Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 20 ರಂದು ಅಂದರೆ ನಾಳೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಯಾವ್ಯಾವ ಪ್ರದೇಶಗಳು? ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದಶð ಅಪಾಟ್ðಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ ಪ್ರಮೋಟ್, ಸಪ್ತಗಿರಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ನವದೆಹಲಿ : ಮಲಯಾಳಂ ನಟ ಸಿದ್ದೀಕ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಿದ್ದಿಕ್ ಗೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹೌದು ಮಲಯಾಳಂ ನಟ ಸಿದ್ದಿಕ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಿರುವನಂತಪುರಂ ನಲ್ಲಿ ಅತ್ಯಾಚಾರ ಎಸೆಗಿದ್ದ ಆರೋಪದ ಅಡಿ ಪ್ರಕರಣ ದಾಖಲಾಗಿತ್ತು. ಮಹಿಳೆ ಒಬ್ಬರು ನಟ ಸಿದ್ದಿಕ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದರು. ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಿದ್ಧಿಕ್ ಅಭಿನಯಿಸಿದ್ದಾರೆ. ಅಲ್ಲದೆ ನ್ಯಾ. ಹೇಮಾ ಸಮಿತಿ ವರದಿಯಲ್ಲೂ ಅತ್ಯಾಚಾರದ ಆರೋಪವಿತ್ತು.
BIG NEWS : ರಾಜ್ಯದ ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ‘ಸುಳ್ಳು ಜಾಹೀರಾತು’ ಕ್ರಮಕ್ಕೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಮಹಾರಾಷ್ಟ್ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ ಬಳಿಕ ಬಿಜೆಪಿಯವರು, ‘ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಂಡಿಲ್ಲ. ಮಹಾರಾಷ್ಟ್ರದಲ್ಲಿಯೂ ಅನುಷ್ಟಾನವಾಗುವುದಿಲ್ಲ’ ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ. ಇದಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಲಾಗಿದೆ ಎಂದರು. ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್ನಲ್ಲಿ 56 ಸಾವಿರ ಕೋಟಿ ರೂ. ಮೀಸಲಿಟ್ಟು, ಸಂಪೂರ್ಣವಾಗಿ ಅನುಷ್ಟಾನಗೊಳಿಸಿದೆ. ಇದಕ್ಕೆ ವಿರುದ್ಧವಾಗಿ ಇಡೀ ದೇಶದಲ್ಲಿ ಕರ್ನಾಟಕದ ಬಗ್ಗೆ ಅವಮಾನ ಆಗುವ ರೀತಿಯಲ್ಲಿ ಜಾಹೀರಾತು ಪ್ರಕಟಿಸಿದ್ದಾರೆ ಎಂದರೆ ನಾವು ಖಂಡಿತವಾಗಿ ಸಹಿಸುವುದಿಲ್ಲ. ಸಂಬಂಧಪಟ್ಟ ಐದು ಇಲಾಖೆಗಳು ಜಾಹೀರಾತು ನೀಡಿದವರ ಮೇಲೆ ಕ್ರಮ ತೆಗೆದುಕೊಳ್ಳಲು ದೂರು…
ಬೆಂಗಳೂರು : ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿನಿಮಾ ನಟ ತಾಂಡವ್ ರಾಮ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ನಿರ್ದೇಶಕನಿಗೆ ಬೆದರಿಕೆ ಹಾಕಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಲೈಸೆನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ್ದು, ಒಂದು ಸುತ್ತು ಗುಂಡು ಸಹ ತಾಂಡವ ರಾಮ್ ಹಾರಿಸಿದ್ದ ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ರಾಮ್. ಸಿನಿಮಾ ಅರ್ಧಕ್ಕೆ ನಿಲ್ಲಿಸಿದ ಕಾರಣಕ್ಕೆ ಗಲಾಟೆ ವೇಳೆ ಹತ್ಯೆಗೆ ಯತ್ನಿಸಿದ್ದಾರೆ. ಚಂದ್ರ ಲೇಔಟ್ ಆಣೆ ಪೊಲೀಸ್ ರಿಂದ ತಾಂಡವ ರಾಮ್ ಬಂಧನವಾಗಿದ್ದು, ಜೋಡಿಹಕ್ಕಿ, ಭೂಮಿಗೆ ಬಂದ ಭಗವಂತ ಧಾರಾವಾಹಿಯಲ್ಲಿ ತಾಂಡಾವ್ ರಾಮ್ ನಟಿಸಿದ್ದ. ಸದ್ಯ ಕೊಲೆ ಯತ್ನ ಪ್ರಕರಣದಲ್ಲಿ ತಾಂಡವ ರಾಮ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಇತ್ತೀಚಿಗೆ ನಟ ದರ್ಶನ್ ಬಳ್ಳಾರಿ ಜೈಲಿಂದ ಬಿಡುಗಡೆಯಾಗಿದ್ದರು.