Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಜೆಪಿಯ ಶಾಸಕ ಉದಯ್ ಗರುಡಾಚಾರ್ ಅವರ ತಂದೆ ಹಾಗೂ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್ ಇಂದು ನಿಧಾನರಾಗಿದ್ದಾರೆ. ಬಿಎನ್ ಗರುಡಾಚಾರ್ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ ಗರುಡಾಚಾರ್ ಅವರ ತಂದೆ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ನಿವಾಸದಲ್ಲಿ ಬಿ ಎನ್ ಗರುಡಾಚಾರ್ಯ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಿಎನ್ ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಡಿಸಿಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿ ಸೇವೆ ಸಲ್ಲಿಸಿದರು. 1963 ರಲ್ಲಿ ಎನ್ ಆರ್ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ಮಂಡ್ಯ ಜಿಲ್ಲೆಯ, ನಾಗಮಂಗಲ ತಾಲೂಕಿನ, ಬಿಂಡಿಗೆನವಿಲೇ ಗ್ರಾಮದ ಮೂಲದವರಾದ ಬಿ.ಎನ್.ಗರುಡಾಚಾರ್ ರವರು ತಮ್ಮ ಶಿಕ್ಷಣವನ್ನು ಪೂರೈಸಿ, ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಯಾಗಿ ನೇಮಕಗೊಂಡು, ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ,…
ಬೆಂಗಳೂರು : ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್ ಟೈಲ್ ಟೆಕ್ನಲಜಿ ಕೋರ್ಸಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು. ಈ ಡಿಪ್ಲೊಮಾ ಕೋರ್ಸ್ 3 ವರ್ಷದ ಅವಧಿಯದ್ದಾಗಿದ್ದು. ಬೆಂಗಳೂರು ಕೆ.ಆರ್.ಸರ್ಕಲ್ನ್ಲ್ಲಿರುವ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯಲ್ಲಿ ಪ್ರವೇಶ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಉಷಾ ಎಸ್. ಮೊಬೈಲ್ ಸಂಖ್ಯೆ: 9481101049, ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸಯ್ಯ ವಿ. ಮೊಬೈಲ್ ಸಂಖ್ಯೆ: 9448705205 ಇವರನ್ನು ಸಂರ್ಕಿಸಬಹುದಾಗಿದೆ. ಅಥವಾ ಸಂಸ್ಥೆಗೆ ಭೇಟಿ ನೀಡಿ ಕಾರ್ಯಾಲಯದಿಂದ ಮಾಹಿತಿ ಪಡೆಯಬುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಶನಿ ಪ್ರವೇಶ ಸಂಚಾರ ದಿನದಂದು ಮಾಡಬೇಕಾದ ಪೂಜೆ ವಿಶ್ವವಸು ನಾಮ ಸಂವತ್ಸರ ಪಂಚಾಂಗದ ಪ್ರಕಾರ, ಶನಿಯ ಸಂಚಾರವು ಮಾರ್ಚ್ 29, ಶನಿವಾರದಂದು ಸಂಭವಿಸುತ್ತದೆ. ಶನಿಯ ಸಂಚಾರವು ವಿವಿಧ ರಾಶಿಚಕ್ರ ಚಿಹ್ನೆಗಳಿಗೆ ವಿವಿಧ ಪ್ರಯೋಜನಗಳನ್ನು ತರುತ್ತದೆ. ಕೆಲವು ರಾಶಿಚಕ್ರ ಚಿಹ್ನೆಗಳು ಅನುಕೂಲಕರ ಫಲಿತಾಂಶಗಳನ್ನು ನೀಡುತ್ತವೆ ಮತ್ತು ಕೆಲವು ರಾಶಿಚಕ್ರ ಚಿಹ್ನೆಗಳು ಪ್ರತಿಕೂಲ ಫಲಿತಾಂಶಗಳನ್ನು ನೀಡುತ್ತವೆ. ಆ ಪ್ರತಿಕೂಲ ಪರಿಣಾಮಗಳಿಂದ ಹೊರಬರಲು, ನಾವು ಯಾವುದಾದರೂ ದೇವತೆಗೆ ಶರಣಾಗಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಆ ದೇವತೆಗಳು ಯಾರು ಮತ್ತು ಶನಿ ಪ್ರವೇಶ ಸಂಚಾರ ದಿನದಂದು ಅವರನ್ನು ಪೂಜಿಸುವುದರಿಂದ ಶನಿದೇವನ ಪ್ರಭಾವದಿಂದ ತಪ್ಪಿಸಿಕೊಳ್ಳಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ…
ಬೆಂಗಳೂರು : ಇತ್ತೀಚಿಗೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದಳು ಎಂಬ ಆರೋಪದ ಮೇಲೆ ಮಹಿಳೆಯನ್ನು ಮರಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ಪ್ರಕರಣ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಏಕಸದಸ್ಯ ಪೀಠ ನಡೆಸಿತು. ಮಹಿಳೆಯ ಮೇಲೆ ಹಲ್ಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಆರೋಪಿಗಳಾದ ಲಕ್ಷ್ಮೀ, ಶಿಲ್ಪಾ ಹಾಗೂ ಸುಂದರ್ ಅವರಿಗೆ ಷರತ್ತುಬದ್ದ ಜಾಮೀನು ನೀಡಿ ಆದೇಶಿಸಿತು. ಪ್ರಕರಣದ ಹಿನ್ನೆಲೆ? ಮಾರ್ಚ್ 19ರಂದು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯೊಬ್ಬರು ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ಈ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಘಟನೆ ಖಂಡಿಸಿ ದಲಿತ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ…
