Author: kannadanewsnow05

ಕೊಡಗು : ರಾಜ್ಯದಲ್ಲಿ ಇದೀಗ ವಕ್ಫ್ ವಿವಾದ ಭುಗಿಲೆದ್ದಿದ್ದು, ವಿಜಯಪುರದಿಂದ ಆರಂಭವಾದ ಈ ಒಂದು ವಿವಾದ ಇದೀಗ ಇಡೀ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಮೊದಲಿಗೆ ರೈತರ ಜಮೀನುಗಳು ಅಷ್ಟೇ ಎಂದು ಕೊಂಡರೆ ಬಳಿಕ ಮಠ ಮಾನ್ಯಗಳು, ಸರ್ಕಾರಿ ಕಚೇರಿಗಳು, ಶಾಲೆಗಳು ಎಲ್ಲವು ವಕ್ಫ್ ಆಸ್ತಿ ಎಂದು ನಮೂದಾಗಿದೆ. ಈಗ ಕೊಡಗಿನ ದೈವಾರಾಧನೆ ದೇವಸ್ಥಾನ ಒಂದು ವಕ್ಫ್ ಗೆ ಸೇರಿದೆ ಎಂದು ಪಹಣಿಯಲ್ಲೇ ನಮೂದಾಗಿದೆ. ಹೌದು ಕೊಡಗಿನ ಸೋಮವಾರಪೇಟೆ ಪಟ್ಟಣದ ಹೃದಯ ಭಾಗದಲ್ಲಿ ವನದುರ್ಗಾ ದೇವಾಲಯದ ಟ್ರಸ್ಟ್‌ನ ಸುಮಾರು 11 ಎಕರೆ ಜಾಗ‌ದ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ಉಲ್ಲೇಖವಾಗಿದೆ. ಇದು ಹಿಂದೂಗಳ ದೇವಾಲಯ ಅನ್ನೋದಕ್ಕೆ ನೂರಾರು ವರ್ಷಗಳ ಹಿಂದೆ ಹಳೆಗನ್ನಡದಲ್ಲಿ ಬರೆದಿರುವ ಚೌಡೇಶ್ವರಿ ದೇವಾಲಯದ ಕಲ್ಲು ಸಹ ಸಾಕ್ಷಿಯಿದೆ. ಪ್ರತಿ ವರ್ಷ ಈ ದೇವಾಲಯದಲ್ಲಿ ವಾರ್ಷಿಕೋತ್ಸವ, ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ದೇವಾಲಯದೊಂದಿಗೆ ಭಕ್ತರಿಗೆ ಭಾವನ್ಮಾಕ ಸಂಬಂಧ ಇದೆ. ಈ ನಡುವೆ ವಕ್ಫ್‌ ಆಸ್ತಿ ವಿವಾದ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷದ…