ಇದೀಗ ಪೊಲೀಸರು ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪಿ ದರ್ಶನ್ಗೆ ಜಾಮೀನು ಮಂಜೂರು ವಿಚಾರವಾಗಿ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನ ವಿಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮೇಲ್ಮನವಿ ಸಲ್ಲಿಸಲು ಈಗಾಗಲೇ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ನಟ ದರ್ಶನ್ ಎರಡು ದಿನ ಪತ್ನಿ ಮಗ ಹಾಗೂ ಕುಟುಂಬದ ಜೊತೆಗೆ ಕಾಲ ಕಳೆದರು. ನಂತರ ನೇರವಾಗಿ ಬೆಂಗಳೂರಿನ ಕೆಂಗೇರಿ ಬಳಿ ಇರುವ…
ಬೆಂಗಳೂರು : ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸಾವನ್ನಪ್ಪಿದ್ದರೆ. M ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದ ಜೀವನ್ ಹಾಗೂ ಆದಿತ್ಯ ಮೃತಪಟ್ಟ ಬೈಕ್ ಸವಾರರು ಎನ್ನಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು : ಚಿಕ್ಕಮಗಳೂರು ಭಾಗದಲ್ಲಿ ನಕ್ಸಲ ಚಟುವಟಿಕೆ ಹಿನ್ನೆಲೆಯಲ್ಲಿ ಇಂದು ಪೊಲೀಸರು ಹಾಗೂ ನಕ್ಸಲ್ ವಿಕ್ರಂ ಗೌಡ ಮಧ್ಯ ಗುಂಡಿನ ಚಿಕಮಕಿ ನಡೆದಿದ್ದು ಇದರಲ್ಲಿ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿದೆ ಆದರೆ ಅವರ ಜೊತೆಗಿದ್ದ ಮೂವರು ಪರಾರಿ ಯಾಗಿದ್ದು ಇದೀಗ ಗುಂಡಗಾರು ಲತಾ ಜಯಣ್ಣ ಸೇರಿದಂತೆ ಮೂವರ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಮುಂಡಗಾರು ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಕೇಸ್ ದಾಖಲಾಗಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಇದೀಗ ಮೂವರ ವಿರುದ್ಧ FIR ದಾಖಲಾಗಿದೆ. UAPA 1967 ಅಡಿ 329 (4) 351(2) 61(2) 147 BNS 25 B ಶಾಸ್ತ್ರಸ್ತ್ರ ಕಾಯಿದೆ 110, 13, 16,18, 20 38ರ ಅಡಿ ಪ್ರಕರಣ ದಾಖಲಾಗಿದೆ. ನಕ್ಸಲರು ಪ್ರಯಾರಿಯಾದ ಸ್ಥಳದಲ್ಲಿ ಶಾಸ್ತ್ರಸ್ತ್ರ, ಮೂರು ಎಸ್ ಬಿ ಎಂ ಎಲ್ ಬಂದೂಕು ಹಾಗೂ ಮದ್ದು ಗುಂಡುಗಳು ಪತ್ತೆಯಾಗಿದ್ದವು. ಮುಂಡಗಾರು ಲತಾ ಮತ್ತು ತಂಡ ಸುಬ್ಬೆಗೌಡ ಮನೆಗೆ ಭೇಟಿ ನೀಡಿತ್ತು.…
ಬೆಂಗಳೂರು : ಮಹಾರಾಷ್ಟ್ರದ ಚುನಾವಣೆ ಹಿನ್ನೆಲೆಯಲ್ಲಿ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿನ್ನೆ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಭಾರತದ ರಾಜಕೀಯದಲ್ಲಿ ಅತ್ಯಂತ ಅಪಾಯಕಾರಿ ಏನಾದರೂ ಇದ್ದರೆ ಅದು ಬಿಜೆಪಿ ಮತ್ತು ಆರ್ಎಸ್ಎಸ್ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗಾಗಲೇ ದೇಶದ ಜನತೆ ಕಾಂಗ್ರೆಸ್ ಘಟಸರ್ಪದ ಹಲ್ಲನ್ನು ಕಿತ್ತೇಸಿದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಟ್ವೀಟ್ ನಲ್ಲಿ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾನ್ಯ @kharge ಅವರೇ,ನಿಮ್ಮ ಹಿರಿತನದ ಬಗ್ಗೆ ಗೌರವ ಇದ್ದೇ ಇದೆ, ಆದರೆ ನಿಮ್ಮ ಬಾಯಿಂದ ಹೊರಡುವ ನಂಜುಕಾರುವ ದ್ವೇಷದ ಮಾತುಗಳನ್ನು ಒಪ್ಪಲಾರೆವು. ಕೋಟಿ,ಕೋಟಿ ಜನರ ಹೋರಾಟ, ತ್ಯಾಗ- ಬಲಿದಾನದ ಫಲವಾಗಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿಕೊಂಡ ಸ್ವಾತಂತ್ರ್ಯವನ್ನು ನೆಹರೂ ಕುಟುಂಬ ತನ್ನ ಮುಷ್ಟಿಯಲ್ಲಿ ಹಿಡಿದಿಟ್ಟುಕೊಂಡು ಪ್ರಜಾಪ್ರಭುತ್ವದೊಂದಿಗೆ ಚೆಲ್ಲಾಟವಾಡಿ, ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕಲು ‘ತುರ್ತು ಪರಿಸ್ಥಿತಿ ಎಂಬ ವಿಷಕಾರಿ ಅಣ್ವಸ್ತ್ರ’ವನ್ನು ದೇಶದ ಮೇಲೆ ಬಳಸಿದ್ದು ನಿಮ್ಮ @INCIndia ಎಂಬುದನ್ನು ಇಷ್ಟು ಬೇಗ…
ಶಿವಮೊಗ್ಗ : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು ನ.11 ರಿಂದ ನ.16ರ ವರೆಗೆ ವಿನಿಮಯ ಕಾರ್ಯಕ್ರಮ ನಡೆಸಲಾಗಿದೆ. ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಮಾರ್ಶ್ ಕ್ರೋಕಡೈಲ್, ಸ್ಟ್ರೀಪಿಡ್ ಹೈನಾ, ಇಂಡಿಯನ್ ಗೋಲ್ಡನ್ ಜಾಕಲ್, ಏ಼ಷೀಯನ್ ಪ್ಲಾಮ್ ಸಿವೀಟ್ ಪ್ರಾಣಿಗಳು ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ಗೆ ಕಳುಹಿಸಲಾಗಿದೆ.ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ನಿಂದ ಘಾರಿಯಾಲ, ಲೇಸ್ಸರ್ ರೀಹಾ, ಸ್ಟ್ರೀಪಿಡ್ ಹೈನಾ, ಇಂಡಿಯನ್ ಕ್ರೈಸ್ಟೇಡ್ ಪೋರ್ಕಪೈನ್, ಸನ್ ಕೌನ್ಸರ್ ಪ್ರಾಣಿಗಳನ್ನು ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ತರಲಾಗಿದೆ. ಹುಲಿ-ಸಿಂಹಧಾಮ ತ್ಯಾವರೆಕೊಪ್ಪ ಮೃಗಾಲಯಕ್ಕೆ ಘಾರಿಯಾಲ ಸೇರ್ಪಡೆಗೊಂಡಿದ್ದು ಹಾಗೂ ಪ್ರಥಮ ಬಾರಿ ಮೃಗಾಲಯಕ್ಕೆ ತೀವ್ರವಾಗಿ ಅಳಿವಿನಂಚಿನಲ್ಲಿರುವ ಜಾತಿ ಸಂರಕ್ಷಣೆಯ ಬಗ್ಗೆ ಪ್ರಕೃತಿ ಶಿಕ್ಷಣ ನೀಡಲು ಈ ಪ್ರಭೇದದಿಂದ ಸಹಾಯಕವಾಗಲಿದೆ. ಪ್ರಥಮ ಬಾರಿ ಮೃಗಾಲಯಕ್ಕೆ ಸೌತ್ ಆಫ್ರೀಕನ್ಕ್ಕೆ ಸಂಬಂಧಿಸಿದ ಪಕ್ಷಿಗಳ ಪ್ರಭೇದವಾದ ಲೇಸ್ಸರ್ ರೀಹಾ ಮತ್ತು ಸನ್ ಕೌನ್ಸರ್ ಸೇರ್ಪಡೆಯಾಗಿರುತ್ತವೆ. ಭಾರತೀಯ ಕ್ರೆಸ್ಟೆಡ್ ಮುಳ್ಳುಹಂದಿ ಬಹುದಿನಗಳ ನಂತರ ಹುಲಿ-ಸಿಂಹಧಾಮ ತ್ಯಾವರೆಕೊಪ್ಪ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ಲೋಕಾಯುಕ್ತ ವಿಚಾರಣೆಗೆ ಹಾಜರಾದರು. ನಿನ್ನೆ ಲೋಕಾಯುಕ್ತ ಎಸ್ ಪಿ ಟಿಜೆ ಉದೇಶ್ ರವರು ವಿಚಾರಣೆಗೆ ಹಾಜರಾಗುವಂತೆ ನಟೇಶ್ ಗೆ ನೋಟಿಸ್ ಜಾರಿ ಮಾಡಿದ್ದರು. ಹಾಗಾಗಿ ಇಂದು ನಟೇಶ್ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಮೈಸೂರಿನಲ್ಲಿ ವಿಚಾರಣೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿತ್ತು ಲೋಕಾಯುಕ್ತ ನೋಟಿಸ್ ನೀಡಿದರಿಂದ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾದಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬದರಿ ನಿವೇಶನ ನೀಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಟೇಶ್ ವಿಚಾರಣೆಗಾಗಿ ಲೋಕಾಯುಕ್ತ ಮುಖ್ಯ ಕಾರ್ಯದರ್ಶಿಗಳ ಅನುಮತಿಯನ್ನು ಕೋರಿದ್ದರು. ಕಳೆದ ಎರಡು ದಿನಗಳ ಹಿಂದೆ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟೇಶ್ ಇಂದು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.














