Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಹೌದು ಮರಳುತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ ಶಬವನ್ನು ಕುಟುಂಬಸ್ಥರಿಗೆ ಸಾಂತರಿಸಲಾಯಿತು ಗ್ರಾಮಕ್ಕೆ ವಿಕ್ರಂ ಗೌಡನ ಶವ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಶವ ಸಾಗಣೆ ವೇಳೆ ಆಂಬುಲೆನ್ಸ್ ಪಲ್ಟಿಯಾಗಿದೆ. ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಹೋಗಿದೆ. ರಸ್ತೆ ಬದಿಯಲ್ಲಿದ್ದ ಗುಡಿಯೊಳೊಗೆ ವಾಲಿಕೊಂಡು ನಿಂತಿದೆ. ಕೂಡಲೆ ಸ್ಥಳದಲ್ಲಿದ್ದ ಜನರು ಧಾವಿಸಿ, ಆ್ಯಂಬುಲೆನ್ಸ್ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ, ಆ್ಯಂಬುಲೆನ್ಸ್ ವಿಕ್ರಂಗೌಡ ಮೃತದೇಹ ಹೊತ್ತು ಸಾಗಿದೆ. ಮೋಸ್ಟ ವಾಂಟೆಡ್ ವಿಕ್ರಂ ಗೌಡ ಅಂಡ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕುಟುಂಬಸ್ಥರಿಗೆ ವಿಕ್ರಂ ಗೌಡನ ಮೃತ ದೇಹವನ್ನು ತೆಗೆದುಕೊಂಡು ಹೆಬ್ರಿಕೋಡ್ಲು ಗ್ರಾಮಕ್ಕೆ ಕುಟುಂಬಸ್ಥರು ತೆರಳಿದ್ದಾರೆ.…
ಬೆಳಗಾವಿ : ತಾಳಿ ಕಟ್ಟಿದ ಗಂಡನ ಕೊಲೆಗೆ ಪತ್ನಿಯೊಬ್ಬಳು ಸುಪಾರಿ ನೀಡಿದ್ದಾಳೆ. ಇದೀಗ ಪತಿ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊನ್ನೂರಿನಲ್ಲಿ ನಡೆದಿದೆ. ಹೌದು ನಿನ್ನೆ ಕೊಡಲಿಯಿಂದ ಕೊಚ್ಚಿ ನಿಂಗಪ್ಪ ಅರವಳಿ (41) ಕೊಲೆಯಾಗಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಒಂದುವರೆ ಲಕ್ಷ ರೂಪಾಯಿಗೆ ಪತ್ನಿ ನೀಲಮ್ಮ (38) ಸುಪಾರಿ ಕೊಟ್ಟಿದ್ದಾಳೆ.ಪತ್ನಿ ನೀಲಮ್ಮ ಆಕೆಯ ಪ್ರಿಯಕರ ಮಹೇಶ್ ನಿಂದ ಕೊಲೆಗೆ ಸುಪಾರಿ ನೀಡಲಾಗಿತ್ತು. ಗಜಮನಾಳ ಗ್ರಾಮದ ಯಲ್ಲಪ್ಪ ಎಂಬಾತನಿಗೆ ಸುಪಾರಿ ನೀಡಿದ್ದರು. ಮನೆಯ ಕಟ್ಟೆಯ ಮೇಲೆ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ನಿನ್ನೆ ಗಲಾಟೆ ಮಾಡಿಕೊಂಡು ನಿಂಗಪ್ಪ ಮನೆಯ ಕಟ್ಟೆಯ ಮೇಲೆ ಮಲಗಿದ್ದ. ಈ ವೇಳೆ ಬೈಕ್ ನಲ್ಲಿ ಬಂದು ಯಲ್ಲಪ್ಪ ನಿಂಗಪ್ಪನನ್ನು ಭೀಕರವಾಗಿ ಕೊಲೆಗೈದಿದ್ದ. ನಿಂಗಪ್ಪನನ್ನು ಯಲ್ಲಪ್ಪ ಕೊಲೆ ಮಾಡಿ ಪರಾರಿಯಾಗಿದ್ದ. ಪತಿ ನಿಂಗಪ್ಪ…
ಮೈಸೂರು : ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯ ದೇಶವಾಗಿದೆ. ಆದರೆ ಕೆಲವರು ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ರಾಷ್ಟ್ರವಾಗಿಸಲು ಯತ್ನಿಸುತ್ತಿದ್ದಾರೆ. ಅದನ್ನು ನಾವು ವಿರೋಧಿಸಬೇಕು. ಅಂಬೇಡ್ಕರ್ ಸಂವಿಧಾನ ಇರುವವರೆಗೂ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಅದಕ್ಕೆ ನಾವು ಬಿಡಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೊಸ ವಿವಾದ ಹುಟ್ಟು