Author: kannadanewsnow05

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ.ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ. ಮೊದಲಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀಡಿಂಗ್ ಇರುವುದರಿಂದ ಎಷ್ಟೇ ವರ್ಷಗಳಾದರೂ ಅಕ್ಷರಗಳು ಅಳಿಸಿ ಹೋಗುವುದಿಲ್ಲ. ಕಾರ್ಡ್‌ಗಳು ಸಹ ಮುರಿಯುವ ಸಾಧ್ಯತೆ ಕಡಿಮೆ.ಹೊಸ…

Read More

ಬೆಳಗಾವಿ : ಗಂಡ ತನ್ನ ಮೇಲೆ ಸಂಶಯ ಪಡುತ್ತಾನೆ ಎಂದು ಬೇಸತ್ತು ಮನನೊಂದ ತಾಯಿಯೊಬ್ಬಳು ಮಗುವಿನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಗಾರ ಖುರ್ದ್ ಪಟ್ಟಣದ ಪರೀದಖಾನವಾಡಿಯ ತೋಟದ ಮನೆಯಲ್ಲಿ ನಡೆದಿದೆ. ಕೊಲೆಯಾದ ಮಗುವನ್ನು ಸಾತ್ವಿಕ್ ಎಂದು ತಿಳಿದುಬಂದಿದ್ದು, ಹತ್ಯೆಗೈದ ತಾಯಿಯನ್ನು ಭಾಗ್ಯಶ್ರೀ ಎಂದು ತಿಳಿದುಬಂದಿದೆ.ಕಳೆದ 7 ವರ್ಷಗಳ ಹಿಂದೆ ರಾಹುಲ್ ಕಟಗೇರಿ ಎಂಬಾತನೊಂದಿಗೆ ಮದುವೆಯಾಗಿದ್ದ ಭಾಗ್ಯಶ್ರಿ. ಮದುವೆಯಾದ ನಂತರವೂ ಸುಖವಾಗಿಲ್ಲ. ಗಂಡನೊಂದಿಗೆ ದಿನನಿತ್ಯ ಜಗಳ. ಜಗಳಕ್ಕೆ ಬೇಸತ್ತು ತವರುಮನೆಗೆ ಹೋಗಿದ್ದಳು. ಬಳಿಕ ಪತಿ ಹೆಂಡತಿಯ ತವರು ಮನೆ ಹಿರಿಯರೊಂದಿಗೆ ಮಾತಾಡಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದ. ಆದರೆ ಇಂದು ಮತ್ತೆ ಗಲಾಟೆ ಶುರುವಾಗಿದ್ದು ಜಗಳ ವಿಕೋಪಕ್ಕೆ ತಿರುಗಿ ಕೋಪದಲ್ಲಿ ತಾಯಿ ಮಗುವಿನ ಕತ್ತು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Read More

ಬಳ್ಳಾರಿ : ಶ್ರೀರಾಮುಲು ಸಾರಿಗೆ ಸಚಿವರಾಗಿ ಸಂಡೂರಿಗೆ ಒಂದೇ ಒಂದು ಬಸ್ಟಾಂಡ್ ಕಟ್ಟಿಸಲಿಲ್ಲ. ಒಂದೇ ಒಂದು ಬಸ್ ಕೂಡ ಬಿಡಲಿಲ್ಲ. ಮೊನ್ನೆ ನಮ್ಮ ಸರ್ಕಾರ ಬಂದ ಮೇಲೆ 200 ಹೊಸ ಬಸ್ ಗಳನ್ನು ಬಿಟ್ಟಿದ್ದೇವೆ. ಶ್ರೀರಾಮುಲು ಆರೋಗ್ಯ ಸಚಿವರಾಗಿ ಸಂಡೂರಿಗೆ ಒಂದೇ ಒಂದು ಆಸ್ಪತ್ರೆ ಕೊಡಲಿಲ್ಲ. ನಾವು 100 ಬೆಡ್ ಗಳ ಆಸ್ಪತ್ರೆ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಂಡೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮತನಾಡಿದರು. ಅನ್ನಪೂರ್ಣ ತುಕಾರಾಮ್ ಅವರು ಸಂಡೂರು ಕ್ಷೇತ್ರದಿಂದ ಗೆಲ್ಲುವುದು ನೂರಕ್ಕೆ ನೂರು ಸತ್ಯ. ಟಿಕೆಟ್ ಘೋಷಣೆಗೂ ಮೊದಲೇ ನಾವು ಸಂಡೂರು ಕ್ಷೇತ್ರದಲ್ಲಿ ನಡೆಸಿದ ಎಲ್ಲಾ ಜನ ಸಮೀಕ್ಷೆಗಳಲ್ಲೂ ಅನ್ನಪೂರ್ಣ ಅವರ ಪರವಾಗಿಯೇ ಇತ್ತು. ಹೀಗಾಗಿ ಇವರನ್ನೇ ಅಭ್ಯರ್ಥಿಯಾಗಿ ಘೋಷಿಸಿದೆವು. ಲೋಕಸಭಾ ಚುನಾವಣೆಯಲ್ಲೂ ಈ.ತುಕಾರಾಮ್ ಅವರ ಪರವಾಗಿಯೇ ಎಲ್ಲಾ ಸಮೀಕ್ಷಾ ವರದಿಗಳು ಇದ್ದಿದ್ದರಿಂದ ಹೈಕಮಾಂಡ್ ತುಕಾರಾಮ್ ಅವರ ಹೆಸರನ್ನೇ ಘೋಷಿಸಿತು. ಸಮೀಕ್ಷೆಯಂತೆ ಲೋಕಸಭಾ ಚುನಾವಣೆಯಲ್ಲಿ ಈ.ತುಕಾರಾಮ್ ಗೆದ್ದರು. ಈಗ ಸಂಡೂರು ಉಪ ಚುನಾವಣೆಯಲ್ಲೂ…

