Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಡೀ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಹಿಂದೆ ಮುಡಾದ ಆಯುಕ್ತರಾಗಿರುವಂತಹ ನಟೇಶ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಮುಡಾದ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ಪಿ ಟಿಜೆ ಉದೇಶ ಅವರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬದಲಿ ನಿವೇಶನವನ್ನು ಮಾಜಿ ಆಯುಕ್ತ ನಟೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ವಿಚಾರಣೆಗಾಗಿ ಮುಖ್ಯ ಕಾರ್ಯದರ್ಶಿಯ ಅನುಮತಿಯನ್ನು ಲೋಕಾಯುಕ್ತ ಎಸ್ಪಿ ಉದ್ದೇಶ ಕೇಳಿದ್ದರು. ಎರಡು ದಿನದ ಹಿಂದೆ ಸಿಎಸ್ ಅವರು ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಿದ್ದರು. ಈ…

Read More

ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು. ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಆಗ್ರಹಿಸಿದ್ದಾರೆ. ರಾಜ್ಯ ಮಾದಿಗ ಪ್ರಾಧ್ಯಾಪಕರ ವೇದಿಕೆ ಆಯೋಜಿಸಿದ್ದ ಒಳ ಮೀಸಲಾತಿ ಚಿಂತನ ಮಂಥನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಯನ್ನು ಸರ್ಕಾರ ಜಾರಿಗೆ ತರಬೇಕು. ಮುಖ್ಯಮಂತ್ರಿ ಹುದ್ದೆಯನ್ನು ನಮ್ಮ ಸಮುದಾಯದವರಿಗೆ ನೀಡಬೇಕು. ನಾಲ್ಕು ದಶಕಗಳಿಂದ ಪಕ್ಷಕ್ಕೆ ನಿಷ್ಠವಾಗಿರುವ ಕೆ.ಎಚ್.ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಮಾದಾರ ಶ್ರೀಗಳು ಒತ್ತಾಯಿಸಿದ್ದಾರೆ. ಪಕ್ಷಕ್ಕಾಗಿ ಮುನಿಯಪ್ಪ ಮಾಡಿದ ತ್ಯಾಗವನ್ನು ಗೌರವಿಸಬೇಕಿದೆ, ಅವರ ದೀರ್ಘಕಾಲದ ತ್ಯಾಗವನ್ನು ಇನ್ನಾದರೂ ಕಾಂಗ್ರೆಸ್ ಗೌರವಿಸಲಿ. ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ ಅಥವಾ…

Read More

ಕೊಪ್ಪಳ : ಇತ್ತೀಚಿಗೆ ಸರ್ಕಾರಿ ನೌಕರಸ್ಥರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಕೊಪ್ಪಳದಲ್ಲಿ ಜಿಲ್ಲಾ ಆಸ್ಪತ್ರೆಯ ಮುಂಭಾಗವೇ ನರ್ಸಿಂಗ್ ಆಫೀಸರ್ ಒಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಕೊಪ್ಪಳ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಈ ಒಂದು ಘಟನೆ ನಡೆದಿದ್ದು, ಸಹೋದ್ಯೋಗಿಗಳು ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಮನನೊಂದು ನರ್ಸಿಂಗ್ ಆಫೀಸರ್ ಶಶಿ ನಿದ್ರೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇತ್ತೀಚಿಗೆ ಶಶಿ ನೌಕರರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಳಿಕ ಸಹೋದ್ಯೋಗಿಗಳು ನಾಮಪತ್ರ ಹಿಂದಕ್ಕೆ ತೆಗೆಸಿದರು. ಚುನಾವಣೆ ವಿಷಯದಲ್ಲಿ ಕೂಡ ಕೆಲವರಿಂದ ಕಿರುಕುಳದ ಆರೋಪ ಕೇಳಿ ಬಂದಿದೆ. ಅಸ್ವಸ್ಥ ನರ್ಸಿಂಗ್ ಆಫೀಸರ್ ಶಶಿ ಚಿಕಿತ್ಸೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಸಹೋದ್ಯೋಗಿಗಳು ಶಶಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಸದ್ಯ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದ್ದು, ಸದ್ಯ ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಿ ಆಗಲಿದೆ ಎಂದು ತಿಳಿದು ಬಂದಿದೆ. ಈ ಕುರಿತಾಗಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಎಪಿಎಲ್ ಕಾರ್ಡಿಗೆ ಸೇರಿಸುತ್ತೇವೆ. ಆದರೆ ಯಾವುದೇ ಕಾರ್ಡ್ ಗಳನ್ನು ರದ್ದು ಪಡಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಯಾವುದು ರದ್ದು ಮಾಡುತ್ತಿಲ್ಲ. ಸುಮ್ಮನೆ ರಾಜಕೀಯವಾಗಿ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಕೆ ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದರು. ದಕ್ಷಿಣ ಭಾರತದಲ್ಲಿ ರಾಜ್ಯದಲ್ಲಿ 80 ಪರ್ಸೆಂಟ್ ಬಿಪಿಎಲ್ ಕಾರ್ಡ್ ದಾರರಿದ್ದಾರೆ ಕೆಲವರು ಬಿಪಿಎಲ್ ಗೆ ಅರ್ಹರಲ್ಲದವರು ಕೂಡ ಇದ್ದಾರೆ.ಅಂತವರನ್ನು ತೆಗೆದು ಎಪಿಎಲ್ ಗೆ ಹಾಕುತ್ತೇವೆ ಆದರೆ ಯಾವುದೇ ಕಾರ್ಡ್ ರದ್ದು ಮಾಡುವುದಿಲ್ಲ. ಎಪಿಎಲ್ ಕಾರ್ಡ್ ದಾರರಿಗೂ ಬೇರೆ ಬೇರೆ ಸೌಲಭ್ಯಗಳು ಸಿಗಲಿವೆ. ಅನುಕೂಲಸ್ಥರು ತೆರಿಗೆ ಪಾವತಿಸುವವರನ್ನು…

