪಾಪಣ್ಣ ಮಹಿಳಾ ರೌಡಿ ಶೀಟರ್ ಗೆ ಕರೆ ಮಾಡಿರುವ ಹಾಗೂ ವಾಟ್ಸಪ್ ನಲ್ಲಿ ಸ್ಟೀಲ್ ಮೆಸೇಜ್ ಮಾಡಿರುವ ಕೆಲವು ವಿಡಿಯೋಗಳು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ.

Read More

ಬೆಂಗಳೂರು : ಬೆಂಗಳೂರಲ್ಲಿ ತರಗತಿಯಲ್ಲೇ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ. ಇದರಿಂದ ರೊಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಪೂಜೆ ಮಾಡಿದ್ದಾಳೆ. ಬೆಂಗಳೂರಿನ ನೆಲಮಂಗಲದ ಟಿಬಿ ಬೇಗೂರು ಖಾಸಗಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಾಧ್ಯಾಪಕ ಅಬ್ದುಲ್ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ಪ್ರೊಫೆಸರ್ ಕ್ಲಾಸ್ ರೂಂ ನಲ್ಲಿ ಪಾಠ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದಾನೆ.ಅಲ್ಲದೇ ಚಾಕ್ಲೆಟ್ ಕೊಡಿಸುತ್ತೇನೆ ಅಂತ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಪ್ರೊಫೆಸರ್ ಗೆ ಚಪ್ಪಲಿ ಅಲ್ಲಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ನಾನು ಅಟ್ಟಾಡಿಸಿ ತಿಳಿಸಿದ್ದಾರೆ ಕಾಲೇಜ್ ನಲ್ಲಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಮಾರತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದ್ದು, ಮಾರ್ಗ ಬದಲಾವಣೆ ಆಗಲಿದೆ. ರಾತ್ರಿ 12 ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಆಗಲಿದೆ. ಎಚ್ ಎ ಎಲ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು ವೈಟ್ ಫೀಲ್ಡ್ ಕಡೆಗೆ ಹೋಗುವ ವಾಹನಗಳಿಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ ಮಾರತಹಳ್ಳಿ ಬ್ರಿಡ್ಜ್ ಮೂಲಕ ಎಚ್ ಎ ಎಲ್ ಕಡೆಗೂ ಸಂಚಾರ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.

Read More

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ತೈಲ ಪೂರೈಕೆಯಲ್ಲಿ ಏರುಪೇರಾಗುವ ಆತಂಕ ಎದುರಾಗಿದೆ. ಒಂದು ವೇಳೆ ಪೆಟ್ರೋಲ್ ಮತ್ತು ಡಿಸೇಲ್ ದರ ಗಗನಕ್ಕೇರಿ ಅಥವಾ ಪೂರೈಕೆ ಸಂಪೂರ್ಣ ಸ್ಥಗಿತಗೊಂಡರೆ, ಸಾಮಾನ್ಯ ಜನರು ಅನಿವಾರ್ಯವಾಗಿ ಮತ್ತೆ ಹಳೆಯ ಕಾಲದಂತೆ ಎತ್ತಿನ ಗಾಡಿ (ಚಕ್ಕಡಿ) ಮತ್ತು ಕುದುರೆ ಗಾಡಿ (ಟಾಂಗಾ) ಮೊರೆ ಹೋಗಬೇಕಾದ ಪರಿಸ್ಥಿತಿ ಬರಬಹುದು ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿವೆ. ಹೌದು ಇರಾನ್ ಇಸ್ರೇಲ್ ಪರಿಣಾಮದಿಂದಾಗಿ ಈಗಾಗಲೇ ಸಿಲಿಂಡರ್ ಹಾಗೂ ಪೆಟ್ರೋಲ್ ಡಿಸೇಲ್ ನಲ್ಲಿ ಕೊರತೆ ಕಂಡು ಬಂದಿದೆ ಈ ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಾದ್ಯಂತ ಪೆಟ್ರೋಲ್ ಡೀಸೆಲ್ ಅಭಾವದಿಂದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗಾಗಿ ಪೆಟ್ರೋಲ್ ಡೀಸೆಲ್ ಕೊರತೆಯಿಂದ ಜನರು ಮತ್ತೆ ಹಳೆ ಕಾಲದ ಎತ್ತಿನ ಗಾಡಿ ಕುದುರೆ ಟಾಂಗಾ ಗಳಲ್ಲಿ ಸಂಚಾರ ಆರಂಭಿಸಿದರು ಅಚ್ಚರಿ ಪಡಬೇಕಿಲ್ಲ. ಇದರಿಂದ ಕುದುರೆ ಟಾಂಗಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಜಗತ್ತಿನ ಯಾವುದೋ ಮೂಲೆಯಲ್ಲಿ ನಡೆಯುವ ಯುದ್ಧದ ಕಿಡಿ ಇಂದು ಪ್ರತಿಯೊಬ್ಬ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಾಮನಗರದ ಬಿಡದಿಯಲ್ಲಿ ಲಾರಿ ಹರಿದು ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು ವಿಜಯ್ (13) ಎಂಬ ಶಾಲಾ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಬಿಲ್ಲೆಕೆಂಪನಹಳ್ಳಿ ಬಳಿ ಹಾವೇರಿ ಮೂಲದ ಕುಟುಂಬ ವಾಸವಿತ್ತು.ಇಂದು ವಿಜಯ್ ರಸ್ತೆ ಬದಿ ಹೋಗುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾನೆ ಘಟನಾ ಸ್ಥಳಕ್ಕೆ ಪೊಲೀಸರು ಬಿಟ್ಟು ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೊಪ್ಪಳ : ಕೊಪ್ಪಳ ನಗರಸಭೆಯಲ್ಲಿ 10 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಪ್ಪಳ ನಗರ ಸಭೆಯ ಜೆಇ ಸೋಮಲಿಂಗಪ್ಪ ಅಮಾನತುಗೊಳಿಸಲಾಗಿದೆ. ಪೌರಾಡಳಿತ ಇಲಾಖೆಯ ನಿರ್ದೇಶಕರಿಂದ ಈ ಒಂದು ಅಮಾನತು ಆದೇಶ ಹೊರಡಿಸಿದ್ದು, ನಗರ ಸಭೆಯ 366 ಕಾಮಗಾರಿಗಳಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿತ್ತು ಲೋಕಾಯುಕ್ತ ದಡಿಯ ಬೆಲೆ 10 ಕೋಟಿ ಭ್ರಷ್ಟಾಚಾರ ಬಳಿಕೆಗೆ ಬಂದಿತ್ತು ಈ ಹಿನ್ನೆಲೆಯಲ್ಲಿ ಜೈಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Read More

