Author: kannadanewsnow05

ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಹಲವು ಕಡೆ ಬ್ರಾಹ್ಮಣ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಹಿಜಾಬ್ ಕಿಡಿ ಸ್ಫೋಟವಾಗಿದೆ. ಹೌದು ಅಲಿಯಾ ಅಸ್ಸಾದಿ ಎಂಬ ಯುವತಿಯು ಟ್ವೀಟ್ ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ ಎಂದು ತಿಳಿಸಿದ್ದಾಳೆ. ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡ್ತಾರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ.ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ…

Read More

ವಿಜಯನಗರ : ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ, ಪ್ರಿಯಕರನೊಬ್ಬ ಯುವತಿಗೆ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ. ಹಲ್ಲೆಗೆ ಒಳಗಾದ ಯುವತಿಯನ್ನು ಭಾರತಿ ಶಾವಿ(26) ಎಂದು ತಿಳಿದುಬಂದಿದೆ. ಇನ್ನು ವಿಜಯಭಾಸ್ಕರ್(26) ಹಲ್ಲೆ ಮಾಡಿದ ಪ್ರೇಮಿ ಎನ್ನಲಾಗಿದೆ. ಕಳೆದ 10 ವರ್ಷಗಳಿಂದ ಯುವತಿ ಭಾರತಿ ಹೊಸಪೇಟೆಯಲ್ಲಿ ತಂದೆ-ತಾಯಿ ಜೊತೆ ವಾಸವಿದ್ದಳು. 5 ವರ್ಷಗಳ ಹಿಂದೆ ಯುವಕನ ಜೊತೆ ಫೇಸ್‌ಬುಕ್‌ನಲ್ಲಿ ಪರಿಚಯ ಆಗಿ ಇಬ್ಬರಿಗೂ ಲವ್ ಆಗಿತ್ತು. ಆ ಬಳಿಕ ಯುವತಿ ಆಂಧ್ರದ ಸ್ವಗ್ರಾಮಕ್ಕೆ ಹೋದಾಗಲೆಲ್ಲಾ ತೀರಾ ಸಲುಗೆಯಿಂದ ಇರ್ತಿದ್ರು. ಇತ್ತೀಚೆಗೆ ಯುವತಿ ಯುವಕನಿಂದ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಅಂತರ ಕಾಯ್ದುಕೊಂಡಿದ್ದಲ್ಲದೇ ಭಾರತಿ, ವಿಜಯಭಾಸ್ಕರ ಪ್ರೀತಿ ನಿರಾಕರಿಸಿದ್ದಳು. ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಹೊಸಪೇಟೆ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : IPL ಆರಂಭ ಅದಾಗಿನಿಂದಲೂ ಬೆಟ್ಟಿಂಗ್ ದಂಧೆ ಜೋರಾಗಿರುತ್ತೆ. ಈ ಒಂದು ಬೆಟ್ಟಿಂಗ್ ಗೆ ಎಷ್ಟೋ ಜನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೇ ಅದೆಷ್ಟೋ ಜನ ಪ್ರಾಣವನ್ನು ಸಹ ಕಳೆದುಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲೂ ಅಂತದ್ದೆ ಘಟನೆ ನಡೆದಿದ್ದು, ಆನ್ಲೈನ್ ಬೆಟ್ಟಿಂಗ್ ಗೆ ಸಿಕ್ಕಾಪಟ್ಟೆ ಸಾಲ ಮಾಡಿದ್ದ ಯುವಕ ಸಾಲಗಾರರ ಕಿರುಕುಳ ತಾಳದೆ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹೌದು ಆನ್‌ಲೈನ್‌ ಬೆಟ್ಟಿಂಗ್ ಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅನಿಲ್‌ ರಾಮು ಜಾಧವ್‌ (34) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ರಾಮು ಹಲವು ದಿನಗಳಿಂದ ಆನ್‌ಲೈನ್‌ ಬೆಟಿಂಗ್‌ ಚಟಕ್ಕೆ ಬಿದ್ದಿದ್ದ ಎನ್ನಲಾಗಿದೆ. ಬೆಟ್ಟಿಂಗ್ ಗಾಗಿ ರಾಮು ಸಾಕಷ್ಟು ಹಣ ಸುರಿದು ಎಲ್ಲಾ ಕಡೆಗೂ ಸಾಲವನ್ನೂ ಮಾಡಿಕೊಂಡಿದ್ದ. ಸಾಲದ ಸುಳಿಯಲ್ಲಿ ಸಿಲುಕಿದ್ದ ಅನಿಲ್‌ ಗೆ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸುವ ದಾರಿ ಕಾಣದೇ ಅನಿಲ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಕುರಿತಂತೆ ಚಿಕ್ಕೋಡಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ಬೋಸ್ ನೇ ಯುವಕರ ಮೇಲೆ ಹಲ್ಲೆ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಬಯಲಾಗಿದೆ. ಹೌದು ಬೆಂಗಳೂರಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕರ ಮೇಲೆಮೇ ಏರ್ ಫೋರ್ಸ್ ಅಧಿಕಾರಿ ಹಲ್ಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ಯುವಕರ ಮೇಲೇನೆ ಹಲ್ಲೆ ಮಾಡಿದ್ದಾರೆ ಎಂಬ ಸತ್ಯ ಸಿಸಿಟಿವಿಯಿಂದ ಬಯಲಾಗಿದೆ. ಗಲಾಟೆ ವೇಳೆ ಯೋಧನೇ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಗಲಾಟೆ ವೇಳೆ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರು ಬಿಡದೆ ಬೋಸ್ ಯುವಕರ ಮೇಲೆ ಹಲ್ಲೆ ಮಾಡಿದ್ದಾನೆ. ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿದ. ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್…

