Author: kannadanewsnow05

ಬೀದರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಇಂದು ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿ ಮುಗ್ಗರಿಸಿ ಸ್ವಲ್ಪದರಲ್ಲೇ ಜಲಾಶಯಕ್ಕೆ ಬಿಳುವುದರಲ್ಲಿ ಬಚಾವ್ ಆಗಿದ್ದಾರೆ. 7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು 93ರಷ್ಟು ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕಾರಂಜಾ ಜಲಾಶಯಕ್ಕೆ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ ಸಲ್ಲಿಸಿದ ಬಳಿಕ ಬಾಗಿನದ ತೆಪ್ಪೆಗೆ ಟೆಂಗು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೆಳಗೆ ಕುಳಿತು ನೀರಲ್ಲಿ ಬಿಟ್ಟು ಮೇಲೇಳುವಾಗ ಆಯಾತಪ್ಪಿದ ಸಚಿವರು, ಅದೃಷ್ಟವಶಾತ್ ತಕ್ಷಣಕ್ಕೆ ಹಿಂಬದಿಯಿದ್ದವರು ಕೈಹಿಡಿದರು. ಬಳಿಕ ಸುಧಾರಿಸಿಕೊಂಡ ಸಚಿವರು ಬ್ಯಾಲೆನ್ಸ್ ಮಾಡಿಕೊಂಡರು. ಸಚಿವ ಖಂಡ್ರೆಗೆ ಸಚಿವರಾದ ರಹೀಂ ಖಾನ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಮಾಲಾ ಬಿ ನಾರಾಯಣ, ಎಸ್ಪಿ, ಡಿಸಿ ಸೇರಿ ಹಲವು ಗಣ್ಯರು ಸಾಥ್ ನೀಡಿದರು.

Read More

ಬಳ್ಳಾರಿ : ಒಂದು ಕಾಲದಲ್ಲಿ ಮಾಧ್ಯಮಗಳಿಗೆ ‘ಏನ್ರಿ ಮೀಡಿಯಾ’ ಹಾಗೆ ಹೀಗೆ ಎಂದು ಅಶ್ಲೀಲವಾಗಿ ಪದ ಬಳಸಿದ್ದ, ಕೊಲೆ ಆರೋಪಿ ದರ್ಶನ್ ಗೆ ಕಳೆದ ಕೆಲವು ದಿನಗಳ ಹಿಂದೆ ಟಿವಿ ಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಇದೀಗ ಜೈಲಧಿಕಾರಿಗಗಳು ದರ್ಶನ್ ಗೆ ಟಿವಿ ವ್ಯವಸ್ಥೆ ಮಾಡಿದ್ದಾರೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಕಳೆದ ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ಬಳಿಕ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ. ತಮ್ಮ ಪ್ರಕರಣದ ಅಪ್ಡೇಟ್ ತಿಳಿದುಕೊಳ್ಳಲು ಮತ್ತೆ ‘ಮೀಡಿಯಾ’ ದವರೇ ಬೇಕಾಯ್ತು. ಅಂತೂ ಇಂತೂ ಕೊನೆಗೂ ದರ್ಶನ್ ಸೆಲ್‌ಗೆ ಟಿವಿ ಬಂದಿದೆ. ಹೈಯರ್ ಕಂಪನಿಯ 32 ಇಂಚಿನ ಟಿವಿಯನ್ನು ದರ್ಶನ್ ಇರುವ ಸೆಲ್‌ಗೆ ನೀಡಲಾಗಿದೆ. ಸದ್ಯ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಕೇಳಿದ್ದ ಮೂರು ಬೇಡಿಕೆಗಳು ಈಡೇರಿದಂತಾಗಿದೆ. ಸರ್ಜಿಕಲ್ ಚೇರ್ ಮೊದಲನೆಯದ್ದು. ಫೋನ್ ಕಾಲ್ ಮಾತನಾಡೋಕೆ ಅವಕಾಶ…