ಹಾಕಿದ್ದಾರೆ. ಮೈಸೂರಿನಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ರಾಷ್ತ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವನ್ನ ಒಂದೇ ಧರ್ಮದ ರಾಷ್ಟ್ರವಾಗಿಸುವ ಯತ್ನ ನಡೆಯುತ್ತಿದೆ. ನಾವುಗಳು ಈ ರೀತಿ ಆಗಲು ಬಿಡಬಾರದು ಎನ್ನುವ ಮೂಲಕ ಹಿಂದೂ ರಾಷ್ಟ್ರ ಕಲ್ಪನೆಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು. ಸಾರ್ವಜನಿಕವಾಗಿ ನಾವು ನೆಮ್ಮದಿಯಾಗಿರಬೇಕೆಂದರೆ ಸಂವಿಧಾನವನ್ನ ನಾವು ರಕ್ಷಣೆ ಮಾಡಬೇಕು. ಭಾರತದ ದೇಶ ವಿವಿಧತೆಯಲ್ಲಿ ಏಕೆತೆಯನ್ನ ಸಾರುವ ದೇಶವಾಗಿದೆ. ಇಲ್ಲಿ ಹಲವು ಜಾತಿ ಧರ್ಮಗಳು ಸಾಮರಸ್ಯದಿಂದ ಬಾಳುತ್ತಿವೆ. ಇದೇ ಭಾರತ ದೇಶದ ಶಕ್ತಿ ಕೂಡ ಆಗಿದೆ. ಎಲ್ಲಿಯ…
ಉಡುಪಿ : ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ. ಇದೀಗ ಮರಣೋತ್ತರ ಪರೀಕ್ಷೆ ಬಳಿಕ ಆತನ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮೋಸ್ಟ ವಾಂಟೆಡ್ ವಿಕ್ರಂ ಗೌಡ ಅಂಡ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕುಟುಂಬಸ್ಥರಿಗೆ ವಿಕ್ರಂ ಗೌಡನ ಮೃತ ದೇಹವನ್ನು ತೆಗೆದುಕೊಂಡು ಹೆಬ್ರಿಕೋಡ್ಲು ಗ್ರಾಮಕ್ಕೆ ಕುಟುಂಬಸ್ಥರು ತೆರಳಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಕ್ರಂ ಗೌಡನ ಅಂತ್ಯಸಂಸ್ಕಾರ ನೆರವಿರುವ ಸಾಧ್ಯತೆ ಇದೆ. ವಿಕ್ರಂ ಗೌಡನ ನಿವಾಸದ ಆವರಣದಲ್ಲಿಯೇ ಆತನ ಅಂತ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ? ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು.ಸೋಮವಾರ ತಡ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ…
ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಬಿಪಿಎಲ್ ಕಾರ್ಡ್ ರದ್ಧತಿಯ ಬಗ್ಗೆ ಯಾರು ಆತಂಕ ಪಡುವ ಅಗತ್ಯ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು. ಬಿಪಿಎಲ್ ಕಾರ್ಡ್ ರದ್ದತಿಯ ಬಗ್ಗೆ ಯಾರು ಆತಂಕ ಪಡುವುದು ಬೇಡ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲನೆ ಮಾಡಲಾಗುತ್ತದೆ.ಯಾರೆಲ್ಲ ಬಡವರಿದ್ದಾರೋ ಅವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತದೆ. ಪರಿಶೀಲನೆಯ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಅವರನ್ನೇ ಕೇಳಿ. ಸಿಎಂ ಸಿದ್ದರಾಮಯ್ಯ ದೆಹಲಿ ಗೆ ಭೇಟಿ ನೀಡುವ ವಿಚಾರವಾಗಿ, ನಂದಿನಿ ಹಾಲು ಮಾರ್ಕೆಟ್ ಮಾಡೋಕೆ ಹೋಗುತ್ತಿದ್ದಾರೆ. ಮುರುಡೇಶ್ವರದಲ್ಲಿ ಮೀನುಗಾರಿಕೆ ಇಲಾಖೆಯ ಕಾರ್ಯಕ್ರಮವಿದೆ. ಹೀಗಾಗಿ ನಾನು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಹೋಗುತ್ತಿದ್ದೇನೆ ಎಂದರು. ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ಮೊದಲೇ ನಿಗದಿಯಾಗಿತ್ತು. ನಂದಿನಿ ಹಾಲು ಜಾಸ್ತಿ ಮಾರ್ಕೆಟ್…
