Author: kannadanewsnow05

ಬೆಳಗಾವಿ : ಇಂದು ರಾಜ್ಯಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗಿತ್ತಿದ್ದೂ, ಎಲ್ಲ ಕಡೆಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.ಆದರೆ ಬೆಳಗಾವಿಯಲ್ಲಿ 2 ಗಣೇಶ ಮಂಡಳಿ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಹೌದು ಕರೋಶಿ ಗ್ರಾಮದಲ್ಲಿ ಎರಡು ಯುವಕರ ಮಧ್ಯ ಗಲಾಟೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮದಲ್ಲಿ ಘಟನೆ ನಡೆದಿದೆ. ಒಂದು ಕಡೆ ಗಣೇಶ ಮಂಡಳಿ ಯುವಕರು ಮೆರವಣಿಗೆಯಲ್ಲಿ ಗಣೇಶ ಮೂರ್ತಿ ತೆಗೆದುಕೊಂಡು ಹೋಗುತ್ತಿದ್ದಾಗ ಗಲಾಟೆ ನಡೆದಿದೆ.ಇನ್ನೊಂದು ಬದಿಯಲ್ಲಿ ಮತ್ತೊಂದು ಗಣೇಶ ಮಂಡಳಿ ಯುವಕರು ಗಣೇಶ ಮೂರ್ತಿ ಮೆರವಣಿಗೆ ಮಾಡುತ್ತ ಗ್ರಾಮದ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ. ಈ ವೇಳೆ ಪಟಾಕಿ ಹೊಡೆಯುವ ವಿಚಾರಕ್ಕೆ ವಾದ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಯುವಕರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಗ್ರಾಮದ ಮುಖಂಡರು ಹುಡುಗರ ಗಲಾಟೆ ಬಿಡಿಸಿ ಬುದ್ಧಿವಾದ ಹೇಳಿದ್ದಾರೆ ಘಟನೆ ಕುರಿತಂತೆ…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ. ಆದರೀಗ ಈ ಯೋಜನೆಯನ್ನ ನಕಲಿ ಫಲಾನುಭವಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದೀಗ ನಕಲಿ ಫಲಾನುಭವಿಗಳಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ.ಆದರೆ ಈ ಯೋಜನೆಯ ಅಡಿಯಲ್ಲಿ ನಕಲಿ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಇದರ ದುರುಪಯೋಗ ಪಡೆದುಕೊಳ್ಳುವ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದೀಗ ಇಲಾಖೆ ಮಟ್ಟದಲ್ಲೇ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ನಕಲಿ ಬಿಪಿಎಲ್ ಕಾರ್ಡ್‌ ಗಳನ್ನ ಪತ್ತೆ ಮಾಡಿ ಎಪಿಎಲ್ ಕಾರ್ಡ್​ಗೆ ವರ್ಗಾಯಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ಇಲಾಖಾ ಮಟ್ಟದಲ್ಲೇ ಸಮಿತಿ ರಚನೆಗೆ ಚಿಂತನೆ ನಡೆಸಲಾಗುತ್ತಿದೆ. ಕಮಿಟಿ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನ ಪರಿಶೀಲನೆ…