Read More

ಬಳ್ಳಾರಿ : ಸಿದ್ದರಾಮಯ್ಯ ಅಹಂಕಾರದ ಮನುಷ್ಯ, ನಾನು 1 ಲಕ್ಷ ಕೋಟಿ ರೂ. ಲೂಟಿ ಮಾಡಿದ್ದೇನೆ ಎಂದು ಆರೋಪ ಮಾಡುತ್ತಾರೆ. ಸಿಎಂ ಹುಚ್ಚರಾಗಿದ್ದಾರೆ ಅವರ ಯುಪಿಎ ಸರ್ಕಾರ ಇದ್ದಾಗ ಏನು ಕಿತ್ತುಕೊಳ್ಳಲು ಆಗಲಿಲ್ಲ. ಈಗ ಏನು ಮಾತಾಡುತ್ತೀರಾ? ಅವರಿಗೆ ನೆಮ್ಮದಿ ಕದಡಿದೆ. ರಾತ್ರಿ ಸರಿಯಾಗಿ ನಿದ್ದೆಯೂ ಮಾಡಲ್ಲ. ಯಾವಾಗ ಅರೆಸ್ಟ್ ಆಗುತ್ತೀನೋ ಎನ್ನುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಎಂದು ಶಾಸಕ ಜನಾರ್ಧನ ರೆಡ್ಡಿ ತಿಳಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಬಳ್ಳಾರಿ, ಸಂಡೂರು ಜಿಲ್ಲೆಗೆ ಅವರ ಕೊಡುಗೆ ಏನು ಇಲ್ಲ. ಕುಡಿಯುವ ನೀರು, ಕೆರೆಗಳನ್ನು ನಿರ್ಮಾಣ ಮಾಡಿ, ತುಂಗಭದ್ರಾ ನೀರು ಹರಿಸಿ ಮನೆ ಮನೆಗೆ ನೀರು ಕೊಟ್ಟಿದ್ದೀವಿ. ಬಳ್ಳಾರಿ ನಗರ ಮೊದಲು ಹೇಗಿತ್ತು? ಈಗ ಹೇಗಾಗಿದೆ? ನಾವೆಲ್ಲ ಅಭಿವೃದ್ಧಿ ಮಾಡಿದ್ದೇವೆ. ನಾನು ಬಳ್ಳಾರಿಯಲ್ಲಿ ನೆಮ್ಮದಿಯಿಂದ ನನ್ನ ಜನಗಳ ಜೊತೆ ಇದ್ದೇನೆ. ಅಖಂಡ ಬಳ್ಳಾರಿಯಲ್ಲಿ ನನಗೆ ಜನರ ಬೆಂಬಲ ಇದೆ ಎಂದರು. ಸಂಡೂರಿನಲ್ಲಿ ನಾವು ಗೆಲ್ಲದೇ ಇದ್ದರೂ 250…

Read More

ಬೆಂಗಳೂರು : ಸಾಮಾಜಿಕ ಜಾಲತಾಣವನ್ನು ಕೇವಲ ನಮಗೆ ಮನೋರಂಜನೆಗಾಗಿ ಹಾಗೂ ಒಳ್ಳೆಯ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಆದರೆ ಇತ್ತೀಚಿಗೆ ಅದರ ತದ್ವಿರುದ್ಧವಾಗಿ ಯಾವ ಯಾವುದಕ್ಕೂ ಅನೈತಿಕ ಚಟುವಟಿಕೆಗಳಿಗೆ ಈ ಒಂದು ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್ ಫ್ರೆಂಡ್ ಒಬ್ಬನನ್ನು ನಂಬಿ ನಗ್ನ ಚಿತ್ರ ಕಳುಹಿಸಿ ಚಿನ್ನ ಹಾಗೂ ನಗದು ಹಣವನ್ನು ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ವಿವಾಹಿತ ಮಹಿಳೆಗೆ ಕಳೆದ ಮೂರು ವರ್ಷಗಳ ಹಿಂದೆ ಅಭಿಷೇಕ್ ನಾಯಕ್ ಎನ್ನುವ ಯುವಕನ ಪರಿಚಯವಾಗಿದೆ ಈ ವೇಳೆ ಪರಿಚಯ ಪರಸ್ಪರ ಸ್ನೇಹಕ್ಕೆ ತಿರುಗಿ ತುಂಬಾ ಆತ್ಮೀಯವಾಗಿ ತಮ್ಮ ತಮ್ಮ ನಂಬರ್ ಗಳನ್ನು ಬದಲಾಯಿಸಿಕೊಂಡು ಕರೆ ಮಾಡುವುದು ಹಾಗೂ ವೀಡಿಯೋ ಕಾಲ್ ಮಾಡುವುದು ಮಾಡಿದ್ದಾರೆ ಈ ಸಂದರ್ಭದಲ್ಲಿ ಯುವಕ ಮಹಿಳೆಯ ಹಲವು ವಿಡಿಯೋಗಳನ್ನು ಇಟ್ಟುಕೊಂಡಿದ್ದ. ಈ ವೇಳೆ ಮಹಿಳೆಯ ವೈವಾಹಿಕ ಜೀವನದ ಹಾಗೂ ಪರಿಸ್ಥಿತಿ ಲಾಭವನ್ನು ಪಡೆದುಕೊಂಡು ಸಹಾಯ ಮಾಡುವ ನೆಪದಲ್ಲಿ, ಆಕೆ ಜತೆಗೆ ಪದೇಪದೆ…

