Author: kannadanewsnow05

ಬೆಂಗಳೂರು : ಮುಡಾದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್ ಇಡಿ ಅಧಿಕಾರಿಗಳಿಗೆ ಛೀಮಾರಿ ಹಾಕಿ ಅವರ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ವೀನ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ. ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು…

Read More

ಬೆಂಗಳೂರು : ಕನಕಪುರದಲ್ಲಿ ನಾಳೆ ನಿಗದಿಯಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ರದ್ದು ಮಾಡಿದ್ದಾರೆ. ಇಂದು, ನಾಳೆ ಸ್ವಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರವಾಹ ಹಮ್ಮಿಕೊಂಡಿದ್ದರು. ಏಕಾಏಕಿ ನಾಳಿನ ಜನಸ್ಪಂದನ ಕಾರ್ಯಕ್ರಮವನ್ನು ಡಿಕೆ ಶಿವಕುಮಾರ್ ರದ್ದುಗೊಳಿಸಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಡಿಸಿಎಂ ಡಿಕೆ ಶಿವಕುಮಾರ್ ಅಲಭ್ಯರಾಗಿದ್ದು, ಅನ್ಯ ಕಾರ್ಯಗಳ ನಿಮಿತ್ಯ ನಾಳೆಯಿಂದ ಮೂರು ದಿನಗಳ ಕಾಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಲಭ್ಯರಾಗಿರಲಿದ್ದಾರೆ. ಇಂದು ಕೋಡಿಹಳ್ಳಿ ಶಿವಕುಮಾರ್ ಜನಸ್ಪಂದನಾ ಕಾರ್ಯಕ್ರಮ ನಡೆಸಿದರು.ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು.

Read More

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಇನ್ನು ಎರಡು ವರ್ಷ 10 ತಿಂಗಳು ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಎರಡು ವರ್ಷ 10 ತಿಂಗಳು ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಶಾಸಕರು ಐದು ವರ್ಷಕ್ಕಾಗಿ ಸಿಎಂ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ್ದೇವೆ. ಯಾವುದೇ ಪಕ್ಷ ಚೇಂಜ್ ಮಾಡಬೇಕಾದರೆ ಪಾರ್ಟಿ ಹೈಕಮಾಂಡ್ ಶಾಸಕರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿ ಸದ್ಯ ಉದ್ಭವಿಸಿಲ್ಲ ಎಂದು ಖರ್ಗೆ ಕೂಡ ಹೇಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಮಾಸ್ ಲೀಡರ್ ಎಂದು ತಿಳಿಸಿದರು. ಬಿಜೆಪಿಯವರು ಚಿಲ್ಲರೆ ಟೀಕೆ ಮಾಡುತ್ತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ನ್ಯಾಯದ ಬಗ್ಗೆ ಮಾತನಾಡಲಿ ಬಿಜೆಪಿಯವರಿಗೆ ಉತ್ತಮ ಮಾರ್ಗದರ್ಶಕರ ಅವಶ್ಯಕತೆ ಇದೆ. ಮೊದಲ ತ್ರೈಮಾಸಿಕದಲ್ಲಿ ರಾಜ್ಯದಲ್ಲಿ 23% ತೆರಿಗೆ ಸಂಗ್ರಹವಾಗಿದೆ. ಗ್ಯಾರಂಟಿಯ ಬಗ್ಗೆ ಟೀಕಿಸುವ…

