Author: kannadanewsnow05

ಹಾಸನ : ಈಜು ಬರುತ್ತಿದ್ದರು ಸಹ ಇಬ್ಬರು ಯುವಕರು ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರಿನಿಂದ ಹೊರಬರಲಾಗದೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕರನ್ನು ಯಶ್ವಂತ್ ಸಿಂಗ್ ಆಲಿಯಾಸ್ ಗಣೇಶ್(29), ರೋಹಿತ್ (28) ಎಂದು ತಿಳಿಬಂದಿದೆ.ಮೊದಲು ಕೆರೆಗೆ ಇಳಿದ ರೋಹಿತ್ ಈಜುವ ವೇಳೆ ಕೆರೆಯ ಗಿಡಗಂಟಿಗಳ ನಡುವೆ ಸಿಲುಕಿದ್ದಾರೆ. ಮೇಲೆ‌ ಬರಲಾಗದೆ ಕಾಪಾಡಿ‌ ಕಾಪಾಡಿ‌ ಎಂದು ಕೂಗಾಡಿದ್ದಾರೆ. ತಕ್ಷಣ ಕೆರೆಗೆ ಜಿಗಿದ ಗಣೇಶ್ ಕೂಡ ಅಲ್ಲಿನ‌ ಕೆಸರು ಹಾಗೂ ಬಳ್ಳಿಗಳ ನಡುವೆ ಸಿಲುಕಿದ್ದಾರೆ. ಮೇಲೆ ಬರಲು ಏನೆಲ್ಲ ಪ್ರಯತ್ನ ಪಟ್ಟರೂ ಸಾದ್ಯವಾಗದೆ ಇಬ್ಬರು ಗೆಳೆಯರು ಒಟ್ಟಿಗೆ ಜಲ ಸಮಾಧಿಯಾಗಿದ್ದಾರೆ. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕುತ್ತಾ ಕೆರೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಸಮೀಪದ ಶ್ರವಣಬೆಳಗೊಳ‌ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೃತದೇಹ ಹೊರತೆಗೆದು ಮರಣೊತ್ತರ ಪರೀಕ್ಷೆ…

Read More

ಬೆಂಗಳೂರು : ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಹಾಗಾಗಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ಗ್ರೇಟ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಈ ಬಾರಿ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ. ಕಳೆದ ಬಾರಿ ಮೂರು ಪರೀಕ್ಷೆ ಬಗ್ಗೆ ಗೊಂದಲ ಮೂಡಿತ್ತು. ಆದರೆ ಈ ಬಾರಿ ಎಲ್ಲರಿಗೂ ಕ್ಲಿಯರ್ ಆಗಿದೆ. ಗ್ರೇಸ್ ಮಾರ್ಕ್ಸ್ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದರು. ಹಾಗಾಗಿ ಈ ಬಾರಿ ಯಾವುದೇ ರೀತಿಯಾದಂತಹ ಗ್ರೇಸ್ ಮಾರ್ಕ್ಸ್  ಇರುವುದಿಲ್ಲ ಎಂದು ತಿಳಿಸಿದರು.

Read More

ಚಿತ್ರದುರ್ಗ : ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಇದೀಗ ಹನಿ ಟ್ರ್ಯಾಪ್‌ಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹಿರೇಗುಂಟನೂರು ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್ ಹನಿ ಟ್ರ್ಯಾಪ್‌ಗೆ ಒಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಜುನಾಥ್ ಮಹಿಳೆಯೊಂದಿಗೆ ಕಳೆದ 9 ವರ್ಷಗಳಿಂದ ಸಂಬಂಧ ಹೊಂದಿದ್ದ ಈ ವೇಳೆ ಮಹಿಳೆ 35 ಲಕ್ಷ ಹಣ ಮಂಜುನಾಥ್ ನಿಂದ ಪೀಕಿದ್ದಾಳೆ.ಅಲ್ಲದೇ ಕಾಗದದಲ್ಲೂ ನಿನಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬರೆಸಿಕೊಂಡಿದ್ದಾಳೆ. ಹಾಗಾಗಿ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ಮೂರು ಮೊಬೈಲ್ ಫೋನ್ ಬಳಸುತ್ತಿದ್ದಳು. ಇದನ್ನು ಗಮನಿಸಿದ ಮಂಜುನಾಥ್, ಮಹಿಳೆಯ ಫೋನ್ ಪರಿಶೀಲಿಸಿದ್ದಾರೆ. ಆಗ ಕಾಂಟ್ಯಾಕ್ಟ್ ಲೀಸ್ಟ್‌ನಲ್ಲಿ ಹಲವು ಪುರುಷರ ನಂಬರ್ ಕಂಡು ಅನುಮಾನದಿಂದ ಪ್ರಶ್ನಿಸಿದ್ದಾರೆ. ಈ ವೇಳೆ ಮಂಜುನಾಥ್ ಈ ಹಿಂದೆ ನೀಡಿದ್ದ ಹಣವನ್ನು ವಾಪಾಸ್ ಕೇಳಿದ್ದಾರೆ. ಆಗ ಮಹಿಳೆ ವಿಡಿಯೋ ಮುಂದಿಟ್ಟು ಬೆದರಿಕೆ ಹಾಕಿದ್ದಾಳೆ. ಮರ್ಯಾದೆಗೆ ಅಂಜಿಕೊಂಡು ಮಂಜುನಾಥ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Read More

