Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಈ ಒಂದು ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿಯಲ್ಲೇ ಬಣ ಬಡಿದಾಟ ಶುರುವಾಗಿದೆ. ಒಂದು ಕಡೆ ಬಿವೈ ವಿಜಯೇಂದ್ರ ಹಾಗೂ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವೇ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಬಳಿಕ ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ಅವರು ವಿಶ್ವಾಸವನ್ನು ವ್ಯಕ್ತಪಡಿಸಿದರು. ಈ ಒಂದು ಹೇಳಿಕೆಯ ಮೂಲಕ ತಮ್ಮ ವಿರುದ್ಧ ತಿರುಗಿಬಿದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ನೇರವಾಗಿ ತಿರುಗೇಟು ನೀಡಿದ್ದಾರೆ. ಇನ್ನು ಶಾಸಕ ಯತ್ನಾಳ್ ಅವರು ಬಿ ವೈ ವಿಜಯೇಂದ್ರ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಪಕ್ಷ ವಿರೋಧಿ ಕೆಲಸ ಮಾಡಿರುವವರನ್ನೇ ಇದೀಗ ಜಿಲ್ಲಾಧ್ಯಕ್ಷರನ್ನು…
ಬೆಂಗಳೂರು : 16 ವರ್ಷದ ಬಾಲಕಿ ಮೇಲೆ ಪಾಪಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ಇದೀಗ 26 ವಾರಗಳ ಗರ್ಭ ಧರಿಸಿದ್ದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದೆ.ಅಲ್ಲದೇ ಅಪ್ರಾಪ್ತೆಯ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದ್ದರೆ ಗರ್ಭಪಾತ ಮಾಡಬೇಕೇ, ಬೇಡವೇ ಎಂಬುದನ್ನು ವೈದ್ಯರು ನಿರ್ಧರಿಸಬಹುದು ಎಂದು ಹೈಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಅವರ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ನ್ಯಾಯಪೀಠ ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆದ ನಂತರ ಈ ಆನುಮತಿ ನೀಡಿದೆ. ಅಪ್ರಾಪ್ತೆಗೆ ವೈದ್ಯಕೀಯ ಗರ್ಭಪಾತ ನಿಯಮಗಳು 1971 ಆಸ್ಪತ್ರೆಯ ವೆಚ್ಚದಲ್ಲಿ ಗರ್ಭಪಾತ ಪ್ರಕ್ರಿಯೆ ಸರ್ಕಾರಿ ವೆಚ್ಚದಲ್ಲಿ ನಡೆಸಬೇಕು. ಅಲ್ಲದೇ, ಚಿಕಿತ್ಸೆಗಾಗಿ ಸಂತ್ರಸ್ತೆ ಮತ್ತವರ ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು ಮತ್ತು ಅಲ್ಲಿಂದ ಮನೆಗೆ ಕರೆದುಕೊಂಡು ಬರುವುದು ಹಾಗೂ ಹೆಚ್ಚುವರಿ ಚಿಕಿತ್ಸೆಗಾಗಿ ಮತ್ತೊಂದೆಡೆ ಹೋಗಬೇಕಾದರೂ ಸ್ಥಳೀಯ ಪೊಲೀಸ್ ಠಾಣೆಯಿಂದ ಉಚಿತವಾಗಿ ವಾಹನವನ್ನು ವ್ಯವಸ್ಥೆ ಮಾಡಬೇಕು. ಆದೇಶಕ್ಕೆ ಸಂಬಂಧಿಸಿದಂತೆ ಮುಂದಿನ ಎರಡು ವಾರಗಳಲ್ಲಿ ವಸ್ತುಸ್ಥಿತಿ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಭೀಕರ ಮರ್ಡರ್ ಆಗಿದ್ದು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನನ್ನು ಭೀಕರವಾಗಿ ಕೊಲೆಗೈದ ಬಳಿಕ ದುಷ್ಕರ್ಮಿಗಳು ಶವವನ್ನು ಚರಂಡಿಯಲ್ಲಿ ಬಿಸಾಕಿ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಮರಸನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಗೈದು ಚರಂಡಿಯಲ್ಲಿ ಬಿಸಾಕಿದ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನ ಬರ್ಬರ ಹತ್ಯೆ ಚಿಕ್ಕಬಳ್ಳಾಪುರ ಮರಸನಹಳ್ಳಿಯಲ್ಲಿ ಒಂದು ಘಟನೆ ನಡೆದಿದೆ ಹಾರೋಬಂಡೆ ಗ್ರಾಮದ ಮಾರುತೇಶ್ (30) ಎನ್ನುವ ಯುವಕನನ್ನು ಬರ್ಬರವಾಗಿ ಕೊಲೆಮಾಡಲಾಗಿದೆ. ಕೊಲೆಯಾದಂತಹ ಮಾರುತೇಶ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಎನ್ನಲಾಗುತ್ತಿದೆ. ಇದೀಗ ಈತನ ಶವ ಚರಂಡಿಯಲ್ಲಿ ಪತ್ತೆಯಾಗಿದೆ. ಸದ್ಯ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ಇದೀಗ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ನಾಡಕಚೇರಿಯ ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಹೌದು ವಿಜಯಪುರ ಪಟ್ಟಣದಲ್ಲಿ ನಾಡಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗೌತಮ್ ಎನ್ನುವವರ ಬಳಿ ಜಮೀನು ಪೌತಿ ಖಾತೆ ಪೋಡಿ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಎಳುವಳ್ಳಿ ಗ್ರಾಮಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮಲೆಕ್ಕಾಧಿಕಾರಿ ಸುನಿಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಆರ್ಐ ಸತ್ಯನಾರಾಯಣ, ಮಡಿವಾಳಪ್ಪ ಮತ್ತು ಸುನಿಲ್ ಎನ್ನುವ ವ್ಯಕ್ತಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ದಾಳಿ ಬಳಿಕ ವಿಜಯಪುರ ಆರ್…
ರಾಯಚೂರು : ನಿಯಂತ್ರಣ ತಪ್ಪಿ ಮಿಥೇನ್ ಆಯಿಲ್ ಸೋರುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿರುವ ಘಟನೆ ರಾಯಚೂರು ತಾಲೂಕಿನ ಗುಂಜಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ರಾಯಚೂರು ಮಂತ್ರಾಲಯ ಸಂಪರ್ಕಿಸುವ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಮಿಥೇನ್ ಆಯಿಲ್ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಾರಿ ಬ್ಲಾಸ್ಟ್ ಆಗೋ ಸಾಧ್ಯತೆ ಇದ್ದು, ಆತಂಕ ಎದುರಾಗಿದೆ.ಹಾಗಾಗಿ ರಾಯಚೂರು ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಪರ್ಯಾಯ ಮಾರ್ಗದ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸದ್ಯ ಅಗ್ನಿಶಾಮಕದಳ ಮತ್ತು ಪೊಲೀಸರು, ನೀರಿನೊಂದಿಗೆ ಅಪಾಯಕಾರಿ ಮಿಥೇನ್ಆಯಿಲ್ ಮಿಶ್ರಣ ಮಾಡಿ, ಟ್ಯಾಂಕರ್ ಖಾಲಿ ಮಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ತಡೆಯುವ ಆಗಮಿಸಿದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ.