Read More

ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತುಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ನಡೆದಿದೆ. ಹೌದು ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ. ಅಂಬ್ಲಿಗೋಳ ಗ್ರಾಮದಲ್ಲಿ ಗೌರಮ್ಮ (26) ಕೊಲೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದ್ಯದ ಅಮಲಿನಲ್ಲಿ ಹಲ್ಲೆಗೈದು ಕುತ್ತಿಗೆ ಬಿಗಿದು ಪತಿ ಮನೋಜ್ ನಿಂದ ಕೃತ್ಯ ನಡೆದಿದೆ. ಆರೋಪಿ ಪತಿ ಮನೋಜ್ ನನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಉನ್ನತ ಶಿಕ್ಷಣ ಸಚಿವಸಚಿವ ಡಾ. ಎಂ ಸಿ ಸುಧಾಕರ್ ಅವರ ನಿವಾಸದ ಬಳಿ ದುರಂತ ಒಂದು ನಡೆದಿದ್ದು, ಅವರ ನಿವಾಸದ ಬಳಿ ಸ್ಕಾರ್ಪಿಯೊ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಸಚಿವ ಡಾ. ಎಂ.ಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಕಾರನ್ನು ಸ್ಕಾರ್ಪಿಯೋ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮಾಡಪ್ಪಲ್ಲಿ ಬಡಾವಣೆಯಲ್ಲಿರುವ ನಿವಾಸದ ಬಳಿ ಈ ಅವಘಡ ಸಂಭವಿಸಿದೆ. KA 04 MG 0455 ಸಂಖ್ಯೆಯ ಸ್ಕಾರ್ಪಿಯೋ ಕಾರು ಹೊತ್ತಿ ಉರಿದಿದೆ. ಸಚಿವ ಸುಧಾಕರ್ ಅವರ ನಿವಾಸದ ಸಮೀಪವೇ ಈ ಒಂದು ಕಾರನ್ನು ನಿಲ್ಲಿಸಲಾಗಿತ್ತು ಎಂದು ತಿಳಿದುಬಂದಿದೆ . ಘಟನೆಯ ಬಳಿಕ ಸ್ಕಾರ್ಪಿಯೋ ಕಾರು ಮಾಲಿಕ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಘಟನೆ ಕುರಿತಂತೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯ ಹಾಗೂ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಆಗುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಶಾಕಿಂಗ್ ಮಾಹಿತಿ ಒಂದು ಬಹಿರಂಗವಾಗಿದ್ದು, ಕೇವಲ ಹೆಣ್ಣು ಮಕ್ಕಳ ಮೇಲೆ ಅಷ್ಟೇ ಅಲ್ಲದೆ ಬಾಲಕರ ಮೇಲು ಕೂಡ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಶಾಕಿಂಗ್ ಅಂಶ ಬಯಲಾಗಿದೆ. ಈ ಕುರಿತು ಬೆಂಗಳೂರಿನ ಪೊಲೀಸರು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಸರಿ ಸುಮಾರು 114 ಬಾಲಕರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಕಳೆದ ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 33 ಪೋಕ್ಸೋ ಕೇಸ್​ಗಳು ದಾಖಲಾಗಿವೆ. ದಾಖಲಾದ 114 ಪ್ರಕರಣಗಳಲ್ಲಿ‌ 7 ಕೇಸ್​ಗಳಲ್ಲಿ ಮಾತ್ರ ಶಿಕ್ಷೆಯಾಗಿದ್ದು, ಉಳಿದ ಪ್ರಕರಣಗಳು ವಿಚಾರಣಾ ಹಂತದಲ್ಲಿವೆ. 2021ರಲ್ಲಿ 24, 2022ರಲ್ಲಿ 25 ಪ್ರಕರಣಗಳು, 2023ರಲ್ಲಿ 33 ಹಾಗೂ ಈ ವರ್ಷ 32 ಪ್ರಕರಣಗಳು ದಾಖಲಾಗಿವೆ. ಬಾಲಕರ ಮೇಲೆ ನಡೆದ ಲೈಂಗಿಕ ದೌರ್ಜನ್ಯಗಳ ಪೈಕಿ ಬೆಂಗಳೂರು ನಗರದಲ್ಲಿ ನಾಲ್ಕು ವರ್ಷಗಳಲ್ಲಿ 17 ಪ್ರಕರಣ ವರದಿಯಾಗಿವೆ.ಬಾಲಕರ ಮೇಲೆ…