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ನಿಯಂತ್ರಣ ತಪ್ಪಿ ಕಾರು ಬಿಸಿ ನಾಲಿಗೆ ಬಿದ್ದ ಪರಿಣಾಮಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನಪ್ಪಿದ್ದು ಇನ್ನಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ವಿಸಿ ನಾಲಿಗೆ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯ ವೇಳೆ ಕಾರಿನಲ್ಲಿದ್ದ ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ನೀರು ಪಾಲಾಗಿರುವ ಘಟನೆ ನಡೆದಿದ್ದು ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ಕಾರ್ಯಾಚರಣೆ ಮುಂದುವರೆಸಿದ್ದಾರೆ.ಪಾಂಡವಪುರದಿಂದ ಮಂಡ್ಯ ಕಡೆಗೆ ಬರುವ ವೇಳೆ ಈ ಒಂದು ಅವಘಡ ಸಂಭವಿಸಿದೆ. ಶಿವಳ್ಳಿ ಠಾಣೆ ಪೊಲೀಸರಿಂದ ಈ ಒಂದು ಕಾರ್ಯಚರಣೆ ಮುಂದುವರೆದಿದೆ.

Read More

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ತೆರಿಗೆದಾರರಿಗೆ ಭರ್ಜರಿ ಗಿಫ್ಟ್ ನೀಡಿದೆ. 12, ಲಕ್ಷದ ವರೆಗೆ ಆದಾಯ ತೆರಿಗೆ ಇಲ್ಲ. 12 ಲಕ್ಷದ ವರೆಗೆ ತೆರಿಗೆಯಲ್ಲಿ  ಕೇಂದ್ರ ಸರ್ಕಾರ ದೊಡ್ಡ ವಿನಾಯಿತಿ ನೀಡಿದೆ. ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ನೀಡಿದೆ. ಆದಾಯ ತೆರಿಗೆದಾರರಿಗೆ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. 12 ಲಕ್ಷದವರೆಗೂ ಯಾವುದೇ ತೆರಿಗೆ ಇಲ್ಲ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ.ರಾಜ್ಯಗಳಿಗೆ 1.5 ಲಕ್ಷ ಕೋಟಿಯವರೆಗೆ ಬಡ್ಡಿ ರಹಿತ ಸಾಲ ವಿಮಾ ಕ್ಷೇತ್ರದಲ್ಲಿ ನೂರರಷ್ಟು ವಿದೇಶಿ ಹೂಡಿಕೆಗೆ ಅವಕಾಶ ವಿದೇಶಿ ಹೂಡಿಕೆ ಶೇಕಡ 74 ರಿಂದ ಶೇಕಡ 100ಕ್ಕೆ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ…

