Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದ ದುರಂತ ಸಂಭವಿಸಿದ್ದು ಎರಡು ಅಂತಸ್ತಿನ ಮನೆ ಒಂದು ಏಕಾಏಕಿ ಕುಸಿದಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದಲ್ಲಿ ಕಟ್ಟಡದ ಪಾಯ ತೆಗೆಯುವಾಗ ಈ ಒಂದು ಘಟನೆ ಸಂಭವಿಸಿದೆ ಮನೆಯಲ್ಲಿದ್ದವರನ್ನು ತಕ್ಷಣ ಪೊಲೀಸರು ಹೊರ ಕಳುಹಿಸಿದ್ದಾರೆ. ಮನೆಯಲ್ಲಿ ಯಾರಾದರೂ ಸಿಲುಕಿದ್ದಾರಾ ಎಂದು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಬಿಡು ಬಿಟ್ಟಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಯಾದಗಿರಿ : ಜಾತ್ರೆಯಲ್ಲಿ ಬ್ಯಾನರ್ ಹಾಕಿದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಬೀರನಕಲ್ ಗ್ರಾಮದಲ್ಲಿ ನಡೆದಿದೆ. ಬೀರನಕಲ್ ಗ್ರಾಮದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನ ಗ್ರಾಮ ದ್ಯಾಮವ್ವ ಜಾತ್ರೆಯLLI ಶುಭಾಶಯ ಕೋರಿ ಯುವಕರು ಬ್ಯಾನರ್ ಹಾಕಿದ್ದರು. ಬ್ಯಾನರ್ ಹಾಕಿದನ್ನು ಮತ್ತೊಂದು ಯುವಕರ ಗುಂಪು ಪ್ರಶ್ನಿಸಿದೆ. ಆಗ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಯುವಕರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ದೊಣ್ಣೆಗಳಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ. 10 ಕ್ಕೂ ಹೆಚ್ಚು ಗಾಯಾಳುಗಳನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ರಜೆಯ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ವೈದ್ಯೆ ತನ್ನ ಸ್ನೇಹಿತರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಆಗಮಿಸಿದ್ದಳು. ಈ ವೇಳೆ ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುರುತಿಸಲಾಗಿದೆ. ಅನನ್ಯ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರೊಂದಿಗೆ ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್ ಹೌಸ್ಗೆ ಮಂಗಳವಾರ ಸಂಜೆ ಬಂದಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 8.30 ಗಂಟೆಗೆ ಈ ಗೆಸ್ಟ್ ಹೌಸ್ ಹಿಂಭಾಗದಲ್ಲಿರುವ ತುಂಗಭದ್ರಾ ನದಿಗೆ ಮೂವರು ಈಜಾಡಲು ಹೋಗಿದ್ದು, ಇದರಲ್ಲಿ ಡಾ. ಅನನ್ಯ ರಾವ್, ಎತ್ತರದ ಕಲ್ಲಿನ ಮೇಲಿಂದ ನೀರಿಗೆ ಜಿಗಿದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು ನಾಪತ್ತೆಯಾಗಿದ್ದಾರೆ. ಈ ಜಾಗ ಕಲ್ಲು-ಗುಂಡುಗಳಿಂದ ಕೂಡಿದ್ದು, ನೀರು ಕಲ್ಲುಗಳ ಮಧ್ಯೆ ಒಂದು ಕಿ.ಮೀ. ಗೂ ಅಧಿಕ ದೂರ…
ಬೆಂಗಳೂರು : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಸಾಕ್ಷಾಧಾರಗಳ ಕೊರತೆ ಇದೆ ಎಂದು ತಿಳಿಸಿರುವ ಲೋಕಾಯುಕ್ತ ಪೊಲೀಸರು ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದೆ. ಇದೆ ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಯನ್ನು ನಾಳೆ ಲೋಕಾಯುಕ್ತ ಪೊಲೀಸರು ಕೋರ್ಟಿಗೆ ಸಲ್ಲಿಸಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖಾ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು…
ಬೆಂಗಳೂರು: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣವನ್ನು ಸರ್ಕಾರ ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದೀಗ ಬಾಕಿ ಇರುವಂತ ಮೂರು ತಿಂಗಳ ಹಣವನ್ನು ಶೀಘ್ರವೇ ಡಿಬಿಟಿ ಮೂಲಕ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಎಪಿಎಲ್, ಬಿಪಿಎಲ್ ಕಾರ್ಡ್ ಗೊಂದಲದ ಕಾರಣ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದು ತಡವಾಗಿದೆ. ಈ ಹಣವನ್ನು ಶೀಘ್ರವೇ ಖಾತೆಗೆ ಡಿಬಿಟಿ ಮೂಲಕ ಜಮಾ ಮಾಡುವುದಾಗಿ ತಿಳಿಸಿದರು. ನವೆಂಬರ್, ಡಿಸೆಂಬರ್ ಹಾಗೂ ಜನವರಿಯ ಮೂರು ತಿಂಗಳ ಹಣವನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಶೀಘ್ರವೇ ಡಿಬಿಟಿ ಮೂಲಕ ಸಂದಾಯ ಮಾಡಲಾಗುತ್ತದೆ. ಈ ಸಂಬಂಧ ಆಹಾರ ಇಲಾಖೆಯಿಂದಲೂ ಪತ್ರಿಕಾ ಪ್ರಕಟಣೆಯನ್ನು ಹೊರಡಿ ಫಲಾನುಭವಿಗಳಿಗೆ ಮಾಹಿತಿ ನೀಡುವುದಾಗಿ ಹೇಳಿದರು. ಅಂದಹಾಗೇ ಫೆಬ್ರವರಿಯಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಫಲಾನುಭವಿಗಳಿಗೆ 10 ಕೆಜಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಗೆ ನೀಡಲಾಗುತ್ತಿದ್ದಂತ ಹಣವನ್ನು ನಿಲ್ಲಿಸೋ…