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಎಲ್ಲ ಆರೋಪಿಗಳ ವಿರುದ್ಧ ಇತ್ತೀಚಿಗೆ ನ್ಯಾಯಾಲಯಕ್ಕೆ ಪೊಲೀಸರು ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.ಆದರೆ ರೇಣುಕಾಸ್ವಾಮಿ ಕೊಲೆ ಮಾಡಿದ ಹಂತಕರು ಇವರೇ ಎಂದು ಹೇಳುವ ಅತೀ ದೊಡ್ಡ ಸಾಕ್ಷಿ ಚಾರ್ಜ್ ಶೀಟ್ ನಲ್ಲಿ ಉಲ್ಲೆಖಿಸಲಾಗಿದೆ. ಹೌದು ದರ್ಶನ್ & ಗ್ಯಾಂಗ್‍ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಂತಕರು ಇವರೇ ಎಂದು ಮಣ್ಣು ಸಹ ಬೊಟ್ಟು ಮಾಡಿ ತೋರಿಸಿದೆ ಎಂಬ ಅಂಶ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖವಾಗಿದೆ.ಅಪರೂಪ ಎಂಬಂತೆ ಮಣ್ಣನ್ನು ಈ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿದ್ದಾರೆ.ಮಣ್ಣು ಕೂಡ ಸಾಕ್ಷಿಯಾಗಿದ್ದು, ದೇಶದಲೇ ಮೊದಲ ಪ್ರಕರಣವಾಗಿದೆ. ತನಿಖೆ ವೇಳೆ ಆರೋಪಿಗಳು ಧರಿಸಿದ್ದ ಶೂ ಮತ್ತು ಚಪ್ಪಲಿಯಲ್ಲಿದ್ದ ಮಣ್ಣನ್ನು ಹಾಗೂ ಶೆಡ್ ಬಳಿಯ ಮಣ್ಣನ್ನು ಪೊಲೀಸರು ಸಂಗ್ರಹಿಸಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಕಳಿಸಿ ವರದಿ ಪಡೆದಿದ್ದಾರೆ. ರಿಪೋರ್ಟ್‍ನಲ್ಲಿ ಆರೋಪಿಗಳು ಧರಿಸಿದ್ದ ಶೂ ಮತ್ತು ಚಪ್ಪಲಿಯಲ್ಲಿ ಇರುವ ಮಣ್ಣು ಹಾಗೂ ಶೆಡ್ ಬಳಿಯ ಮಣ್ಣು ಎರಡೂ ಒಂದೇ…

Read More

ರಾಮನಗರ : ಇಂದು ನಾಡಿನದ್ಯಂತ ಗಣೇಶ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದ್ದೂ, ಅದೇ ರೀತಿಯಾಗಿ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಗ್ರಾಮದ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಗೌರಿ, ಗಣೇಶ ಹಬ್ಬವನ್ನು ಆಚರಿಸಿದರು. ಇಂದು ಬಿಡದಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಗೌರಿ, ಗಣೇಶ ಹಬ್ಬವನ್ನು ಆಚರಿಸಿದ್ದಾರೆ. ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ. ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪ್ರಾರ್ಥಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬ ಸಮೇತರಾಗಿ ಸ್ವಗ್ರಾಮದಲ್ಲಿ ಗಣೇಶ ಹಬ್ಬವನ್ನು ಸಂಭ್ರಮಿಸಿದರು. ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯ ಕೋರಿದರು. ಪ್ರಥಮ ಪೂಜಿತ ವಿನಾಯಕನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದರು. https://twitter.com/hd_kumaraswamy/status/1832366504760995858?t=j52NWIFE4UXlMDZtXrTwlg&s=19…

Read More

ಬೆಂಗಳೂರು : ಸಕ್ಕರೆಯಲ್ಲಿ ಶೇ.20ರಷ್ಟನ್ನು ಭಾರತದ ಸೆಣಬಿನ ಕಚ್ಚಾ ಪದಾರ್ಥಗಳಿಂದ ತಯಾರಿಸಿದ ಸೆಣಬಿನ ಚೀಲಗಳಲ್ಲಿಯೇ ಕಡ್ಡಾಯವಾಗಿ ಪ್ಯಾಕಿಂಗ್ ಮಾಡಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ. ಕೇಂದ್ರದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಕೋರ್ಟ್​ ತಡೆ ಹಿಡಿದಿದೆ. ಸೌತ್ ಇಂಡಿಯನ್ ಶುಗರ್ ಮಿಲ್ಸ್​ ಅಸೋಸಿಯೇಷನ್ – ಕರ್ನಾಟಕ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೆಣಬಿನ ಚೀಲಗಳಲ್ಲಿ ಸಕ್ಕರೆಯನ್ನು ಪ್ಯಾಕೇಜಿಂಗ್‌ಗೆ 2022ರ ಜುಲೈ 21ರಂದು ನಡೆದ ಸ್ಥಾಯಿ ಸಲಹಾ ಸಮಿತಿಯ ಸಭೆಯಲ್ಲಿ ವಿನಾಯಿತಿ ನೀಡಲಾಗಿದೆ. ಸೆಣಬಿನ ಚೀಲ ತಯಾರಿಕೆಯಲ್ಲಿ ಬಳಸಲಾಗುವ ಎಣ್ಣೆಯು ಟ್ರೋಮೋಜನಿಕ್ (ಗಡ್ಡೆಜನಕ) ಎಂದು ಕೈಗಾರಿಕಾ ವಿಷಶಾಸ್ತ್ರ ಸಂಶೋಧನಾ ಕೇಂದ್ರ ಅಭಿಪ್ರಾಯಪಟ್ಟಿದೆ. ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡುವುದರಿಂದ ಸಕ್ಕರೆಯ ಗುಣಮಟ್ಟ ಹಾಳಾಗುವುದಲ್ಲದೆ, ಅದು ಕಲುಷಿತಗೊಳ್ಳುತ್ತದೆ ಎಂದು ವಿವರಿಸಿದರು. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರ್ ಜನರಲ್…