Read More

ಬೆಂಗಳೂರು : ಖಾಸಗಿ ಕ್ಲಿನಿಕಲ್ ಟ್ರಯಲ್‌ಗೆ ಸ್ವಪ್ರೇರಿತರಾಗಿ ಸೇರಿಕೊಂಡು ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘೋರ ಘಟನೆ ಬೆಂಗಳೂರಲ್ಲಿ ನಡೆದಿದೆ.ಮೃತ ಯುವಕನನ್ನು ಕಲಬುರ್ಗಿ ಮೂಲದ ನಾಗೇಶ್ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಔಷಧ ಪ್ರಯೋಗ ಕಂಪನಿಯಲ್ಲಿ ಡಿಸೆಂಬರ್ 2ನೇ ವಾರದಲ್ಲಿ ನಾಗೇಶ್ ಮೆಡಿಸಿನ್ ಟ್ರಯಲ್‌ಗೆ ಒಳಗಾದರು.ಆದರೆ, ಎರಡೇ ದಿನಗಳಲ್ಲಿ ಹೊಟ್ಟೆನೋವು ಬಂದಿತ್ತು, ಖಾಸಗಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. 10 ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆದರೂ, ಜನವರಿ 21ರಂದು ಸಹೋದರನ ಮನೆಯಲ್ಲಿ ಸಾವನಪ್ಪಿದ್ದಾನೆ.ಈ ಕುರಿತು ನಾಗೇಶ್ ಸಹೋದರ ಜಾಲಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಗೇಶ್‌ನಸಹೋದರನದೂರಿನಪ್ರಕಾರ, ಟ್ರಯಲ್‌ಗೆ ಮುನ್ನ ಸಾವಿನ ಸಾಧ್ಯತೆಯನ್ನು ಹೊರತುಪಡಿಸಿ ಉಳಿದ ದುಷ್ಪರಿಣಾಮಗಳ ಬಗ್ಗೆ ಮಾತ್ರ ಕಂಪನಿ ಮಾಹಿತಿ ನೀಡಿತ್ತು. ಆದರೆ, ರಕ್ತಹೆಪ್ಪುಗಟ್ಟುವಿಕೆಯಿಂದ ನಾಗೇಶ್‌ನ ಮರಣವಾಗಿದ್ದು, ಇದಕ್ಕೆ ಔಷಧಿ ಪ್ರಯೋಗವೇ ಕಾರಣ ಎಂದು ಕುಟುಂಬವು ಆರೋಪಿಸಿದೆ. ಸದ್ಯ ಘಟನೆ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಆರಂಭಕ್ಕೂ ಮುನ್ನ ತೆಲುಗು ಕವಿ ಗುರುಜಾಡು ಅಪ್ಪಾರಾವ್ ಅವರನ್ನು ಸ್ಮರಿಸಿ ಪ್ರಧಾನಿ ಮೋದಿ ಅವರಿಗೆ ನಮಿಸಿ ಬಜೆಟ್ ಮಂಡನೆ ಆರಂಭಿಸಿದರು. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಪೌಷ್ಟಿಕತೆಯಲ್ಲಿ ಬೇಡಿಕೆ ಇರುವ ಮುಖಾನ ಬೆಲೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಅಂಡಮಾನ್ ನಿಕೋಬಾರ್ ದ್ವೀಪ,  ಲಕ್ಷ ದ್ವೀಪಗಳಲ್ಲಿ ಮೀನುಗಾರಿಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಈ ವೇಳೆ ಬಜೆಟ್ ಮಂಡನೆ ಆರಂಭದಲ್ಲಿ ವಿಪಕ್ಷಗಳು ಗದ್ದಲ ಆರಂಭಿಸಿದವು. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ…

Read More

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಆರಂಭಕ್ಕೂ ಮುನ್ನ ತೆಲುಗು ಕವಿ ಗುರುಜಾಡು ಅಪ್ಪಾರಾವ್ ಅವರನ್ನು ಸ್ಮರಿಸಿ ಪ್ರಧಾನಿ ಮೋದಿ ಅವರಿಗೆ ನಮಿಸಿ ಬಜೆಟ್ ಮಂಡನೆ ಆರಂಭಿಸಿದರು. ಈ ವೇಳೆ ಬಜೆಟ್ ಮಂಡನೆ ಆರಂಭದಲ್ಲಿ ವಿಪಕ್ಷಗಳು ಗದ್ದಲ ಆರಂಭಿಸಿದವು. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದು ತಿಳಿಸಿದರು. 2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪ ಒಂದಾಗಿದ್ದು ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ…

Read More

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲರು ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಕಳೆದ ರಾತ್ರಿ ಶೃಂಗೇರಿಯಲ್ಲಿ ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತದ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೆ ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಾಣಾಗಿದ್ದರು. ಆದರೆ ಕೋಟೆಹೊಂಡ ರವಿ ಮಾತ್ರ ಭೂಗತವಾಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಕಳೆದ ರಾತ್ರಿ ಶೃಂಗೇರಿಯ ಅರಣ್ಯ ಐಬಿಯಲ್ಲಿ ಕೋಟೆಹೊಂಡ ರವಿ ಅವರು ಶರಣಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎಂದು ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್‌ ಮಾಹಿತಿ ನೀಡಿದ್ದಾರೆ.

Read More