Read More

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದಲ್ಲಿ ಶಾಲೆಯ ಚಿತ್ರಕಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ಶಿಕ್ಷಕ ತನ್ನ ಮೇಲೆ ದಾಖಲಾದ ಪ್ರಕರಣವನ್ನು ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಪೋಕ್ಸೋ ಕಾಯ್ದೆಯ ಸೆಕ್ಷನ್‌ 11ರ ಪ್ರಕಾರ ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ತೋರಿಸುವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಕೃತ್ಯವು ಪೋಕ್ಸೋ ಕಾಯ್ದೆಯ ಸೆಕ್ಷನ್ 12ರ ಅಡಿ ಶಿಕ್ಷಾರ್ಹವಾಗಿದೆ. ಮೊಬೈಲ್‌‌ನ ಮೆಮೋರಿ ಕಾರ್ಡ್‌ನಲ್ಲಿರುವ ಚಿತ್ರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಅವು ಅರ್ಜಿದಾರನ ಮೇಲಿನ ಆರೋಪಗಳನ್ನು ದೃಢಪಡಿಸುತ್ತವೆ. ಈ ಕೃತ್ಯ ಪೋಕ್ಸೋ ಕಾಯ್ದೆಯ ಸೆಕ್ಷನ್‌ 12ರ ಅಡಿ ಅಪರಾಧವಾಗಿದೆ. ಪ್ರಕರಣ ಸಂಬಂಧ ದೋಷಾರೋಪ…

Read More

ಬೆಂಗಳೂರು : ಮುದ್ದಾದ ಹೆಂಡತಿಯಿದ್ದರು ಸಹ ಆತನಿಗೆ ಬೇರೊಂದು ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತು. ಅಲ್ಲದೆ ಈ ವಿಷಯವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಸದ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನ ಅನುಷಾ ಎಂದು ತಿಳಿದುಬಂದಿದೆ. ಇನ್ನೂ ಪತಿ ಶ್ರೀಹರಿ ತನ್ನ ಮೊಬೈಲ್ ನಲ್ಲಿ ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ. ಹೆಂಡತಿಯ ಎದುರಲ್ಲೇ ಇನ್ನೊಂದು ಹುಡುಗಿಯ ಜೊತೆ ಸಲುಗೆಯಿಂದ ಇರೋದಲ್ಲದೆ, ಬೇರೆ ಹೆಂಗಸರ ಜೊತೆ ಇದ್ದಿದ್ದನ್ನು ವಿಡಿಯೋ ಕಾಲ್‌ ಮಾಡಿಯೂ ತೋರಿಸ್ತಿದ್ದ. ಕೊನೆಗೆ ಗಂಡನ ವಿಪರೀತ ಟಾರ್ಚರ್‌ನಿಂದ ಬೇಸತ್ತ ಪತ್ನಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2 ದಿನಗಳ ಹಿಂದೆಯೇ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನುಶಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಶನಿವಾರ ಚಿಕಿತ್ಸೆ ಫಲಿಸದೆ ಆಕೆ ಸಾವು ಕಂಡಿದ್ದಾರೆ. ಅನುಶಾ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ…

Read More

ಬೆಂಗಳೂರು : ನಕಲಿ ಮದ್ಯ ತಯಾರಿಸುತ್ತಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡಹಳ್ಳಿ ಮತ್ತು ಪೀಣ್ಯದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಗೋದಾಮಿನಲ್ಲಿ ಇದ್ದಂತಹ 70 ಲಕ್ಷಕ್ಕೂ ಹೆಚ್ಚು ಮೌಲ್ಯದವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ದಾಳಿಯ ವೇಳೆ ರವಿ ಅಲಿಯಾಸ್ ಮರಿರಾಜ, ಕೇಶವಮೂರ್ತಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾದನಾಯಕನಹಳ್ಳಿ ಪೊಲೀಸರು ದಾಳಿ ಮಾಡಿದ್ದಾರೆ. ನಕಲಿ ಮದ್ಯಕ್ಕೆ ಅಮಲು ಬರುವ ಪದಾರ್ಥ ಮತ್ತು ಬಣ್ಣ ಮಿಶ್ರಣ ಮಾಡಿ ಬಾಟಲಿಗೆ ನಕಲಿ ಮದ್ಯ ತುಂಬಿ ದುಬಾರಿ ಬ್ರಾಂಡ್ ಲೇಬಲ್ ಅನ್ನು ಅಂಟಿಸುತ್ತಿದ್ದರು. ಗಂಗೊಂಡಹಳ್ಳಿಯಲ್ಲಿ 90 ಬ್ಯಾರೆಲ್ ನಲ್ಲಿದ್ದ 4260 ಲೀಟರ್ ಮದ್ಯವನ್ನ ಜಪ್ತಿ ಮಾಡಿದ್ದು, ಪೀಣ್ಯದಲ್ಲಿ 104 ಬ್ಯಾರಲ್ ಗಳಲ್ಲಿದ್ದ 5616 ಲೀಟರ್ ನಕಲಿ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ತಮಿಳುನಾಡು ಸೇರಿ ಕರ್ನಾಟಕದ ಹಲವಡೆ ಹಣ ಸಂಪಾದನೆಗೆ ಈ ಕೃತ್ಯ ಎಸೆಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಅನುಮಾನ ಬಾರದಂತೆ ಗೋದಾ ಮಿಗೆ ಪೊಲೀಸ್ ಬೋರ್ಡ್…

