Author: kannadanewsnow05

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಬಳಿ ಇರುವ ತುಂಗಾ ನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಜಕ್ಕಣ್ಣನವರ್ ನನ್ನು ಅಮಾನತು ಮಾಡಲಾಗಿದೆ. ಹೌದು ತುಂಗಾನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಿಎಸ್ಐ ಠಾಣೆ ಜಕ್ಕಣ್ಣನವರ್ ನನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮರಳು ದಂಧೆ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಸೇರಿದಂತೆ ಒಟ್ಟು ನಾಲ್ಕು ಕಾರಣಗಳನ್ನು ನೀಡಿ ಪಿಎಸ್ಐ ಜಕ್ಕಣ್ಣನವರನ್ನು ಅಮಾನತು ಮಾಡಲಾಗಿದೆ.

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಐಶ್ವರ್ಯ ಗೌಡ ಕೇಸ್ ಸಂಬಂಧಿಸಿದಂತೆ ಈಗ ಸ್ಫೋಟಕ ತಿರುವು ಸಿಕ್ಕಿದ್ದು ಪೊಲೀಸರೇ ಸಿಡಿಆರ್ ನೀಡಲು ಸಹಕರಿಸಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಈಗಾಗಲೇ ಎಸಿಪಿ ಚಂದನ್ ಕುಮಾರ್ ನೋಟಿಸ್ ನೀಡಿದ್ದು, ಆಕೆಯ ಕಾಲ್ ಡಿಟೇಲ್ ಆಧರಿಸಿ ಮತ್ತು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಿದ್ದಾರೆ. ಇಂದು ವಿಚಾರಣೆಗೆ ಐಶ್ವರ್ಯ ಗೌಡ ಹಾಜರಾಗುವ ಸಾಧ್ಯತೆ ಇದೆ. ಎಸಿಪಿ ಚಂದನ್ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಐಶ್ವರ್ಯಗೌಡ ಹಾಜರಾಗುವ ಸಾಧ್ಯತೆ ಇದೆ. ಅಕ್ರಮವಾಗಿ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದಿದ್ದ ಆರೋಪ ಹಿನ್ನೆಲೆಯಲ್ಲಿ 2022 ಮಾರ್ಚ್ ನಿಂದ 2024ರ ನವೆಂಬರ್ ವರೆಗೆ ಐಶ್ವರ್ಯ ಗೌಡ ಹಲವರ ಸಿಡಿಆರ್ ಪಡೆದ ಆರೋಪ ಕೇಳಿ ಬಂದಿದೆ. ಈ ಕುರಿತು ಎಸಿಪಿ ಭರತ್ ರೆಡ್ಡಿ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ನಡೆಸುತ್ತಿದ್ದಾರೆ ಐಶ್ವರ್ಯ ವಿಚಾರಣೆ ಬೆನ್ನಲ್ಲೇ ಸದ್ಯ ಕೆಲ…

Read More

ಮೈಸೂರು : ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ಬಳಿಕ ಇಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಅವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದ ಮರುದಿನವೇ ಆರ್ ಅಶೋಕ್ ಸ್ಥಳಕ್ಕೆ ಭೇಟಿ ನೀಡಿದ್ದರು. ಇದೀಗ ಮೂರು ದಿನಗಳ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆಗೆ ಇಂದು ಡಾ.ಜಿ ಪರಮೇಶ್ವರ್ ಸಭೆ ನಡೆಸಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 15 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅದರಲ್ಲಿ ಓರ್ವ ಬಾಲಕ ಕೂಡ ಇದ್ದಾನೆ. ಈಗಾಗಲೇ ಎಲ್ಲಾ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದ್ದು, ಓರ್ವ ಬಾಲಾಪರಾಧಿಯನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

Read More

ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಇದೀಗ ಮೆಟ್ರೋ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಡಿಸುತ್ತಿದ್ದು, ದರ ಏರಿಕೆ ಬೆನ್ನಲ್ಲೆ ಇದೀಗ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಮೆಟ್ರೋನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಶೇ. 35 ರಿಂದ 40 ರಷ್ಟು ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ. ಎಂದು ತಿಳಿದುಬಂದಿದೆ. ಹೌದು 2017ರ ಜೂನ್‌ ಬಳಿಕ ಇದೇ ಮೊದಲ ಸಲ ಪ್ರಯಾಣ ದರ ಏರಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ. ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಅಧಕಾರಿಗಳು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.…