Read More

ರಾಮನಗರ : ರಾಜ್ಯದಲ್ಲಿ ಇನ್ನು 15 ತಿಂಗಳಲ್ಲಿ ಗ್ಯಾರಂಟಿಗಳು ಸ್ಥಗಿತಗೊಳ್ಳುತ್ತವೆ. ಗೃಹಲಕ್ಷ್ಮಿಯ ಹಣ ಈಗ ಚನ್ನಪಟ್ಟಣದ ಜನರಿಗೆ ಹಂಚಿಕೆ ಮಾಡುತ್ತಿದ್ದಾರೆ. ಇವರಿಗೆ ತಿಂದು ತಿಂದು ತೇಗಿ ತೇಗಿ ಅಜೀರ್ಣ ಆಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದ್ರು. ಈ ಸರ್ಕಾರ ತೆಗೆಯೋವರೆಗೂ ನಾನು ಮನೆಯಲ್ಲಿ ಮಲಗಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರು ಶಪಥ ಮಾಡಿದರು. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಉಭಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿವೆ. ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಎನ್.ಡಿ.ಎ ಅಭ್ಯರ್ಥಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಿದ್ದು ನನ್ನ ಮೊಮ್ಮಗನನ್ನು ಗೆಲ್ಲಿಸುವವರೆಗೂ ಮನೆಗೆ ಹೋಗಿ ಮಲಗಲ್ಲ ಎಂದು ಗುಡುಗಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕೊನೆಯ ಉಸಿರು ಇರುವರೆಗೂ ಹೋರಾಟ ಮಾಡುತ್ತೇನೆ. ನನ್ನ ಮೊಮ್ಮಗನನ್ನ ಗೆಲ್ಲಿಸುವವರೆಗೂ ಮನೆಗೆ ಹೋಗಿ ಮಲಗಲ್ಲ…