ತುಮಕೂರು : ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಖಾಸಗಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಇಂದು ಹಾಸ್ಟೆಲ್ ಅಲ್ಲಿ ಊಟ ಮಾಡಿದ್ದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಖಾಸಗಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಶೀರಾ ತಾಲೂಕಿನ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಕಳಪೆ ಗುಣಮಟ್ಟದ ಆಹಾರ ಸೇವಿಸಿದ್ದರಿಂದ ವಾಂತಿ ಭೇದಿ ಆಗಿ ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥರಾದಂತಹ ವಿದ್ಯಾರ್ಥಿಗಳನ್ನು ಶಿರಾ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರು : ಮುಡಾ ಕೇಸ್ ಗೆ ಸಂಬಂಧಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್ ನೀಡಿದ್ದು, ಬಿ ರಿಪೋರ್ಟ್ ಸಲ್ಲಿಸುವುದಾಗಿ ಮಾಹಿತಿ ಬಂದಿದೆ. ಈ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಟ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದಿದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ಶಪಥ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಶಿಕ್ಷೆ ಕೊಡಿಸದೆ ಇದ್ದರೆ ನಾನು ಸ್ನೇಹಮಯಿ ಕೃಷ್ಣನೇ ಅಲ್ಲ ಎಂದು ದೂರುದಾರ ಸ್ನೇಹದ ಕೃಷ್ಣ ಶಪಥ ಮಾಡಿದ್ದಾರೆ. ಲೋಕಾಯುಕ್ತದ ಮೇಲಿನ ಅನುಮಾನ ಹೆಚ್ಚಾಗಿದೆ. ಲೋಕಾಯುಕ್ತ ಅಧಿಕಾರಿಗಳು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನು ಕೊಟ್ಟಿದ್ದೇನೆ ನಾಲ್ವರ ವಿರುದ್ಧದ ಆರೋಪದಲ್ಲಿ ಸಾಕ್ಷಿಗಳ ಕೊರತೆ ಇದೆ. ನೀವು ಕೋರ್ಟ್ ಅಲ್ಲಿ ಪ್ರಶಂಸೆ ಅಂತ ನೋಟಿಸ್ ಕೊಟ್ಟಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆಕ್ರೋಶ ಹೊರ ಹಾಕಿದ್ದಾರೆ. ತನಿಖೆ ಇನ್ನು ಬಾಕಿರುವಾಗಲೇ ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.…
ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ ರಿಪೋಸ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸೋ ಮಾಹಿತಿ ಇದೆ. ಮಧ್ಯಂತರ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿಸಿದರು.
ಬೆಂಗಳೂರು : ಜಾತಿ ಗಣತಿ ವರದಿ ಜಾರಿಯಾಗುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ ನೀಡಿದ್ದು, ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ಶತಾಯಗತಾಯ ಜಾರಿಗೊಳಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರದ ಈ ಹಿಂದಿನ ಅವಧಿಯಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ವೈಜ್ಞಾನಿಕವಾಗಿ ನಡೆದಿದೆ. ಹೀಗಾಗಿ ವರದಿ ಜಾರಿಯ ಬಗ್ಗೆ ಯಾವುದೇ ಅನುಮಾನ ಅಥವಾ ಗೊಂದಲಗಳಿಗೆ ಆಸ್ಪದವಿಲ್ಲ. ನೂರಕ್ಕೆ ನೂರರಷ್ಟು ವರದಿ ಜಾರಿಯಾಗುವುದು ಸತ್ಯ ಎಂದಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿನ್ನೆ ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿ, ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದೇನೆ ಎಂದರು. ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ…
ಚಿಕ್ಕಬಳ್ಳಾಪುರ : ಗಾಂಜಾ ಸಾಗಿಸುತ್ತಿದ್ದ ತಂದೆ ಮಗಳು ಮೊಮ್ಮಗ ಸೇರಿದಂತೆ ಒಟ್ಟು ಐವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಡಿಕೆರೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 35 ಕೆ.ಜಿ ಗಾಂಜಾ XUV 500 ಕಾರು ಜಪ್ತಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಸೆನ್ ಠಾಣೆಯ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಲ್ಲಿಗುಂಟೆಯ ಮಾರಪ್ಪ ಗರಿಗೆರೆಪಾಳ್ಯ ನಿವಾಸಿಗಳಾದ ತಾಯಿ ದೇವಮ್ಮ ಮಗ ಅಂಜಿ ಎನ್ನುವವರನ್ನು ಬಂಧಿಸಲಾಗಿದೆ. ಆಂಧ್ರದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು. ಬಂಧಿತರು ಗಾಂಜಾ ಮಾರಾಟವನ್ನೇ ವೃತ್ತಿಯಾಗಿಸಿಕೊಂಡಿದ್ದರು.













