Author: kannadanewsnow05

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ 24 ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಿದ್ದಾರೆ. ಬೆಂಗಳೂರಿನ ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ನಲ್ಲಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಗಳನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಲಾಯಿತು. ಚಾರ್ಜ್ ಶೀಟ್ ನಲ್ಲಿ ಹಲವು ಪ್ರಮುಖ ಸಾಕ್ಷಿಗಳನ್ನು ಉಲ್ಲೇಖಿಸಲಾಗಿದ್ದು, ನಾಲ್ಕು ಪ್ರಮುಖ ಚಿತ್ರಗಳು ನಟ ದರ್ಶನ್ ಅವರಿಗೆ ಮತ್ತು ಅವರ ಗ್ಯಾಂಗಿಗೆ ಸಂಕಷ್ಟ ತಂದೊಡ್ಡಲ್ಲಿವೆ ಎಂದು ಹೇಳಲಾಗುತ್ತಿದೆ. ಇದೀಗ CFSL ವರದಿಯಲ್ಲಿ ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೇನು ಮೆಸೇಜ್ ಮಾಡಿದ್ದಾನೆ ಎಂಬುದರ ಕುರಿತು ಮಾಹಿತಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ರೇಣುಕಾ ಸ್ವಾಮಿಗೆ ಪವಿತ್ರ ಗೌಡ ಚಪ್ಪಲಿಯಿಂದ ಹೊಡೆದಿದ್ದು, ಅಲ್ಲದೆ ಚಪ್ಪಲಿ ಮೇಲೆ ರಕ್ತದ ಕಲೆ ಇದ್ದಿದ್ದು ಹಾಗೂ ದರ್ಶನ್ ಬಟ್ಟೆಯ ಮೇಲು ಕೂಡ ರೇಣುಕಾಸ್ವಾಮಿಯ ಕಲೆ ಇದ್ದಿದ್ದು ಸಿಎಫ್ಎಸ್ಎಲ್…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹುಬ್ಬಳ್ಳಿಯಲ್ಲಿ ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹೇಳಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ರೈಲ್ವೆ ನೌಕರನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ನದೀಂ ಎಂದು ತಿಳಿದುಬಂದಿದೆ. ಹೌದು ಹುಬ್ಬಳ್ಳಿ ಕೇಶ್ವಾಪುರ ಮೂಲದ ಗೃಹಿಣಿಯೊಬ್ಬರಿಗೆ ಗಾಳ ಹಾಕಿದ್ದ ಬಂಧಿತ ನದೀಂ. ಗೃಹಿಣಿ ಜೊತೆ ಚಾಟ್ ಮಾಡಿ ಮಂಚಕ್ಕೆ ಕರೆದಿದ್ದ. ನಾನು ದೆಹಲಿಯಿಂದ ಹುಬ್ಬಳ್ಳಿಗೆ ಬಂದಿದ್ದೇನೆ, ರೈಲ್ವೆ ಗೆಸ್ಟ್ ಹೌಸ್ ನಲ್ಲಿ ಉಳಿದುಕೊಂಡಿದ್ದೇನೆ, ರೂಂಗೆ ಬಾ ಅಂತ ಫೋಟೋ‌ ಕಳುಹಿಸಿದ್ದ.ಇದರಿಂದ ಭಯಗೊಂಡ ಮಹಿಳೆ ಮೊದಲು ತನ್ನ ಗಂಡನಿಗೆ ವಿಷಯ ತಿಳಿಸಿದ್ದರು. ತಕ್ಷಣ ದಂಪತಿ ಕೇಶ್ವಾಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಗೃಹಿಣಿಯನ್ನು ಗೆಸ್ಟ್ ಹೌಸ್‌ಗೆ ಕಳುಹಿಸಿದ್ದರು. ಕೊನೆಗೆ ಕಾಮುಕ ನದೀಂನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನದೀಂ ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಜಾಬ್ ನೋಟಿಫಿಕೇಷನ್ ಪೇಜ್ ಕ್ರಿಯೇಟ್ ಮಾಡಿಕೊಂಡಿದ್ದ. ಈತ ಕೆಲಸದ ಅವಶ್ಯಕತೆ ಇರುವ ಹುಡುಗಿಯರು, ಮದುವೆಯಾದ ಮಹಿಳೆಯರನ್ನು ಟಾರ್ಗೆಟ್ ಮಾಡಿ…

