Author: kannadanewsnow05

ಕೊಪ್ಪಳ : ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.‌ ಈ ಬೆನ್ನಲ್ಲೇ ಬಲ್ಡೋಟ ಕಾರ್ಖಾನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಕೆಲಸ ನಿಲ್ಲಿಸುವಂತೆ ಕೊಪ್ಪಳದ ಜಿಲ್ಲಾಧಿಕಾರಿಗೆ ಇದೀಗ ಸೂಚನೆ ನೀಡಿದ್ದಾರೆ. ಹೌದು ಬಲ್ಡೋಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋರಾಟಗಾರರ ನಿಯೋಗ ಭೇಟಿಯಾಗಿತ್ತು. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ಮಾಡಿದ್ದರು. ನಿಯೋಗದ ಮನವಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಕಾರ್ಖಾನೆ ಕೆಲಸ ನಿಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ವಿಸ್ತರಣೆಗೆ ಜಿಲ್ಲಾಡಳಿತ ಆರಂಭಿಸುವುದಕ್ಕೆ ಮುಂದಾಗಿತ್ತು.ಆದರೆ ಕೊಪ್ಪಳ ಜನತೆ ಇದೀಗ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಇದೀಗ ಕ್ಷಮಿಸಿದ್ದರಾಮಯ್ಯ ಅವರು ಈ ಒಂದು ಕಾರ್ಖಾನೆಗೆ ಬ್ರೇಕ್ ಹಾಕಿದ್ದಾರೆ. ಇದೀಗ ಕೊಪ್ಪಳ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Read More

ಬೆಂಗಳೂರು : ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಬೆಂಗಳೂರು ವಿವಿಯ ಕಟ್ಟಡ ಶಂಕು ಸ್ಥಾಪನೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮತ್ತು ಸಂಶೋಧನಾ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಕೇವಲ 2 ಕೋಟಿ ದುಡ್ಡಿಟ್ಟು ವಿಶ್ವವಿದ್ಯಾಲಯ ಮಾಡಿದರು ಹೊಸ ವಿಶ್ವವಿದ್ಯಾಲಯಗಳನ್ನು ಮಾಡಬೇಕಾದರೆ ನೂರಾರು ಎಕರೆ ಭೂಮಿ ಬೇಕಾಗುತ್ತದೆ ಎಂದರು. ಬೆಂಗಳೂರು ವಿಶ್ವವಿದ್ಯಾಲಯ ಶುರು ಮಾಡುವಾಗ 1,200 ಎಕ್ರೆ ಭೂಮಿ ಇತ್ತು.ಬಿಜೆಪಿಯವರು ಸುಮ್ಮನೆ ಏನು ಹೆಸರಿಗಷ್ಟೇ ವಿವಿಗಳನ್ನು ಮಾಡಿದರು. ಮೈಸೂರು ವಿಶ್ವವಿದ್ಯಾಲಯ ಅಂತ ಹೇಳಿದರೆ ಒಂದು ಹೆಸರಿದೆ. ನಮಗೆಲ್ಲ ಮೈಸೂರು ವಿಶ್ವವಿದ್ಯಾಲಯ ಅಂದರೆ ಹೆಮ್ಮೆ ಇದೆ. ಹೊಸ ವಿಶ್ವವಿದ್ಯಾಲಯಗಳಿಗೆ ಹೋಗಲು ಸಿಬ್ಬಂದಿ ಹಿಂದೆ ಮುಂದೆ ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿ ರಚನೆಯಾಗಿತ್ತು.ಅವರು ವರದಿ ಕೊಟ್ಟರು. ವರದಿ ಆಧಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಈ ಕುರಿತು ಚರ್ಚೆ ಆಯಿತು. ರಾಜಕೀಯ ಲಾಭಕ್ಕಾಗಿ ಒಂದಷ್ಟು…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಎರಡು ಬಾರಿ ಮದ್ಯದ ಬೆಲೆ ಏರಿಕೆಯಾಗಿದೆ. ಇದರ ನಡುವೆ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಒಂದು ಬಜೆಟ್ ನಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮದ್ಯಪ್ರಿಯರಿಗೆ ಆತಂಕ ಶುರುವಾಗಿದೆ. ಹೌದು ರಾಜ್ಯ ಸರ್ಕಾರವು ಅನುದಾನವನ್ನು ಹೊಂದಿಸುವ ಕಾರಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಡ್ರಿಂಕ್ಸ್‌ ಸೇರಿದಂತೆ ವಿವಿಧ ವಸ್ತುಗಳ ಮೇಲಿನ ಬೆಲೆಯನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬೆಲೆ ಪರಿಷ್ಕರಣೆ ಮಾಡಬೇಕು ಅಂತ ಸ್ಟ್ರಾಂಗ್‌ ಬಿಯರ್‌ ಬೆಲೆ ಹೆಚ್ಚಳವಾದಾಗಲೇ ಬಿಯರ್‌ ಮಾರಾಟಗಾರರು ಆಗ್ರಹಿಸಿದ್ದರು.ಕರ್ನಾಟಕದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬಿಯರ್‌ ಬೆಲೆ ಹಾಗೂ ಕೆಲವು ಮದ್ಯದ ಬೆಲೆ ಹೆಚ್ಚಾಗಿದೆ. ಹೀಗಾಗಿ, ಈ ಬಾರಿಯೂ ಮದ್ಯದ ಬೆಲೆ ಹೆಚ್ಚಳವಾಗುವುದು ಬಹುತೇಕ ಖಚಿತ ಅಂತಲೇ ಹೇಳಲಾಗುತ್ತಿದೆ.

