Author: kannadanewsnow05

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೊನೆಗೂ ಸಿದ್ಧಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ತನಿಖಾ ವರದಿಯಲ್ಲಿ 550 ಪುಟಗಳನ್ನು 5 ಭಾಗವಾಗಿ ವಿಂಗಡನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ದೇವರಾಜುಗೆ ಹೇಗೆ ಜಮೀನು ನೀಡಲಾಯಿತು. ಜಮೀನಿನ ಡಿನೋಟಿಫಿಕೇಶನ್ ಹೇಗೆ ಆಯಿತು, ಭೂ ಪರಿವರ್ತನೆ ಹೇಗೆ ಆಯಿತು ಎನ್ನುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಸಿಎಂ ಪತ್ನಿ ಪಾರ್ವತಿಗೆ ಜಮೀನು ನೀಡಿರುವ ಕುರಿತು ಸಿಎಂ ಹಾಗೂ ಕುಟುಂಬದ ಬಗ್ಗೆ ಇರುವ ದಾಖಲೆಗಳು ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಂದ ಮಾಹಿತಿ ಸಂಗ್ರಹವಾಗಿದೆ. ವಿಚಾರಣೆ ಮಾಡಿ ಲೋಕಾಯುಕ್ತ ಪೊಲೀಸರು ಇದೀಗ ಮಾಹಿತಿಗಳನ್ನು ಕಲೆಹಾಕಿದ್ದಾರೆ. ಮುಡಾದ ಮಾಜಿ ಆಯುಕ್ತ, ಮಾಜಿ ತಹಸೀಲ್ದಾರ್ ಹಾಗೂ ಅಧಿಕಾರಿಗಳ ಹೇಳಿಕೆಗಳನ್ನು ಕೂಡ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ಹೇಳಿಕೆ ಸೇರಿ ಎಲ್ಲವನ್ನು ಒಳಗೊಂಡಿರುವ ವರದಿ ಸಿದ್ದಪಡಿಸಿಕೊಂಡಿದ್ದಾರೆ. ಮುಡಾದಲ್ಲಿ ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಪರಿಹಾರವನ್ನು ನೀಡಿಲ್ಲ ಎನ್ನುವುದರ ಬಗ್ಗೆ ವರದಿಯಲ್ಲಿ…

Read More

ಉತ್ತರಪ್ರದೇಶ : ಎಲ್ಲರೂ ಮದುವೆ ಸಂಭ್ರಮದಲ್ಲಿ ಇರುವಾಗಲೇ ಮದುವೆ ಚೌಟ್ರಿಗೇ ಏಕಾಏಕಿ ಚಿರತೆಯೊಂದು ನುಗ್ಗಿದೆ. ಇದರಿಂದ ಸಹಜವಾಗಿ ಭೀತಿಗೆ ಒಳಗಾಗಿದ್ದ ಮದುವೆ ಬಂದಿದ್ದ ಜನ ಚಿರತೆಯನ್ನು ಕಂಡು ಹೌಹಾರಿದ್ದಾರೆ. ಈ ಒಂದು ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ. ಹೌದು ಮದುವೆ ಮನೆಗೆ ಏಕಾಏಕಿ ಚಿರತೆ ನುಗ್ಗಿದರೆ ಯಾರಿಗೆ ತಾನೇ ಭಯ ಆಗಲ್ಲ? ಮದುವೆ ಚೌಟ್ರಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜೀವ ಭಯದಿಂದ ಜನರು ಮದುವೆ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಜನರಿಗೆ ಚಿರತೆ ದಾಳಿ ಭೀತಿ ತಂದಿದೆ. ಕೂಡಲೇ ಅರಣ್ಯ ಇಲಾಖೆ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಮಧುಮಗಳನ್ನು ಸಂಬಂಧಿಕರು ಸುರಕ್ಷಿತವಾಗಿ ಕರೆದುಕೊಂಡು ಹೋಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿದೆ. ದಾಳಿ ಸಂದರ್ಭದಲ್ಲಿ ಚಿರತೆ ಗನ್ ಕಸಿದುಕೊಂಡಿದೆ ಕೊನೆಗೂ ಅರಣ್ಯ ಇರಲ್ಲ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿದಿದ್ದಾರೆ.

