Author: kannadanewsnow05

ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕೇಸ್ ದಾಖಲಿಸಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್, ಯತ್ನಾಳ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.ಇದೀಗ ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ. ಹೌದು ಬಸನಗೌಡ ಪಾಟೀಲ್ ಯತ್ನಾಳ್ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ನಿಂದ ಅವಕಾಶ ನೀಡಿರುವ ವಿಚಾರವಾಗಿ ಹೈಕೋರ್ಟ್ ಆದೇಶದ ವಿರುದ್ಧ ಇದೀಗ ಪಿಸಿಬಿ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಾರ್ಖಾನೆ ತೆರೆಯಲು ಅನುಮತಿ ನೀಡದಂತೆ ಕೋರಿ ಇದೀಗ ಪಿಸಿಬಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಕಾರ್ಖಾನೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪಿಸಿಬಿ ಆರೋಪಿಸಿದೆ. ಏನಿದು ಪ್ರಕರಣ? ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ…

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗಿಯ ಪೀಠ ಹೇಳಿದ್ದೇನು? ರಾಜ್ಯ ಸರ್ಕಾರ – ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ಪರಿಗಣಿಸಬೇಕು. ಈ ಹಿನ್ನೆಲೆ ಈ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುವುದು ಸೂಕ್ತ ಎಂದು ಕರ್ನಾಟಕ ಹೈ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಇದೀಗ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟು ವಚಗೊಳಿಸಿದೆ. ಅರ್ಜಿ ವಜಾಗೊಳಿಸಿ ಜಡ್ಜ್ ಸಂತೋಷ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

Read More

ಕೊಪ್ಪಳ : ಇಂದಿನ ಆಧುನಿಕ ಪ್ರಪಂಚದಲ್ಲಿ ಜನರು ಎಷ್ಟೇ ಮುಂದುವರೆದಿದ್ದರೂ, ದೇಶ ಎಷ್ಟೇ ತಂತ್ರಜ್ಞಾನದಲ್ಲಿ ಅಪ್ ಡೇಟ್ ಹೊಂದಿದ್ದರು, ಕೆಲವರು ಮೂಢನಂಬಿಕೆ, ಸಾಂಪ್ರದಾಯ, ಕಟ್ಟುಪಾಡುಗಳಿಗೆ ಜೋತು ಬಿದ್ದು, ತಲೆಯಲ್ಲಿ ಇನ್ನೂ ಅಂತಹ ವಿಚಾರಗಳನ್ನು ಇಟ್ಟುಕೊಂಡೆ ಬದುಕು ಸಾಗಿಸುತ್ತಿದ್ದಾರೆ.ಇದೀಗ ಕೊಪ್ಪಳದಲ್ಲಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಇವತಿಗೆ ವಿಷಉಣಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೌದು ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ (21) ಮರಿಯಮ್ಮ ಅನ್ನೋ ಯುವತಿ, ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರ ಗ್ರಾಮದ ಹನಮಯ್ಯ ಅನ್ನೋ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಮರಿಯಮ್ಮ, ದಲಿತ ಸಮುದಾಯಕ್ಕೆ ಸೇರಿದ್ದರೆ, ಹನಮಯ್ಯ, ನಾಯಕ ಜಾತಿಗೆ ಸೇರಿದ್ದ. ಹೀಗಾಗಿ ಇಬ್ಬರ ಮನೆಯಲ್ಲಿ ಇವರ ಮದುವೆಗೆ ರೆಡ್ ಸಿಗ್ನಲ್ ಸಿಕ್ಕಿತ್ತು. ಇದೇ ಕಾರಣಕ್ಕೆ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಹೀಗಾಗಿ ಯುವತಿ ಮನೆಯವರು ಪೊಲೀಸರಿಗೆ ದೂರು ಕೊಡಲು ಹೋಗಿದ್ದರು. ಆದರೆ ಇಬ್ಬರು ಕೂಡಾ ಪ್ರಾಪ್ತವಯಸ್ಸನ್ನು ಹೊಂದಿದ್ದರಿಂದ, ಯುವತಿ ಹೆತ್ತವರು ಸುಮ್ಮನಾಗಿದ್ದರು. ನಂತರ ಮರಿಯಮ್ಮ ಮತ್ತು ಹನುಮಯ್ಯ, ಗಂಗಾವತಿ ಸಬ್ ರಿಜಸ್ಟರ್…

