Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿತ್ತು. ಆದರೆ ನಿನ್ನೆ ಸಂಜೆ ಕಿಡ್ನಾಪರ್ಸ್ ಅವರನ್ನು ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಹೌದು ಸುನೀಲ್ ಮೊಬೈಲ್ ನಿಂದಲೇ ಅವರ ಕುಟುಂಬದವರಿಗೆ ದೂರವಾಣಿ ಕರೆ ಮಾಡುತ್ತಿದ್ದ ಅಪಹರಣಕಾರರು, ಮೂರು ಕೋಟಿ ರೂ. ನಗದು ಹಣ, ಮೂರು ಕೋಟಿ ಮೌಲ್ಯದ ಬಂಗಾರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಡಾ. ಸುನೀಲ್ ಮೊಬೈಲ್ ನಿಂದ ಎರಡು ಬಾರಿ ದೂರವಾಣಿ ಕರೆ ಮಾಡಿದ್ದ ಅಪಹರಣಕಾರರಯ ಹಿಂದಿಯಲ್ಲಿ ಮಾತನಾಡಿದ್ದರು. ಆದರೆ, ಬೆಳಗ್ಗೆಯಿಂದ ಊರೂರು ಸುತ್ತಿದ ಅಪಹರಾಕಾರರು, ರಾತ್ರಿ 9 ಗಂಟೆ ಸುಮಾರಿಗೆ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮ ಸಮುದ್ರ ಗ್ರಾಮದ ಹೊಲ ವೊಂದರಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಹಿನ್ನೆಲೆ? ಡಾ. ಸುನೀಲ್ ಅವರು ಶನಿವಾರ ನಸುಕಿನಲ್ಲಿ ಸತ್ಯನಾರಾಯಣಪೇಟೆಯಲ್ಲಿ ಇರುವ ಶನೀಶ್ವರ ದೇವಸ್ಥಾನದ ಹತ್ತಿರ ವಾಕಿಂಗ್ ಮಾಡುತ್ತಿದ್ದಾಗ ಟಾಟಾ ಇಂಡಿಕಾ…
ಬೆಂಗಳೂರು : ಮನೆಯಲ್ಲಿ ಯಾವುದೇ ವಸ್ತು ಹಾಳಾದಾಗ ರಿಪೇರಿ ಮಾಡುವವರನ್ನು ಕರೆಸಿ ರಿಪೇರಿ ಮಾಡಿಸುತ್ತೇವೆ. ಆದರೆ ರಿಪೇರಿ ಮಾಡುವವರು ನಂಬಿಕಸ್ತರು ಇದ್ದರೆ ಒಳ್ಳೇದು. ಏಕೆಂದರೆ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗೀಸರ್ ರಿಪೇರಿ ಮಾಡುವವ ಒಬ್ಬ ಗೀಸರ್ ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯೊಂದರಲ್ಲಿ ಗೀಸರ್ ಫಿಟ್ ಮಾಡುವ ನೆಪದಲ್ಲಿ ಬಂದಿದ್ದ ಮುರಳಿ ಎಂಬಾತ ರಹಸ್ಯ ಕ್ಯಾಮರಾವನ್ನು ಅಳವಡಿಸಿದ್ದಾನೆ. ಕಳೆದ ಒಂದು ವರ್ಷದ ಹಿಂದೇನೆ ಆತ ಈ ಕ್ಯಾಮರಾ ಅಳವಡಿಸಿದ್ದ ಎನ್ನಲಾಗಿದೆ. ಆದರೆ ಮನೆಯವರು ಗೊತ್ತಿಲ್ಲದೇ ಹಾಗೆ ಬಾತ್ ರೂಂ ಬಳಸಿದ್ದಾರೆ.ಆದರೆ ಸ್ನಾನಗೃಹ ಬಳಸಿದ ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡ ಗೀಸರ್ ಫೀಟ್ ಮಾಡಿದ ಕಿರಾತಕ ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಕಳೆದ ಒಂದು ವರ್ಷದಿಂದ ಕಾಮುಕ ಮುರುಳಿ ಮಹಿಳೆಗೆ ನಾನು ಕರೆದಲ್ಲಿಗೆ ಬರಬೇಕು. ಅಕಸ್ಮಾತ್ ಬರದೇ ಹೋದರೆ ಫೋಟೋ,…
ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೆರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿನ್ನೆ ಓರ್ವ ಆರೋಪಿಯನ್ನು ಬಂಧಿಸಿದ್ದರು. ಇದೀಗ ಇಂದು ಇನ್ನೊರ್ವ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಹೌದು, ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ರುಂಡ ಬೇರ್ಪಡಿಸಿ ಕೇವಲ ಮಾಂಸವನ್ನು ಮಾತ್ರ ಕದ್ದು ಒಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ತೌಫಿಕ್ (41) ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಬಳಿಕ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೊಡು ಗ್ರಾಮದಲ್ಲಿ ಕಳೆದ ಜನವರಿ 19ರಂದು ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ಆರೋಪಿಗಳು ಮದುವೆ ಸಮಾರಂಭಕ್ಕೆ ಹಸುವಿನ ಮಾಂಸ ಬಳಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ತೌಫಿಕ್ ಎನ್ನುವ ಆರೋಪಿಯನ್ನು ಅರೆಸ್ಟ್…
‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ‘ಗಣರಾಜ್ಯೋತ್ಸವ’ ಹಿನ್ನೆಲೆ ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸಂಚಾರ ಆರಂಭ
ಬೆಂಗಳೂರು : ನಾಳೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಬೆಳಿಗ್ಗೆ 7 ಗಂಟೆಯ ಬದಲಾಗಿ 1 ಗಂಟೆ ಬೇಗ ಅಂದರೆ 6 ಗಂಟೆಗೆನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ. ಹೌದು ನಮ್ಮ ಮೆಟ್ರೊ ಎಲ್ಲ ನಾಲ್ಕು ಟರ್ಮಿನಲ್ಗಳಿಂದ ಮತ್ತು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಸಂಚಾರ ಏಕಕಾಲಕ್ಕೆ ಆರಂಭಗೊಳ್ಳಲಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 20 ಹೆಚ್ಚುವರಿ ಟ್ರಿಪ್ಗಳನ್ನು ನಡೆಸಲಾಗವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ, ಬಿಐಇಸಿ ನಡೆಯುತ್ತಿರುವ ಕಾರ್ಯಕ್ರಮ, ಶಾಲೆ ಮತ್ತು ಕಾಲೇಜುಗಳಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೆಷನ್ ಲಿಮಿಟೆಡ್ ಈ ಕ್ರಮವನ್ನು ಕೈಗೊಂಡಿದೆ. ಲಾಲ್ಬಾಗ್ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬಂದು ಹೋಗುವವರ ಅನುಕೂಲಕ್ಕಾಗಿ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಟೋಕನ್ ಬದಲಿಗೆ 30 ನೀಡಿ ಪೇಪರ್ ಟಿಕೆಟ್ ಖರೀದಿಸಬಹುದು. ನಗದು ಪಾವತಿಸಿ ಖರೀದಿಸಲು…
ದಕ್ಷಿಣಕನ್ನಡ : ಹಾಸ್ಟೆಲ್ ನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನಲ್ಲಿ ನಡೆದಿದೆ. ಮೂಡುಬಿದಿರೆಯ ಮಿಜಾರಿನ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಪಲ್ಗುಣಿ ಹಾಸ್ಟೆಲ್ನಲ್ಲಿ ಗುರುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯು ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ವೇಳೆ ಮಗಳ ಸಾವಿನ ಬಗ್ಗೆ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರ ವಿರುದ್ಧ ದೂರು ನೀಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿವೇಶನವನ್ನು ತಮ್ಮ ಪತ್ನಿಯ ಹೆಸರಿಗೆ ಮಾಡಿಸಲು ವ್ಯಕ್ತಿಯೊಬ್ಬರ ಬಳಿ ಪಿಡಿಒ ಅಧಿಕಾರಿ ಒಬ್ಬರು 20,000ಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ವೇಳೆ ಲಂಚ ಪಡೆಯುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಳಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿ ಶೋಭಾ ರಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದು ಬಂದಿದೆ.ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದ ರಮೇಶ್ ಅವರಿಗೆ ಸೇರಿದ ಖಾಲಿ ನಿವೇಶನ ಟಿ.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿತ್ತು. ಸದರಿ ನಿವೇಶನವನ್ನು ತಮ್ಮ ಹೆಂಡತಿಯ ಹೆಸರಿಗೆ ಖಾತಾ ವರ್ಗಾವಣೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಖಾತೆ ಮಾಡಿಕೊಡುವ ವಿಚಾರವಾಗಿ ಮಧ್ಯವರ್ತಿ ರುದ್ರಪ್ಪ ಮೂಲಕ ಪಿಡಿಒ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಕೊಡುವ ಸಲುವಾಗಿ ರುದ್ರಪ್ಪ ರಮೇಶ್ ಅವರನ್ನು ಪಂಚಾಯಿತಿ ಕಚೇರಿಗೆ ಕರೆದುಕೊಂಡು ಬಂದಿದ್ದರು. ಲಂಚದ ಹಣ ಸ್ವೀಕರಿಸುವಾಗ ಬೆಂಗಳೂರು…