Read More

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದ್ದು ಈಗಾಗಲೇ ಪೊಲೀಸರು 12 ಜನ ಆರೋಪಿ ಹಾಗೂ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇದೀಗ ಮತ್ತೆ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹೌದು, ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಕಿಡಿಗೇಡಿಗಳನ್ನು ಬಂಧಿಸಿದ್ದ ಪೊಲೀಸರು ನಿನ್ನೆ ಮೈಸೂರಿನ ಕೆಆರ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 14 ದಿನಗಳ ಕಾಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಆದೇಶ ನೀಡಿದ್ದಾರೆ. ಏನಿದು ಘಟನೆ? ಮುಸ್ಲಿಂ ಸಮುದಾಯದ ಬಗ್ಗೆ ವ್ಯಕ್ತಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ ಎಂಬ ಕಾರಣಕ್ಕಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಾಹುಲ್ ಗಾಂಧಿ,…

Read More

ವಿಜಯನಗರ : ಪಟ್ಟಣದ ಹೊರವಲಯದಲ್ಲಿ ಭರತ ಹುಣ್ಣಿಮೆ ದಿನ ನಡೆದ ದೊಡ್ಡಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ‘ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್’ಎಂದು ದೈವವಾಣಿ ನುಡಿದರು. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಗೊರವಪ್ಪ ಸಂಜೆ 5.46ಕ್ಕೆ ಬಿಲ್ಲನ್ನೇರಿ ಸದ್ದಲೇ ಎನ್ನುತ್ತಿದ್ದಂತೆ ನೆರೆದವರೆಲ್ಲ ನಿಶ್ಯಬ್ದವಾದರು. ಕೆಲವೇ ಕ್ಷಣಗಳಲ್ಲಿ ಮೇಲಿನಂತೆ ಕಾರಣಿಕ ನುಡಿದು ಬೀಳುತ್ತಿದ್ದ ಕೋಟೆಪ್ಪನನ್ನು ಗೊರವ ಸಮೂಹ ಎತ್ತಿ ಹಿಡಿದರು. ಪ್ರಸಕ್ತ ವರ್ಷದ ಮಳೆಗೆ ಸಮೃದ್ಧವಾಗಿ ಉತ್ತಮ ಫಸಲು ಬರುತ್ತದೆ. ಆದರೆ, ಇಳುವರಿ ಕುಂಠಿತ ಎಂಬ ಸಂದೇಶ ನೀಡಿದ್ದಾರೆ ಎಂದು ಭಕ್ತರು ತಿಳಿಸಿದರು. ಇನ್ನು ಅದೇ ರೀತಿಯಾಗಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಕಾರ್ಣಿಕ ನುಡಿದಿದ್ದು, ನೀರಿನ ಕೊಡ ಉರಡತಲೆ ತುಪ್ಪದ ಕೊಡ ಉಕ್ಕತಲೆ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೆರಿ ಗೊರವಯ್ಯ ಹನುಮಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ.

Read More

ಬೆಂಗಳೂರು : ರೈಲಿನಲ್ಲಿ ಕುಳಿತುಕೊಳ್ಳಲು ಸೀಟ್ ಗಾಗಿ ಗಲಾಟೆ ನಡೆದಿದೆ. ಈ ವೇಳೆ ಚಲಿಸುತ್ತಿದ್ದ ರೈಲಿನಿಂದಲೇ ಇಬ್ಬರೂ ವ್ಯಕ್ತಿಯೊಬ್ಬನನ್ನು ತಳ್ಳಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಶವಂತಪುರ ಬೀದರ್ ರೈಲಿನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಸೀಟ್ನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ವ್ಯಕ್ತಿಯ ಕೊಲೆಯಾಗಿದೆ. ಯಲಹಂಕ ಗೌರಿಬಿದನೂರು ರೇಂಜ್ನಲ್ಲಿದ್ದಾಗ ಈ ಒಂದು ಭೀಕರವಾದ ಕೊಲೆ ನಡೆದಿದೆ ಫೆಬ್ರುವರಿ 11 ರಂದು ರೈಲಿನಿಂದ ತಳ್ಳಿ ಇಬ್ಬರು ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂವರೆಗೂ ಪತ್ತೆಯಾಗಿಲ್ಲ ಘಟನೆಯ ಕುರಿತಂತೆ ಈ ಬಗ್ಗೆ ರೈಲ್ವೆ ಪೊಲೀಸರಿಗೆ ಪ್ರಯಾಣಿಕರು ಮಾಹಿತಿ ನೀಡಿದ್ದರು. ಪ್ರಯಾಣಿಕರ ಮಾಹಿತಿಯ ಮೇರೆಗೆ ರೇಲ್ವೆ ಪೊಲೀಸರು ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಹಾಲಕ್ಕಿ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧಾನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿಯ ತಮ್ಮ ನಿವಾಸದಲ್ಲಿ ಸುಕ್ರಿ ಬೊಮ್ಮಗೌಡ (88) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಹೌದು ವಯೊಸಹಜ ಕಾಯಿಲೆಯಿಂದ ಬಡಿಗೇರಿ ನಿವಾಸದಲ್ಲಿ ಸುಕ್ರಿ ಬೊಮ್ಮಗೌಡ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿ ಗ್ರಾಮದಲ್ಲಿ ಅವರು ನಿಧನರಾಗಿದ್ದಾರೆ. ಸುಕ್ರಿ ಬೊಮ್ಮಗೌಡ ಹಾಲಕ್ಕಿ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದರು 2017ರಲ್ಲಿ ಸುಕ್ರಿ ಬೊಮ್ಮು ಗೌಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಸುಕ್ರಿ ಬೊಮ್ಮಗೌಡ ಹಿನ್ನೆಲೆ? ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದವರು. ಸಾಂಪ್ರದಾಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಲಭಿಸಿದೆ. ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿ ಕೊಡುತ್ತಾರೆ.…