Read More

ಉತ್ತರಕನ್ನಡ : ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಘಟನೆ ನಡೆದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುನಿಂದ ಇರಿದು ಸಹೋದರನನ್ನೇ ಮನೀಶ್ ಕಿರಣ್ ಸಹೋದರ ಕೊಲೆ ಮಾಡಿದ್ದಾನೆ. ಸಂದೇಶ ಪ್ರಭಾಕರ್ ಬರ್ಬರ ಕೊಲೆಯಾಗಿದೆ ಆರೋಪಿ ಮುನಿಷ್ ಕಿರಣನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಕರ್ನಾಟಕದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ಗಮನ ಸೆಳೆಯುತ್ತಿವೆ. ಆದರೆ ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾಡಳಿತ ಹೊರಡಿಸಿರುವ ಹೊಸ ಆದೇಶವೊಂದು ಗಣೇಶೋತ್ಸವ ಆಯೋಜಕರನ್ನು ಸಂಕಷ್ಟಕ್ಕೆ ದೂಡಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಆದೇಶಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಹೌದು ಕೋಲಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಡಿಜೆ ಸೌಂಡ್ಸ್ ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಸಾರ್ವಜನಿಕರ ಆಕ್ಷೇಪಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏಕಾಏಕಿ ಡಿಜೆ ಸೌಂಡ್ಸ್ ನಿಷೇಧಿಸಿರುವುದರಿಂದ ಅಪಾರ ನಷ್ಟವಾಗುತ್ತಿದೆ ಎಂದು ಡಿಜೆ ಮಾಲೀಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಇದೆ ವೇಳೆ ಡಿಜೆ ಮಾಲೀಕರು ಅಸಮಾಧಾನ ಹೊರ ಹಾಕಿದ್ದು, ಈಗಾಗಲೇ ಅಡ್ವಾನ್ಸ್ ತೆಗೆದುಕೊಂಡಿದ್ದೇವೆ. ಈಗ ಬ್ಯಾನ್​ ಮಾಡಿದ್ದಾರೆ. ಜಿಲ್ಲಾಡಳಿತದ ನಿರ್ಧಾರದಿಂದ ನಾವು ನಷ್ಟ ಅನುಭವಿಸುವಂತಾಗಿದೆ. ನಿಭಂದನೆಗಳನ್ನು ಹಾಕಿ ಅನುಮತಿ ಕೊಡಿ. ಅದರ ಬದಲು ನಿಷೇಧ ಹೇರಬೇಡಿ ಎಂದು ಡಿಜೆ ಮಾಲೀಕರು ಮನವಿ…

Read More

ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಶಿಕ್ಷಕರ ದಿನಾಚರಣೆ ದಿನದಂದಲೇ ರಾಯಚೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿತ್ತು. ಶಾಲಾ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಲ್ಲ 15 ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಯಿತು. ಕೆ ಎಸ್ ಆರ್ ಟಿ ಸಿ ಸಂಸ್ಥೆ ನೀಡಿದ್ದ ಚೆಕ್ ವಿತರಿಸಿದ ಶಾಸಕ ದದ್ದಲ್, ಗಂಭೀರವಾಗಿ ಗಾಯಕೊಂಡ ಮೂರು ಮಕ್ಕಳಿಗೆ 3 ಲಕ್ಷ ಚೆಕ್ ವಿತರಣೆ ಮಾಡಲಾಯಿತು. ಕೈ ಕಾಲುಗಳಿಗೆ ಗಾಯವಾಗಿರುವ 10 ಮಕ್ಕಳಿಗೆ ತಲಾ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಇನ್ನು ಸಣ್ಣ ಪುಟ್ಟ ಗಾಯಗೊಂಡ 50,000 ನೀಡಲಾಯಿತು. ಗಾಯಗೊಂಡ ಎಲ್ಲಾ ಮಕ್ಕಳ ಆಸ್ಪತ್ರೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾಹಿತಿ ನೀಡಿದರು.…

