Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯ ಪೊಲೀಸರು ಮುಂಬೈನಲ್ಲಿ ನೇಪಾಳಿ ಗ್ಯಾಂಗಿನ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದಂತಹ ನೇಪಾಳ ಮೂಲದ ಗಣೇಶ್ ಹಾಗೂ ಗೀತಾ ಎನ್ನುವವರು ನಾಗೇಶ್ ಅವರ ಮನೆಯಲ್ಲಿದ್ದ ಕೋಟ್ಯಾಂತರ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದು, ಇನ್ನು ದಂಪತಿ ಗಣೇಶ್ ಹಾಗೂ ಗೀತಾಳಿಗೆ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಥೀಯೇಟರ್ ಮಾಲೀಕ ನಾಗೇಶ್ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮುಂಬೈನಲ್ಲಿ ನೇಪಾಳಿ ಗ್ಯಾಂಗ್ನ ಮೂವರನ್ನು ಬಂಧಿಸಿದ್ದಾರೆ.ಸಿಸಿಟಿವಿ ಹಾಗೂ ಮೊಬೈಲ್ ನೆಟ್ವರ್ಕ್ ಆಧರಿಸಿ ಕಾರ್ಯಾಚರಣೆ ಮಾಡಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಶಾಹಿ ಅಪಿಲ್ ಶಾಹಿ ಹಾಗೂ ಜಗದೀಶ್…
ಬೆಂಗಳೂರು : ಮನೆ ಮಾರಿದ ಹಣಕ್ಕಾಗಿ ಹೆತ್ತ ತಾಯಿಯನ್ನೇ ಮಗನೊಬ್ಬ ಭೀಕರವಾಗಿ ಕೊಲೆ ಮಾಡಿದ್ದಾನೆ. ಇದಕ್ಕೆ ಮಗನಿಗೆ ಕೈ ಜೋಡಿಸಿದ ಸ್ನೇಹಿತ ಕೂಡ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಒಂದು ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ. ಹೌದು ಜಯಮ್ಮ (45) ಎಂಬಾಕೆಯನ್ನು ಮಾರಕಾಸ್ತ್ರದಿಂದ ಹೊಡೆದು, ತಲೆಯನ್ನು ಗೋಡೆಗೆ ಗುದ್ದಿ ಹತ್ಯೆಗೈದಿದ್ದ ಮಗ ಉಮೇಶ್ ಹಾಗೂ ಮತ್ತೋರ್ವನನ್ನು ಬಂಧಿಸಲಾಗಿದೆ. ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದ ಮನೆಯಲ್ಲಿ ಶನಿವಾರ ಘಟನೆ ನಡೆದಿತ್ತು.ಕೊಲೆಯಾದ ಜಯಮ್ಮ ಅವರಿಗೆ ಇಬ್ಬರು ಮಕ್ಕಳು ಎರಡನೆಯ ಮಗ ಗಿರೀಶ್ ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಇನ್ನು ಕೊಲೆಗೈದ ಮೊದಲನೇ ಮಗ ಉಮೇಶ್ ತಾಯಿಗೆ ತಮ್ಮನ ಮೇಲೆ ಪ್ರೀತಿ ಇದೆ ಮತ್ತು ನನ್ನ ಮೇಲೆ ಇಲ್ಲ ಎಂದು ಸದಾ ಗಲಾಟೆ ಮಾಡುತ್ತಿದ್ದ.ಹಾಗಾಗಿ ಮೊದಲ ಮಗ ಉಮೇಶನನ್ನು ಮನೆಯಿಂದ ಹೊರಹಾಕಿದ್ದ ಜಯಮ್ಮ, ಮನೆ ಮಾರಾಟ ಮಾಡಿ ಕಿರಿಯ ಪುತ್ರನೊಂದಿಗೆ ಹೊಂಗಸಂದ್ರದಲ್ಲಿ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯರಾತ್ರಿ ಉಮೇಶ್ ತನ್ನ ಸ್ನೇಹಿತನೊಂದಿಗೆ ಬಂದು ತಾಯಿಯನ್ನು ಕೊಂದು ಪರಾರಿಯಾಗಿದ್ದ.…