Read More

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದ್ದು ಈಗಾಗಲೇ ಪೊಲೀಸರು 12 ಜನ ಆರೋಪಿ ಹಾಗೂ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಿದಾಗ 14 ದಿನಗಳ ಕಾಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ನಲ್ಲಿ ಹಲವು ಅಂಶಗಳು ದಾಖಲಾಗಿದ್ದು, ಕೆಲವು ಸ್ಫೋಟಕವಾದ ಅಂಶಗಳು ಇದೀಗ ಬಯಲಾಗಿವೆ. ಉದ್ರಿಕ್ತರು ಸಿಕ್ಕ ಸಿಕ್ಕ ಪೊಲೀಸರ ಮೇಲೆ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಕೂಡ ಪೊಲೀಸರ ಹೆಣ ಬೀಳುತ್ತಿದ್ದವು. ಅಕ್ರಮವಾಗಿ ಗುಂಪು ಕಟ್ಟಿಕೊಂಡು ಸರ್ಕಾರದ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಾಹನಗಳಿಗೂ ಕೂಡ ಉದ್ರಿಕ್ತರು ಹಾನಿ ಮಾಡಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು ಹಲ್ಲೆ ನಡೆಸಿದ್ದಾರೆ ಸರ್ಕಾರಿ ಕೆಲಸಕ್ಕೆ ಮುಸ್ಲಿಂ ಯುವಕರು ಅಡ್ಡಿಪಡಿಸಿದ್ದಾರೆ. ಎಂದು ಉದಯಗಿರಿ ಠಾಣೆಯಲ್ಲಿ…

Read More

ಹಾವೇರಿ : ಜಿಲ್ಲೆ ಹಾನಗಲ್ ತಾಲ್ಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಕಾರ್ಣಿಕ ನುಡಿಯಲಾಗಿದೆ. ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು 12 ಅಡಿ ಎತ್ತರದ ಬಿಲ್ಲೇರಿ ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ ನುಡಿದಿದ್ದಾರೆ. ಹಾನಗಲ್ ತಾಲ್ಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯ ಪ್ರಯುಕ್ತ ಕಾರ್ಣಿಕ ನುಡಿ ಹೀಗಿದೆ. 12 ಅಡಿ ಎತ್ತರದ ಬಿಲ್ಲೇರಿ ಗೊರವಯ್ಯ ಹನುಮನಗೌಡ ಗುರೇಗೌಡರ ಕಾರ್ಣಿಕ ನುಡಿದ್ದಿದು,ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು ದೈವವಾಣಿ ನುಡಿದಿದ್ದಾರೆ.ಇದರ ಅರ್ಥ, ಪ್ರಸಕ್ತ ಈ ವರ್ಷ ನಮ್ಮ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಹೀಗಾಗಿ ಸಮೃದ್ಧವಾಗಿ ಬೆಳೆಗಳು ಬರಲಿವೆ ಎಂದು ಗ್ರಾಮಸ್ಥರು ಈ ಕಾರ್ಣಿಕದ ವಿಶ್ಲೇಷಣೆ ಮಾಡಿದ್ದಾರೆ

Read More