Read More

ಬೆಂಗಳೂರು : ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯನ್ನು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,  ಈ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರ ಎಂಬಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮಹಿಳೆ ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ಪತಿ ಕರೆದೊಯ್ದಿದ್ದಾನೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಆಂಧ್ರಪ್ರದೇಶ ಮೂಲದ ದೀಪ (36) ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ಆದರೆ ಕುತ್ತಿಗೆಯಲ್ಲಿ ಯಾವುದೇ ಮಾರ್ಕ್ ಇರಲಿಲ್ಲ. ನಾಲಿಗೆ ಸಹ ಹೊರ ಬಂದಿಲ್ಲ. ದೀಪಾ ಮೂಗು ಹಾಗು ಬಾಯಲ್ಲಿ, ನೊರೆ ಬಂದಿದ್ದರಿಂದ ಇದೀಗ ಪತಿಯ ಮೇಲೆ ಅನುಮಾನ ಮೂಡುತ್ತಿದೆ. ಪತಿಯೇ ಹಲ್ಲೆ ಮಾಡಿ ಕೊಲೆಗೈದು ಬಳಿಕ ನೇಣಿಗೆ ಹಾಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರೋಪಿ ಪತಿ ಸುರೇಶನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಇದೀಗ ಬೀದಿಬದಿ ಅಂಗಡಿ ವ್ಯಾಪಾರಗಳಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು ಬ್ಯಾಂಕ್ ವಹಿವಾಟು ಆಧಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳಾಗಿ ಬದಲಾವಣೆ ಮಾಡಲಾಗಿದೆ. ಸದ್ಯ ಬಿಪಿಎಲ್ ಕಾರ್ಡ್ ಇದ್ದಿದ್ದನ್ನು ಎಪಿಎಲ್ ಆಗಿ ಬದಲಾವಣೆ ಮಾಡಲಾಗಿದೆ. ಎಪಿಎಲ್ ಆಗಿ ಬದಲಾವಣೆಯಾಗಿದ್ದಕೆ ಇದೀಗ ವ್ಯಾಪಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ನಮ್ಮದು ದಿನಾಲೂ ನಡೆಯುವ ವ್ಯವಹಾರ ಇರುವ ಕಾರಣ ಹೆಚ್ಚಿಗೆ ಹಣ ಟ್ರಾನ್ಸ್ಆಕ್ಷನ್ ಆಗಿದೆ. ಆದರೆ ನಮಗೆ ಲಾಭದಲ್ಲಿ ಅಗಲಿ ಅಥವಾ ಆದಾಯದಲ್ಲಿ ಅಗಲಿ ಯಾವುದೇ ರೀತಿಯ ಹೆಚ್ಚಳವಿಲ್ಲ. ವಹಿವಾಟು ಆಧಾರದ ಮೇಲೆ ಬದಲಾವಣೆ ಮಾಡಬಾರದು ಎಂದು ವ್ಯಾಪಾರಗಳು ಅಗ್ರಹಿಸಿದ್ದಾರೆ.