Read More

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿವೈ ವಿಜಯೇಂದ್ರ ವಿರುದ್ಧ ಇತ್ತೀಚಿಗೆ ಸರಣಿ ವಾಗ್ದಾಳಿ ನಡೆಸಿದ್ದರು. ಬಳಿಕ ಹೈಕಮಾಂಡ್ ಒಂದು ಕಠಿಣ ಎಚ್ಚರಿಕೆ ನೀಡಿದ ಬಳಿಕ ಸೈಲೆಂಟಾಗಿದ್ದರು. ಇದೀಗ ಮತ್ತೆ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಲಿಂಗಾಯತ ಅಲ್ಲ, ಬಿಜೆಪಿಯ ಬ್ಲಾಕ್ ಮೇಲರ್ ಎಂದು ಮತ್ತೆ ಗುಡುಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವೀರಶೈವ ಲಿಂಗಾಯತ ಎಂದು ಬೇರೆ ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಲಿಂಗಾಯತ ಅಲ್ಲ ಬಿಜೆಪಿಯ ಬ್ಲಾಕ್ ಮೇಲರ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಬಿ ಎಸ್ ವೈ ಕರೆದ ಯಾವುದೇ ಸಭೆಗಳಿಗೆ ಹೋಗಬೇಡಿ ಎಂದು ಹೇಳುತ್ತೇವೆ. ಬಿಎಸ್ ವೈ ಸಭೆಗೆ ವೀರಶೈವ ಲಿಂಗಾಯತರು ಹೋಗಬೇಡಿ ಎನ್ನುತ್ತೇವೆ.ವೀರಶೈವ ಲಿಂಗಾಯತರು ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ಪುತ್ರ ಬೀ ವೈ ವೀರೇಂದ್ರ ಅನ್ಯಾಯ…

