Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯ ಯಾತ್ರೆ ನಡೆಸಲಾಗಿತ್ತು. ಇದೀಗ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2 ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಹೌದು ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್ ಡಿ ಎಮ್ ಕಾಲೇಜ್ ಮೈದಾನದಲ್ಲಿ ಈ ಒಂದು ಸಮಾವೇಶ ನಡೆಯಲಿದೆ ಇಂದು ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಸದಾನಂದ…
ಮೈಸೂರು : ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡುವುದರಿಂದ ರಾಜ್ಯಕ್ಕೆ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಭಾನು ವಾರ ಸುದ್ದಿಗಾರರ ಜೊತೆ ಅವರು ಮಾತ್ರ ನಾಡಿದರು. ಜಿಎಸ್ಟಿ ವ್ಯವಸ್ಥೆಯಲ್ಲಿನ ತೆರಿಗೆ ಹಂತಗಳನ್ನು ಕಡಿಮೆ ಮಾಡುವುದ ರಿಂದ ರಾಜ್ಯಕ್ಕೆ 15 ಸಾವಿರ ಕೋಟಿ ನಷ್ಟ ವಾಗಲಿದೆ ಎಂದು ಅಂದಾಜಿಸಲಾಗಿದೆ. 8 ರಾಜ್ಯಗಳು ಸೇರಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾ ಗಿ, ರಾಜ್ಯಗಳಿಗೆ ಆಗುವ ಈ ನಷ್ಟವನ್ನು ಕೇಂದ್ರ ಸರ್ಕಾರ S ವರ್ಷಗಳವರೆಗೆ ಭರಿಸ ಬೇಕೆಂದು ಆಗ್ರಹಿಸಿದರು. 2017ರಲ್ಲಿ ಜಿಎಸ್ಟಿ ಮಾ ಡಿದಾಗ 5 ವರ್ಷ ಮಾತ್ರ ಪರಿಹಾರ ಕೊಡ ಲಾಯಿತು. ಅಂದಿಗಿಂತ ಇಂದು ಶೇ.12 ರಿಂದ 13ರಷ್ಟು ಹೆಚ್ಚಿನ ತೆರಿಗೆ ಸಂಗ್ರಹವಾ ಗುತ್ತದೆ. ಅದನ್ನು ರಾಜ್ಯಗಳಿಗೆ ಕೊಡಲಿ ಎಂದು ಆಗ್ರಹಿಸುತ್ತಿದ್ದೇವೆ. ಸಿಗರೇಟ್, ಗುಟ್ಕಾ, ಪಾನ್ ಮಸಾಲ…
ಉತ್ತರಕನ್ನಡ : ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರು ಆಹಾರದ ವಿಚಾರವಾಗಿ ಬಹಳ ಪದ್ಧತಿ ಅನುಸರಿಸುತ್ತಿದ್ದರು ಹೇಗೆ ಕುಳಿತುಕೊಂಡು ಊಟ ಮಾಡಬೇಕು ಯಾವ ರೀತಿ ತಿನ್ನಬೇಕು ಬಾಯಲ್ಲಿ ಎಷ್ಟು ಸಲ ಅನ್ನ ಅಗಿಯಬೇಕು ಎನ್ನುವುದರ ಕುರಿತು ಸಂಪೂರ್ಣವಾಗಿ ಹೇಳಿದ್ದಾರೆ. ಆದರೆ ಇಂದಿನ ವೇಗದ ಜಗತ್ತಿನಲ್ಲಿ ಜನಕ್ಕೆ ತಿನ್ನೋದು ಬಿಡಿ ನೀರು ಕುಡಿಯೋಕು ಸಹ ಸಮಯ ಇಲ್ಲ ಇದೀಗ ಉತ್ತರ ಕನ್ನಡದಲ್ಲಿ ಊಟ ಮಾಡುವಾಗ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೌದು ಅನ್ನದ ಅಗಳು ಗಂಟಲಿಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಬಿಣಗಾ ಗ್ರಾಮದಲ್ಲಿ ಅಮಿತ್ ಮಾಳಸೇರ (38) ಎನ್ನುವ ಯುವಕ ಗಂಟಲಲ್ಲಿ ಅನ್ನ ಸಿಲುಕಿ ಸಾವನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದ ನಿವಾಸಿಯಾಗಿದ್ದು ಅನ್ನ ಗಂಟಲಿನಲ್ಲಿ ಸಿಲುಕಿಕೊಂಡು ಅಮಿತ್ ತೀವ್ರ ನರಳಾಡಿದ್ದ ಮನೆಯವರು ನೀರು ಕುಡಿಸಿದ ತಕ್ಷಣ ಕುಸಿದು ಬಿದ್ದಿದ್ದ. ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನಪ್ಪಿದ್ದಾನೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಕನ್ನಡ ಚಿತ್ರರಂಗದಲ್ಲಿ ಡಾ.ರಾಜಕುಮಾರ್ ಕಾಲದಿಂದಲೂ ಅನೇಕ ಹಾಸ್ಯ ಕಲಾವಿದರು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಮತ್ತೊಬ್ಬ ಹೊಸ ಹಾಸ್ಯ ನಟ ಹಾಗೂ ಹಲವು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವ ಚಿಕ್ಕಣ್ಣ ಸೈಲೆಂಟಾಗಿ ಹಸೆಮಣೆ ಏರಲು ಸಜ್ಜಾದ್ದಾರೆ. ಹೌದು ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ. ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.
ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸ್ ದಾಖಲಾಗಿದೆ. ಈ ಹಿಂದೆ ಮಟ್ಟಣ್ಣನವರ್ ಮಾಧ್ಯಮಗಳ ಎದುರು ಮಾತನಾಡುವ ವೇಳೆ ಮದನ್ ಬುಗುಡಿಯನ್ನ ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು. ಇದು ಸುಳ್ಳು ಎಂದು ಆರೋಪಿಸಿ ಪ್ರವೀಣ್ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ 204, 319(2), 353(2) ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಪಟಾಕಿ ಸಿಡಿದು ಬಾಲಕನೋರ್ವ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಯಚೂರಲ್ಲಿ ಗಣೇಶ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದ ನರಸಿಂಹ (22) ಎಂದು ತಿಳಿದುಬಂದಿದೆ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆಗೆ ಹೊರಟಿದ್ದ ವೇಳೆ ಬೊಲೆರೋ ಪಿಕಪ್ ಮೇಲೆ ಗಣೇಶನನ್ನ ಹಿಡಿದು ಕುಳಿತಿದ್ದ ಯುವಕನಿಗೆ ವಿದ್ಯುತ್ ಸ್ಪರ್ಶಿಸಿದೆ. ಬೊಲೆರೋ ಪಿಕಪ್ನಲ್ಲಿದ್ದ ಇನ್ನುಳಿದ ಯುವಕರು ವಿದ್ಯುತ್ ಸ್ಪರ್ಶಿಸಿದ ಕೂಡಲೇ ಕೆಳಗೆ ಬಿದ್ದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ನಡುವೆಯೇ ಅದ್ದೂರಿಯಾಗಿ ಗಣೇಶನ ಮೆರವಣಿಗೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದಾಗಿ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಬಿಜೆಪಿ ಧರ್ಮಸ್ಥಳ ಚಲೋಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆ ಬಿಜೆಪಿ ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ. ಅವರು ಯಾತ್ರೆ ಹೋದರೆ ಹೋಗಲಿ ಪಾಪ. ಧರ್ಮಸ್ಥಳದ ಹೆಗ್ಗಡೆಯವರೇ ಸ್ವಾಗತ ಮಾಡಿದ್ದಾರೆ. ಸತ್ಯ ಹೊರಬೇರಬೇಕು ಅಂತ ಎಸ್ಐಟಿ ಮಾಡಿದ್ದೇವೆ ಇಲ್ಲದಿದ್ದರೆ ಧರ್ಮಸ್ಥಳದ ಮೇಲೆ ತೂಗುಗತ್ತಿ ಇರುತ್ತದೆ ಅನುಮಾನ ಹೋಗಲಾಡಿಸಲು ಎಸ್ಐಟಿ ಮಾಡಲಾಗಿದೆ ಎಂದು ತಿಳಿಸಿದರು.