ಚಿಕ್ಕಬಳ್ಳಾಪುರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮದಿಂದ ಈಗಾಗಲೇ ದೇಶ ಹಾಗೂ ರಾಜ್ಯದಲ್ಲಿ ಗ್ಯಾಸ್ ಹಾಗು ಪೆಟ್ರೋಲ್ ಡೀಸೆಲ್ ಕೊರತೆ ಕಾಣುತ್ತಿದೆ. ಇದರ ಮಧ್ಯ ಚಿಕ್ಕಬಳ್ಳಾಪುರದಲ್ಲಿ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಹೌದು ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ 5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ 108.28 ರೂ.ಗಳಿಗೆ ತಲುಪಿದ್ದರೆ, ಡೀಸೆಲ್‌ ಬೆಲೆ 1 ಲೀಟರ್‌ಗೆ 94.10 ರೂ.ಗಳಿಗೆ ಮಾರಾಟ ಮಾಡಲಾಗ್ತಿದೆ.

Read More

ಬೆಂಗಳೂರು : ಹೈಕಮಾಂಡ್ ಒಪ್ಪಿದ್ರೆ ಮುಂದಿನ ಎರಡು ಬಜೆಟ್ ನಾನೇ ಮಂಡಿಸುವೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸದನದಲ್ಲಿ ಪುನರುಚ್ಚರಿಸಿದ್ದಾರೆ. ಹೈಕಮಾಂಡ್ ಮಾತನ್ನು ಎಲ್ಲರೂ ಕೇಳಲೇಬೇಕು. ನಾನು ಏನು ಹೈಕಮಾಂಡ್ ಮಾತು ಕೇಳಲ್ಲ ಅಂತಾ ಹೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸದನದಲ್ಲಿ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು. ಬಜೆಟ್ ಚರ್ಚೆ ಮೇಲೆ ಉತ್ತರದ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತೆ ಎರಡು ಬಜೆಟ್ ಮಂಡಿಸಬೇಕಿದೆ ನೀವು ಎಂಬ ಮಾತಿಗೆ ಪ್ರತಿಕ್ರಿಯಿಸುತ್ತಾ, ಮುಂದಿನ ಎರಡು ವರ್ಷ ನಮ್ಮ ಸರ್ಕಾರನೇ ಬಜೆಟ್ ಮಂಡಿಸಲಿದೆ. ಹೈಕಮಾಂಡ್ ಒಪ್ಪಿದರೆ ಮತ್ತೆರಡು ಬಜೆಟ್ ನಾನೇ ಮಂಡಿಸ್ತೇನೆ. ಈ ಬಾರಿಯೂ ನಾವೇ ಅಧಿಕಾರದಲ್ಲಿದ್ದೇವೆ. ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಪುನರುಚ್ಚರಿಸಿದರು. ಈ ವೇಳೆ, ಮಧ್ಯಪ್ರವೇಶಿಸಿದ ಸುನಿಲ್ ಕುಮಾರ್, ಜೆಡಿಎಸ್​ನಲ್ಲಿದ್ದಾಗ ನೀವು ರಾಷ್ಟ್ರೀಯ ಅಧ್ಯಕ್ಷರ ಮಾತು ಕೇಳಿಲ್ಲ ಅಂತ ಹೇಳಿದ್ದೀರಿ. ಅದೇ ರೀತಿ ಇವಾಗ್ಲೂ ನಿಮ್ಮ ರಾಷ್ಟ್ರೀಯ ನಾಯಕರ ಮಾತು ಕೇಳಬಾರದು. ರಾಜ್ಯದ ಗಟ್ಟಿ ನಾಯಕ ನೀವು. ನಿಮ್ಮ…

Read More