ಮಂಡ್ಯ : ದೇಗುಲದ ಗೇಟ್ ಬಿದ್ದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಂಜನಕೆರೆ ಗ್ರಾಮದ ಚೆನ್ನಕೇಶವ ದೇಗುಲದಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ನಿನ್ನೆ ಕುಟುಂಬಸ್ಥರ ಜೊತೆಗೆ ಬಾಲಕ HS ಜಿಷ್ಣು (5) ದೇವಸ್ಥಾನಕ್ಕೆ ಬಂದಿದ್ದ. ಗ್ರಾಮದ ಚೆನ್ನಕೇಶವ ದೇಗುಲಕ್ಕೆ ಎಚ್ ಎಸ್ ಜಿಷ್ಣು ತೆರಳಿದ್ದ. ಈ ವೇಳೆ ದೇಗುಲದ ಗೇಟ್ ಬಿದ್ದು ಬಾಲಕ ಗಾಯಗೊಂಡಿದ್ದ. ಕೂಡಲೇ ಬಾಲಕನ ಪೋಷಕರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಜಿಷ್ಣು ಕೊನೆಯಯುಸಿರೆಳಿದಿದ್ದಾನೆ. ಘಟನೆ ಕುರಿತಂತೆ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಜರಾಯಿ ಇಲಾಖೆ ವಿರುದ್ಧ ಪೋಷಕರು ಇದೀಗ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ 140 ಕೆಜಿ ಗಾಂಜಾ ವನ್ನು ಜಪ್ತಿ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ವಿದೇಶಿ ಪ್ರಜೆಗಳು ಸೇರಿದಂತೆ 64 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ 42 ಪ್ರಕರಣ ದಾಖಲಾಗಿವೆ. ಬಂಧಿತ ಎಲ್ಲ ಆರೋಪಿಗಳಿಂದ 140 ಕೆಜಿ ಗಾಂಜಾ, 1 ಕೆಜಿ ಗಾಂಜಾ ಆಯಿಲ್, 609 ಗ್ರಾಂ ಆಫೀಮು, 770 ಗ್ರಾಂ ಹೆರಾಯಿನ್, 2ಕೆಜಿ 436 ಗ್ರಾಂ ಚರಸ್, 509 ಗ್ರಾಂ ಕೊಕೇನ್, 5 ಕೆಜಿ 397 ಗ್ರಾಂ ಎಂಡಿಎಂಎ, 2569 LSD ಸ್ಟ್ರಿಪ್, 6 ಕೆಜಿ 725 ಗ್ರಾಂ ಅಂಫಟಮೈನ್, 11,908 ಎಕ್ಸ್ ಟೆಸಿ ಮಾತ್ರೆ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಹಲವು ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳು ಬರುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಹೋಟೆಲ್ಗೆ ಅಪರಿಚಿತರು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಬೆಂಗಳೂರಿನ ಐಬಿಎಸ್ ಹೋಟೆಲಿಗೆ ಅಪರಿಚಿತರಿಂದ ಈ ಒಂದು ಸಂದೇಶ ಬಂದಿದೆ. ಬೆಂಗಳೂರಿನ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಐಬಿಎಸ್ ಹೋಟೆಲ್ ಗೆ ಬಾಂಬ್ ಬೆದರಿಕೆ ಈಮೇಲ್ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಬಂದ ಕೂಡಲೇ ಹೋಟೆಲ್ ನಲ್ಲಿದ್ದ ಎಲ್ಲರನ್ನು ಕೂಡಲೇ ಹೊರಗಡೆ ಕಳುಹಿಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಯಾವುದೇ ಹೋಟೆಲ್ ಹೆಸರು ಅಥವಾ ಸ್ಥಳ ಉಲ್ಲೇಖಿಸದೆ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಯಾವುದೇ ಕ್ಷಣದಲ್ಲಿ ಸ್ಪೋಟ ಆಗಬಹುದು ಎಂದು ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅಪರಿಚಿತರು ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸಂದೇಶ ಬಂದ ತಕ್ಷಣ ಸಂಪಂಗಿರಾಮನಗರ ಠಾಣೆಗೆ ಹೋಟೆಲ್ ನವರು ಮಾಹಿತಿ ನೀಡಿದ್ದಾರೆ. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ…