Read More

ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಅವರ ಉದ್ಯಮದ ಪಾಲುದಾರರೇ ಪ್ರಚೋದನೆ ನೀಡಿದ್ದಾರೆ ಎಂದು  ಪತ್ನಿ ರೇಖಾ ಆರೋಪಿಸಿ ಕೇಸ್ ದಾಖಲಿಸಿದ್ದರು. ಈ ಕುರಿತು, ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೌದು ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ವಿರುದ್ಧ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆತ್ಮಹತ್ಯೆ ಮಾಡಿಕೊಂಡ ತಿಂಗಳ ಬಳಿಕ ಸಿಕ್ಕಪತ್ರ ಆಧರಿಸಿ ಕೇಸ್ ದಾಖಲಿಸಲಾಗಿತ್ತು. ಆತ್ಮಹತ್ಯೆ ಪತ್ರದಲ್ಲಿ ಪ್ರಚೋದನೆ ಬಗ್ಗೆ ಆರೋಪವಿಲ್ಲ ಕೇಸ್ ರದ್ದುಪಡಿಸುವಂತೆ ಮೂವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಚಾರಣೆ ನಡೆಸಿ  ಪ್ರಕರಣವನ್ನು ರದ್ದುಪಡಿಸಿ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಆದೇಶದಲ್ಲಿನ ಅಭಿಪ್ರಾಯ ಇವರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ ಎಂದು ನ್ಯಾ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.…

Read More

ತುಮಕೂರು : 2023 ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್​ ಶಾಸಕ ರಂಗನಾಥ್​ ಅವರು ಚುನಾವಣೆಯ ವೇಳೆ ಅಕ್ರಮ ಎಸಗಿದ್ದಾರೆ. ಅಡುಗೆ ಸಾಮಾನು, ಡಿನ್ನರ್​​ ಸೆಟ್​, ಪ್ರೀಪೇಯ್ಡ್​​ ಕಾರ್ಡ್​ಗಳನ್ನು ನೀಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ, ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಕೃಷ್ಣಕುಮಾರ್​ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಶಾಸಕ ರಂಗನಾಥ್ ಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ರಂಗನಾಥ್​ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಬಿಜೆಪಿ ನಾಯಕ ಕೃಷ್ಣಕುಮಾರ್​ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್​ ತಿರಸ್ಕರಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್​​ ಮತ್ತು ಉಜ್ಜಲ್​ ಭುಯಾನ್​ ಅವರಿದ್ದ ಪೀಠ ಕಾಂಗ್ರೆಸ್​ ಶಾಸಕರಿಗೆ ನೋಟಿಸ್​ ರವಾನಿಸಿದೆ. ಅಲ್ಲದೆ ಪರಾಜಿತ ಅಭ್ಯರ್ಥಿ ಕೃಷ್ಣಕುಮಾರ್​ ಮಾಡಿರುವ ಆರೋಪಗಳ ಬಗ್ಗೆ ಸೆಪ್ಟೆಂಬರ್​ 23 ರೊಳಗೆ ಪ್ರತಿಕ್ರಿಯಿಸಿ. ಈ ಬಗ್ಗೆ ಯಾವುದಾದರೂ…

Read More

ಬೆಂಗಳೂರು : 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣಿ ಗ್ರಾಮದಲ್ಲಿ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ ಇದೀಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಳಗೆ ಬಿದ್ದಿದ್ದಾನೆ. ಗ್ರಾಮ ಪಂಚಾಯಿತಿ ಪಿಡಿಎ ಪದ್ಮನಾಭ ಲೇಔಟ್ ನಲ್ಲಿ ಕೇಬಲ್ ಅಳವಡಿಸಲು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಈಗಾಗಲೇ ಮುಂಗಡವಾಗಿ 3 ಲಕ್ಷ ರೂಪಾಯಿ ಲಂಚ ಪಡೆದಿದ್ದ ಇಂದು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಓ ಪದ್ಮನಾಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಸದ್ಯ ಪಿಡಿಓ ಪದ್ಮನಾಭನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Read More