Read More

ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದ ವಿಚಾರವಾಗಿ ಸಿಬಿಐ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಪ್ರಕರಣದ ಕುರಿತು ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಿದೆ. ಹೌದು ಇತ್ತೀಚೆಗೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಾಸ್ ಪಡೆದಿತ್ತು. ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಸಿಬಿಐ ಈ ಆದೇಶದ ಕುರಿತು ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಯತ್ನಾಳ್ ಹಾಗೂ ಸಿಬಿಐ…

Read More

ಚಿಕ್ಕಬಳ್ಳಾಪುರ : ಬೆಂಗಳೂರು ಮೂಲದ ಯೋಗ ಶಿಕ್ಷಕಿಯನ್ನು ಅಪಹರಿಸಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿ ಗುಂಡಿ ತೋಡಿ ಜೀವಂತ ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿಕ್ಕಬಳ್ಳಾಪುರದ ಎಸ್ ಪಿ ಕುಶಲ್ ಚೌಕ್ಸೆ ಅವರು, ಯೋಗ ಶಿಕ್ಷಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಗ ಶಿಕ್ಷಕಿಯನ್ನು ಅಪಹರಿಸಿ ಜೀವಂತ ಸಮಾಧಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಮಹಿಳೆ ಯೋಗ ಶಿಕ್ಷಕಿಯ ಮೇಲೆ ಅತ್ಯಾಚಾರವಾಗಿಲ್ಲ. ದೂರುದಾರ ಮಹಿಳೆಗೆ ಆ ಸಂದರ್ಭದಲ್ಲಿ ಶವಾಸನ ನೆರವಾಗಿದೆ. ಆರೋಪಿಗಳು ಕತ್ತು ಹಿಸುಕಿದಾಗ ಉಸಿರಾಟ ನಿಲ್ಲಿಸಿದಂತೆ ಶಿಕ್ಷಕಿ ನಟಿಸಿದ್ದಾರೆ. ಮಹಿಳೆಯ ಗುರುತು ಸಿಗದಂತೆ ಬಟ್ಟೆ ಮತ್ತು ಚಿನ್ನಾಭರಣ ಕಿತ್ತುಕೊಂಡಿದ್ದರು. ರಾತ್ರಿ ಆಗಿದ್ದರಿಂದ ಚಿಕ್ಕದಾಗಿ ಗುಂಡಿ ತೋಡಿ ಮುಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಪರಾರಿಯಾಗಿದ್ದ ಸತೀಶ್ ರೆಡ್ಡಿ, ಬಿಂದು, ರಮಣರೆಡ್ಡಿ, ರವಿಚಂದ್ರನ್, ನಾಗೇಂದ್ರ ಹಾಗೂ ಬಾಲಕನನ್ನು ಬಂಧಿಸಿರುವಾಗಿ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ? ಬೆಂಗಳೂರು ನಗರದ ಯೋಗ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರಿಗೆ ಇಬ್ಬರು ಇಡೀ ಅಧಿಕಾರಿಗಳು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಈ ಬಗ್ಗೆ ಆದೇಶಿಸಿದೆ. ಜಾರಿ ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್​ ಮನೋಜ್ ಮಿತ್ತಲ್ ಹಾಗೂ ಮತ್ತೋರ್ವ ಇ.ಡಿ.ಅಧಿಕಾರಿ ಮುರಳಿ ಕಣ್ಣನ್ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಇವಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುವಂತೆ ಇಡಿ ಅಧಿಕಾರಿಗಳು ಬೆದರಿಕೆ…

