Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಇತ್ತೀಚಿಗೆ ಎಸ್ಡಿಎ ನೌಕರ ರುದ್ರಣ್ಣ ಮೇಲಾಧಿಕಾರಿಗಳ ಕಿರುಕುಳಕ್ಕೆ ಬಿಸತ್ತು ಕಚೇರಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯ ಕಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ FIR ದಾಖಲಾಗಿದೆ. ಈ ಕುರಿತಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಾಡ ಮಾರ್ಟಿನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, A1 ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ್, A2 ಆರೋಪಿ ಅಶೋಕ್ ಹಾಗೂ A3 ಆರೋಪಿ ಸೋಮು ವಿರುದ್ಧ ಖಡೆಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ತನಿಖೆ ಆರಂಭಿಸಿ ಕೆಲವೊಂದು ಅಷ್ಟು ಮಾಹಿತಿ ಸಂಗ್ರಹಿಸಲಾಗಿದೆ ಎಂದರು. ರುದ್ರಣ್ಣ ಮೊಬೈಲ್ ನೀಡಲು ಕುಟುಂಬಸ್ಥರಿಗೆ ಸೂಚನೆ ನೀಡಿದ್ದೇವೆ. ಮೃತ ರುದ್ರೇಶ್ ಮೊಬೈಲ್ FSL ಗೆ ಕಳುಹಿಸುತ್ತೇವೆ. ಸಿಸಿಟಿವಿ ದೃಶ್ಯಗಳನ್ನು ಕೂಡ ನಾವು ಕಲೆ ಹಾಕುತ್ತಿದ್ದೆವೆ. ರುದ್ರಣ್ಣ ಆಫೀಸ್ ವಾಟ್ಸಪ್ ಗ್ರೂಪ್ ನಲ್ಲಿ ಮೆಸೇಜ್ ಹಾಕಿದ್ದಾರೆ.…
ಚಿಕ್ಕಬಳ್ಳಾಪುರ : ಆಸ್ತಿಯ ಇ-ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ನಗರಸಭೆಯ ಆರ್ ಒ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಕುರಿತು, ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಬೆಂಗಳೂರು ಮೂಲದ ಯೋಗ ಶಿಕ್ಷಕಿ ಒಬ್ಬರನ್ನು ಅಪಹರಿಸಿ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೌದು ಯೋಗ ಶಿಕ್ಷಕಿಯನ್ನು ಅಪಹರಣ ಮಾಡಿದ್ದು ಅಲ್ಲದೆ ಆಕೆಯ ಮೇಲೆ ನಾಲ್ವರು ದುರುಳರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಯೋಗ ಶಿಕ್ಷಕಿ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.ಕೂಡಲೇ ಆಕೆಯ ಮೇಲೆ ಹಲ್ಲೆ ಮಾಡಿ ಆಕೆಯನ್ನು ಜೀವಂತ ಸಮಾಧಿ ಮಾಡಿ ಅಲ್ಲಿಂದ ತೆರಳಿದ್ದಾರೆ. ದುರುಳರು ಯೋಗ ಶಿಕ್ಷಕಿಯನ್ನು ಬೆಂಗಳೂರಿನ ಕೆಆರ್ ಪುರಂನಲ್ಲಿ ಅಪಹರಣ ಮಾಡಿದ್ದು ಅಂದು ಇಡೀ ಸಂಜೆ ಬೆಂಗಳೂರು ಸುತ್ತಿದ್ದಾರೆ. ನಂತರ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಅಪಹರಣ, ಅತ್ಯಾಚಾರಕ್ಕೆ ಯತ್ನ, ಹಲ್ಲೆ ಹಾಗೂ ಜೀವಂತ ಸಮಾಧಿ ಮಾಡಿದ ಬಳಿಕವೂ ಕೂಡ ಯೋಗ ಶಿಕ್ಷಕಿ ಸಮಾಧಿಯಿಂದ ಜೀವಂತವಾಗಿ ಎದ್ದು ಬಂದಿದ್ದಾರೆ. ಬಳಿಕ ಸತ್ತಂತೆ ನಟಿಸಿ ಗುಂಡಿ ಇಂದ ಯೋಗ ಶಿಕ್ಷಕಿ ಹೊರಗಡೆ ಬಂದಿದ್ದಾರೆ. ಅರೆಬೆತ್ತಳಾಗಿ…
ಬೆಂಗಳೂರು : ವುಡ್ ವರ್ಕ್ಸ್ ಶೆಡ್ ನಲ್ಲಿ ಕಾರ್ಮಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರ ಬಾನಾವಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಬಿರೇಂದರ್ ಆನ್ಸರ್ (19) ಎನ್ನುವ ಯುವಕನ ಶವ ಪತ್ತೆಯಾಗಿದೆ. ತಿಮ್ಮೇಗೌಡ ಎಂಬುವವರಿಗೆ ವುಡ್ ವರ್ಕ್ ಶೆಡ್ ಸೇರಿದ್ದು,
ಬೆಂಗಳೂರು : ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ.ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿದೆ. ಹೌದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ…