Read More

ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಗೆ ಕೆಲ ಶಾಸಕರನ್ನೇ ಸಿದ್ದರಾಮಯ್ಯನವರೇ ಕಳುಹಿಸಿದ್ದರು. ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳುಹಿಸಿದ್ದೆ ಕಾಂಗ್ರೆಸ್.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೆವು. ಈ ಬಾರಿ ಅವರಿಗೆ ಬಹುಮತ ಇದೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. 100 ಕೋಟಿ ಅಲ್ಲ, 500 ಕೋಟಿ ಬಗ್ಗೆ ಮಾತಾಡಲಿ. ದಾಖಲೆ ಇದ್ದರೆ ಕೊಡಿ…

Read More

ಬೆಂಗಳೂರು : ಕೋವಿಡ್ ವೇಳೆ ಪಿಎಂ ಕೇರ್ಸ್ ಫಂಡ್ ನಿಂದ ಬಂದ ವೆಂಟಿಲೇಟರ್ ಕೂಡ ಗುಣಮಟ್ಟದಲ್ಲ. ಅನೇಕ ಕಡೆಗೆ ಈ ವೆಂಟಿಲೇಟರ್ ಬಳಕೆ ಮಾಡಲು ಆಗದೆ ಹಾಗೆ ಇಡಲಾಗಿದೆ. ಪಿಎಂ ಕೇರ್ಸ್ ಫಂಡ್ ಹೇಗೆ ದುರ್ಬಳಕೆ ಆಗಿದೆ ಎಂಬುದು ದೊಡ್ಡ ವಿಷಯ. ಪಿಎಂ ಕೇರ್ಸ್ ಫಂಡ್ ನಲ್ಲೂ ಕೂಡ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಬೆಂಗಳೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕೋವಿಡ್ ವೇಳೆ ವೆಂಟಿಲೇಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ನ್ಯಾ ಮೈಕಲ್ ಡಿ ಕುನಹ ನೀಡಿರುವ ವರದಿಯಲ್ಲಿ ಹಲವು ಅಂಶಗಳು ಬಹಿರಂಗವಾಗಿವೆ. ಈ ವರದಿಯಲ್ಲಿ ಗಾಬರಿ ಹುಟ್ಟಿಸುವಂತಹ ಅಂಶಗಳು ದಾಖಲಾಗಿವೆ. ಬಿಜೆಪಿ ಸರ್ಕಾರ ಯಾವ ರೀತಿ ಲೂಟಿ ಮಾಡಿದೆ ಅನ್ನೋದು ಎದ್ದು ಕಾಣುತ್ತದೆ. ವರದಿಯ ಅಂಶಗಳು ತಾರ್ಕಿಕ ಅಂತ್ಯ ಕಾಣಬೇಕು ಎನ್ನುವುದು ನಮ್ಮ ಉದ್ದೇಶ. ಅಂದಿನ ಸಚಿವರು ಸಿಎಂ ಒಪ್ಪಿಗೆ ಇಲ್ಲದೆ ಇಂತಹ ನಿರ್ಧಾರಗಳು ಆಗಲ್ಲ. ತಪ್ಪು ಮಾಡಿದವರಿಗೆ ತಕ್ಕ…

Read More

ಚಿತ್ರದುರ್ಗ : ಚಾಲಕನ ಒಂದು ನಿರ್ಲಕ್ಷ್ಯದಿಂದ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದ್ದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 10 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಇಂದು ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಐಮಂಗಲ ಬಳಿ ಪಲ್ಟಿಯಾಗಿ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷದಿಂದ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದ ಕುರಿತಂತೆ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಮೀನು ಹಿಡಿಯಲು ತಂದೆ ಇಬ್ಬರು ಮಕ್ಕಳು ನದಿಗೆ ತೆರಳಿದ್ದಾರೆ. ಆದರೆ ಮಗನೋಬ್ಬ ನೀರಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ್ದ ತಂದೆ ಹಾಗೂ ಇನ್ನೊಬ್ಬ ಮಗ ಕೂಡ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಲಕ್ಷ್ಮಣ ರಾಮ (49), ರಮೇಶ (15) ಹಾಗೂ ಯಲ್ಲಪ್ಪ (13) ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನು ಹಿಡಿಯಲು ಬಲೆ ಹಾಕಲು ತಂದೆ ಮತ್ತು ಮಕ್ಕಳು ನದಿಗೆ ಇಳಿದಿದ್ದರು. ಈ ವೇಳೆ ಓರ್ವ ಪುತ್ರ ನೀರಿನಲ್ಲಿ ಮುಳುಗಿದ್ದಾನೆ.ಆತನನ್ನು ರಕ್ಷಿಸಲು ಹೋಗಿದ್ದ ತಂದೆ ಹಾಗೂ ಮತ್ತೊಬ್ಬ ಮಗ ಸಹ ನೀರು ಪಾಲಾಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಮೂವರಿಗಾಗಿ ಸದ್ಯ ಎನ್ ಡಿ ಆರ್ ಎಫ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಯಮಕನಮರಡಿ…

Read More