Author: kannadanewsnow05

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸಂಪೂರ್ಣವಾಗು ಸುಟ್ಟು ಕರಕಲಾಗಿದ್ದು, ಶವ ಪತ್ತೆಯಾಗಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದಲ್ಲಿ ನಡೆದಿದೆ. ಇನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ಗ್ರಾಮದ ಸಂಜನಾ ಗಜಾನನ ತಳೇಕರ ಎಂಬವರ ಮೃತದೇಹವಾಗಿದೆ. ಮೃತ ದೇಹದ ಪಕ್ಕದಲ್ಲಿದ್ದ ಬ್ಯಾಗ್‌ ತೆರೆದು ನೋಡಿದಾಗ ಅದರಲ್ಲಿದ್ದ ಆಧಾರ ಕಾರ್ಡ್ ಮೂಲಕ ಗುರುತು ಪತ್ತೆ ಮಾಡಲಾಗಿದೆ. ಆಧಾರ್ ಕಾರ್ಡ್ ಮೂಲಕ ಆಕೆಯ ಗಂಡನನ್ನು ಪೊಲೀಸರು ಸಂಪರ್ಕ ಮಾಡಿದ್ದು, ಈಕೆ ನನ್ನ ಹೆಂಡತಿ ಎಂದು ಗಜಾನನ ತಳೇಕರ್ ಗುರುತಿಸಿದ್ದಾನೆ. ಶಿರವಾಡದ ರೇಲ್ವೆ ನಿಲ್ದಾಣದ ಹಿಂಬದಿಯಲ್ಲಿ ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸುಟ್ಟು ಕರಕಲಾಗಿವೆ. ಪ್ಯಾಂಟ್ ಧರಿಸಿರುವ…

Read More

ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಅವರಿಗೆ ರೂಪಾಂತರಿ ಚಿಕನ್ ಗುನ್ಯಾಯಿಂದ ಬಳಳುತ್ತಿದ್ದರು ಹಾಗಾಗಿ ನಿನ್ನೆ ಆರೋಗ್ಯದಲ್ಲಿ ಅವರಿಗೆ ಏರುಪೇರಾಗಿತ್ತು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹೌದು ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು.ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.ಕಳೆದ ನಾಲ್ಕು ದಿನಗಳಿಂದ ತೀರ್ವ ಜ್ವರದಿದಂ ಬಳಲುತ್ತಿದ್ದಂತ ಅವರನ್ನು ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಇದೀಗ ಅವರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ.

Read More

ದಕ್ಷಿಣಕನ್ನಡ : ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಕುರಿತು ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಳಿಕ ವಜಾಗೊಳಿಸಿದ್ದಾರೆ. ಕಳೆದ ಮಾರ್ಚ್ 4 ರಂದು ಕೇರಳ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ವಿದ್ಯಾರ್ಥಿನಿಯು ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದ. ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ, ಪಡೆದುಕೊಂಡು ಬಂದಿದ್ದ. ಕೊಯಮುತ್ತೂರಿನಿಂದ ಆ್ಯಸಿಡ್ ಖರೀದಿಸಿದ್ದ. ಸಮವಸ್ತ್ರ ಧರಿಸಿಕೊಂಡಿದ್ದ ಆರೋಪಿಯು ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಈ ವೇಳೆ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಗಾಯಗಳಾಗಿದ್ದವು. ಈ…

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದಾರೆ ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ.ಇದೀಗ ಮಾಜಿ ಸಂಸದ ಡಿಕೆ ಸುರೇಶ್ ಅವರು ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಕೇಳುವುದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನವರು ಅವರ ಪಕ್ಷ ಉಳಿಸಿಕೊಳ್ಳಲು ಹೇಳ್ತಾರೆ. ಬಲಿಷ್ಠ ಸರ್ಕಾರವಿದೆ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ನಾಯಕತ್ವವಿದೆ. ಯಾರು ಏನೇ ಪ್ರಯತ್ನ ಪಟ್ಟರೂ ಖಂಡಿತ ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣ ಇರುತ್ತದೆ. ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರ್ತಾರೆ. ಈ ಬಗ್ಗೆ ಡಿಸಿಎಂ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್‌ರ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕುತಂತ್ರ ನಡೆಸಿದೆ ರಾಜ್ಯಪಾಲರ ಮುಂದೆ ಹಳೇ ಪ್ರಕರಣಗಳು ಬಾಕಿ ಇದ್ದರೂ ಸದ್ದು ಮಾಡ್ತಿಲ್ಲ.…