ಹಾವೇರಿ : ಹಾವೇರಿಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಅಕಸ್ಮಾತಾಗಿ ಕೆರೆಗೆ ಬಿದ್ದಿದ್ದ ಹೋರಿಯನ್ನು ರಕ್ಷಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳು ನೀರು ಪಾಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಮಕರವಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ನೀರುಪಾಲಾದ ವ್ಯಕ್ತಿಗಳನ್ನು ಮಾಲತೇಶ್ ದಾಸನೂರ್ (48) ಹಾಗೂ ನಾಗರಾಜ್ ಮಟ್ಟಿಮನಿ (45) ಎಂದು ತಿಳಿದುಬಂದಿದೆ. ಗ್ರಾಮದ ಪಕ್ಕದಲ್ಲೇ ಇರುವ ಕೆರೆಗೆ ಹೋರಿ ಬಿದ್ದಿತ್ತು. ಬಿದ್ದ ಹೋರಿಯನ್ನು ರಕ್ಷಣೆ ಮಾಡಲು ಹೋಗಿ ಇಬ್ಬರು ನೀರು ಪಾಲಾಗಿದ್ದಾರೆ. ಕೆರೆಯಲ್ಲಿರುವ ಬಳ್ಳಿಗಳು ಕಾಲಿಗೆ ತೊಡಕು ಹಾಕಿದ್ದರಿಂದ ಇಬ್ಬರು ಮೃತಪಟ್ಟಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ . ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು, ಮೃತರ ಶವಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅವರಿಗೆ ಸ್ಥಳೀಯ ಗ್ರಾಮಸ್ಥರು ಕೂಡ ಸಾಥ್ ನೀಡಿದ್ದಾರೆ. ಘಟನೆ ಕುರಿತಂತೆ ಹಾನಗಲ್ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS : ಮುಖ್ಯಮಂತ್ರಿ ಭಾಷಣದ ವೇಳೆ ‘ಆಜಾನ್’ : ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿಎಂ ಸಿದ್ದರಾಮಯ್ಯ
ಬಳ್ಳಾರಿ : ಕಾಂಗ್ರೆಸ್ ಸಂಸದ ಇ.ತುಕಾರಾಂ ಪತ್ನಿ, ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈ ಒಂದು ಉಪಚುನಾವಣೆಯ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಇಂದು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಆಜಾನ್ ಕೂಗಿದೆ. ಈ ವೇಳೆ ಕೂಡಲೇ ಸಿಎಂ ಸಿದ್ದರಾಮಯ್ಯ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿದರು. ಹೌದು ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವಾಗ ಆಜಾನ್ ಕೇಳಿಸಿತು. ಆಜಾನ್ ಕೇಳಿದ ಕೊಡಲೇ ಸಿದ್ದರಾಮಯ್ಯ 1 ನಿಮಿಷಗಳ ಕಾಲ ಭಾಷಣ ನಿಲ್ಲಿಸಿದ್ದಾರೆ. ಆಜಾನ್ ಮುಗಿದ ಕೂಡಲೇ ಮತ್ತೆ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸಿದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತ ನಗರದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಈ ಹಿಂದೆ ಕೂಡ ಇಂತದ್ದೇ ಘಟನೆ ಬೆಂಗಳೂರಲ್ಲಿ ನಡೆದಿತ್ತು. ಸೆಪ್ಟೆಂಬರ್ 2 ರಂದು ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಸಿಎಂ, ಡಿಸಿಎಂ ಸೇರಿದಂತೆ…
ಕಲಬುರ್ಗಿ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ತಂದೆ ಮಗನ ಮೇಲೆ ದಾಳಿ ಮಾಡಿದ ಹಂತಕರು ತಂದೆಯನ್ನು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೆ, ಘಟನೆಯಲ್ಲಿ ಮಗನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬೆಳಕಿಗೆ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರು ಗ್ರಾಮದ ನಿವಾಸಿ ಮರಲಿಂಗಪ್ಪ ತಳಗೇರಿ (67) ಪ್ರಕರಣ ಕೊಲೆಯಾದ ವ್ಯಕ್ತಿಯಾಗಿದ್ದು, ಇನ್ನು ಘಟನೆಯಲ್ಲಿ ಮಗ ಸಣ್ಣ ಮರೆಪ್ಪ ತಳಗೇರಿ ಹಂತಕರಿಂದ ಬಚಾವಾಗಿದ್ದು ಸಾವು ಬದುಕಿನ ಮಧ್ಯೆ ನರಳಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಕುಟುಂಬದಲ್ಲಿನ ಕಲಹ ಹಾಗೂ ಹಳೆ ವೈಷಮ್ಯ ಕಾರಣದಿಂದಾಗಿ ಮರಲಿಂಗಪ್ಪ ತಳಗೇರಿಯನ್ನ ಹತ್ಯೆ ಮಾಡಲಾಗಿದೆ.ವಾಡಿ ಪಟ್ಟಣದಿಂದ ಚಾಮನೂರು ಗ್ರಾಮಕ್ಕೆ ತಂದೆ, ಮಗ ಇಬ್ಬರು ಸೇರಿಕೊಂಡು ಬೈಕ್ ಮೇಲೆ ತೆರಳುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಈ ಕುರಿತಂತೆ ವಾಡಿ ಠಾಣೆಯಲ್ಲಿ ದಾಖಲಾಗಿದೆ.
ರಾಮನಗರ : ರಾಜ್ಯದ ಸಿಎಂ ಆಗಿ ನಾನೆ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಎಚ್ ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದು, ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಸಿಎಂ ಅಂತ ಹೇಳುತ್ತಾರೆ. ಈ ವಿಚಾರವಾಗಿ ಅಯ್ಯೋ ಎಂದು ಎಚ್ ಡಿ ಗೌಡರು ತಲೆಹೆಚ್ಚಿಕೊಂಡಿದ್ದಾರೆ. ಚನ್ನಪಟ್ಟಣದ ರಾಂಪುರ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರ ಸ್ವಾಮಿ ಪರವಾಗಿ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಸಿಎಂ ಅವರನ್ನು ಲೋಕಾಯುಕ್ತ ವಿಚಾರಣೆ ನಡೆಸಿದ್ದಕ್ಕೆ ಎಚ್ ಡಿ ದೇವೇಗೌಡ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ನಾಯಕರನ್ನು ನಂಬಬೇಡಿ ಎಂದು ನನ್ನ ಪತ್ನಿ ಹೇಳಿದ್ದರು ಕಾಂಗ್ರೆಸ್ನವರು ಮೋಸ ಮಾಡುತ್ತಾರೆ ಎಂದು ಹೇಳಿದ್ದರು. ನಿಮ್ಮ ಆಶೀರ್ವಾದದಿಂದ ಇನ್ನೂ 4-5 ವರ್ಷ ಬದುಕಿರುತ್ತೇನೆ ಹೋರಾಟ ಮಾಡುತ್ತೇನೆ. ಲೂಟಿ ಮಾಡುತ್ತಿರುವ ಕಾಂಗ್ರೆಸ್ ತೆಗೆಯುವವರೆಗೂ ಹೊರಡುತ್ತೇನೆ. ನಾನು ಬದುಕಿದ್ದರೆ ಮತ್ತೊಂದು ಚುನಾವಣೆಗೆ ಬರುತ್ತೇನೆ. ನಿಮ್ಮ ರಕ್ತ ಹೀರುತ್ತಿರುವವರನ್ನು ಕಿತ್ತೊಗೆಯಲು ಬರುತ್ತೇನೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದವರು ಎಚ್ ಡಿ ದೇವೇಗೌಡ ಕಿಡಿಕಾರಿದರು. ಮೊಮ್ಮಗ ನಿಖಿಲ್ ಕುಮಾರಸ್ವಾಮಿ…
ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಬೀದಿ ನಾಯಿಗಳಿಗೆ ಊಟ ಹಾಕಿದಕ್ಕೆ ಮಹಿಳೆ ಒಬ್ಬರಿಗೆ ನಿಂದಿಸಿ ಅವರ ಮೇಲೆ ಐವರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಕೇಸ್ ದಾಖಲಾಗಿದೆ. ಹೌದು ಬೆಂಗಳೂರಿನ ಎಚ್ ಎ ಎಲ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಕೆಎಸ್ ದಾಖಲಾಗಿದೆ. ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗುರುರಾಜ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಗುರುರಾಜ್ ಲೇಔಟ್ ನ 6ನೇ ಕ್ರಾಸ್ ನಲ್ಲಿ ಬೀದಿನಾಯಿಗಳಿಗೆ ಮಹಿಳೆಯೊಬ್ಬರು ಊಟ ಹಾಕುತ್ತಿದ್ದರು ಪ್ರತಿದಿನ ನಾಲ್ಕು ಬೀದಿನಾಯಿಗಳಿಗೆ ಮಹಿಳೆ ಅನ್ನಿ ಜಾರ್ಜ್ ಎನ್ನುವವರು ಊಟ ಹಾಕುತ್ತಿದ್ದರು. ಕಳೆದ 10 ವರ್ಷದಿಂದ ಮಹಿಳೆ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ನವೆಂಬರ್ ಐದರಂದು ರಾತ್ರಿ ಊಟ ಹಾಕುತ್ತಿದ್ದಾಗ ಅಪರಿಚಿತ ವ್ಯಕ್ತಿಯಿಂದ ಕಿರಿಕ್ ಆಗಿದೆ. ಬೈಕ್ ಕೀ ಕಿತ್ತುಕೊಂಡು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ…