Read More

ಬೆಂಗಳೂರು : ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಆಪರೇಷನ್ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಐಪಿಎಸ್ ಅಧಿಕಾರಿ ಮಗಳು ಹಾಗೂ ನಟಿ ರನ್ಯಾರಾವ್ ಅವರು ದುಬೈ ನಿಂದ ಸುಮಾರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುವಾಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ ಆರ್ ಐ ಅಧಿಕಾರಿಗಳ ಕೈಗೆ ಸಿಗಿಬಿದ್ದಿದ್ದಾರೆ. ಇದೀಗ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಹೌದು 12 ಕೋಟಿ ಮೌಲ್ಯದ ಗೋಲ್ಡ್ ಸ್ಮರ್ಲಿಂಗ್ ಗೆ ಯತ್ನ ನಡೆಸಿದ್ದು,, ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಆಪರೇಷನ್ ನಡೆದಿದೆ. ಡಿ ಆರ್ ಐ ಅಧಿಕಾರಿಗಳು ಮೊದಲ ಬಾರಿಗೆ ಐಪಿಎಸ್ ಅಧಿಕಾರಿ ಮಗಳನ್ನು ಬಂಧಿಸಿದ್ದಾರೆ.14.8 ಕೆಜಿ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ದುಬೈ ನಿಂದ ಬೆಂಗಳೂರಿಗೆ ಬಂದಾಗ ನಟಿ ಲಾಕ್ ಆಗಿದ್ದಾರೆ.ನಿನ್ನೆ ರಾತ್ರಿ ನಟಿಯನ್ನು ದೆಹಲಿ ಅಧಿಕಾರಿಗಳು ಬಂಧಿಸಿದ್ದಾರೆ. 12 ಕೋಟಿ ಮೌಲ್ಯದ ಗೋಲ್ಡ್ ಸ್ಮಗ್ಲಿಂಗ್ ಗೆ ಯತ್ನಿಸಿದ್ದು ಇದೇ ಮೊದಲ ಬಾರಿ ರಾಜ್ಯದ ಇತಿಹಾಸದಲ್ಲಿ ಅತಿ…

Read More

ವಿಜಯಪುರ : ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ ಈ ರೀತಿ ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು‌ ವಾಟ್ಸಪ್‌ ಗ್ರೂಪ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾಟ್ಸಪ್​ ಗ್ರೂಪ್​ನಲ್ಲಿ ಗಾಂಧಿ ಚೌಕ್​ ಪೊಲೀಸ್ ಠಾಣೆಯ ಪೊಲೀಸ್​ ಪೇದೆ ಎ.ಎಸ್ ಬಂಡುಗೊಳ ಈ ಒಂದು ಮನಕಲಕುವ ಸಂದೇಶವನ್ನು ಕಳುಹಿಸಿದ್ದಾರೆ.ಕಾನ್ಸಸ್ಟೇಬಲ್ ಎಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು‌ ಮೃತಪಟ್ಟಿದೆ. ಮಗು ನಿಧನ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಬಂಡುಗೊಳ ಅವರು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿರುವ ಗ್ರೂಪ್​​ಗೆ ಮೆಸೇಜ್ ಹಾಕಿದ್ದಾರೆ. ಅದರಲ್ಲಿ ನನಗೆ ರಜೆ ಸಿಗಲಿಲ್ಲ. ಅದರಿಂದ ಮಗನಿಗೆ ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, AS ಬಂಡುಗೋಳ ಯಾವುದೇ…