Read More

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ. ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ತಯಾರಿ ನಡೆದಿದ್ದು, ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೂಡ ಕೋರಲಾಗಿದೆ.ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ…

Read More

ಬೆಂಗಳೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಪೆಂಡಾಲ್​ನಲ್ಲಿ ಪ್ರಸಾದ ತಯಾರಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶ ವಿರೋಧಿಸಿ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ. ಪರವಾನಗಿ ಪಡೆದವರಿಂದ ಮಾತ್ರ ಪ್ರಸಾದ ತಯಾರಿಸುವಂತೆ ಆದೇಶಿಸಲಾಗಿದ್ದು, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದೂ, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನ ಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ‌ ಅನ್ಯಮತೀಯರ ಹಬ್ಬಗಳಲ್ಲಿ ಬೀದಿ ಬೀದಿಗಳಲ್ಲಿ ಆಹಾರ ಬೇಯಿಸುವಾಗ ಕೈ ಕಟ್ಟಿಕೊಂಡಿದ್ದ ಸಿದ್ದರಾಮಯ್ಯನವರು, ಈಗ ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ಮುಖ್ಯಮಂತ್ರಿಗಳೇ, ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ ಎಂದು ಬಿಜೆಪಿ ಕುಟುಕಿದೆ. https://twitter.com/BJP4Karnataka/status/1831311637007016213?t=UIPHQdbaUa7VvozAiiRn8w&s=19

Read More

ಬೆಂಗಳೂರು : ಇಂದು ಬೆಂಗಳೂರಿನ ಜಯನಗರದ 4ನೆ ಟಿ ಬ್ಲಾಕ್ ನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಒಂದು ಬಿದ್ದಿತ್ತು. ಇವಳೇ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಇದೀಗ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರದ ಕೊಂಬೆ ಬಿದ್ದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಇದೀಗ ಸಾವನಪ್ಪಿದ್ದಾನೆ. ಘಟನೆ ನಡೆದ ತಕ್ಷಣ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚಾಲಕ ಖಲೀಲ್ ಕೊನೆಯುಸಿರುಳಿದಿದ್ದಾನೆ. ಜಯನಗರದ 4ನೆ ಟೀ ಬ್ಲಾಕ್ ನಲ್ಲಿ ಇಂದು ಬೆಳಿಗ್ಗೆ ಈ ಒಂದು ಅವಘಡ ನಡೆದಿತ್ತು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿತ್ತು. ಆದರೆ ಆಟೋ ಚಾಲಕ ಖಲೀಲ್ ಗೆ ಗಂಭೀರವಾದ ಗಾಯಗಳಾಗಿದ್ದರಿಂದ ಕೊಡಲೇ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಆಟೋ ಚಾಲಕ…

Read More

ಬೆಂಗಳೂರು : ಬಾಗ್ಮನೆ ಡೆವಲಪರ್ಸ್‌ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್‌ಮೆಂಟ್‌ ಪ್ರೈ.ಲಿಗೆ ಬೆಂಗಳೂರಿನ ಡಿಫೆನ್ಸ್‌ ಎಸ್.ಇ.ಝಡ್‌ ಪಾರ್ಕ್​ನಲ್ಲಿ ಅಂದಾಜು 160 ಕೋಟಿ ರೂ. ಬೆಲೆಬಾಳುವ 8 ಎಕರೆ ಭೂಮಿ ನೀಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಇದೀಗ ಸ್ವತಃ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ತಿರಗೇಟು ನೀಡಿದ್ದು, ಸುಳ್ಳನ್ನು ನಿಜ ಮಾಡುವ ಬಿಜೆಪಿಗರು ತಮ್ಮ ಹಳೆ ಸಿದ್ದಾಂತಕ್ಕೆ ಜೋತು ಬಿದ್ದಿದ್ದಾರೆಬುಂದು ಮತ್ತೊಮ್ಮೆ ಸಾಬೀತಾಗಿದೆ ತಿರುಗೇಟು ನೀಡಿದ್ದಾರೆ. ಹೌದು ಈ ಕುರಿತಂತೆ ಅವರು ತಮ್ಮ X ಖಾತೆಯಲ್ಲಿ ಬಿಜೆಪಿ ನಾಯಕರು ಮಾಡಿದೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸುಳ್ಳಿನ ಕಂತೆ ಸುಳ್ಳೇ ಇವರ ಮನೆ ದೇವರು, ಜೋಕರ್ಸ್ ಆಫ್ ಬಿಜೆಪಿ ಎಂಬ ಪೋಸ್ಟ್ ಹಂಚಿಕೊಳ್ಳುವ ಮೂಲಕ ವಿವರವಾಗಿ ಬರೆದಿದ್ದಾರೆ. ರಾಜ್ಯ ಬಿಜೆಪಿಯವರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕುಟುಕಿದ್ದಾರೆ. @BJP4Karnataka ದವರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ;…

