Author: kannadanewsnow05

ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತಂದರೂ ಸಹ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ನಿಂತಿಲ್ಲ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ವ್ಯಕ್ತಿಯೋಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರನಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವಾನಂದ್ (36) ಎಂದು ತಿಳಿದುಬಂದಿದೆ. ಶಿವಾನಂದ್ ಕಾರ್ತಿಕ್ ಬಳ್ಳಾರಿ ಎಂಬುವವರಿಂದ 4 ಲಕ್ಷ ಸಾಲ ಪಡೆದಿದ್ದರು. 4 ಲಕ್ಷಕ್ಕೆ 4 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಸಾಲ ಮರುಪಾವತಿ ಮಾಡಿದ್ದರೂ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಲೇ ಇದ್ದರಂತೆ. ಇದರಿಂದ ಬೇಸತ್ತ ಶಿವಾನಂದ್ ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಶಿವಾನಂದ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಕಲಬುರ್ಗಿ : ಟಿಬಿ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬ ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಆದರೆ ಇಂದು ತೀವ್ರವಾಗಿ ಆತ ಮನನೊಂದಿದ್ದು ಜಿಲ್ಲಾಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೋಗಿಯನ್ನು ನಗರದ ಡೆಕ್ಕನ್ ಕಾಲೇಜು ಬಳಿಯ ನಿವಾಸಿ ಸೈಯದ್ ಅಝರುದ್ದೀನ್ (33) ಎಂದು ಗುರುತಿಸಲಾಗಿದೆ. ಸೈಯದ್ ಅಭಿವೃದ್ಧಿ ನಿಗೆ ಟಿವಿ ರೋಗ ಇತ್ತು ಕಳೆದ ಕೆಲವು ದಿನಗಳ ಹಿಂದೆ ಆತನನ್ನು ಜಲಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದ ಆತ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತು ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ಇಡೀ ಹುಬ್ಬಳ್ಳಿ ಜನತೆಯನ್ನು ಬೆಚ್ಚಿಬೀಳಿಸಿದ್ದು 18 ವಯಸ್ಸಿನ ಯುವತಿ ಒಬ್ಬಳು 50 ವರ್ಷದ ಅಂಕಲ್ ಜೊತೆಗೆ ಓಡಿ ಹೋಗಿ ಮದುವೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 50 ವರ್ಷದ ಅಕಲ್ ಜೊತೆ 18 ವರ್ಷದ ಯುವತಿ ಮದುವೆ ಪ್ರಕರಣದಲ್ಲಿ ಹುಬ್ಬಳ್ಳಿ ಪೊಲೀಸರು ಕಿಲಾಡಿ ಅಂಕಲ್‌ನನ್ನು ಬಂಧಿಸಿದ್ದಾರೆ. ಕೇಶ್ವಾಪುರದ ಚಾಲುಕ್ಯ ನಗರದ ಪ್ರಕಾಶ್ ಕಂಜರಘಾಟ ಬಂಧಿತ ಆರೋಪಿಯಾಗಿದ್ದಾನೆ. ಹೌದು ಮನೆಯಿಂದ ನಾಪತ್ತೆಯಾಗಿದ್ದ ಹುಬ್ಬಳ್ಳಿಯ ಕರೀಷ್ಮಾ, 50 ವರ್ಷದ ಸೆಕ್ಯೂರಿಟಿ ಪ್ರಕಾಶ್​​ ಎನ್ನುವಾತನ ಜೊತೆ ಪತ್ತೆಯಾಗಿದ್ದಳು. ಅಲ್ಲದೇ ಇಬ್ಬರು ಮದುವೆಯಾಗಿದ್ದರು. ಆದ್ರೆ, ಅದೇನಾಯ್ತೋ ಏನೋ ಕರೀಷ್ಮಾ ಪ್ರಕಾಶನನ್ನು ಬಿಟ್ಟು ವಾಪಸ್ ಮನೆಗೆ ಓಡಿ ಬಂದಿದ್ದಾಳೆ. ಅಲ್ಲದೇ ಬಲವಂತವಾಗಿ ನನ್ನ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ಪ್ರಕಾಶನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಅಲ್ಲದೇ ಈ ಸಂಬಂಧ ಕರೀಷ್ಮಾ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಒಂದು ವರ್ಷದ ಹಿಂದೆಯೂ ನನಗೆ ಪ್ರಕಾಶ್…

