Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಕೊಪ್ಪಳದಲ್ಲಿ ಇಂದು ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯಿಂದ ಪೈಪ್ ಇಳಿಸುವಾಗ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಇಂದು ಲಾರಿಯಿಂದ ಪೈಪ್ ಇಳಿಸುವಾಗ ಪೈಪ್ ಗಳು ಕಾರ್ಮಿಕರ ಮೇಲೆ ಬಿದ್ದಿವೆ. ಈ ವೇಳೆ ಪೈಪ್ ಗಳ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿಯ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಎಂದು ವಿಧಾನ ಸೌಧದಲ್ಲಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಕೋಲಾರ : ಪತ್ನಿಯ ಜೊತೆ ಅಕ್ರಮ ಸಂಬಂಧ ಹಿನ್ನೆಲೆ, ಪತಿಯೊಬ್ಬ ತನ್ನ ಸಹಚರರ ಜೊತೆಗೂಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದ ಪ್ರಶಾಂತನಗರದಲ್ಲಿ ಈ ಒಂದು ಕೊಲೆ ಘಟನೆ ನಡೆದಿದೆ. ಇರ್ಫಾನ್ ಹಾಗೂ ಆತನ ಸಹಚರರಿಂದ ಅಮೀನ್ (30) ಎನ್ನುವ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ಅಮೀನ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದವನು ಎಂದು ತಿಳಿದುಬಂದಿದೆ. ಇರ್ಫಾನ್ ಪತ್ನಿ ಹುಸ್ನಾ ಜೊತೆಗೆ ಅಮಿನ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗುತ್ತಿದೆ. ಈ ವಿಚಾರವಾಗಿ ಹುಸ್ನಾ ಅಕ್ಕ ರಾಜಿ ಪಂಚಾಯಿತಿಯ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಮಚ್ಚಿನಿಂದ ಕೊಚ್ಚಿ ಇರ್ಫಾನ್ ಮತ್ತು ಸಹಚರರು ಅಮೀನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಗೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ. ಸರ್ಕಾರದ ಪರ ವಕೀಲರು ಆರೋಪ ಪಟ್ಟಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆರೋಪ ಪಟ್ಟಿ ವಜಾಗೊಳಿಸಲು ಮನವಿ ಮಾಡಿದರು.
ಬೆಂಗಳೂರು : ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಮಾಬಂಧಿಸಿದಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದಾರೆ. ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ಮಡೆನೂರು ಮನು ನಾಯಕನಾಗಿ ನಟಿಸಿದ್ದಾರೆ.ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಈ ಹೊತ್ತಲ್ಲೇ ನಟನ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ಕೇಸ್ ದಾಖಲಾಗಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಇದೀಗ ಪೊಲೀಸರು ಮನುವನ್ನು ಅರೆಸ್ಟ್ ಮಾಡಿದ್ದಾರೆ.
ಹಾಸನ : ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಕ್ಕ ಮಕ್ಕಳೂ ಸಹ ನಿಂತಲೇ ಕೂತಲ್ಲೇ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದೀಗ ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ. ಹೌದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಉಸಿರು ಚೆಲ್ಲಿದ್ದಳು.
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಬಳಿ ಮತ್ತೆ ಭದ್ರತಾ ಲೋಪ ಕಂಡು ಬಂದಿದೆ. ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಬಳಿ ಯುವಕನೊಬ್ಬ ಸಲ್ಮಾನ್ ಖಾನ್ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಹೌದು ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾನೆ. ಮೇ 26 ಸಂಜೆ 7.15 ರ ಸಮಯದಲ್ಲಿ ಯುವಕ ಅಕ್ರಮವಾಗಿ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ನನ್ನು ಇದೀಗ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಭೇಟಿ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದು ಬಂಧಿತ ಜಿತೇಂದ್ರ ಕುಮಾರ್ ಸಿಂಗ್ ಈ ವೇಳೆ ಹೇಳಿದ್ದಾನೆ. ಸಲ್ಮಾನ್ ಖಾನ್ ಮನೆ ಆವರಣದಲ್ಲಿ ಇದೀಗ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ.