ಕೊಪ್ಪಳ : ಕ್ರೀಡಾಕೂಟದಲ್ಲಿ ಭಾಗವಹಿಸಿ ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಒಂದು ಪಲ್ಟಿ ಆಗಿದ್ದ ಪರಿಣಾಮ ಅದರಲ್ಲಿದ್ದ ಸುಮಾರು 30 ಮಕ್ಕಳಿಗೂ ಹೆಚ್ಚು ಗಾಯಗಳಾಗಿರುವ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಬಳಿ ನಡೆದಿದೆ. ಇಂದು ಕ್ರೀಡಾಕೂಟಕ್ಕೆಂದು ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳು, ಕೊಪ್ಪಳ ನಗರದ‌ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಮುಗಿಸಿಕೊಂಡು ಮರಳಿ ಹೋಗುತ್ತಿದ್ದ ವೇಳೆ ಟಾಟಾ ಏಸ್ ವಾಹನಕ್ಕೆ ಆರ್​ಟಿಓ ಅಧಿಕಾರಿ ನಿಲ್ಲಿಸಲು ಸೂಚನೆ ನೀಡಿದ್ದಾನೆ. ಹೀಗಾಗಿ ದಿಢೀರನೆ ನಿಲ್ಲಿಸಲು ಹೋಗಿದ್ದರಿಂದ ಟಾಟಾ ಏಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. ಇನ್ನು ದುರ್ಘಟನೆ ನಡೆಯುತ್ತಿದ್ದಂತೆ ಆರ್​ಟಿಓ ಅಧಿಕಾರಿಯನ್ನು ತರಾಟೆಗೆ ತೆಗದುಕೊಂಡ ಸ್ಥಳೀಯರು, ಅಧಿಕಾರಿಯನ್ನು ಹಿಡಿದು ತಳ್ಳಾಡಿದ್ದಾರೆ. ಆರ್​ಟಿಓ ಅಧಿಕಾರಿಯಿಂದಲೇ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಸಧ್ಯ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ತಮಿಳುನಾಡು : ಇತ್ತೀಚಿಗೆ ಜನರಿಗೆ ಮಾತನಾಡೋದು ಬಿಡಿ ತಿನ್ನೋಕು ಸಹ ಟೈಮ್ ಇಲ್ಲ. ಹಾಗಾಗಿ ಆನ್ಲೈನ್ ನಲ್ಲಿ ತಿಂಡಿ, ಊಟ ಅಲ್ಲದೆ ಸ್ನಾಕ್ಸ್ ಗಳನ್ನು ಸಹ ಆರ್ಡರ್ ಮಾಡಿ ತಿನ್ನುವವರ ಸಂಖ್ಯೆನೆ ಹೆಚ್ಚಾಗಿದೆ. ಇದೀಗ ಆನ್ಲೈನ್ ನಲ್ಲಿ ನೂಡಲ್ಸ್ ಆರ್ಡರ್ ಮಾಡಿ ಅದನ್ನು ತಿಂದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹೌದು ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್​​ ಇಷ್ಟವೆಂದು ಬಾಲಕಿಯ ತಾಯಿ ಕಳೆದ ಶನಿವಾರ ರಾತ್ರಿ ಆನ್‌ಲೈನ್‌ನಲ್ಲಿ ಮಸಾಲೆಯುಕ್ತ ನೂಡಲ್ಸ್ ಅನ್ನು ಆರ್ಡರ್ ಮಾಡಿದ್ದರು. ರಾತ್ರಿ ನೂಡಲ್ಸ್ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ವೈದ್ಯರು ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.…