Read More

ರಾಮನಗರ : ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಕಾರು ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಒಂದು ಸಂಭವಿಸಿದ್ದು, ಕಾರು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ದುರ್ಮರಣ ಹೊಂದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ನಡೆದಿದೆ. ಹೌದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.ಲಾರಿ ಒಂದು ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರ ಮೃತದೇಹಗಳು ಛಿದ್ರ ಛಿದ್ರವಾಗಿವೆ. ಮೃತರ ಕುರಿತು ಇನ್ನು ಮಾಹಿತಿ ತಿಳಿದು ಬಂದಿಲ್ಲ. ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೀದರ್ : ರಾಜ್ಯದಲ್ಲಿ ಮತ್ತೆ ಮತಾಂತರ ಮುನ್ನೆಲೆಗೆ ಬಂದಿದ್ದು, ಇದೀಗ ಬೀದರ್ ನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಮತಾಂತರಕ್ಕೆ ಒಪ್ಪದ ಮೂಗ ತಂದೆಯನ್ನು ಪತ್ನಿ ಹಾಗೂ ಮಕ್ಕಳೇ ಸೇರಿಕೊಂಡು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ರಾಥೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಪಾಪಿ ಪತ್ನಿ ಹಾಗೂ ದುಷ್ಟ ಉತ್ತರ ಹೇಯ ಕೃತ್ಯಕ್ಕೆ ಬಸವರಾಜ್ ಶೇರಿಕಾರ್ (52) ಬಲಿಯಾಗಿದ್ದಾರೆ.ಮತಾಂತರಕ್ಕೆ ವಿರೋಧ ಮಾಡಿ, ಮನೆಯಲ್ಲಿ ಪೂಜೆ ಪುನಸ್ಕಾರ ಮಾಡಬೇಕೆಂದು ಮೃತ ವ್ಯಕ್ತಿ ಬಸವರಾಜ ಶೇರಿಕರ್ ಹೇಳಿದ್ದರಂತೆ, ಅಷ್ಟೇ ಅಲ್ಲದೇ ದಸರಾ ಹಬ್ಬದಲ್ಲಿ ಪೂಜೆ ಯಾಕೆ ಮಾಡಿಲ್ಲವೆಂದು ಪ್ರಶ್ನಿಸಿದ್ದಕ್ಕೆ ಬಸವರಾಜ್‌ನನ್ನ ಪತ್ನಿ, ಮಕ್ಕಳು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದರು ಎನ್ನಲಾಗಿದೆ. ಎಸ್ ಟಿ ಸಮುದಾಯದಲ್ಲಿದ್ದರೂ ಕೂಡ ಬಸವರಾಜ ಪತ್ನಿ ಹಾಗೂ ಮಕ್ಕಳು ಕ್ರಿಶ್ಚಿಯನ್ ಧರ್ಮವನ್ನು ಪಾಲನೆ ಮಾಡುತ್ತಿದ್ದರು. ಇದನ್ನು ಬಸವರಾಜ್ ಅವರಿಗೂ ಪಾಲನೆ ಮಾಡುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದನ್ನು ವಿರೋಧಿಸಿದ್ದ ಮಾತು ಬಾರದ ಮೂಗ ಬಸವರಾಜ ಅವರನ್ನು ಪತ್ನಿ…

Read More

ಮಂಡ್ಯ : ಮಂಡ್ಯದಲ್ಲಿ ಘೋರ ದುರಂತ ಒಂದು ನಡೆದಿದ್ದು ಈಜು ಬಾರದೇ ಇದ್ದರೂ ಮಂಡ್ಯದ ವಿಸಿನಾಲಿಗೆ ಇಳಿದು ಯುವಕನೊಬ್ಬ ನಿರೂಪಳಾಗಿರುವ ಘಟನೆ ಮಂಡ್ಯ ಮಂಡ್ಯ ತಾಲೂಕಿನ ಯಲಿಯೂರು ಬಳಿ ವಿಸಿ ನಾಲೆಯ ಬಳಿ ಈ ಒಂದು ಘಟನೆ ಸಂಭವಿಸಿದೆ. ಈಜಲು ಬಾರದೆ ಇದ್ದರೂ ಈಜಲು ಹೋದ ಯಶ್ವಂತ್ (22) ಎನ್ನುವ ಯುವಕ ನೀರು ಪಾಲಾಗಿದ್ದಾನೆ. ಅನಿಲ್ ಕುಮಾರ್ ಉಮಾ ದಂಪತಿ ಪುತ್ರ ಯಶ್ವಂತ್ ಎಂದ್ ತಿಳಿದುಬಂದಿದೆ. ಯಶ್ವಂತ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ನಿವಾಸಿ ಎಂದು ಹೇಳಲಾಗುತ್ತಿದೆ. ಕಾಲೇಜಿನಿಂದ ಮಧ್ಯಾಹ್ನ ಸ್ನೇಹಿತರೊಂದಿಗೆ ಯಶವಂತ್ ಈಜಲು ತೆರಳಿದ್ದ. ಕಾವೇರಿ ಇಂಜಿನಿಯರ್ ಕಾಲೇಜಿನಲ್ಲಿ ಯಶವಂತ್ ಬಿಇ ಓದುತ್ತಿದ್ದ. ಈಜು ಬಾರದಿದ್ದರೂ ನಾಲೇಗೆ ಇಳಿದಿದ್ದ. ಯಶವಂತ ಹಾಗೂ ಇಬ್ಬರು ಸ್ನೇಹಿತರು ನಾಲೆಯ ನೀರಿನ ರಭಸಕ್ಕೆ ಮೂವರು ಯುವಕರು ಕೊಚ್ಚಿ ಹೋಗುತ್ತಿದ್ದರು ಈ ವೇಳೆ ಸ್ಥಳೀಯರು ಇಬ್ಬರು ಯುವಕರನ್ನು ರಕ್ಷಣೆ ಮಾಡಿದ್ದಾರೆ. ಆದರೆ ಯಶವಂತ ನೀರು ಪಾಲಾಗಿದ್ದಾನೆ ಅಗ್ನಿಶಾಮಕ ದಳದ ಸಿಬ್ಬಂದಿ ಇದ್ದ ಇದೀಗ…

Read More