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಹೌದು ಆನ್ಲೈನ್ ಸಂವಾದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಬರಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿಸಿಕೊಂಡ ಶಿಕ್ಷಣ ಸಚಿವ ಹೇ ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ. ಹೌದು ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ, ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದು, ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ. ನಾನು ಕನ್ನಡನಾ ಅಥವಾ ಉರ್ದು ಮಾತನಾಡುತ್ತಿದ್ದೆನಾ? ವಿದ್ಯಾರ್ಥಿಗೆ ಹಾಗೆ ಯಾರು ಹೇಳಿದ್ದು ಮಾಹಿತಿ ತೆಗೆದುಕೊಳ್ಳಿ. ಆತನಿಗೆ ಸುಮ್ಮನೆ ಬಿಡಬೇಡಿ, ಏನು ಅಂತ ಕೇಳಿ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.ನೀಟ್ ಕೋಚಿಂಗ್…
ದಾವಣಗೆರೆ : ಇತ್ತೀಚಿಗೆ ಸರ್ಕಾರಿ ಸಿಬ್ಬಂದಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ದಾವಣಗೆರೆಯಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರೊಬ್ಬರೂ ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ದಾವಣಗೆರೆ ಮಹಾನಗರ ಪಾಲಿಕೆಯ ನೌಕರ ದಫೆದಾರ್ ಲಕ್ಷ್ಮಣ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅರುಣ ಸರ್ಕಲ್ ಬಳಿ ಚಲಿಸುತ್ತಿದ್ದ ರೈಲಿಗೆ ದಾವಣಗೆರೆ ಪಾಲಿಕೆಯ ಯುಜಿಡಿ ದಫೇದಾರ್ ಲಕ್ಷ್ಮಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ದಿನಗಳಿಂದ ಸರಿಯಾಗಿ ಕಚೇರಿಗೂ ಅವರು ಹೋಗಿರಲಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ಲಕ್ಷ್ಮಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಆತ್ಮಹತ್ಯೆ ಕುರಿತಂತೆ ದಾವಣಗೆರೆ ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಿಕ್ರಂ ಗೌಡ ಎನ್ಕೌಂಟರ್ ಬಗ್ಗೆ ಎಡಪಂಥೀಯರು ಅನುಮಾನ ವ್ಯಕ್ತಪಡಿಸಿದ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ವಿಕ್ರಂ ಗೌಡ ಬಳಿ ಆಟೋಮೆಟಿಕ್ ಮಷೀನ್ ಗನ್ ಸೇರಿದಂತೆ ಅಪಾಯಕಾರಿ ಶಸ್ತ್ರಾಸ್ತ್ರಗಳು ಇದ್ದಂತಹ ಮಾಹಿತಿ ಇದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕ್ರಂ ಗೌಡನ ಆಟೋಮೆಟಿಕ್ ಮಷೀನ್ ಗನ್ ಇದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಶೂಟ್ ಮಾಡದಿದ್ದರೆ ಪೊಲೀಸರಿಗೆ ಅಪಾಯ ಆಗುವಂತಹ ಸಾಧ್ಯತೆ ಇತ್ತು.