Read More

ದಾವಣಗೆರೆ : ಸೂರ್ಯ ಚಂದ್ರ ಇರೋವರೆಗೂ ವೀರಶೈವ ಲಿಂಗಾಯತರು ಒಂದೇ ಎಂದು ವೀರಶೈವ ಪೀಠಾಚಾರ್ಯರ ಶೃಂಗ ಸಭೆಯಲ್ಲಿ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಈ ಒಂದು ಹೇಳಿಕೆ ನೀಡಿದ್ದಾರೆ. ದಾವಣಗೆರೆ ನಗರದಲ್ಲಿ ವೀರಶೈವ ಪೀಠಾಚಾರ್ಯರ ಶೃಂಗಸಭೆ ಆಯೋಜನೆ ಮಾಡಲಾಗಿದ್ದು, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಈ ಒಂದು ಶೃಂಗಸಭೆ ನಡೆಯಲಿದೆ. ಲಿಂಗಾಯತ ಸಮುದಾಯ ಹಿಂದೂ ಸಮಾಜದಲ್ಲಿ ಬರಬೇಕು ಸನಾತನ ಪರಂಪರೆಯಲ್ಲಿ 99 ಜಾತಿಗಳು ಲಿಂಗಾಯತರು ಇದ್ದಾರೆ. ವಾರ್ಷಿಕ ಆದಾಯದಲ್ಲಿ 2% ಸಮುದಾಯದ ಉನ್ನತಿಗೆ ಬರಬೇಕು. ಕಡಿಮೆ ಆದಾಯ ಇದ್ದವರನ್ನು ಹಿಂದುಳಿದ ವರ್ಗ ಎಂದು ಪರಿಗಣನೆ ಮಾಡಲಾಗಿದೆ. ವೀರಶೈವ ಲಿಂಗಾಯತ ಎರಡು ಒಂದೇ ಇದನ್ನೇ ಮಹಾಸಭೆ ಒಪ್ಪಿದೆ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಹೇಳಿಕೆ ನೀಡಿದ್ದಾರೆ. ವೀರಶೈವ ಪಂಚಪೀಠಗಳು ಒಂದೇ ವೇದಿಕೆಯಲ್ಲಿ ಆಗಮಿಸಿದ್ದಾರೆ. ಇಂದು ಕೋಟ್ಯಾಂತರ ಭಕ್ತರ ಆಸೆ ಪೂರೈಕೆಯಾಗಿದೆ. 16 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ (2025) ಅನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದ್ದು, ಟಿಎಸ್ ನಾಗಾಭರಣ ಮತ್ತು ಮತ್ತಿತರರು ಸೇರಿ ಹೈಕೋರ್ಟ್ ನಲ್ಲಿ ಈ ಕುರಿತು ಪಿ ಐ ಎಲ್ ಸಲ್ಲಿಸಿದರು. ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಗೆ ನೋಟಿಸ್ ನೀಡಿ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಹೈಕೋರ್ಟ್ ನಲ್ಲಿ ಈ ಕುರಿತು ಇಂದು ವಿಚಾರಣೆ ನಡೆಯಿತು. ಬಿಬಿಎಂಪಿಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ರಾಜ್ಯ ಸರ್ಕಾರದ ಹೊಸ ಕಾಯಿದೆಯಿಂದ ಚುನಾವಣೆ ಮತ್ತಷ್ಟು ವಿಳಂಬವಾಗಿದೆ. ಹಾಗಾಗಿ ಇದರಲ್ಲಿ ಸಂವಿಧಾನದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಎಂಬಿ ನರಗುಂದ ವಾದ ಮಂಡಿಸಿದರು. ಬಳಿಕ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ ನೀಡಿದೆ. 2025ರ ಮೇ 15ರಂದು ರಾಜ್ಯ ಸರ್ಕಾರ ಹೊರಡಿಸಿರುವ ಗ್ರೇಟರ್‌ ಬೆಂಗಳೂರು ಆಡಳಿತ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಭೀಕರ ಕೊಲೆ ನಡೆದಿದ್ದು, ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಭೈರತಿ ಬಸವರಾಜ್ ಹೆಸರು ಕೇಳಿಬಂದಿತ್ತು. ಪೊಲೀಸರು ಅವರನ್ನು ವಿಚಾರಣೆಗೂ ಒಳಪಡಿಸಿದ್ದರು. ಇದೀಗ ಇಂದು ಭರತಿ ಬಸವರಾಜ್ ಸಹೋದರ ಮಗ ಅನಿಲ್ ಸೇರಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಈ ಒಂದು ಪ್ರಕರಣಕ್ಕೆ ಮತ್ತೊಂದು ರೋಚಕ ಟ್ವಿಸ್ಟ್ ಸಿಕ್ಕಿದ್ದು, ಬಿಕ್ಲ ಶಿವನ ಕೊಲೆ ಆರೋಪಿ ಆಗಿರುವ ಜಗ್ಗ ಅಲಿಯಾಸ್‌ ಜಗದೀಶ್‌ ಸಾಮಾನ್ಯ ವ್ಯಕ್ತಿಯಲ್ಲ. ಜಗ್ಗ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಬಹಳ ಬಲಿಷ್ಠ ವ್ಯಕ್ತಿ ಅನ್ನೋದು ಗೊತ್ತಾಗಿದೆ. ಆರೋಪಿ ಜಗ್ಗನಿಗೆ ಸಿನಿಮಾ ನಂಟಿರುವುದು ಬೆಳಕಿಗೆ ಬಂದಿದೆ. ನಟಿ ರಚಿತಾ ರಾಮ್‌ಗೆ ಉಡುಗೊರೆ ನೀಡಿರುವ ಫೋಟೋಗಳು ವೈರಲ್ ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಸಿನಿಮಾ ನಂಟಿನ ವಿಚಾರಕ್ಕೆ ಬರೋದಾದರೆ, ರವಿ ಬೋಪಣ್ಣ ಸಿನಿಮಾದ ಶೂಟಿಂಗ್‌ ವೇಳೆ ಈಗ ನಟಿ ರಚಿತಾ ರಾಮ್‌ಗೆ ಸೀರೆ…