ತುಮಕೂರು : ತುಮಕೂರಿನಲ್ಲಿ ಬೆಚ್ಚಿ ಬೆಳೆಸುವ ಘಟನೆ ನಡೆದಿದ್ದು, ಜುವೆಲ್ಲರೀ ಶಾಪ್ ಮಾಲೀಕನೊಬ್ಬ ಸುಮಾರು 100ಕ್ಕೂ ಹೆಚ್ಚು ಜನರ ಬಳಿ ಹಣ ಪಡೆದು 30 ಕೋಟಿಯೊಂದಿಗೆ ಕುಟುಂಬ ಸಮೇತ ಪರಾರಿಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ತುಮಕೂರಿನ ಜುವೆಲ್ಲರೀ ಶಾಪ್ ಮಾಲೀಕನ ಈ ಒಂದು ಮಹಾ ಮೋಸ ಬೆಳಕಿಗೆ ಬಂದಿದೆ. 30 ಕೋಟಿ ಹಣ ಪಡೆದು ಕುಟುಂಬ ಸಮೇತ ಇದೀಗ ಜುವೆಲ್ಲರಿ ಮಾಲೀಕ ಪರಾರಿಯಾಗಿದ್ದಾನೆ. ಸುಮಾರು 100ಕ್ಕೂ ಹೆಚ್ಚು ಮಂದಿಗೆ ಶಿವಾನಂದ ಮೂರ್ತಿ ಎನ್ನುವ ವ್ಯಕ್ತಿ ವಂಚಿಸಿದ್ದಾನೆ. ವಂಚನೆ ಎಸಗಿದವನನ್ನು ಆಕಾಶ ಜುವೆನರಿ ಶಾಪ್ ಮಾಲೀಕ ಶಿವಾನಂದಮೂರ್ತಿ ಎಂದು ತಿಳಿದುಬಂದಿದೆ. ತುಮಕೂರಿನ ಸರ್ಕಾರಿ ಬಸ್ ನಿಲ್ದಾಣದ ಎದುರುಗಡೆ ಜಿಎಂಎಸ್ ಕಾಂಪ್ಲೇಂಕ್ಸ್ ನಲ್ಲಿ ಜುವೆಲ್ಲರೀ ಶಾಪ್ ಹೊಂದಿದ್ದ ಶಿವಾನಂದಮೂರ್ತಿ, ಚೀಟಿ ವ್ಯವಹಾರವನ್ನು ಕೂಡ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಆಕಾಶ ಸಹಾಕಾರಿ ಕೋ ಆಪರೇಟಿವ್ ಸೊಸೈಟಿ ಆರಂಭ ಮಾಡಿದ್ದ. ನೂರಾರು ಜನರ ಶೇರ್ ಹಣ ಸಂಗ್ರಹಿಸಿದ ಶಿವಾನಂದ ಮೂರ್ತಿ ಸೊಸೈಟಿ ಹಣ ಹೊಡೆದುಕೊಂಡು…
ಬೆಂಗಳೂರು : ಬೆಂಗಳೂರಲ್ಲಿ ಇಂದು ಮತ್ತೊಂದು ಭೀಕರ ವಾದಂತಹ ಅಪಘಾತ ಸಂಭವಿಸಿದ್ದು ವೇಗವಾಗಿ ಬಂದಂತಹ ಲಾರಿ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು, ಆತನ ದೇಹ ಛಿದ್ರ ಛಿದ್ರವಾಗಿದೆ. ಇನ್ನೊರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ. ಹೌದು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ದೇಹ ನುಜ್ಜು ಗುಜ್ಜಾಗಿದೆ. ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ದೇವನಹಳ್ಳಿ ಕನ್ನಮಂಗಲ ಪಾಳ್ಯ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದು ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಒಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ. ಇನ್ನೊಂದು ಕಡೆ ಕೈಸಾಲ ಪಡೆದು ಬಳಿಕ ಸಾಲಗಾರರ ಕಿರುಕುಳ ತಾಳಲಾರದೆ ಹಲವರು ಆತ್ಮತೆಗೆ ಶರಣಾಗುತ್ತಿದ್ದಾರೆ. ಇದೀಗ ಶಿವಮೊಗ್ಗದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕೊಂಡು ಪ್ರಶಾಂತ (32) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪೆಟ್ರೋಲ್ ಸುರದುಕೊಂಡು ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಪ್ರಶಾಂತ್ ವರ್ಷದ ಹಿಂದೆ ಪತ್ನಿಯಿಂದ ಡಿವೋಸ್ ಪಡೆದಿದ್ದರು.ಇದೀಗ ಸಾಲಗಾರರ ಕಾಟ ತಾಳಲಾರದೆ ಪ್ರಶಾಂತ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.