ಕೊಪ್ಪಳ : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ. ಈ ವಿಚಾರವಾಗಿ ಈಗಾಗಲೇ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದಿದ್ದು, ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶಾಸಕ ಜನಾರ್ಧನ ರೆಡ್ಡಿ ಬಾನು ಅವರು ದಸರಾ ಉದ್ಘಾಟನೆಗೆ ಹೂ ಮುಡಿದುಕೊಂಡು, ಅರಿಶಿನ ಕುಂಕುಮ ಇಟ್ಕೊಂಡು ಬಂದು ಉದ್ಘಾಟಿಸಲಿ ಎಂದು ಹೇಳಿಕೆ ನೀಡಿದ್ದಾರೆ. ಮುಷ್ತಾಕ್ ಹಿಂದೂ ಸಂಪ್ರದಾಯವನ್ನು ಒಪ್ಪಿ ದಸರಾ ಉದ್ಘಾಟನೆ ಮಾಡಲಿ ತಲೆಗೆ ಹೂ ಮುಡಿದುಕೊಂಡು, ಅರಿಶಿನ ಕುಂಕುಮ ಇಟ್ಟುಕೊಂಡು ಬರಬೇಕು. ಆ ರೀತಿ ಬಂದು ದಸರಾ ಉದ್ಘಾಟಿಸಿದರೆ ನಮಗೆ ಯಾವುದೇ ರೀತಿಯ ಅಭ್ಯಂತರ ಇಲ್ಲ ಎಂದು ಕೊಪ್ಪಳದಲ್ಲಿ ಶಾಸಕ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದರು ನಿಸಾರ್ ಅಹ್ಮದ್ ಅವರಿಗೆ ನಾವು ಯಾವುದೇ ರೀತಿ ವಿರೋಧ ಮಾಡಿಲ್ಲ ಭಾನುಮಷ್ಟ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ ಭುವನೇಶ್ವರಿ ಹಾಗೂ ಕನ್ನಡ ಧ್ವಜದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಹಾಗಾಗಿ ನಾವು ಅವರಿಗೆ ಈ…
ಮೈಸೂರು : ಖ್ಯಾತ ಸಾಹಿತಿ ಭಾನು ಮುಷ್ತಾಕ್ ಅವರನ್ನು ಈ ಬಾರಿ ದಸರಾ ಉದ್ಘಾಟಕರಾಗಿ ಸರ್ಕಾರ ಆಹ್ವಾನ ನೀಡಿದೆ. ಈ ವಿಚಾರವಾಗಿ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಚಾಮುಂಡಿ ಬೆಟ್ಟ ಏನು ಹಿಂದೂಗಳ ಆಸ್ತಿಯಲ್ಲ ಎಂದು ಮತ್ತೊಂದು ವಿವಾದದ ಹೇಳಿಕೆ ನೀಡಿದ್ದು, ವಿಪಕ್ಷಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಹೈದರಾಲಿ ಟಿಪ್ಪು ಸುಲ್ತಾನ್ ಅವರು ದಸರಾ ಆಚರಣೆ ಮಾಡಿರಲಿಲ್ವಾ? ಇದು ಜಾತ್ಯತೀತ ಹಬ್ಬವಾಗಿದೆ ಎಂದು ಸ್ಪಷ್ಟನೆ ನೀಡಿದರು. ಮೈಸೂರಲ್ಲಿ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡ ಹಬ್ಬ. ಇಂತಹವರೇ ಉದ್ಘಾಟನೆ ಮಾಡಬೇಕು ಅಂತ ಏನು ಇಲ್ಲ ಇಂಥ ಧರ್ಮದವರೇ ಉದ್ಘಾಟನೆ ಮಾಡಬೇಕು ಅಂತ ಏನಿಲ್ಲ. ಹೈದರಾಲಿ ಟಿಪ್ಪು ದಸರಾ ಆಚರಣೆ ಮಾಡಿರಲಿಲ್ವಾ? ಮಿರ್ಜಾ ಇಸ್ಮಾಯಿಲ್ ದಿವಾನರಾಗಿ ಇರ್ಲಿಲ್ವಾ? ಇದು ಧರ್ಮಾತೀತವಾದ ಜಾತ್ಯಾತೀತವಾದ ಹಬ್ಬವಾಗಿದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ದಸರಾ ನಾಡಹಬ್ಬ…
ಮಂಡ್ಯ : ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ನಗರದಲ್ಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮಂಡ್ಯದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ಸಹ ನಡೆಸಲಾಯಿತು.ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಕಳೆದ ಸಾರಿ ಗಣಪತಿ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ಕೋಮು ಗಲಭೆ ಸಂಭವಿಸಿತ್ತು. ಈ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಹಿಂಸಾಚಾರ ನಡೆದಿತ್ತು. ಈ ಕಾರಣದಿಂದ ಈ ಬಾರಿ ಆತರಹ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದೆ. ಮಂಡ್ಯದ ಸಂಜಯ್ ವೃತ್ತ, ಹೊಳಲು ಸರ್ಕಲ್, ಗುತ್ತಲು, ನೂರಡಿ ರಸ್ತೆ ಸೇರಿ ವಿವಿಧ ಕಡೆ ಪಥ ಸಂಚಲನ. ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿಕೆ ನೀಡಿದ್ದು, ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ ಪೊಲೀಸ್ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಕಳೆದ ವರ್ಷ ನಾಗಮಂಗಲ ಎರಡೂ ಕೋಮು ನಡುವೆ ಗಲಭೆ ಆಗಿತ್ತು.…