Read More

ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ದೇವಗಿರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಉಲ್ಲಾಸ್ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಮೃತ ಉಲ್ಲಾಸ್, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾ ಆಫೀಸ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 90 ಲಕ್ಷಕ್ಕೂ ಅಧಿಕ ವಂಚನೆ ಎಸಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಹಣ ಪಡೆದು ನಕಲಿ ನೇಮಕಾತಿ ಮಾಡುತ್ತಿದ್ದ ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೇಣುಗೋಪಾಲ್ ಹಾಗೂ ಅರವಿಂದ್ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು ಯಲಹಂಕದ ಸುಪ್ರೀಂ ಲೇಔಟ್ ನಲ್ಲಿ ಕಚೇರಿ ಕೂಡ ತೆರೆದಿದ್ದರು. ಅಲ್ಲದೇ ರಾ ಆಫೀಸ್ ಎಂದು ವೇಣುಗೋಪಾಲ ಹಾಗೂ ಅರವಿಂದ್ ಕಚೇರಿಯನ್ನು ಮಾಡಿಕೊಟ್ಟಿದ್ದರು. ಐಡಿ ಕಾರ್ಡ್ ಪ್ರಿಂಟರ್, ಕಲರ್ ಪ್ರಿಂಟರ್ ಹಾಗೂ ನಕಲಿ ಎಸ್ ಆರ್ ಪತ್ತೆಯಾಗಿದ್ದು ಬಂಧಿತರ ಆರೋಪಿಗಳ ಬಳಿ 3 ನಕಲಿ ನೇಮಕಾತಿ ಪತ್ರ ಪತ್ತೆಯಾಗಿದೆ. ಕೆಲಸ ಕೊಡಿಸೋದಾಗಿ ಇದುವರೆಗೂ 40ಕ್ಕೂ ಹೆಚ್ಚು ಜನರಿಗೆ ವಂಚನೆ ಎಸಗಿರುವುದು ಬೆಳಗೆಗೆ ಬಂದಿದೆ. ಸರಕಾರಿ ಕೆಲಸ ಹುಡುಕುವವರನ್ನು ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ಆರೋಪಿಗಳು 90 ಲಕ್ಷಕ್ಕೂ ಹೆಚ್ಚು ಹಣ ಪಡೆದಿರುವುದು ಬೆಳಕಿಗೆ ಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪರಿಚಯಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಇದೀಗ ಸಿಸಿಬಿ ಪೋಲಿಸರು ಅರೆಸ್ಟ್ ಮಾಡಿದ್ದಾರೆ. MDMA ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನವಾಗಿದೆ. ಹೌದು ಬೆಂಗಳೂರಿನಲ್ಲಿ ಸಿಸಿಬಿ ಮಾದಕ ದ್ರವ್ಯ ದಳ ಜಂಟಿ ಕಾರ್ಯಚರಣೆ ನಡೆಸಿದ್ದು, ಬಂಧಿತರನ್ನು ನೈಜೀರಿಯಾದ ಎಸ್ಸೋ ಜರ್ಮನ್ ಹಾಗೂ ಜಾನ್ ಚುಕುವಾ ಎಂದು ತಿಳಿದುಬಂದಿದೆ. ಬಂಧಿತರಿಂದ ಸುಮಾರು 17 ಲಕ್ಷ ಮೌಲ್ಯದ 108 ಗ್ರಾಂ MDMA ಹಾಗೂ ಎರಡು ಮೊಬೈಲ್ ಗಳನ್ನು ಆರೋಪಿಗಳಿಂದ ಪೊಲೀಸರು ಸೀಜ್ ಮಾಡಿದ್ದಾರೆ. ಮುಂಬೈನಿಂದ ತಂದು ಪರಿಚಯಸ್ತರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಟೂರಿಸ್ಟ್ ವಿಸಾದಡಿ ಈ ಆರೋಪಿಗಳು ಭಾರತಕ್ಕೆ ಬಂದು ನೆಲೆಸಿದ್ದರು. ಈ ಹಿಂದೆಯೂ ಡ್ರಗ್ಸ್ ಕೇಸ್ ನಾಲ್ಜ್ ಬಂಧನಕ್ಕೆ ಒಳಗಾಗಿದ್ದರು. ಜೈಲಿಂದ ರಿಲೀಸ್ ಆಗಿ ಕೆಆರ್ ಪುರಂ ಎಲಿಮೆಂಟ್ಸ್ ನಲ್ಲಿ ಮತ್ತೆ ಡ್ರಗ್ಸ್ ಮಾರಾಟ ಆರಂಭಿಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಬೆಂಗಳೂರು : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ 2 ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಕೋರಿ ಸಚಿವ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಪೀಠವು ಭೂ ಕಬಳಿಕೆ ನಿಷೇಧ ಕೋರ್ಟ್ ನ 2 ಕೇಸ್ ಗಳನ್ನು ರದ್ದುಗೊಳಿಸಿ ಆದೇಶ ನೀಡಿದೆ. ಈ ಹಿನ್ನೆಲೆ ಸಚಿವ ಚೆಲುವರಾಯ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ ದಾಸನಪುರ ಹೋಬಳಿ ಮಾಕಳಿಯ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಸಂಬಂಧ ಎರಡು ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರದ್ದು ಮಾಡುವಂತೆ ಚೆಲುವರಾಯಸ್ವಾಮಿ ಅರ್ಜಿ ಸಲ್ಲಿಸಿದ್ದರು ಜಮೀನಿಗೆ ಸಂಬಂಧಿಸಿದಂತೆ 1923 ರಿಂದಲೇ ಕ್ರಯಪತ್ರವಾಗಿದ್ದು, ಶತಮಾನದ ಹಳೆಯ ದಾಖಲೆ ಇರುವ ಜಮೀನು ಎಂದು ಇದೀಗ 2 ಕೇಸ್ ರದ್ದುಗೊಳಿಸಲಾಗಿದೆ. ನ್ಯಾ ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೀ ಬಸವರಾಜ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

Read More