Read More

ಹಾವೇರಿ : ಸಂಸದ ಬಸವರಾಜ್ ಬೊಮ್ಮಾಯಿ ಕ್ಷೇತ್ರದಲ್ಲಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತವಿದ್ದರೂ ಸಹ ಬಿಜೆಪಿ ಎದುರು ಸೋಲನುಭವಿಸಿದ್ದು, ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಹೌದು ಇಂದು ನಡೆದ ಹಾವೇರಿ ನಗರಸಭೆ ಚುನಾವಣೆ ಬಿಜೆಪಿ‌ ತೆಕ್ಕೆಗೆ ಬಿದಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ಆ ಮೂಲಕ ಬಹುಮತ ಇದ್ದರು ಗದ್ದಿಗೆ ಕಾಂಗ್ರೆಸ್​ ಪಡೆ ಚೆಲ್ಲಿದೆ. ಮತದಾನ ಪ್ರಕ್ರಿಯಲ್ಲಿ ಕಾಂಗ್ರೆಸ್​ನ 6 ಸದಸ್ಯರು ಗೈರಾಗಿದ್ದರು. ಒಟ್ಟು 34 ಸದಸ್ಯರ ಸಂಖ್ಯೆಯನ್ನು ಹಾವೇರಿ ನಗರಸಭೆ ಹೊಂದಿದೆ. ಕಾಂಗ್ರೆಸ್ ಅಭ್ಯರ್ಥಿ ರೇಣುಕಾ 11 ಮತ ಪಡೆದು ಪರಾಜಿತಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶಶಿಕಲಾ ರಾಮು ಮಾಳಗಿ 17 ಮತ ಪಡೆದು ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ನಗರಸಭೆ ಮುಂದೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ. ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಈ ಕುರಿತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ರಾಜ್ಯ ರಾಜಕಾರಣದಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಆಗಲಿದೆ. ರಾಜ್ಯ…

Read More

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಕೂಡ ಬರುತ್ತೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಆಗಲಿದೆ. ನಾವು ಯಾವುದೇ ಹೋರಾಟ ಮಾಡಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಪ್ರಕರಣ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು ಅಲ್ಲದೆ ಶೋಭಾ ವಿರುದ್ಧ ಕೇಸ್ ಕೂಡ ದಾಖಲಾಗಿತ್ತು. ಇದೀಗ ಮದ್ರಾಸ್ ಹೈಕೋರ್ಟ್ ನಲ್ಲಿ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ಹೌದು ಈ ಹೇಳಿಕೆ ಸಂಬಂಧ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಕಿಡಿಕಾರಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದ ಶೋಭಾ ಕರಂದ್ಲಾಜೆ, ಹೈಕೋರ್ಟ್ ನಲ್ಲಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ತಮಿಳುನಾಡಿನ ಇತಿಹಾಸ ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಗೌರವ ಇದೆ. ತಮಿಳುನಾಡಿನ ಜನರ ಬಗ್ಗೆ ಅಪಾರ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗೆ ಧಕ್ಕೆ ತರುವ ಯಾವುದೇ ಉದ್ದೇಶ ಇರಲಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದಕ್ಕೆ ತಮಿಳುನಾಡು ಜನರಿಗೆ…