ಬೆಂಗಳೂರು : ಇತ್ತೀಚಿಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಪ್ರಧಿಕಾರ ರಚನೆ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ. ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ವಿಶೇಷ ತನಿಖಾ ತಂಡ (SIT) ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರತ್ಯೇಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಸಾವಿರಾರು ಪುಟಗಳ ಆರೋಪಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷ್ಗೆ ಅನುವಾದಿಸಿ ರಾಜ್ಯಪಾಲರಿಗೆ ತನಿಖಾಧಿಕಾರಿಗಳು ಸಲ್ಲಿಸಿದ್ದರು. ಆದರೆ ಕೆಲ ತಾಂತ್ರಿಕ ಕಾರಣ ಮುಂದಿಟ್ಟು ಅವುಗಳಿಗೆ ಸ್ಪಷ್ಟನೆ ಕೋರಿ…
ಬೆಂಗಳೂರು : ಸಾಮಾನ್ಯವಾಗಿ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಸರತಿ ಸಾರಿನಲ್ಲಿ ನಿಂತು ದೇವರ ಪ್ರಸಾದ ತೆಗೆದುಕೊಳ್ಳುತ್ತಿದ್ದರು. ಅಲ್ಲದೇ ಪ್ರಸಾದ ತೆಗೆದುಕೊಂಡು ತಮ್ಮ ಅಕ್ಕ ಪಕ್ಕದ ಮನೆಗೆ ಕೊಡೋದು ವಾಡಿಕೆ. ಆದರೆ ಇನ್ನು ಮುಂದೆ ಕರ್ನಾಟಕದ 14 ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ಪ್ರಸಾದವು ನಿಮ್ಮ ಬಾಗಿಲಿಗೇ ಬರಲಿದೆ. ಹೌದು ದೇಗುಲದಿಂದ ಕಲ್ಲು ಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಬಿಲ್ವಪತ್ರೆ, ಕುಂಕುಮ, ಹೂವಿನ ಪ್ರಸಾದವನ್ನು ಭಕ್ತರು ತರಿಸಿಕೊಳ್ಳಬಹುದು. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕಾ ದೇಗುಲ ಸೇರಿದಂತೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇಗುಲಗಳ ಪ್ರಸಾದ ಆನ್ಲೈನ್ ಮೂಲಕ ವಿತರಿಸುವ ‘ಇ-ಪ್ರಸಾದ ಕಾರ್ಯಕ್ರಮಕ್ಕೆ ಗುರುವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಮುಖ್ಯ ಕಚೇರಿಯಲ್ಲಿ ಚಾಲನೆ ನೀಡಿದರು. ಆನ್ಲೈನ್ನಲ್ಲಿ ಪ್ರಸಾದ ತರಿಸಿಕೊಳ್ಳುವುದು ಹೇಗೆ? ಪ್ರಸಾದವನ್ನು ತರಿಸಿಕೊಳ್ಳಲು ಇಚ್ಛಿಸುವ ಭಕ್ತರು ಮುಜರಾಯಿ ಇಲಾಖೆಯ ಅಧಿಕೃತ ವೆಬ್ಸೈಟ್ csc.devalayas.com ಕ್ಲಿಕ್ ಮಾಡಿ. ಅಲ್ಲಿ ಬಲಭಾಗದಲ್ಲಿ ಮೇಲ್ಗಡೆ ಇರುವ ಲಾಗಿನ್ ವಿಥ್ ಡಿಜಿಟಲ್ ಸೇವಾ ಕನೆಕ್ಟ್…
ಬೆಂಗಳೂರು : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಚ್ಚು ಹಿಡಿದು ರಿಲೀಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನಗಳ ಕಾಲ ಪೊಲೀಸ್ ಸ್ಟಡಿಯಲ್ಲಿದ್ದಂತಹ ಬಿಗ್ ಬಾಸ್ ಮಾಜಿ ಸ್ಪರ್ಧೆಗಳಾದ ರಜತ್ ಮತ್ತು ವಿನಯ್ ಗೌಡ ಅವರ ಪೊಲೀಸ್ ಕಸ್ಟಡಿ ಎಂದು ಅಂತ್ಯವಾಗಿದೆ. ಹೌದು ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಗೌಡ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು, ಸಂಜೆ 4 ಗಂಟೆಗೆ ಮತ್ತೆ ಕೋರ್ಟಿಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟಿಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ಕಳೆದ 3 ದಿನದಿಂದ ಬಸವೇಶ್ವರನಗರ ಪೊಲೀಸರ ಕಸ್ಟಡಿಯಲ್ಲಿ ರಜತ್ ಮತ್ತು ವಿನಯ್ ಗೌಡ ಇದ್ದರು.