Read More

ದಕ್ಷಿಣಕನ್ನಡ : ಇಂದು ಎಲ್ಲೆಡೆ ಗಣೇಶ ಚತುರ್ಥಿಯ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಗೆ ಕಾರು ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ನವ ವಿವಾಹಿತ ಮಾನಸ ಸಾವನ್ನಪ್ಪಿದ್ದಾಳೆ.ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪತಿ ಅನೀಶ್ ಕೃಷ್ಣ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ನವ ದಂಪತಿಗಳಾದ ಅನಿಶ್ ಕೃಷ್ಣ ಮತ್ತು ಮಾನಸ ತೆರ್ನ ಸಮೀಪದ ಒಡ್ಯಾlದಗಯಾ ನಿವಾಸಿಗಳು ಎಂದು ತಿಳಿದುಬಂದಿದೆ.ಕಳೆದ ಎರಡು ದಿನಗಳ ಹಿಂದೆ ಅಂದರೆ ಸೆಪ್ಟೆಂಬರ್ 5 ರಂದು ದಯಂತಡ್ಕ ದೇಗುಲದಲ್ಲಿ ಅನಿಶ್ ಕೃಷ್ಣ ಮತ್ತು ಮಾನಸ ಮದುವೆಯಾಗಿತ್ತು.

Read More

ಬೆಂಗಳೂರು : ರಾಜ್ಯದಲ್ಲಿ ಯಾವಾಗ ಮುಡಾ ಪ್ರಕರಣ ಭಾರಿ ಸದ್ದು ಮಾಡಿತೊ, ಅಂದಿನಿಂದಲೂ ಸಿಎಂ ಕುರ್ಚಿಯ ಮೇಲೆ ಸ್ವಪಕ್ಷದ ನಾಯಕರೇ ಕಣ್ಣು ಇಟ್ಟಿದ್ದಾರೆ. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ ನೀಡಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದರು.ಇದೀಗ ಸಚಿವ ಎಂಬಿ ಪಾಟೀಲ್ ಅವರು ಕೂಡ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಲ್ಲದೆ ಸಚಿವ ಶಿವಾನಂದ ಪಾಟೀಲ್ ಕೂಡ MB ಪಾಟೀಲ್ ಸಿಎಂ ಆಗುವ ವಿಚಾರವಾಗಿ, ನಾನು ಹಿರಿಯನಿದ್ದೇನೆ ಒಂದಲ್ಲ ಒಂದು ದಿನ ಸಿಎಂ ಆಗುತ್ತೇನೆ. ಪಕ್ಷದಲ್ಲಿ ಎಂಬಿ ಪಾಟೀಲ್ ಅವರಿಗಿಂತಲೂ ಸೀನಿಯರ್ಸ್ ಇದ್ದಾರೆ ಅವರಿಗೂ ಸಿಎಂ ಆಗುವ ಆಸೆ ಇರುತ್ತೆ ಎಂದು ತಿಳಿಸಿದರು. ಇದಕ್ಕೆ ಎಂ.ಬಿ ಪಾಟೀಲ್, ಶಿವಾನಂದ್ ಪಾಟೀಲ್ ಸಿಎಂ ಆಗಲ್ಲ ಆದರೆ ವಿಜಯಪುರದಿಂದ ಮುಖ್ಯಮಂತ್ರಿ ಆಗುವುದು ನಾನೇ ಎಂದು ತಿರುಗೇಟು ನೀಡಿದ್ದಾರೆ. ಪಕ್ಷದಲ್ಲಿ ನನಗಿಂತಲೂ ಹಿರಿಯರು ಇರಬಹುದು ಆದರೆ…

Read More