Read More

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಆಗಿದ್ದು, ಭೂ ಕುಸಿತದಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ಫೋಟದ ಸದ್ದು ಕೇಳಿ ಬಂದಿದೆ. ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಭೂ ಕುಸಿತದಿಂದ ಗುಡ್ಡ ಕುಸಿದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೊಡ್ಲಗದ್ದೆ ಗ್ರಾಮದಲ್ಲಿ ಗುಡ್ಡ ಕುಸಿತ ಪರಿಣಾಮ ತೋಟದಲ್ಲಿ ದೊಡ್ಡ ದೊಡ್ಡ ಪ್ರಮಾಣದ ಬಂಡೆಕಲ್ಲು ಮಣ್ಣು ಬಿದ್ದಿವೆ. ಕಳೆದ ಎರಡು ತಿಂಗಳ ಹಿಂದೆ ಇದೇ ಭಾಗದ ಸುತ್ತಲೂ ಭೂಮಿ ಕಂಪಿಸಿತ್ತು. ಘಟನಾ ಸ್ಥಳಕ್ಕೆ ತಜ್ಞರ ತಂಡ ಭೇಟಿ ನೀಡಿ ಭೂಕಂಪನ ಬಗ್ಗೆ ದೃಢೀಕರಿಸಿದ್ದರು. ಈ ಹಿಂದೆ ಯಲ್ಲಾಪುರ ಭಾಗದ ಕಳಚಿಯಲ್ಲಿ ಕೂಡ ಭೂಮಿ ಕುಸಿದಿತ್ತು. ಜಿಎಸ್ಐ ತಜ್ಞರ ವರದಿ ಪ್ರಕಾರ ಜಿಲ್ಲೆಯಲ್ಲಿ 439 ಭೂಕುಸಿತ ವಲಯಗಳಿವೆ ಎಂದು ತಿಳಿದುಬಂದಿದೆ. ಮಳೆ ನಿಂತರು ಕೂಡ ಭೂ ಕುಸಿತ ನಿಲ್ಲುತ್ತಿಲ್ಲ ಎಂದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.

Read More

ನವದೆಹಲಿ : RCB ತಂಡಕ್ಕೆ ಯಂಗ್ ಸ್ಟರ್ ರಜತ್ ಪಾಟೀದಾರ್ ಅವರನ್ನು ನೂತನ ನಾಯಕನಾಗಿ ಇದೀಗ ಫ್ರಾಂಚೈಸಿ ಆಯ್ಕೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದ ಫಾಫ್ ಡು ಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ಆಯ್ಕೆ ಪ್ರಕ್ರಿಯೆಯಲ್ಲಿ ವಿರಾಟ್ ಕೊಹ್ಲಿ ಅವರ ಹೆಸರು ಕೂಡ ಮುಂಚೂಣಿಯಲ್ಲಿತ್ತು. ಇದೀಗ ರಜತ್ ಪಟ್ಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಡೂ ಪ್ಲೇಸಿಸ್ ರಿಂದ ತರವಾಗಿದ ಸ್ಥಾನಕ್ಕೆ ರಜತ್ ಪಾಟೀದಾರ್ ಅವರು ನೇಮಕವಾಗಿದ್ದಾರೆ.ಆರ್ ಸಿ ಬಿ ತಂಡದ ನೂತನ ಕ್ಯಾಪ್ಟನ್ ಆಗಿ ರಜತ್ ಪಾಟೀದಾರ್ ಆಯ್ಕೆಯಾಗಿದ್ದಾರೆ. ಆರ್ ಸಿ ಬಿ ತಂಡವನ್ನು ರಜತ ಪಾಟೀದಾರ್ ಮುನ್ನಡೆಸಲಿದ್ದಾರೆ. ನೂತನ ಕ್ಯಾಪ್ಟನ್ ಆಗಿ ರಜತ್ ಪಾಟೀಲ್ ನೇಮಕವಾಗಿದ್ದು ಅಭಿಮಾನಿಗಳಿಗೆ ಸಂತಸ ತಂದಿದೆ. ತಂಡದ ಭವಿಷ್ಯ, ಹಿತದೃಷ್ಟಿಯಿಂದಾಗಿ ರಜತ್ ಪಾಟೀದಾರ್ ಅವರಿಗೆ ನಾಯಕ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿದು ಬಂದಿದೆ. ಬಹುನಿರೀಕ್ಷಿತ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೂ ಮುಂಚಿವಾಗಿ ಆರ್‌ಸಿಬಿ…