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟಿಗೆ ಸುಮಾರು 4500 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಇನ್ನು ಇನ್ನೊಂದೆಡೇ ಪ್ರಕರಣದ ಕುರಿತು ಮಾಹಿತಿ ತಿಳಿಯಲು ನಟ ದರ್ಶನ್ ಅವರು ನಿನ್ನೆ ಜೈಲಾಧಿಕಾರಿಗಳ ಬಳಿ ನನಗೆ ಟಿವಿ ಬೇಕು ಎಂದು ಮನವಿ ಮಾಡಿದ್ದರು. ಈ ನೆಲೆಯಲ್ಲಿ ಇಂದು ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಡೆದರ್ಶನಿಗೆ ಟಿವಿ ಮಾಡಲಾಗುತ್ತಿದೆ. ಹೌದು ನಿನ್ನೆಯಿಂದ ಬಳ್ಳಾರಿ ಸೆಂಟ್ರಲ್ ಜೈಲಿನ 15ನೆ ಸೆಲ್ ನಲ್ಲಿರುವ ನಟ ದರ್ಶನ್ ಟಿವಿ ಬೇಕು ಅಂತ ಹೇಳುತ್ತಿದ್ದರು. ಪದೇ ಪದೇ ಟಿವಿ ಬೇಕು ಅಂತ ದರ್ಶನ ಕೇಳುತ್ತಿದ್ದರು. ಹಾಗಾಗಿ ಇಂದು ಸಂಜೆ 15ನೇ ಸೆಲ್ ನಲ್ಲಿ ಟಿವಿ ವ್ಯವಸ್ಥೆ ಮಾಡಲಾಗುತ್ತಿದೆ.ಜೈಲು ಸಿಬ್ಬಂದಿಗಳು ವಿಚಾರಣಾಧೀನ ಕೈದಿಗಳಿಗೆ ಟಿವಿ ಕೊಡಲು ಅವಕಾಶವಿರುತ್ತದೆ. ಟಿವಿ ಕಡಲು ಏಕೆ ಮೀನಾ ಮೇಷ ಎಣಿಸುತ್ತಿದ್ದೀರಿ ಎಂದು ಆರೋಪಿ ದರ್ಶನ್ ದರ್ಶನ್ ಪ್ರಶ್ನಿಸಿದ್ದ. ಇದೀಗ ಬೇಡಿಕೆ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಗೆ ಟಿವಿ ಕೊಡಲು ಸಿದ್ಧತೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಟೋರಿಯಸ್ ಬಚ್ಚಾಖಾನ್ ನನ್ನು ಬಂಧಿಸಲಾಗಿದ್ದು, ನಿನ್ನೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ಬೆಂಗಳೂರಲ್ಲಿ ಆತನನ್ನು ಬಂಧಿಸಿದ್ದಾರೆ. ಬಂಧಿಸಿದ ಬಳಿಕ ಆತನನ್ನು ಹುಬ್ಬಳ್ಳಿಗೆ ಕರೆತಂದಿದ್ದಾರೆ. ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಬಚ್ಚಾ ಖಾನ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಇದ್ದ ಈತ 45 ದಿನಗಳ ವರೆಗೆ ಪೆರೋಲ್ ಮೇಲೆ ಬಚ್ಚಾ ಖಾನ್ ಹೊರ ಬಂದಿದ್ದ. ಈ ವೇಳೆ ನಿನ್ನೆ ಪೊಲೀಸರ ಮೇಲೆ ಬಚ್ಚಾಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ಸುಳ್ಳು ಕೇಸ್ ಹಾಕಿದ್ದಾರೆಂದು ಅಸಮಾಧಾನ ಹೊರಹಾಕಿದ್ದಾನೆ. ಸುಳ್ಳು ಕೇಸ್ ಹಾಕಿದ್ದಾರೆಂದು ಮುಖಕ್ಕೆ ಹಾಕಿದ ಮಾಸ್ಕ ತೆಗೆದು ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಬಚ್ಚಾಖಾನ್ ಅಸಾಮಾಧಾನ ಹೊರಹಕಿದ್ದಾನೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಬಚ್ಚಾಖಾನ್ ಇಷ್ಟು ದಿನ ಇದ್ದ. ಅದಾದ ಬಳಿಕ ಪೆರೊಲ್ ಮೇಲೆ ಬಚ್ಚಾಖಾನ್ ಹೊರಗಡೆ ಬಂದಿದ್ದ. ಹುಬ್ಬಳ್ಳಿ ಸಿಸಿಬಿ ಪೊಲೀಸರಿಂದ ಇದೀಗ ಬಚ್ಚಾಖಾನ್ ನನ್ನು ಬಂಧಿಸಲಾಗಿದೆ.ಪೆರೋಲ್ ಮೇಲೆ ಹೊರಗಡೆ ಬಂದಿದ್ದ ಆಟ ಹಲವರಿಗೆ ಬೆದರಿಕೆ ಹಾಕಿದ್ದ. ಈ ಒಂದು ಆರೋಪದ ಮೇಲೆ ಇದೀಗ ಹುಬ್ಬಳ್ಳಿ…

