Author: kannadanewsnow05

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ MLC ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ಈ ಒಂದು ಮುಡಾ ಕೇಸ್ ಇಡಿ ಹಾಗು ಸಿಬಿಐ ತನಿಖೆಗೆ ಕೊಟ್ಟರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ತಿಳಿಸಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆದರುವ ಅವಶ್ಯಕತೆ ಇಲ್ಲ. ಮುಡಾ ಕೇಸ್ ಗು ಜಾತಿ ಗಣತಿ ವರದಿ ಮಂಡನೆಗು ಯಾವುದೇ ರೀತಿಯಾದ ಸಂಬಂಧವಿಲ್ಲ. ಜಾತಿ ಗಣತಿ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಬದ್ಧತೆ, ಮುಡಾ ಕೇಸ್ ಇಡಿಗೆ ವಹಿಸಿದರೆ ರಾಜೀನಾಮೆ ಪರಿಸ್ಥಿತಿ ಬರುವುದಿಲ್ಲ ಎಂದು ಅವರು ತಿಳಿಸಿದರು. ಮುಡಾ ಕೇಸ್ನಲ್ಲಿ ಏನು ಸತ್ಯಾಂಶ ಇಲ್ಲ. ಇಡಿ ಅಧಿಕಾರಿಗಳು ಬೇಕು ಅಂತಲೇ ಹಿಂಸೆ ಕೊಡುತ್ತಿದ್ದಾರೆ. ಮುಡಾ ಕೇಸ್ನಲ್ಲಿ ಕಾನೂನಾತ್ಮಕ ಹೋರಾಟ ಮುಂದುವರಿಸುತ್ತೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಲ್ಲಿ ಮುಂದುವರೆಯುತ್ತಾರೆ. ಮುಡಾ ಕೇಸ್ ಸಿಬಿಐಗೆ ಬೇಕಾದರೂ ಕೊಡಲಿ ನಾವು ತಪ್ಪು ಮಾಡಿಲ್ಲ ಎಂದು ಮೈಸೂರಿನಲ್ಲಿ ಎಂ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಬೆಂಗಳೂರಿನ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಅವರು ಸದ್ಯಕ್ಕೆ ಯಾರನ್ನು ಅರೆಸ್ಟ್ ಮಾಡಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಮಾಹಿತಿ ಸಿಗಲಿದೆ. ಘಟನೆ ಕುರಿತು ಎಫ್ಐಆರ್ ದಾಖಲಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು. ಓಂ ಪ್ರಕಾಶ್ ಅವರ ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪತ್ನಿ ಪಲ್ಲವಿ ಹತ್ಯೆಗೈದಿದ್ದಾರೆ. ಓಂ ಪ್ರಕಾಶ್ ಅವರ ಹೊಟ್ಟೆ ಭಾಗಕ್ಕೆ 4ರಿಂದ 5 ಬಾರಿ ಇರಿದಿದ್ದರಿಂದ ನೆಲ ಮಹಡಿಯಲ್ಲಿ ರಕ್ತದ ಮಡುವಿನಲ್ಲಿ 15 ರಿಂದ 20 ನಿಮಿಷ ರಕ್ತದ ಮಡುವಿನಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ. ಈ…

Read More

ರಾಯಚೂರು : ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಬರೆಯುವ ವೇಳೆ ಅಭ್ಯರ್ಥಿಗಳಿಗೆ ಜನಿವಾರ ತೆಗೆಸಿದ್ದ ಪ್ರಕರಣ ಇಡಿ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಇದೀಗ ಈ ಒಂದು ಪ್ರಕರಣಕ್ಕೆ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ, ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಅಅವರವರ ಧರ್ಮವನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶ ಹಾಗೂ ಅಧಿಕಾರವಿದೆ. ಸಂವಿಧಾನದ ಬಗ್ಗೆ ಒಂದೆಡೆ ಮಾತನಾಡುವುದು, ಇನ್ನೊಂದೆಡೆ ಸ್ವಾತಂತ್ರ‍್ಯವನ್ನು ಹರಣ ಮಾಡುವಂತಹ ದ್ವಂದ್ವ ನಿಲುವು ಅತ್ಯಂತ ಖಂಡನೀಯ. ಕೇವಲ ವಿಪ್ರ ಸಮಾಜ ಮಾತ್ರವಲ್ಲ, ಯಾವುದೇ ಸಮುದಾಯದ ವಿಚಾರ ಬಂದಾಗ ಈ ರೀತಿಯಾದ ಧರ್ಮ-ವಿರೋಧಿ ಚಟುವಟಿಕೆಗಳು ಅತ್ಯಂತ ಅಸಹ್ಯ, ಹೇಯವಾಗಿರುವಂತವು. ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುತ್ತೇವೆ ಹಾಗೂ ಖಂಡಿಸುತ್ತೇವೆ. ಇದರ ವಿರುದ್ಧ ಪ್ರತಿಭಟಿಸುತ್ತೇವೆ.ಬೇರೆ ಯಾವ ಸಮುದಾಯಕ್ಕೆ ಇಲ್ಲದಿರುವುದು ವಿಪ್ರ ಸಮುದಾಯಕ್ಕೆ ಮಾತ್ರ ಯಾಕೆ? ಇದನ್ನ ತೀವ್ರವಾಗಿ ಖಂಡಿಸುತ್ತೇವೆ, ಅನ್ಯಾಯ ಸರಿಪಡಿಸಬೇಕು. ಮುಂದೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ…