Read More

ಬೆಂಗಳೂರು : ನಿನ್ನೆ ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

Read More

ಬೆಂಗಳೂರು : ಕಳೆದ ಏಪ್ರಿಲ್ 16 ರಂದು ಬೀದರ್ ಶಿವಮೊಗ್ಗ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನು ಇದೇ ವಿಚಾರವಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಮಾತನಾಡಿ, ಈ ಹಿಂದೆ ಶೂದ್ರರ ಹೆಣ್ಣು ಮಗಳ ತಾಳಿ ತೆಗೆಸಿದ್ದರು, ಇದೀಗ ಜನಿವಾರ ತೆಗೆಸಿದ್ದಾರೆ. ನಾನು ಎರಡು ಘಟನೆ ಖಂಡಿಸುತ್ತೇನೆ. ಆದರೆ ತಾಳಿ ತೆಗೆಸಿದ್ಧಕ್ಕಿಂತಲೂ ಜನಿವಾರ ತೆಗೆಸಿದ್ದು ಬಹಳ ದೊಡ್ಡ ವಿಚಾರವಾಗಿದೆ ಎಂದು ತಿಳಿಸಿದರು. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಿವಾರ ಕತ್ತರಿಸಿದ್ದನ್ನು ನಾನು ಖಂಡಿಸುತ್ತೇನೆ, ಜನಿವಾರ ಕತ್ತರಿಸಿದರು ಅಂತ ನಾನೇನು ಅದರ ಬೆಂಬಲವಾಗಿ ಮಾತನಾಡುವುದಿಲ್ಲ ಎಂದರು. ಇದೇ ವೇಳೆ ಒಬ್ಬ ಹೆಣ್ಣಮಗಳ ತಾಳಿಯನ್ನು ತೆಗೆಸಿದಾಗ ಮಾಧ್ಯಮದಲ್ಲಿ ಯಾರೂ ಸಹ ಮಾತನಾಡಲಿಲ್ಲವಲ್ಲ. ತಾಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವ ಜನಿವಾರಕ್ಕೂ ಇದೆ. ಜನಿವಾರ ತೆಗೆಸಿದ್ದು ಖಂಡನೀಯ, ತಾಳಿ ತೆಗೆಸಿದ್ದೂ ಖಂಡನೀಯ. ಆದರೆ ಮಾಧ್ಯಮಗಳಲ್ಲಿ ಹೆಚ್ಚು ಸುದ್ದಿಯಾಗಿದ್ದು ಜನಿವಾರದ…

Read More

ಮೈಸೂರು : ಕುಡಿತದ ಚಟಕ್ಕೆ ಬಿದ್ದಿದ್ದ ಮಗ ತಾಯಿಯ ಬಳಿ ಕುಡಿಯಲು ಹಣ ಕೇಳಿದ್ದಾನೆ. ಈ ವೇಳೆ ತಾಯಿ ಹಣ ನೀಡಲು ನಿರಾಕರಿಸಿದಾಗ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕಪ್ಪೆ ಬಳಿಯ ನವಿಲೂರು ಗ್ರಾಮದ ಗೌರಮ್ಮ (60) ಕೊಲೆಯಾದ ಮಹಿಳೆ. ಇವರ ಎರಡನೇ ಮಗ ಸ್ವಾಮಿ (40) ಕೊಲೆ ಆರೋಪಿಯಾಗಿದ್ದು ಪೊಲೀಸರು ಆತನನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ನವಿಲೂರು ಗ್ರಾಮದ ತಮ್ಮಯ್ಯ ಅವರು ತಾವು ಸಾಕಿದ್ದ ಒಂದು ಜೊತೆ ಎತ್ತುಗಳನ್ನು ಮಾರಾಟ ಮಾಡಿದ್ದರು. ತನಗೂ ಇದರಲ್ಲಿ ಪಾಲು ಕೊಡಬೇಕು ಎಂದು ಮಗ ಸ್ವಾಮಿ ಆಗಾಗ ಗಲಾಟೆ ಮಾಡುತ್ತಿದ್ದರು. ಈ ನಡುವೆ ತಮ್ಮಯ್ಯ ಅವರು ಆರೋಗ್ಯ ಸರಿಯಿಲ್ಲದ ಕಾರಣ ಬೈಲುಕುಪ್ಪೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದರು. ಆಗ ಮನೆಯಲ್ಲಿ ತಾಯಿ ಒಬ್ಬರೇ ಮಲಗಿದ್ದರು. ಈ ವೇಳೆ ಕುಡಿಯಲು ಸ್ವಾಮಿ ಹಣ ಕೇಳಿದ್ದಾನೆ. ಆಗ ತಾಯಿ…