Read More

ನವದೆಹಲಿ : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾರಿ ನಿರ್ದೇಶನಾಲಯ ಅರ್ಜಿ ವಜಾಗೊಳಿಸಿದೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರವನ್ನ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದ್ದು, ಇಡಿಯನ್ನು ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ರಾಜಕೀಯ ಹೋರಾಟ ಚುನಾವಣೆ ಕಣದಲ್ಲಿರಲಿ ಎಂದು ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದ್ದು, ದಯವಿಟ್ಟು ನನ್ನ ಬಾಯಿಯನ್ನು ತೆರೆಯುವಂತೆ ಮಾಡಬೇಡಿ ಬಾಯಿ ತೆರೆದರೆ ಕಠಿಣ ಟೀಕೆಗಳನ್ನು ನೀವು ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸಿಜೆಐ ಬಿ.ಆರ್ ಗವಾಯಿ ಇಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ದುರಾದೃಷ್ಟವಶಾತ್ ನನಗೂ ಮಹಾರಾಷ್ಟ್ರದಲ್ಲಿ ಅನುಭವವಿದೆ. ಇದೇ ರೀತಿ ಅನ್ಯಾಯವನ್ನು ದೇಶಾದ್ಯಂತ ಮುಂದುವರಿಸುವಂತಿಲ್ಲ ಮತದಾರರ ಮುಂದೆ ರಾಜಕೀಯ ಹೋರಾಟ ಮಾಡಲಿ ರಾಜಕೀಯ ಹೋರಾಟಕ್ಕೆ ಇಡಿಯನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ? ಎಂದು ಇಡಿಯನ್ನು ಸುಪ್ರೀಂ ಕೋರ್ಟ್ ಸಿಜೆಐ…

Read More

ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ನಲ್ಲಿ ಇಡಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾ ಗೊಳಿಸಿದ್ದಾರೆ. ಈ ಮೂಲಕ ಸಿಎಂ ಪತ್ನಿ ಪಾರ್ವತಿ ಹಾಗು ಸಚಿವ ಭೈರತಿ ಸುರೇಶ್ ಅವರಿಗು ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಸಿಎಂ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್ ನಲ್ಲಿ ರಿಲೀಫ್ ಸಿಕ್ಕಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡೀ ಅರ್ಜಿ ಸಲ್ಲಿಸಿತ್ತು. ಇದೀಗ ಇಡಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಡಾದಿಂದ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕಿದೆ. ಹಿರಿ ಪ್ರಕರಣದಲ್ಲಿ ಸಚಿವ ಭೈರತಿ ಹೆಸರು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮುಖ್ಯಮಂತ್ರಿಯ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ, ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜುಲೈ 25ರಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದೆ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯ ನೀಡಿದ್ದು, ಜುಲೈ 25ರಂದು ನಾನು ಮತ್ತು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದೇವೆ ಅಷ್ಟು ಮಾತ್ರ ನನಗೆ ಗೊತ್ತು ಮಿಕ್ಕಿದ್ದು ಅಧಿವೇಶನ ನಡಿತಿದೆ. ಬಿಬಿಎಂಪಿ ವಿಭಜನೆ ವಿರೋಧಿಸಿ ಪಿಐಎಲ್ ಅರ್ಜಿ ಸಲ್ಲಿಸಿದ ವಿಚಾರವಾಗಿ ಅವರ ಹಕ್ಕನ್ನು ನಾನು ಮೊಟಕುಗೊಳಿಸಲು ಆಗುತ್ತಾ? ಪ್ರಶ್ನಿಸಬಹುದು ಕೋರ್ಟಿಗೆ ಹೋಗಬಹುದು ಅದು ತಪ್ಪಲ್ಲ ಅವರು ಪಿಐಎಲ್ ಹಾಕುವುದನ್ನು ಬೇಡ ಅನ್ನೋಕಾಗುತ್ತ? ಎಂದು ತಿಳಿಸಿದರು. ಸಾರ್ವಜನಿಕರು ದಿನಾಲು ನನ್ನ ಭೇಟಿ ಮಾಡುತ್ತಾರೆ ಅದು ಸ್ವಾಭಾವಿಕ ಎಲ್ಲಿ ತಮ್ಮ ಕೆಲಸ ಕಾರ್ಯಗಳು ಆಗುತ್ತವೆ. ಪಕ್ಷದ ಕಾರ್ಯಕರ್ತರಿಗೆ ಪರಿಹಾರ ಒದಗಿಸುತ್ತೇವೆ ಎರಡು ದಿನ…

Read More

ನವದೆಹಲಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ನಲ್ಲಿ ಇಡಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾ ಗೊಳಿಸಿದ್ದಾರೆ. ಈ ಮೂಲಕ ಸಿಎಂ ಪತ್ನಿ ಪಾರ್ವತಿ ಅವರಿಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಸಿಎಂ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್ ನಲ್ಲಿ ರಿಲೀಫ್ ಸಿಕ್ಕಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡೀ ಅರ್ಜಿ ಸಲ್ಲಿಸಿತ್ತು. ಇದೀಗ ಇಡಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಡಾದಿಂದ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕಿದೆ.

Read More