Read More

ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾಫ್ಟ್ ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ನಡೆದಿದೆ. ಮೃತ ಇಂಜಿನಿಯರ್ ಅನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಎಂದು ತಿಳಿದುಬಂದಿದೆ. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾದಂತಹ ಓಂ ಪ್ರಕಾಶ್ (68) ಅವರನ್ನು ಪತ್ನಿ ಪಲ್ಲವಿಯೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಇದೀಗ ಸಹೋದರಿಯರಿಗೆ ಆಸ್ತಿ ಮಾಡಿದ್ದಕ್ಕೆ ಈ ಒಂದು ಕೊಲೆಗೆ ಮೂಲ ಕಾರಣ ಎಂಬುದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಅವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ ದಾಂಡೇಲಿಯಲ್ಲಿದ್ದ ಆಸ್ತಿ ವಿಚಾರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಓಂ ಪ್ರಕಾಶ್ ಅವರು ತಂಗಿಯವರ ಹೆಸರಿಗೆ ಆಸ್ತಿಯನ್ನು ಮಾಡಿದ್ದರು. ಇದೇ ವಿಚಾರವಾಗಿ ಹಲವು ದಿನಗಳಿಂದ ಪಲ್ಲವಿ ಹಾಗೂ ಓಂ ಪ್ರಕಾಶ್ ನಡುವೆ ಗಲಾಟೆ ನಡೆಯುತ್ತಿತ್ತು. ಈ ಬಗ್ಗೆ ಮಾತನಾಡಬೇಡ ಎಂದು ಓಂ ಪ್ರಕಾಶ್ ಅವರು ಪತ್ನಿ ಪಲ್ಲವಿ ಅವರಿಗೆ ವಾರ್ನಿಂಗ್ ಸಹ ಮಾಡಿದ್ದರು. ಕೊಲೆಗೈದ ಬಳಿಕ ಪತ್ನಿ ಪಲ್ಲವಿ…

Read More

ಬೆಂಗಳೂರು : ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಹೌದು ಮೊದಲಿಗೆ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ಇದೀಗ ಸ್ವತಹ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪತಿಯ ಹತ್ಯೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ…

Read More

ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಬಾವಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಜಲಸಮಾಧಿ ಆಗಿರುವ ಘಟನೆ ಬೀದರ್ ಜಿಲ್ಲೆಯ ಹುಣಸೂರು ತಾಲೂಕಿನ ಮುಚಳಂಬ ಗ್ರಾಮದಲ್ಲಿ ನಡೆದಿದೆ. ಅವಿನಾಶ್ ಮಚಕೂರೆ (16) ಬಾಗೇಶ್ (16) ಎನ್ನುವ ಬಾಲಕರು ಬಾವಿಯಲ್ಲಿ ಈಜಲು ತೆರಳಿದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಇಬ್ಬರು ಬಾಲಕರ ಮೃತ ದೇಹವನ್ನು ಹೊರಗಡೆ ತೆಗೆದಿದ್ದಾರೆ. ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮದುವೆಯ ಹಿಂದಿನ ದಿನ ಮದರಂಗಿ ಹಾಕಿಸಿಕೊಂಡು ಬರುವೆ ಎಂದು ಹೇಳಿ ಬ್ಯೂಟಿ ಪಾರ್ಲರ್ ಗೆ ಹೋದ ವಧು ನಾಪತ್ತೆಯಾಗಿದ್ದಾಳೆ.ಈ ಘಟನೆಯು ಮಂಗಳೂರಿನ ಬೋಳಾರ್ ನಲ್ಲಿ ನಡೆದಿದೆ. 22 ವರ್ಷದ ಪಲ್ಲವಿ ನಾಪತ್ತೆಯಾದ ಯುವತಿಯಾಗಿದ್ದು, ಮದುವೆಯ ಹಿಂದಿನ ದಿನ ಮೆಹಂದಿ ಹಾಕಿಸಿಕೊಂಡು ಬರುವೆ ಎಂದು ಮನೆಯಲ್ಲಿ ಹೇಳಿ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಳು. ಆದರೆ ತಡರಾತ್ರಿಯಾದರೂ ಆಕೆಯು ಮನೆಗೆ ವಾಪಾಸಾಗಿಲ್ಲ. ಕಳೆದ ಏಪ್ರಿಲ್ 15 ರಂದು ಈ ಒಂದು ಉಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಏಪ್ರಿಲ್ 16 ರಂದು ಮದುವೆಯು ನಡೆಯಬೇಕಿತ್ತು. ಆದರೆ ಒಂದು ದಿನ ಮುಂಚೆಯೇ ಅಂದರೆ ಏಪ್ರಿಲ್ 15 ರಂದು ಈ ಯುವತಿಯು ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಕೂಡ ಸ್ವಿಚ್ ಆಫ್ ಎಂದು ಬಂದಿದೆ. ಮದುವೆಗೆ ಒಂದು ದಿನ ಇರುವಾಗಲೇ ಯುವತಿಯು ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮನೆಯವರು ಪಲ್ಲವಿಯ ಒಪ್ಪಿಗೆಯ ಮೇರೆಗೆ ಈ ಮದುವೆ ನಿಶ್ಚಯ ಮಾಡಿದ್ದರು.ಯುವಕನ…

Read More

ಕಲಬುರ್ಗಿ : ಕೌಟುಂಬಿಕ ಕಲಹ ಹಿನ್ನೆಲೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಮ್ಮದ್ ಸಾಜಿದ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಮಹಮ್ಮದ್ ಸಾಜಿದ್ ಕೆಲಸ ಮಾಡುತ್ತಿದ್ದ. ಕೌಟುಂಬಿಕ ಕಲಹದಿಂದಾಗಿ ಮೊಹಮ್ಮದ್ ಸಾಜಿದ್ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳಲ್ಲಿ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆಗೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More