Read More

ಚಿತ್ರದುರ್ಗ : ಮುಖ್ಯಾಧಿಕಾರಿಯೊಬ್ಬ 25,000 ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ ಹೊಸದುರ್ಗದ ಮುಖ್ಯಾಧಿಕಾರಿ ತಿಮ್ಮರಾಜು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ. ಇ ಖಾತೆ ಮಾಡಿಕೊಡಲು 50 ಸಾವಿರ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ತಿಮ್ಮರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪುರಸಭೆ ಸದಸ್ಯ ಎನ್ ಶಾಂತಪ್ಪ ಬಳಿ 25,000 ಲಂಚ ಸ್ವೀಕರಿಸುವಾಗ ತಿಮ್ಮರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ವಾಸುದೇವ ರಾಮ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿತ್ತು.

Read More

ಕಲಬುರ್ಗಿ : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವರುಣಾರ್ಭಟದಿಂದ ಕೆಲವು ಅವಾಂತರಗಳು ನಡೆದಿದ್ದು, ಇನ್ನೂ ಕೆಲವು ಭಾಗಗಳಲ್ಲಿ ಬಿಸಿಲಿನಿಂದ ಜನ ಬಸವಳಿದು ಹೋಗಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಮತ್ತೆ 44.5 ಸೇಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಹೋಬಳಿಯಾಗಿರುವ ನಿಂಬರ್ಗಾ ತಾಂಡಾ ಮತ್ತು ಬೀದರ್ ಜಿಲ್ಲೆಯ ದಬಕ ಹೋಬಳಿಯಲ್ಲಿಅತಿ ಹೆಚ್ಚು 44.5°C ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಬೀದರ್ ಮತ್ತು ಕಲಬುರಗಿ ಜಿಲ್ಲೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಕೆಲವು ಸ್ಥಳಗಳು, ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳು ರಾಜ್ಯದಾದ್ಯಂತ 40°C ಮತ್ತು ಅದಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ದಾಖಲಿಸಿವೆ ಎಂದು ಹೇಳಿದೆ. KSNDMC ಹವಾಮಾನ ಮೇಲ್ವಿಚಾರಣಾ ಜಾಲದ ಪ್ರಕಾರ, ಬೀದರ್ ಮತ್ತು ಕಲಬುರಗಿ ಜಿಲ್ಲೆಯ ತಲಾ 10 ಸ್ಥಳಗಳು, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ತಲಾ 6 ಸ್ಥಳಗಳು ಮತ್ತು ವಿಜಯಪುರ ಜಿಲ್ಲೆಯ 1 ಸ್ಥಳವು ರಾಜ್ಯದಾದ್ಯಂತ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿ ಬೋಸ್ ಎನ್ನುವವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆ ಪೋಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ಅಧಿಕಾರಿ ತಮ್ಮ ಮೇಲಾದ ಹಲ್ಲೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಘಟನೆ ಕುರಿತಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಬೆಂಗಳೂರಿನಲ್ಲಿ ಭಾರತೀಯ ಸಶಸ್ತ್ರ ಪಡೆಯ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಧಿಕಾರಿಯು ತಮ್ಮ ಪತ್ನಿಯೊಂದಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಗುಂಪೊಂದು ಹಲ್ಲೆ ಮಾಡಿದೆ ಎನ್ನಲಾಗಿದೆ. ಹಲ್ಲೆಗೊಳಾಗದ ಅಧಿಕಾರಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ತಮ್ಮ ಮೇಲೆ ಆದ ಹಲ್ಲೆ ಕುರಿತು ವಿವರಿಸಿ ಅಧಿಕಾರಿ ವಿಡಿಯೋ ಮಾಡಿದ್ದಾರೆ. ನಾವು ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿರುವ ಡಿಆರ್‌ಡಿಒ ಕಾಲೋನಿಯಲ್ಲಿ ವಾಸವಾಗಿದ್ದು, ಕಾರಿನಲ್ಲಿ…

Read More