Read More

ಹಾಸನ : ಹಾಸನದಲ್ಲಿ ಘೋರವಾದ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಒಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಗ್ರಾಂ ಪಂಚಾಯತಿ ಅಧ್ಯಕ್ಷೆಯನ್ನು ಮಲ್ಲಿಗೆಮ್ಮ (58) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆಮ್ಮ ಟಿಪ್ಪರ್ ಹರಿದು ಸಾವನಪ್ಪಿದ್ದಾರೆ. ಮಲ್ಲಿಗಮ್ಮ ಬ್ಯಾಂಕಿಗೆ ಹೋಗಿ ವಾಪಾಸ್ ನಡೆದುಕೊಂಡು ಬರುವಾಗ ಈ ಒಂದು ಘಟನೆ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದು KA56 8961 ನಂಬರಿನ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ಮಲ್ಲಿಗೆಮ್ಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಫಲಾನುಭವಿಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಅವರು ಮಾತನಾಡಿ, ಫೆಬ್ರುವರಿಯಲ್ಲಿ ಪೂರ್ಣ ಪ್ರಮಾಣದ ಅನ್ನಭಾಗ್ಯ ಯೋಜನೆಯ 10 ಕೆ.ಜಿ ಅಕ್ಕಿಯನ್ನು ನೀಡುತ್ತೇವೆ.…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಮಗುವಿನ ಮೇಲೆ ಜೆಬಿಜಿ ಹರಿದು ದಾರಿಣವಾಗಿ ಸಾವನ್ನಪ್ಪಿದ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನನ್ನು ಥವನ್ ರೆಡ್ಡಿ (2) ಎಂದು ತಿಳಿದುಬಂದಿದೆ.ನಿನ್ನೆ ಸಂಜೆ 6.30 ಕ್ಕೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೆಸಿಬಿ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.ಎಂದಿನಂತೆ ಮನೆಯ ಮುಂದೆ ಥವನ್ ಆಟವಡುತ್ತಿದ್ದ ವೇಳೆ JCB ವೇಗವಾಗಿ ಬಂದಿದೆ. ಜೆಸಿಬಿ ಬರುವುದನ್ನು ಗಮನಿಸದೇ ಥವನ್ ಆಟದಲ್ಲಿ ಮಗ್ನನಾಗಿದ್ದ.ಈ ವೇಳೆ JCB ಆತನ ತಲೆಯ ಮೇಲೆ ಹರಿದಿದೆ.ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆದರೆ, ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು…

Read More

ಮಹಾರಾಷ್ಟ್ರ : ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 23 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. KSRTC ಬಸ್ ಮಹಾರಾಷ್ಟ್ರದ ಮೀರಜ್ ನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಪಕ್ಕದ ಗುಂಡಿಗೆ ಉರಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. 23 ಜನರಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. 23 ಜನರಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಅನ್ನಭಾಗ್ಯ ಯೋಜನೆ ಅಡಿ ಇಷ್ಟು ದಿನ 5 ಕೆ.ಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರಿಂದ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನ ಕೈಗೊಂಡಿದೆ. ಅನ್ನಭಾಗ್ಯ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದ್ದು ಪ್ರತಿಫಲ ಅನುಭವಿಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದಿಂದಲೇ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ಹಾಗಾಗಿ ಹಣದ ಬದಲಾಗಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Read More

ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಸಹಜ ಕಾಯಿಲೆಯಾಗಿಬಿಟ್ಟಿದೆ. ಇದೀಗ ತರಗತಿಯಲ್ಲಿ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದಲ್ಲಿ ನಡೆದಿದೆ. ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ಶಿಕ್ಷಕರನ್ನು ಭೈರಪ್ಪ ಆರ್ ಸಾತಗೊಂಡನವರ (55) ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಇನ್ನು ಫಾಲಾನುಭವಿಗಳ ಖಾತೆಗೆ ಜಮೆ ಆಗದೆ ಇರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ನಮ್ಮ ವಿರೋಧವಿಲ್ಲ. ಗ್ಯಾರಂಟಿ ಯೋಜನೆ ಬಗ್ಗೆ ಹೊಸ ಕಂಡೀಶನ್ ಹಾಕಿದ್ವಿ. ಎಂಪಿ ಚುನಾವಣೆಯ ಮತದಾನದ ಮೂರು ದಿನಗಳ ಮುನ್ನವೇ ಹಣ ಜಮೆಯಾಗಿದೆ. ಬೈ ಎಲೆಕ್ಷನ್ ಮತದಾನಕ್ಕೂ ಮುನ್ನವೇ ಗ್ಯಾರಂಟಿ ಹಣ ತಲುಪುತ್ತದೆ. ಮುಂದಿನ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೂ ಹೀಗೆ ಮಾಡುತ್ತಾರೆ. ರಾಜ್ಯದ ಜನರು ರೈತರು ಬಡವರು ಭಿಕ್ಷುಕರ? ಎಂದು ರಾಜ್ಯ ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಕೆಪಿಸಿಸಿ ಅಧ್ಯಕ್ಷರು ಸಿಎಂ ಹುದ್ದೆ ವಿಚಾರವಾಗಿ ಬಡಿದಾಟ ನಡೆಯುತ್ತಿದೆ ಕೆಲ ನಾಯಕರು ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಮಾತನಾಡಿದ್ದಾರೆ.…

Read More