Read More

ಬೆಂಗಳೂರು : ಭಾರತೀಯ ಜನತಾ ಪಕ್ಷದವರು ರಕ್ತ ಪಿಪಾಸುಗಳು. ಬಿಜೆಪಿಯವರು ಅಮಾಯಕರ ಹೆಸರಲ್ಲಿ ರಾಜಕೀಯ ಲಾಭ ಪಡೆಯುವವರು. ಮಾಧ್ಯಮಗಳ ಮುಂದೆ ಹಾಗಾಗಿದೆ ಹೀಗಾಗಿದೆ ಎಂದು ಹೇಳಿಕೆ ಕೊಡುತ್ತಾರೆ. ನಿಮ್ಮಿಂದ ತಪ್ಪಾದಾಗಲೂ ಹಾಗೆ ಮಾತನಾಡಬೇಕಲ್ವಾ? ಇಂದು ನವೆಂಬರ್ 8 ನೋಟು ಅಮಾನೀಕರಣ ವರ್ಷಾಚರಣೆ. ಬಿಜೆಪಿಯವರು ಇದರ ಸಂಭ್ರಮಾಚರಣೆ ಮಾಡಿದ್ದೀರಾ? ಇಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಪ್ಪು ಹಣ ವಾಪಸ್ ತರುವ ನೋಟು ಅಮಾನೀಕರಣ ಎಂದು ಹೇಳಿದ್ದರು. ಕಪು ಹಣ ವಾಪಸ್ ಬಂತಾ? ಬ್ಯಾಂಕ್ ಎಟಿಎಂ ಮುಂದೆ ಸರತಿ ಸಾಲಿನಲ್ಲಿ ನಿಂತವರು ಎಷ್ಟು ಜನ ಹೇಳಿ? ನರೇಂದ್ರ ಮೋದಿ ಅವರಷ್ಟು ದೊಡ್ಡ ಸುಳ್ಳುಗಾರ ಮತ್ತೊಬ್ಬರಿಲ್ಲ. ನರೇಂದ್ರ ಮೋದಿ ಬಿಜೆಪಿಯವರು ಸುಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ ಎಂದು ಕಿಡಿ ಕಾರಿದರು. 2022 ರಲ್ಲಿ ಹಾವೇರಿಯ ರೈತ ಆತ್ಮಹತ್ಯೆಗೆ ಶರಣಾಗಿದ್ದರು.ಆಗ ಬಿಜೆಪಿ ಅಧಿಕಾರದಲ್ಲಿ ಇತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಅಂದು ಸಿಎಂ ಆಗಿದ್ದ ಬೊಮ್ಮಾಯಿ ತವರು…