ಬೆಂಗಳೂರು : ಇಂದಿನ ದಿನಮಾನಗಳಲ್ಲಿ ಯುವಕರಲ್ಲೇ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಸವೇಶ್ವರನಗರದಲ್ಲಿ ಕೆ.ಆರ್.ಅಭಿಷೇಕ್ ಎಂಬ ಯುವಕ ಸಾವನಪ್ಪಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವ ಎಂದು ತಿಳಿದುಬಂದಿದೆ. ಅನಸೂಯ ರಾಮಕೃಷ್ಣ ದಂಪತಿ ಪುತ್ರ ಕೆ.ಆರ್ ಅಭಿಷೇಕ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲೂಕಿನ ಕಾಡನೂರಿನ ನಿವಾಸಿ ಎಂದು ತಿಳಿದುಬಂದಿದೆ. ಅಭಿಷೇಕ್, ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಸವೇಶ್ವರ ನಗರದಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಅಭಿಷೇಕ್ ಸಾವನ್ನಪ್ಪಿದ್ದಾನೆ. ತಕ್ಷಣ ಅಭಿಷೇಕ್ ನನ್ನು ಸ್ಥಳಿಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಭಿಷೇಕ್ ಮೃತಪಟ್ಟಿದ್ದಾನೆ.
ಬೆಂಗಳೂರು : ನಟಿ ತಮನ್ನಾ ಭಾಟಿಯ ಅವರು ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಸುಮಾರು 2 ವರ್ಷದ 2 ದಿನಗಳ ಮಟ್ಟಿಗೆ ಅವರನ್ನು ನೇಮಿಸಲಾಗಿದ್ದು, ಬರೋಬ್ಬರಿ 6.20 ಕೋಟಿ ಸಹಾಯಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ. ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(2)໖ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಿಸ ದರದಲ್ಲಿ ಸಂಗ್ರಹಿಸುವುದನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಸರ್ಕಾರ ಸೂಚನೆ ಹೊರಡಿಸಿದೆ. ಮುಂದಿನ ಎರಡು ವರ್ಷಗಳ ಮೈಸೂರು ಸ್ಯಾಂಡಲ್ ಸೋಪ್ ತಮನ್ನಾ ಫೋಟೋ ಇರಲಿದೆ. ಮೈಸೂರು ಸ್ಯಾಂಡಲ್ ಸೋಪ್ ಅನ್ನು 1916 ರಲ್ಲಿ ಮೈಸೂರಿನ ರಾಜ ಕೃಷ್ಣ ರಾಜ ಒಡೆಯರ್ IV ಬೆಂಗಳೂರಿನಲ್ಲಿ ಸರ್ಕಾರಿ ಸೋಪ್…
BREAKING : 15 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳಾದ ಅಬ್ದುಲ್ ಹುಲಿ ಕಂಪ್ಯೂಟರ್ ಆಪರೇಟರ್ ಸ್ವಾಮಿಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆ ಎನ್ನುವವರಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಬ್ದುಲ್ ವಲಿ ಮತ್ತು ಸೌಮ್ಯ ಶಕುಂತಲಾ ಬಳಿ 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 15000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ವೇಳೆ ಸೌಮ್ಯ ಬಡಿಗೇರ್ ಅಸ್ವಸ್ಥರಾಗಿದ್ದಾರೆ. ತಕ್ಷಣ ಕಚೇರಿಗೆ ವೈದ್ಯರೇನ್ನು ಕರೆಸಿ ಸೌಮ್ಯ ಅವರಿಗೆ ಚಿಕಿತ್ಸೆ ಕೊಡಿಸಲಾಗಿತು. ಲೋಕಾಯುಕ್ತ ಪೊಲೀಸರು ಸದ್ಯಕ್ಕೆ ಅಬ್ದುಲ್ ವಲಿ ಮತ್ತು ಸೌಮ್ಯ ಬಡಿಗೇರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.