Read More

ಬೆಂಗಳೂರು : ಮೈಸೂರು ಜಿಲ್ಲೆಯ ಕೆ ಆರ್ ನಗರದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣಗೆ ಮತ್ತೊಂದು ರಿಲೀಫ್ ಸಿಕ್ಕಿದ್ದು, ಈ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಇದೀಗ ಷರತ್ತಿನಲ್ಲಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಹೌದು ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಹೊರ ರಾಜ್ಯಗಳಿಗೆ ಸಂಚರಿಸಲು ಕೋರ್ಟ್ ಇದೀಗ ಎಚ್ಡಿ ರೇವಣ್ಣ ಅವರಿಗೆ ಅನುಮತಿ ನೀಡಿದೆ. ಆದರೆ ಕೋರ್ಟ್ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳದಂತೆ ಷರತ್ತನ್ನು ಮಾರ್ಪಾಡು ಮಾಡಲಾಗಿದೆ. ಈ ಕುರಿತು ಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ. ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು HD ರೇವಣ್ಣ ಅಪಹರಣ ಮಾಡಿದ್ದಾರೆ ಎಂದು ಅಪಹರಣಕ್ಕೆ ಒಳಗಾದ ಮಹಿಳೆಯ ಮಗ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ 22 ಕೋಟಿ ರೂಪಾಯಿ ವಾಪಸ್ ವರ್ಷ ಗಟ್ಟಲ್ಲಿ ಬಾಕಿ ಇದ್ದ 22 ಕೋಟಿ ಹಣ ಸರ್ಕಾರದ ಇದೀಗ ಜಮಯಾಗಿದೆ. SBI ಬ್ಯಾಂಕ್ ನಿಂದ 9.67 ಕೋಟಿ ಸರ್ಕಾರದ ಖಜಾನೆಗೆ ಜಮೆಯಾಗಿದೆ ಹಾಗೂ ಪಿಎನ್‌ಬಿ ಇಂದ ಒಂದು ವರ್ಷದ ಬಡ್ಡಿ ಸಮೇತ 13.9 ಕೋಟಿ ಹಣ ಜಮೆ ಆಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ ಹಣ ಇದೀಗ ಪಾವತಿಯಾಗಿದೆ. ಕಳ್ಳಾಟ ಆಡುತ್ತಿದ್ದ SBI ಮತ್ತು PNB ಎರಡು ಬ್ಯಾಂಕ್ಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿತ್ತು. ಅಗಸ್ಟ್ ನಲ್ಲಿ ಎಸ್ ಬಿ ಐ ಹಾಗೂ ಪಿ ಎನ್ ಬಿ ವಿರುದ್ಧ ನಿರ್ಧಾರ ಕೈಗೊಂಡಿತ್ತು. ಎರಡು ಬ್ಯಾಂಗಳಲ್ಲಿದ್ದ ಸರ್ಕಾರದ ಎಲ್ಲಾ ಖಾತೆ ಕ್ಲೋಸ್ ಮಾಡಲು ನಿರ್ಧರಿಸಿತ್ತು. ಸರ್ಕಾರದ ನಿರ್ಧಾರಕ್ಕೆ ಕಂಗೆಟ್ಟು ಇದೀಗ ಬ್ಯಾಂಕುಗಳು ಹಣ ವಾಪಸ್ ನೀಡಿವೆ ಎಂದು ತಿಳಿದುಬಂದಿದೆ. ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸದಿರುವ ಹಿನ್ನೆಲೆಯಲ್ಲಿ ಭಾರತೀಯ…

Read More

ಹಾವೇರಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ, ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಸಿಎಂ ಕುರ್ಚಿಯಲ್ಲಿ ಸದ್ಯ ಟಗರು ಕುಳಿತಿದೆ, ಅದನ್ನು ಕೆಳಗಿಳಿಸೋದು ಬಹಳ ಕಷ್ಟ ಎಂದು ತಿಳಿಸಿದ್ದಾರೆ. ಹಾವೇರಿಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಸಿಎಂ ಆಗುವ ಆಸೆ ಇದೆ ಎಂಬ ಆರ್.ವಿ ದೇಶಪಾಂಡೆ ಹೇಳಿಕೆ ವಿಚಾರವಾಗಿ ಜಮೀರ್ ಟಾಂಗ್ ನೀಡಿದ್ದು, ಸಿಎಂ ಆಗುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಸದ್ಯ ಕುರ್ಚಿ ಕಾಲಿ ಇಲ್ಲ. ಸಿಎಂ ಕುರ್ಚಿಯಲ್ಲಿ ನಮ್ಮ ಟಗರು ಕುಳಿತುಕೊಂಡಿದೆ. ಕುರ್ಚಿಯಿಂದ ಟಗರು ಇಳಿಸುವುದು ಬಹಳ ಕಷ್ಟ. ಟಗರು ಕೊಂಬು ಮುರಿಯಲು ಸಾಧ್ಯವಿಲ್ಲ. ಟಗರು ಟಗರೆ ಎಂದು ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.

Read More