Read More

ಬೆಂಗಳೂರು : ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ರಣಧೀಪ್ ಸಿಂಗ್ ಸುರ್ಜೆವಾಲಾ ಬದಲಾವಣೆ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಸುರ್ಜೆವಾಲ ಕೂಡ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮನವಿ ಮಾಡಿದ್ದರು. ಹರಿಯಾಣ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಸುರ್ಜೆವಾಲ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಜ್ಯದ ಉಸ್ತುವಾರಿಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದು ಸುರ್ಜೆವಾಲ ಸ್ಥಾನಕ್ಕೆ ಛತ್ತಿಸ್ಗಡ್ ಮಾಜಿ ಮುಖ್ಯಮಂತ್ರಿ ರೂಪೇಶ್ ಬಘೇಲ್ ನೇಮಕ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Read More

ಬೆಂಗಳೂರು : ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ.ದೇವರಾಜ ಅರಸು ಅವರು 7 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ 7 ವರ್ಷಗಳಲ್ಲ 10 ವರ್ಷ ಸಿಎಂ ಆಗಿರುತ್ತಾರೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ಬಾರಿಯೂ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಬೆಂಗಳೂರಿನಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಇನ್ನು ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ ಬಿ ಪಾಟೀಲ್ ಮೆಟ್ರೋ ಜೊತೆಗೆ ನಾವು ಕೂಡ ಸಹಭಾಗಿತ್ವ ಹೊಂದಿದ್ದೇವೆ. ಮೆಟ್ರೋ ಪ್ರಯಾಣದರ ಇಳಿಸಿದರೆ ಸಾಮಾನ್ಯ ಜನರಿಗೆ ಅನುಕೂಲ ಆಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಬಿಎಂಆರ್‌ಸಿಎಲ್ ಎಂಡಿ…

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಐಶ್ವರ್ಯ ಗೌಡ ಕೇಸ್ ಸಂಬಂಧಿಸಿದಂತೆ ಪೊಲೀಸರಿಂದಲೇ ಸಿಡಿಆರ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಐಶ್ವರ್ಯ ಗೌಡ ಹೈಕೋರ್ಟ್ ನಿಂದ ಪ್ರಕರಣಕ್ಕೆ ತಡೆಯಾಜ್ಞೆ ತಂದಿದ್ದಾರೆ.ಪ್ರಕರಣದ ತನಿಖೆ ನಡೆಸಿದಂತೆ ಹೈಕೋರ್ಟ್ ಇಂದ ಇದೀಗ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಂದಲೇ ಸಿಡಿಆರ್ ಪಡೆದ ಆರೋಪದ ಹಿನ್ನೆಲೆಯಲ್ಲಿ,ಈಗಾಗಲೇ ಎಸಿಪಿ ಚಂದನ್ ಕುಮಾರ್ ನೋಟಿಸ್ ನೀಡಿದ್ದು, ಆಕೆಯ ಕಾಲ್ ಡಿಟೇಲ್ ಆಧರಿಸಿ ಮತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ. ಇಂದು ವಿಚಾರಣೆಗೆ ಐಶ್ವರ್ಯ ಗೌಡ ಹಾಜರಾಗುವ ಸಾಧ್ಯತೆ ಇದೆ. ಎಸಿಪಿ ಚಂದನ್ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಐಶ್ವರ್ಯಗೌಡ ಹಾಜರಾಗುವ ಸಾಧ್ಯತೆ ಇತ್ತು ಅಕ್ರಮವಾಗಿ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದಿದ್ದ ಆರೋಪ ಹಿನ್ನೆಲೆಯಲ್ಲಿ 2022 ಮಾರ್ಚ್ ನಿಂದ 2024ರ ನವೆಂಬರ್ ವರೆಗೆ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದ ಆರೋಪ ಕೇಳಿ…