ಅಕಸ್ಮಾತ್ ಶೂಟ್ ಮಾಡದೆ ಹೋಗಿದ್ದರೆ ಪೊಲೀಸರ ಮೇಲೆ ವಿಕ್ರಂ ದಾಳಿ ಮಾಡುವ ಸಾಧ್ಯತೆ ಇತ್ತು. ಆದ್ದರಿಂದ ಪೊಲೀಸರು ವಿಕ್ರಂ ಗೌಡನ ಮೇಲೆ ದಾಳಿ ಮಾಡಿದ್ದಾರೆ ಎಂದು ತಿಳಿಸಿದರು. ಅಲ್ಲದೇ ವಿಕ್ರಂ ಗೌಡನ ಮೇಲೆ ಕೊಲೆ ಪ್ರಕರಣ ಸೇರಿದಂತೆ 61 ಪ್ರಕರಣಗಳಿವೆ. ಅವೆಲ್ಲ ಇದ್ದಾಗ ಕೂಡ ಆತನಿಗೆ ನಾವು ಶರಣಾಗಲು ಅನೇಕ ಅವಕಾಶಗಳನ್ನು ನೀಡಿದ್ದೆವು. ಆದರೆ ಪೊಲೀಸರ ಕಾರ್ಯಾಚರಣೆ ವೇಳೆ ಅವರ ಮೇಲೆಯೇ ವಿಕ್ರಂ ಗೌಡ ದಾಳಿ ಮಾಡಲು ಮುಂದಾಗಿದ್ದ ಹಾಗಾಗಿ,…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಮಹಿಳೆ ಒಬ್ಬರು ಹೇರ್ ಡ್ರೈಯರ್ ಬಳಸುತ್ತಿರುವ ಸಂದರ್ಭದಲ್ಲಿ ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈಗಳ ಬೆರಳುಗಳು ಛಿದ್ರ ಛಿದ್ರವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಈ ಒಂದು ಅವಘಡ ಸಂಭವಿಸಿದೆ. ಹೌದು ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೇರ್ ಡ್ರೈಯರ್ ಸ್ಫೋಟವಾಗಿ ಮಹಿಳೆಯ ಎರಡು ಕೈಗಳು ಛಿದ್ರವಾಗಿವೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾ ಎನ್ನುವವರು ಹೇರ್ ಡ್ರೈಯರ್ ಅನ್ನು ಆನ್ಲೈನ್ ನಲ್ಲಿ ಆರ್ಡರ್ ಮಾಡಿದರು. ಆದರೆ ಅವರು ಇಲ್ಲದ ವೇಳೆ ಬಸಮ್ಮ ಎನ್ನುವವರು ಆ ಹೇರ್ ಡ್ರೈಯರ್ ಪಾರ್ಸಲ್ ಅನ್ನು ತೆಗೆದುಕೊಂಡಿದ್ದರು. ಈ ವೇಳೆ ಅವರು ಹೇರ್ ಡ್ರೈಯರ್ ಅನ್ನು ಓಪನ್ ಮಾಡಿ ಸ್ವಿಚ್ ಆನ್ ಮಾಡಿದ ಕೂಡಲೇ ಬ್ಲಾಸ್ಟ್ ಆಗಿದೆ. ಮೃತ ಯೋಧನ ಪತ್ನಿ ಬಸಮ್ಮಗೆ…
ಬೆಂಗಳೂರು : ಸುಮಾರು 46 ಪ್ರಕರಣಗಳ ಭಾಗಿಯಾಗಿದ್ದ, ಹಾಗೂ 25 ವರ್ಷಗಳ ಹಿಂದಿನ ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲ ಶೆಟ್ಟಿ ಹಳ್ಳಿಯ ಠಾಣೆಯ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ. ಹೌದು ಕಳೆದ 25 ವರ್ಷಗಳ ಬಳಿಕ ಸರದಾರ (50) ಸುಹೇಲ್ (51) ಎನ್ನುವವರ ಬಂಧನವಾಗಿದೆ. ಬಂಧಿತರು, ಬೆಂಗಳೂರಿನ ದೇವರಜೀವನಹಳ್ಳಿ ಮತ್ತು ಬನಶಂಕರಿ ನಿವಾಸಿಗಳು ಎಂದು ತಿಳಿದು ಬಂದಿದೆ. ಕಳೆದ 25 ವರ್ಷಗಳಿಂದ ಇವರಿಬ್ಬರು ತಲೆ ಮರೆಸಿಕೊಂಡಿದ್ದರು. 46 ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ತಿರುಮಲ ಶೆಟ್ಟಿ ಹಳ್ಳಿ ಠಾಣೆಯಲ್ಲಿ 5 ಕೇಸ್, ಹೊಸಕೋಟೆಯಲ್ಲಿ 5, ಅನುಬಂಧನ ಹಳ್ಳಿಯಲ್ಲಿ 5, ನಂದಗುಡಿ ಠಾಣೆಯಲ್ಲಿ 7, ಕೆಂಗೇರಿ ಠಾಣೆಯಲ್ಲಿ 1, ಸರ್ಜಾಪುರದಲ್ಲಿ 1, ವರ್ತುರ್ ಠಾಣೆಯಲ್ಲಿ 1, ಜ್ಞಾನಭಾರತಿ ಠಾಣೆಯಲ್ಲಿ 1, ಕೋಲಾರ ಜಿಲ್ಲೆಯ ಮಾಲೂರು ಠಾಣೆಯಲ್ಲಿ 20 ಪ್ರಕರಣಗಳು ದಾಖಲಾಗಿದ್ದವು. ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಇಬ್ಬರು ಭಾಗಿಯಾಗಿದ್ದರು…