ದಾವಣಗೆರೆ : ಹಳ್ಳದ ಚೆಕ್ಡ್ಯಾಂನಲ್ಲಿ ಈಜಾಡಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬಾನುವಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಬಾನುವಳ್ಳಿ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಮೊಹ್ಮದ್ ತನ್ವೀರ್ (13) ಎಂದು ತಿಳಿದುಬಂದಿದೆ. ಗ್ರಾಮದ ಸಮೀಪ ರಾಯಪುರ ರಸ್ತೆಯಲ್ಲಿರುವ ದೊಡ್ಡಹಳ್ಳದ ಚೆಕ್ಡ್ಯಾಂನಲ್ಲಿ ಈಜಾಡಿ ಬರುವುದಾಗಿ ಸಂಜೆ 4ಕ್ಕೆ ಹೊರಟಿದ್ದ ತನ್ವೀರ್ ಮನೆಗೆ ಮರಳಿರಲಿಲ್ಲ. ಆಗ ಹಳ್ಳಕ್ಕೆ ಈಜುಗಾರರೊಂದಿಗೆ ಹೋಗಿ ಹುಡುಕಾಡಿದಾಗ ಮಧ್ಯರಾತ್ರಿ ಶವ ಪತ್ತೆಯಾಯಿತು.ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನವದೆಹಲಿ : ಮುಂದಿನ ತಿಂಗಳು ಏಪ್ರಿಲ್ 14, 2025 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಂದು ಸರ್ಕಾರಿ ರಜಾದಿನ ಘೋಷಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 14, 2025 (ಸೋಮವಾರ) ರಜಾದಿನವೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಬಹುದು. 1. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು / ಇಲಾಖೆಗಳು. 2. UPSC/ CVC/C&AG/ ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ / ರಾಷ್ಟ್ರೀಯಪರಿಶಿಷ್ಟ ಜಾತಿಗಳ ಆಯೋಗ/ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ/ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ/ರಾಷ್ಟ್ರೀಯ ಅಧ್ಯಕ್ಷರ ಸಚಿವಾಲಯ / ಉಪಾಧ್ಯಕ್ಷರ ಸಚಿವಾಲಯ/ಸುಪ್ರೀಂ ಕೋರ್ಟ್ / ಹೈಕೋರ್ಟ್ / ಕೇಂದ್ರ ಆಡಳಿತ ನ್ಯಾಯಮಂಡಳಿ / ಕೇಂದ್ರ ಮಾಹಿತಿ ಆಯೋಗ/ಪ್ರಧಾನ ಮಂತ್ರಿಗಳ ಕಚೇರಿ ಕ್ಯಾಬಿನೆಟ್ ಸಚಿವಾಲಯ / ಭಾರತದ ಚುನಾವಣಾ ಆಯೋಗ / ರಾಷ್ಟ್ರೀಯ…
ಬಳ್ಳಾರಿ : ಪತಿ ಪತ್ನಿಯರ ನಡುವೆ ಕೌಟುಂಬಿಕ ಕಲಹದಿಂದ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಹಲಿಮಾ (42) ಹಾಗು ಪತಿ ಖರೀಂ ಸಾಬ್ (45) ಸಾವನ್ನಪ್ಪಿರುವ ದಂಪತಿಗಳು ಎಂದು ತಿಳಿದುಬಂದಿದೆ. ವೈಯಕ್ತಿಕ ವಿಚಾರಗಳಿಗಾಗಿ ದಂಪತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು.ಬುಧವಾರ ತಡರಾತ್ರಿ ಇಬ್ಬರ ಮಧ್ಯ ಗಲಾಟೆ ನಡೆದಿದೆ. ಈ ವೇಳೆ ಕೋಪಗೊಂಡಿದ್ದ ಪತಿ ಗುರುವಾರ ಬೆಳಗಿನ ಜಾವ ಪತ್ನಿಯನ್ನು ನೇಣಿಗೆ ಹಾಕಿ ಕೊಂದು ತಾನು ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಕುಡತಿನಿ ಠಾಣೆ ಪೊಲೀಸರು ತಿಳಿಸಿದ್ದಾರೆ.