Read More

ತುಮಕೂರು: ಇಂದು ರಾಜ್ಯಾದ್ಯಂತ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮ ಸಡಗರ ತುಂಬಿತ್ತು. ಆದರೆ ತುಮಕೂರಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೋಷಕರೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದ 22 ನೇ ವಾರ್ಡ್ ನಲ್ಲಿ ನಡೆದಿದೆ. ಹಾವು ಕಡಿದು ಸಾವನ್ನಪ್ಪಿರುವ ಬಾಲಕಿಯನ್ನು ಸ್ಪಂದನ (13) ಎಂದು ತಿಳಿದುಬಂದಿದೆ. ಈಕೆ 22ನೇ ವಾರ್ಡ್‌ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮ್ಯಾನ್ ಕುಮಾ‌ರ್ ಮಗಳು ಎನ್ನಲಾಗಿದೆ. ಮೃ ಬಾಲಕಿ ಕುಣಿಗಲ್ ಪಟ್ಟಣದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದಳು ಎನ್ನಲಾಗುತ್ತಿದೆ. ಇಂದು ಗೌರಿ-ಗಣೇಶ ಹಬ್ಬ ಹಿನ್ನಲೆಯಲ್ಲಿ ಕುಟುಂಬದವರ ಜೊತೆ ಕುಣಿಗಲ್ ಪಟ್ಟಣದ ಮುಳಕಟ್ಟಮ್ಮ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ, ದೇವಾಲಯದ ಆವರಣದಲ್ಲಿದ್ದ ವಿಶ್ರಾಂತಿ ಪಡೆಯುವ ಚೇ‌ರ್ ಮೇಲೆ ಕುಳಿತಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದಾಳೆ. ಹಾವು ಕಡಿದಿದ್ದನ್ನ ಗಮನಿಸದ ಬಾಲಕಿ, ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದಾಳೆ. ನಂತರ ತೀವ್ರ…

Read More

ಧಾರವಾಡ : ಧಾರವಾಡದಲ್ಲಿ ಕಾಡಿನಿಂದ ನಾಡಿಗೆ ಆಗಾಗ ಕಾಡು ಪ್ರಾಣಿಗಳು ಬಂದು ಜನರಲ್ಲಿ ಆತಂಕ ಮೂಡಿಸುತ್ತವೆ ಇದೀಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಒಂದು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಹೌದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯು, ನಂತರ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕ್ಯಾಂಪಸ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ತೆರಳುತ್ತಿರುವ ದೃಶ್ಯ ಇದೀಗ ಸೆರೆಯಾಗಿದೆ. ಇದರಿಂದ ಸಹಜವಾಗಿ ಧಾರವಾಡದ ಜನತೆಗೆ ಆತಂಕ ಹೆಚ್ಚಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದರು. ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಆರೋಪ ಪಟ್ಟಿ ಪರಿಶೀಲನೆ ಪೂರ್ಣಗೊಳಿಸಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಪಟ್ಟಿ ಪರಿಶೀಲನೆ ಪೂರ್ಣ ವಾಗಿದ್ದು, ಕ್ರೈಂ ನಂಬರ್ ನಿಂದ ಸಿಸಿ ನಂಬರ್ ಗೆ ಕೇಸ್ ಬದಲಾವಣೆ ಮಾಡಲಾಗಿದೆ. ಸಿಸಿ ನಂಬರ್ 28777/2024 ಎಂದು 24ನೇ ACMM ಕೋರ್ಟ್ ದಾಖಲಿಸಿದೆ. ಸೆಪ್ಟೆಂಬರ್ 9 ರಂದು ದರ್ಶನ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ.ಅಂದು ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿಲಿರುವ ಕೋರ್ಟ್, ವಿಡಿಯೋ ಕಾನ್ಫರೆನ್ಸ್ ಮೂಲಕ ಅಂದು ಆರೋಪಿಗಳ ವಿಚಾರಣೆ ನಡೆಯಲಿದೆ.ಅಂದೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಪ್ರತಿ ಸಲ್ಲಿಸಲಾಗುತ್ತದೆ. ಕಳೆದ ಎರಡು ದಿನಗಳ ಹಿಂದೆ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಸುಮಾರು 3991 ಪುಟಗಳ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.…