ಚಿತ್ರದುರ್ಗ : ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ದುರಂತ ಸಂಭವಿಸಿತು. ಈ ಒಂದು ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ನಾಲ್ವರು ಸಾವನ್ನಪ್ಪಿದ್ದರು ಇದೀಗ ಚಿತ್ರದುರ್ಗ ಜಿಲ್ಲೆಯ ನಾಗಾಸಾಧು ಒಬ್ಬರು ಈ ಒಂದು ಕಾಲ್ತುಳಿತದಲ್ಲಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಹೌದು ಕಾಲ್ತುಳಿತದಿಂದ ನಾಗ ಸಾಧು ರಾಜನಾಥ್ ಮಹಾರಾಜ್ (49) ಎನ್ನುವವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ಚಿತ್ರದುರ್ಗದ ಬಂಡಾರ ಗುರುಪೀಠದ ನಿಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಕಳೆದ 7 ವರ್ಷಗಳಿಂದ ಬಂಜಾರ ಗುರು ಪೀಠದಲ್ಲಿ ಈ ಒಂದು ನಾಗಸಾಧು ನೆಲ್ಲಿಸಿದ್ದರು.15 ದಿನದ ಕುಂಭಮೇಳಕ್ಕೆ ರಾಜನಾಥ ಮಹಾರಾಜ್ ತೆರಳಿದ್ದರು. ಆದರೆ ಕಾಲ್ತುಳಿತದಲ್ಲಿ ಅವರು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನು ಚಿತ್ರದುರ್ಗಕ್ಕೆ ನಾಗಸಾಧು ಪಾರ್ಥಿವ ಶರೀರ ತರಿಸಲು ಮನವಿ ಮಾಡಿಕೊಳ್ಳಲಾಗಿದ್ದು, ಚಿತ್ರದುರ್ಗದಲ್ಲಿ ಸರ್ದಾರ್ ಸೇವಾಲಾಲ್ ಸ್ವಾಮೀಜಿ ನಾಗಸಾಧು ರಾಜನಾಥ್ ಪಾರ್ಥಿವ ಶರೀರ ತರಿಸಲು ಮನವಿ ಮಾಡಿಕೊಂಡಿದ್ದಾರೆ.ಚಿತ್ರದುರ್ಗದ ಲಂಬಾಣಿ ಸೇವಾಲಾಲ್ ಗುರುಪೀಠದ ಪೀಠಾಧಿಪತಿಯಾಗಿರುವ ಅವರಿಗೆ ಪಾರ್ಥಿವ ಶರೀರ ತರಲು ಸರ್ಕಾರ…
ಬೆಂಗಳೂರು : ನಿನ್ನೆ ಬಿಜೆಪಿಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದವರ ಪಟ್ಟಿ ಬಿಡುಗಡೆ ಮಾಡಿದ್ದು, ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಪಕ್ಷದ ವಿರುದ್ಧವಾಗಿ ಯಾರು ಕೆಲಸ ಮಾಡಿದ್ದರು ಅಂತಹವರಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು. ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯಾಧ್ಯಕ್ಷರಾಗಲು ಬೇಕಾದವರನ್ನು ಜಿಲ್ಲಾಧ್ಯಕ್ಷ ಮಾಡಿದ್ದಾರೆ. ನಾಯಕ ಅಂದರೆ ಒಂದು ಗುಂಪಿನ ನಾಯಕ ಅಲ್ಲ ಒಂದು ಪಕ್ಷದ ನಾಯಕ ಆಗಿರಬೇಕು. ದಾವಣಗೆರೆ ಬೀದರ್ ನಲ್ಲಿ ಚುನಾವಣೆಯಲ್ಲಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ಇದೀಗ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಬಹಳ ಆತಂಕ ಕಾರಿ ಆಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ತಿಳಿಸಿದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಬಗ್ಗೆ ಚರ್ಚಿಸುತ್ತೇವೆ. ಯಾರನ್ನು ಅಭ್ಯರ್ತಿ ಮಾಡಬೇಕು ಎಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಎರಡು ದಿನ ವಿಸ್ತೃತ ಚರ್ಚೆ ಮಾಡಿ…