Read More

ಬೆಂಗಳೂರು : ದರ್ಶನ್‌ ಅವರ ವಿರುದ್ಧದ ಕೊಲೆ ಕೇಸ್‌ನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿರುವ ಬೆನ್ನಲ್ಲೇ, ಅವರ ಜಾಮೀನು ಅರ್ಜಿಯ ಕುರಿತು ಚರ್ಚೆಗಳು ಆರಂಭವಾಗಿವೆ. ದರ್ಶನ್‌ ಪರವಾಗಿ ಮಾತನಾಡಿರುವ ಸಹನಟ ಪುಂಗ ಉಮೇಶ್‌, ಶ್ರೀರಾಮನು ಕೂಡ ಮೂರ್ನಾಲ್ಕು ಮರ್ಡರ್ ಮಾಡಿದ್ದ, ದರ್ಶನ್ ಮಾಡಿದ್ರಲ್ಲಿ ತಪ್ಪೇನು? ಎಂದು ರೇಣುಕಾಸ್ವಾಮಿ ಕೃತ್ಯವನ್ನು ಸಮರ್ಥಿಸಿ ವಿವಾದ ಸೃಷ್ಟಿಸಿದ್ದಾರೆ. ಹೌದು ನಟ ದರ್ಶನ್ ಗೆ ಸ್ಯಾಂಡಲ್ ವುಡ್ ನಲ್ಲೂ ಕೆಲವರು ಅಭಿಮಾನಿಗಳಿದ್ದಾರೆ. ಅದರಲ್ಲಿ ದರ್ಶನ್‌ ಅವರ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸಹನಟ ಪುಂಗ ಉಮೇಶ್‌ ಕೂಡ ಒಬ್ಬರು. ಇದೀಗ ಅವರು ರೇಣುಕಾಸ್ವಾಮಿ ಕೃತ್ಯವನ್ನು ಸಮರ್ಥನೆ ಮಾಡಿಕೊಂಡು ಮಾತನಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಪ್ರಪಂಚದಲ್ಲಿ ಯಾರೂ ಮಾಡಬಾರದ ತಪ್ಪೇನೂ ಇವರು ಮಾಡಿಲ್ಲ. ಏನ್‌ ಸಮಸ್ಯೆ ಆಗಿದೆ ಅನ್ನೋದನ್ನ ಹೇಳಿ. ಇಡೀ ಭಾರತ ದೇಶದಲ್ಲಿ ಈವರೆಗೂ ಒಂದೂ ಕೊಲೆನೂ ಆಗಿಲ್ವಾ? ಇವರೊಬ್ರೆ ಮಾಡಿರೋದಾ? ಇದನ್ನು ನೀವು ಹೇಳಿ. ಇವರೊಬ್ರೆ ಮಾಡಿರೋದಾ? ನನ್ನ ಪ್ರಶ್ನೆಗೆ ಉತ್ತರ ಹೇಳಿ. ಅಂಥಾ ಸತ್ಯ ಹರಿಶ್ಚಂದ್ರ ಎರಡೂವರೆ ವರ್ಷ…

Read More