Read More

ಚಿಕ್ಕಬಳ್ಳಾಪುರ : ಅವರಿಬ್ಬರೂ ಕಳೆದ ಹತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದನ್ನು ನೋಡಿ, ಆಕೆಯ ಪ್ರಿಯಕರ ಯುವತಿಯ ಗಂಡನಿಂದ ಡೈವೋರ್ಸ್ ಕೊಡಿಸಿ ಪ್ರಿಯತಮನೊಂದಿಗೆ ಸಂಸಾರ ಮಾಡಿದ್ದಾಳೆ. ಆದರೆ ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಇದೀಗ ಪ್ರಿಯತಮ ಕೈಕೊಟ್ಟು ಪರಾರಿಯಾಗಿದ್ದಾನೆ. ಹೌದು ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಹಮತ್ತುಲ್ಲ ಎನ್ನುವ ಯುವಕ, ಬಾಗೇಪಲ್ಲಿ ತಾಲೂಕಿನ ಚೆಂಡೂರು ಗ್ರಾಮದ ಯುವತಿಗೆ ಗಾಳ ಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರೀತಿ-ಪ್ರೇಮ, ಪ್ರಣಯ, ಲಿವಿಂಗ್ ವಿತ್ ರಿಲೇಶನ್ ಎಂದು ಮಾಡಿದ್ದಾನೆ. ಕೊನೆಗೆ ಮದುವೆಗೆ ನಿರಾಕರಿಸಿದ ಕಾರಣ ಯುವತಿ ಬೇರೆ ಮದುವೆ ಮಾಡಿಕೊಂಡಿದ್ದಳು. ಆದರೂ ಆಕೆಯನ್ನು ಬಿಡದೆ ಕೊನೆಗೆ ಹಾಗೊ ಹೀಗೋ ಮಾಡಿ ಆಕೆಗೆ ಆಕೆಯ ಗಂಡನ ಜೊತೆ ಡೈವೊರ್ಸ್ ಕೊಡಿಸಿದ್ದಾನೆ. ನಂತರ ಕಳೆದ 5 ವರ್ಷಗಳಿಂದ ಆಕೆಯ ಜೊತೆ ಸಂಸಾರ ಮಾಡಿದ್ದಾನೆ. ಆದ್ರೆ, ಈಗ ಹುಟ್ಟಿದ ಮಗು ಹೆಣ್ಣೆಂಬ ಕಾರಣ ನಂಬಿ…

Read More

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮುಡಾ ಹಗರಣವನು ಡೈವರ್ಟ್ ಮಾಡಲು ರೇಣುಕಾಸ್ವಾಮಿ ಕೊಲೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕೇಸ್ ಮುನ್ನೆಲೆಗೆ ತರಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ಪ್ರಕರಣ ರೆಟ್ರಿಟ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದರು. ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೆ ಸರಕಾರ ಎಂದು ಆರೋಪಿಸಿದರು. ರೇಣುಕಾ ಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆಯಾಗಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ದೊಡ್ಡ ಚರ್ಚೆಯಾಯಿತು. ಮುಡಾ ವಿಚಾರ ಡೈವರ್ಟ್ ಮಾಡಲು ದರ್ಶನ್ ಕೆಸ್ ಮುನ್ನೆಲೆಗೆ ತಂದರು. ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ. ಈಗಲೂ ಸಹ ಕ್ರೂರವಾಗಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆ ಆಗಬೇಕು. ರೀಟ್ರಿವ್ ಮಾಡಿರುವ…

Read More