Read More

ಬೆಳಗಾವಿ : ಸಾವು ಯಾವಾಗ ಹೇಗೆ ಬರುತ್ತೆ ಎನ್ನುವುದು ಸ್ವತಃ ಸೃಷ್ಟಿಕರ್ತನಿಗೂ ಗೊತ್ತಿಲ್ಲ. ಕೆಲವು ಸಾವುಗಳು ಎಷ್ಟು ಕ್ರೂರವಾಗಿರುತ್ತವೆ ಅಂದರೆ ಊಹಿಸಲು ಸಾಧ್ಯವಿಲ್ಲ. ಇಂತದ್ದೇ ಘಟನೆ ಇದೀಗ ಬೆಳಗಾವಿಯಲ್ಲಿ ನಡೆದಿದ್ದು, ಇನ್ನೇನು ಮದುವೆ ಒಂದು ದಿನ ಬಾಕಿ ಇರುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ ದುರ್ಘಟನೆ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಹೌದು ನಾಳೆ ಬೆಳಗಾದರೆ ಸಾಕು ನನಗೂ ನಿನಗೂ ಮದುವೆ ಎಂದು ಖುಷಿಯಿಂದ ಹುಡುಗಿಯೊಂದಿಗೆ ಯುವಕ ಮದುವೆ ಸಿದ್ಧತೆ ಬಗ್ಗೆ ಚಪ್ಪರದಲ್ಲಿ ನಿಂತುಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಝುಂಜರವಾಡ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಸೆ.5 ರಂದು ಮದುವೆ ನಿಶ್ಚಯವಾಗಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆ ಮುಂದೆ ಮದುವೆ ಸಿದ್ಧತೆ ಮಾಡಿಕೊಳ್ಳುತ್ತಾ, ಮೊಬೈಲ್‌ನಲ್ಲಿ ಮಾತನಾಡುವಾಗ ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆತನನ್ನು ತುರ್ತಾಗಿ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರು ಅದಾಗಲೇ ಯುವಕ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಅಜೇವಿನಲ್ಲಿ ಕೊಲೆ ಆರೋಪಿ ದರ್ಶನಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ನಟ ಚೇತನ್ ಅಹಿಂಸಾ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ಜೈಲಿನಲ್ಲಿ ಇದ್ದ ಸಂದರ್ಭದಲ್ಲಿ ನನಗೆ ಯಾವುದೇ ರೌಡಿಗಳು ಸಹಾಯ ಮಾಡುವುದಗಿ ಹೇಳಿರಲಿಲ್ಲ ಎಂದು ತಿಳಿಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕಿದ್ದು, ಹಣ ಬಲದಿಂದ ಆಗಿರೋದು. 40 ಜನ ಇರುವ ಬ್ಯಾರಕ್ನಲ್ಲಿ ಶೌಚಾಲಯದ ಸಮಸ್ಯೆ ಕಷ್ಟವಾಗುತ್ತಿತ್ತು. ನನಗೆ ಯಾವುದೇ ರೌಡಿಗಳು ಸಹಾಯ ಮಾಡುವುದಾಗಿ ಹೇಳಲಿಲ್ಲ. ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಜೈಲಿನಲ್ಲಿ ವ್ಯವಸ್ಥೆ ಸರಿ ಪಡಿಸುವ ಮನಸ್ಥಿತಿ ಇರಬೇಕು ಎಂದು ನಟ ಚೇತನ ಅಹಿಂಸಾ ತಿಳಿಸಿದರು. ಇನ್ನೂ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾಚಿ ಶೀಟ್ ಸಲ್ಲಿಸಿದ ವಿಚಾರವಾಗಿ…

Read More