Read More

ರಾಮನಗರ : ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿಕೆಯ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಬಹುತೇಕ ಉದ್ಯಮಗಳು ಗುಜರಾತ್ ರಾಜ್ಯಕ್ಕೆ ಹೋಗುತ್ತಿವೆ. ಹಲವು ಉದ್ಯಮಗಳು ನಮ್ಮ ಕರ್ನಾಟಕಕ್ಕೆ ಬರಲು ತಯಾರಿದ್ದವು. ಆದರೆ ಕೇಂದ್ರ ಸರ್ಕಾರ ಅಡ್ಡ ಬರುತಿದೆ. ಗುಜರಾತ್ ಗೆ ಹೋಗಲು ಒತ್ತಡ ಹಾಕುತ್ತಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅದನ್ನು ತಡೆಯಲಿ. ಚುನಾವಣೆ ಗೆಲ್ಲುವುದಕ್ಕೆ ಮಾತ್ರ ಕಣ್ಣೀರು ಹಾಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಉಪಚುನಾವಣೆಯಲ್ಲಿ ಎಚ್ ಡಿ ದೇವೇಗೌಡ ಅಗ್ರಸಿವ್ ಆಗಿ ಮಾತನಾಡುತ್ತಿದ್ದಾರೆ. ಮುತ್ಸದ್ದಿ ವ್ಯಕ್ತಿಗಳು ಹೀಗೆ ಮಾತನಾಡಬಾರದು.ಎನ್ ಡಿ ಎ ನಾಯಕರಿಗೆ ಈಗ ಮೇಕೆದಾಟು ವಿಚಾರ ನೆನಪಾಗಿದೆ.ಪ್ರಧಾನಿ ಮೋದಿ ಬಳಿ ನೀವು ಹೋಗುವಾಗ ನಮ್ಮನ್ನು ಕರೆಯಬೇಕಿತ್ತು. ಅದನ್ನು ಬಿಟ್ಟು ಈಗ ದೇವೇಗೌಡರು ಉಪಚುನಾವಣೆಗೆ ಬಂದಿದ್ದಾರೆ.ಮಾಜಿ ಪ್ರಧಾನ ಮಂತ್ರಿ ದೇವೇಗೌಡರಿಗೆ ಈ ಗತಿ ಬರಬಾರದಿತ್ತು ಎಂದರು. ಇವರದ್ದು ಸ್ವಾರ್ಥದ ಕಣ್ಣೀರು ಅನ್ಯಾಯ ಮಾಡಿದ್ದಾರೆ ಎಂದು ಹೇಳುತ್ತಾರೆ. ಇವರಿಗೆ ಯಾರು ಅನ್ಯಾಯ ಮಾಡಿದ್ದಾರೆ. ಇವರದ್ದು ಬರೀ ಡ್ರಾಮಾ. ಚನ್ನಪಟ್ಟಣ…

Read More

ಬೆಂಗಳೂರು : ಕರ್ನಾಟಕದ ಪ್ರತಿಷ್ಠಿತ ದೇವಸ್ಥಾನಗಳ ಪ್ರಸಾದವನ್ನು ರಾಜ್ಯದ ಮನೆ ಮನೆಯ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದ್ದು, ಆ ಮೂಲಕ ಹೊಸ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಇಲಾಖೆಯ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದು, ಮುಜರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದರು. ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನ ಆನ್​ ಲೈನ್​ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ. ಈ ಕುರಿತಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದಕ್ಕೆ ಎಷ್ಟು ದರ ಇದೆಯೋ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರವನ್ನು ನಿಗದಿ ಮಾಡಲಾಗುತ್ತಿದೆ.ಸದ್ಯ ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ಜನರಿಗೆ ಸೇವೆ ನೀಡಲು…

Read More

ದಕ್ಷಿಣಕನ್ನಡ : ಕಳೆದ ಎರಡು ವರ್ಷಗಳ ಹಿಂದೆ ಫ್ಯಾಕ್ಟರಿ ಒಂದರಲ್ಲಿ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಆರೋಪಿಗಳಿಗೆ  ಗಲ್ಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಉತ್ತರಭಾರತ ಮೂಲದವರಾದ ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿಗೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. 2021ರ ನವೆಂಬರ್ 21ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿ ಅತ್ಯಾಚಾರ ಎಸಗಿದ್ದಲ್ಲದೆ ಬಳಿಕ ಕೊಲೆ ಮಾಡಲಾಗಿತ್ತು. ಹೊರ ರಾಜ್ಯದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ನವೆಂಬರ್ 21 ರಂದು ಟೈಲ್ಸ್ ಫ್ಯಾಕ್ಟರಿಯಲ್ಲಿ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ಫ್ಯಾಕ್ಟರಿ ಒಳಗಡೆ ಇದ್ದ ಚರಂಡಿಯಲ್ಲಿ ಬಾಲಕಿ ಮೃತದೇಹ ಎಸೆದಿದ್ದರು. ಮೂವರು ಆರೋಪಿಗಳೂ ಟೈಲ್ಸ್ ಫ್ಯಾಕ್ಟರಿ ಸಿಬ್ಬಂದಿಯಾಗಿದ್ದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ…

Read More