ಹಾಸನ : ಹಾಸನ ಜಿಲ್ಲೆಯಲ್ಲಿ ಹಾಡ ಹಗಲೇ ಇಬ್ಬರೂ ರೌಡಿಶೀಟರ್ ಗಳ ಮೇಲೆ ಪುಡಿ ರೌಡಿಗಳು ಮಚ್ಚಿನಿಂದ ಹಾಗೂ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದ ಘಟನೆ ಮೈಸೂರು ರಸ್ತೆಯ ಚನ್ನರಾಯಪಟ್ಟಣದ ಕಾಳೆನಹಳ್ಳಿ ಗೇಟ್ ಬಳಿ ನಡೆದಿದೆ. ಹೌದು ಚನ್ನರಾಯಪಟ್ಟಣ ಕಾಳೆನಹಳ್ಳಿ ಗೇಟ್ ಬಳಿಯ ಡಾಬಾ ಒಂದರಲ್ಲಿ ಈ ಒಂದು ಹಲ್ಲೆ ನಡೆಸಲಾಗಿದ್ದು, ಹಾಸನದಲ್ಲಿ ರೌಡಿಶೀಟರ್ ಗಳಿಗೆ ಮಚ್ಚಿನಿಂದ ಪುಡಿ ರೌಡಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರು ರಸ್ತೆಯ ಕಾಳೆನಹಳ್ಳಿ ಡಾಬಾದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಇಬ್ಬರು ರೌಡಿಶೀಟರ್ಸ್ ಮೇಲೆ ಪುಡಿ ರೌಡಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗದಂತಹ ರೌಡಿಶೀಟರ್ ಗಳನ್ನು ಕಾಳೆನಹಳ್ಳಿಯ ಕಾರ್ತಿಕ್ ಮತ್ತು ಪುನೀತ್ ಎಂದು ತಿಳಿದುಬಂದಿದೆ. ಘಟನೆ ಕುರಿತು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬಿಗ್ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್…
ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ರೇವತಿ ರಾಜ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ವಿಚಾರವಾಗಿ ಅವರು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಸಂಸದ ಯದುವೀರ್ ಒಡೆಯರ್ ಗೆ ನೋಟಿಸ್ ಜಾರಿ ಮಾಡಿದೆ. ಹೌದು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಬಹುಜನ ಸಮಾಜವಾದಿ ಪಕ್ಷದ ನಾಮಪತ್ರ ತಿರಸ್ಕೃತ ಅಭ್ಯರ್ಥಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್ ಸಂಸದ ಯದುವೀರ್ ಒಡೆಯರ್ ಅವರಿಗೆ ನಿನ್ನೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣ ಹಿನ್ನೆಲೆ? 2024ರ ಏಪ್ರಿಲ್ 4ರಂದು ರೇವತಿ ರಾಜ್ ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಏಪ್ರಿಲ್ 5ರ ಬೆಳಿಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು. ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಿದ್ದರೂ…
ಚಾಮರಾಜನಗರ : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಇದೀಗ ಚಾಮರಾಜನಗರದಲ್ಲಿ ಮನೆ ಕಟ್ಟಲು ಪತಿಯೊಬ್ಬರು ಸಾಲ ಮಾಡಿದ್ದಾರೆ. ಪತಿಯ ಸಾಲದ ಚಿಂತೆಯಲ್ಲಿ ಮನನೊಂದ ಮಹಿಳೆ ಒಬ್ಬರು ಇದೀಗ ಆತ್ಮಹತ್ಯೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕೋಟೆ ಗ್ರಾಮದಲ್ಲಿ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ಮಹಾದೇವಮ್ಮ ಎನ್ನುವ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ನಿರ್ಮಿಸಲು ಮಹಾದೇವಮ್ಮ ಪತಿ 5 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ಮಾಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಮಹಾದೇವಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮಾಡಿದ್ದ ಸಾಲಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