Read More

ಕೊಪ್ಪಳ : ರಾಜ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ. ಹೌದು ವಾಹನಗಳ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನಕ್ಕೆ ಬೆಂಕಿ ಬಿದ್ದು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಮತ್ತು ಅಂಜಪ್ಪ (30) ಎಂದು ತಿಳಿದುಬಂದಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ತೊಡಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಕುಷ್ಟಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿ ಆದೇಶಿಸಿದೆ. ತನ್ನ ವಿರುದ್ಧ ಮ್ಯಾಜಿಸ್ಟ್ರೇಟ್ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಪ್ರಕರಣ ಸಂಬಂಧ ತೆಗೆದುಕೊಂಡಿರುವ ಕಾಗ್ನಿಜೆನ್ಸ್ ಮತ್ತು ಆ ಸಂಬಂಧ ಜಾರಿ ಮಾಡಿರುವ ಸಮನ್ಸ್ ರದ್ದುಪಡಿಸಬೇಕು ಎಂದು ಕೋರಿ ಸುರೇಶ್‌ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲದಿಂದ ಸ್ಪರ್ಧಿಸಿ ತಮ್ಮ ವಿರುದ್ಧ ಸೋತ ಸುರೇಶ್ ಗೌಡ ಅವರು ನೀಡಿದ ಹಲವಾರು ಹೇಳಿಕೆಗಳು ಐಪಿಸಿಯ ಸೆಕ್ಷನ್ 499 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಾಗಿವೆ ಎಂಬ ಆಧಾರದ ಮೇಲೆ ಚಲುವರಾಯಸ್ವಾಮಿ ಮ್ಯಾಜಿಸ್ಟ್ರೇಟ್‌ಗೆ ದೂರು ಸಲ್ಲಿಸಿದ್ದರು. ಸಚಿವ ಚಲುವರಾಯಸ್ವಾಮಿ ಅವರ 100 ಕೋಟಿ ರೂ. ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದಾಗಿ ಸುರೇಶ್‌ಗೌಡ ಆರೋಪಿಸಿರುವ ಸಂಬಂಧ ವಿವಿಧ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದರ ಆಧಾರದಲ್ಲಿ ಚಲುವರಾಯಸ್ವಾಮಿ ಅವರು…

Read More

ಬೆಂಗಳೂರು : ಈಗಾಗಲೇ ಮೆಟ್ರೋ ಪ್ರಯಾಣ ಟಿಕೆಟ್ ದರ ಹೆಚ್ಚಳ ಮಾಡಿದ್ದಕ್ಕೆ ಸಾರ್ವಜನಿಕರಿಂದ ತೀವ್ರವಾದ ಆಕ್ರೋಶ ವ್ಯಕ್ತವಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿನೇ ಟಿಕೆಟ ದರ ಏರಿಕೆ ಮಾಡಿ ಇದೀಗ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತ ನಾಟಕ ಮಾಡುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ ಇದರ ಬೆನ್ನಲ್ಲೇ ಬಿಎಂಆರ್‌ಸಿಎಲ್ ಅಧಿಕಾರಿಗಳು ಪಾಸ್ ನಲ್ಲಿ ಹಗಲು ದರೋಡೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಹೌದು ನಮ್ಮ ಮೆಟ್ರೋ ಪ್ರಯಾಣಿಕರಿಂದ ಇದೀಗ ಸುಲಿಗೆ ಮಾಡುತ್ತಿದೆ. ಪಾಸ್ ಗಳ ಮೂಲಕ ಬಿಎಮ್ಆರ್‌ಸಿಎಲ್ ಅಧಿಕಾರಿಗಳು ಸುಲಿಗೆಗೆ ಇಳಿದಿದ್ದಾರೆ ಎನ್ನಲಾಗಿದೆ. ಪ್ರಯಾಣಿಕರ ಬಳಿ ವಸೂಲಿ ಮಾಡುತ್ತಿರುವ ಆರೋಪ ಇದೀಗ ಕೇಳಿ ಬಂದಿದೆ. BMRCL ಪಾಸ್ ಗಳ ಹಗಲು ದರೋಡೆ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ಮೆಟ್ರೋ ದಿನದ ಪಾಸಿಗೆ ಈ ಮೊದಲು 150 ಇತ್ತು 3 ದಿನದ ಪಾಸ್ 350 ಇತ್ತು. 5 ದಿನದ ಪಾಸಿಗೆ 550 ರೂಪಾಯಿ ಇತ್ತು. ಪ್ರಯಾಣದರ ಹೆಚ್ಚಳ ಬಳಿಕ ಮೆಟ್ರೋ ಪಾಸ್…

Read More