ಹಾವೇರಿ : ಮುಸ್ಲಿಂ ಸಮುದಾಯದ ಕುರಿತು ಹೇಳಿಕೆ ನೀಡಿದ್ದರಿಂದ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಹಾವೇರಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಎಂಎಲ್ಸಿ ಸಿಟಿ ರವಿ ಹಾಗೂ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದ ಆರೋಪದ ಅಡಿ ಕೇಸ್ ದಾಖಲಾಗಿದೆ. ಕಾಂಗ್ರೆಸ್ ಗೆ ಮತ ಹಾಕಿದರೆ ಇಲ್ಲಿ ಸ್ಥಾಪನೆ ಆಗೋದು ತಾಲಿಬಾನಿ ಸರ್ಕಾರ. ನಮ್ಮ ರಾಜ್ಯವನ್ನು ಲಾಡೆನ್, ಮುಲ್ಲಾ ಉಮರ್ ತರಹ ಆಡಳಿತ ಮಾಡುತ್ತಿದ್ದಾರೆ.ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ನಿಮಗೆ ಗೊತ್ತಲ್ವಾ ಎಂದು ಹೇಳಿಕೆ ನೀಡಿದ್ದಾರೆ. ಒಂದು ಸಿದ್ದರಾಮಯ್ಯ ಇನ್ನೊಂದು ಡಿಕೆ ಶಿವಕುಮಾರ್. ಒಬ್ರು ಬ್ರದರ್ ಅಂತಾರೆ ಇನ್ನೊಬ್ಬರು ಸುನ್ನತ್ ಒಂದು ಮಾಡಿಸಿಕೊಂಡಿಲ್ಲ ಅಷ್ಟೆ ಮೈಸೂರು…
ವಿಜಯಪುರ : ಅವರಿಬ್ಬರೂ ಚಡ್ಡಿ ದೋಸ್ತರು ಆದರೆ ಅವರ ಮಧ್ಯ ಗಲಾಟೆ ನಡೆದು ಒಬ್ಬನ ಪ್ರಾಣ ಹೋಗಿದೆ.ಈ ಒಂದು ಕೊಲೆಗೆ ಪ್ರಮುಖ ಕಾರಣವೇ ವಿವಾಹಿತ ಮಹಿಳೆ ಎಂದು ಹೇಳಲಾಗುತ್ತಿದೆ. ಈ ಮಹಿಳೆಯ ಸಲುವಾಗಿ ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನ ಕೊಲೆ ಮಾಡಿದ್ದು, ಅಲ್ಲದೇ ಮೊಬೈಲ್ ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ನಡೆದಿದೆ. ಈ ಒಂದು ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಎಂಪಿಎಂಸಿ ಹೊರ ಭಾಗದ ಜಮೀನಿನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಸುನೀಲ್ ಭಜಂತ್ರಿ ಎಂದು ಗುರುತಿಸಲಾಗಿದೆ.ಆತನ ಸ್ನೇಹಿತ ಸಂತೋಷ್(23), ಸುನೀಲ್ನ ಕತ್ತಿಗೆ ಹಗ್ಗ ಹಾಕಿ ಕತ್ತಿನ ಮೇಲೆ ಕಾಲಿಟ್ಟು ಆತನ ಉಸಿರು ಗಟ್ಟಿಸಿ ಕೊಲೆ ಮಾಡುವ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ದೃಶ್ಯಗಳನ್ನ ಪರಿಶೀಲಿಸಿದಾಗ ಪೊಲೀಸರಿಗೆ ಇದೊಂದು ಅನೈತಿಕ ಸಂಬಂಧಕ್ಕಾಗಿ ನಡೆದ ಕೊಲೆ ಎಂದು ಗೊತ್ತಾಗಿದೆ. ಅನೈತಿಕ…
ದಾವಣಗೆರೆ : ಸರ್ಕಾರಿ ಅಧಿಕಾರಿ ಒಬ್ಬರ ಮಾತನ್ನು ನಂಬಿ ಹಣ ಡಬಲ್ ಆಗುತ್ತೆ ಎಂದು ಅಂತಾರಾಷ್ಟ್ರೀಯ ಗೋಲ್ಡ್ ಮ್ಯಾನ್ ಸ್ಮಾಚ್ ಕಂಪನಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಹೂಡಿಕೆ ಮಾಡಿದ ವಿದ್ಯಾಸಂಸ್ಥೆಯ ಮುಖ್ಯಸ್ಥೆಯೊಬ್ಬರು ಇದೀಗ 10 ಕೋಟಿಗೂ ಅಧಿಕ ಹಣ ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ದಾವಣಗೆರೆಯ ಚೇತನ ವಿದ್ಯಾ ಸಂಸ್ಥೆಯ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ ವೀರಮಾಚಿನೇನಿ ಅವರಿಗೆ ದಾವಣಗೆರೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ.ಡಿ. ಉಮೇಶ್ ಅಂತಾರಾಷ್ಟ್ರೀಯ ಗೋಲ್ಡ್ ಮ್ಯಾನ್ ಸ್ನಾಚ್ ಕಂಪನಿಯಲ್ಲಿ ದೊಡ್ಡ ಮೊತ್ತದ ಹಣ ಹೂಡಿಕೆ ಮಾಡಿದರೆ ಹೆಚ್ಚು ಹೆಚ್ಚು ಲಾಭ ಬರುತ್ತದೆಂದು ಹೇಳಿದ್ದ ಮಾತು ಕೇಳಿ ಹಂತ ಹಂತವಾಗಿ ಜೂ.12 ರಿಂದ ಆ.2 ರ ವರೆಗೆ 10.45 ಕೋಟಿ ರೂಪಾಯಿಗೂ ಹೆಚ್ಚು ಹಣ ತೊಡಗಿಸಿದ್ದರು. ಹೂಡಿದ್ದ ಹಣ 10.45 ಕೋಟಿಯಾಗಿದ್ದರೂ ಆನ್ಲೈನ್ನಲ್ಲಿ ಮಾತ್ರ ಅವರಿಗೆ 23 ಕೋಟಿ ರೂಪಾಯಿ ಎಂದು ತೋರಿಸುತ್ತಿತ್ತು. ಹೂಡಿಕೆಯ ಜತೆಗೆ ಹೆಚ್ಚುವರಿಯಾಗಿ ಬಂದ ಹಣವನ್ನು ಸೇರಿದಂತೆ ಎಲ್ಲ ಹಣವನ್ನು ಬಿಡಿಸಿಕೊಳ್ಳಲು…
ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ, ಅಜ್ಜಂಪಿರ್ ಖಾದ್ರಿ ಅವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡೋಕು ಮುಂಚೆ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ವಿವಾದದ ಹೇಳಿಕೆ ನೀಡಿದ್ದಾರೆ. ಇಂದು ಶಿಗ್ಗಾವಿಯಲ್ಲಿ ಆದಿ ಜಾಂಬವ ಸಮಾಜ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಡಾ.ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದಾರೆ ಎಂದು ನಾನು ಓದಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕಿಡಿ ಹೊತ್ತಿಸಿದ್ದಾರೆ. ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಆರ್ ಬಿ ತಿಮ್ಮಾಪುರ್ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ. ಜಿ ಪರಮೇಶ್ವರ್ ಹೋಗಿ ಪೀರ್ ಸಾಹೇಬ ಆಗುತ್ತಿದ್ದರು. ಎಲ್ ಹನುಮಂತಪ್ಪ ಹೋಗಿ ಹಸನ್ ಸಾಬ್…
ಉತ್ತರಕನ್ನಡ : ಕರ್ತವ್ಯ ನಿರತದಲ್ಲಿದ್ದ ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ‘CISF’ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದಲ್ಲಿ ಈ ಒಂದು ದುರಂತ ಸಂಭವಿಸಿದೆ. ಪಿಸ್ತೂಲಿಂದ ಗುಂಡು ಹಾರಿಸಿಕೊಂಡು ಬಿಹಾರ್ ಮೂಲದ ಅರವಿಂದ್ ಎನ್ನುವ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರ್ತವ್ಯದಲ್ಲಿದ್ದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆಯಿಂದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಇದೀಗ ಆತಂಕ ಸೃಷ್ಟಿಯಾಗಿದೆ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













