Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ಬೀದರ್ ನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಬಾವಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಜಲಸಮಾಧಿ ಆಗಿರುವ ಘಟನೆ ಬೀದರ್ ಜಿಲ್ಲೆಯ ಹುಣಸೂರು ತಾಲೂಕಿನ ಮುಚಳಂಬ ಗ್ರಾಮದಲ್ಲಿ ನಡೆದಿದೆ. ಅವಿನಾಶ್ ಮಚಕೂರೆ (16) ಬಾಗೇಶ್ (16) ಎನ್ನುವ ಬಾಲಕರು ಬಾವಿಯಲ್ಲಿ ಈಜಲು ತೆರಳಿದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಇಬ್ಬರು ಬಾಲಕರ ಮೃತ ದೇಹವನ್ನು ಹೊರಗಡೆ ತೆಗೆದಿದ್ದಾರೆ. ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕೌಟುಂಬಿಕ ಕಲಹ ಹಿನ್ನೆಲೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಮ್ಮದ್ ಸಾಜಿದ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಮಹಮ್ಮದ್ ಸಾಜಿದ್ ಕೆಲಸ ಮಾಡುತ್ತಿದ್ದ. ಕೌಟುಂಬಿಕ ಕಲಹದಿಂದಾಗಿ ಮೊಹಮ್ಮದ್ ಸಾಜಿದ್ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಮದುವೆಯ ಹಿಂದಿನ ದಿನ ಮದರಂಗಿ ಹಾಕಿಸಿಕೊಂಡು ಬರುವೆ ಎಂದು ಹೇಳಿ ಬ್ಯೂಟಿ ಪಾರ್ಲರ್ ಗೆ ಹೋದ ವಧು ನಾಪತ್ತೆಯಾಗಿದ್ದಾಳೆ.ಈ ಘಟನೆಯು ಮಂಗಳೂರಿನ ಬೋಳಾರ್ ನಲ್ಲಿ ನಡೆದಿದೆ. 22 ವರ್ಷದ ಪಲ್ಲವಿ ನಾಪತ್ತೆಯಾದ ಯುವತಿಯಾಗಿದ್ದು, ಮದುವೆಯ ಹಿಂದಿನ ದಿನ ಮೆಹಂದಿ ಹಾಕಿಸಿಕೊಂಡು ಬರುವೆ ಎಂದು ಮನೆಯಲ್ಲಿ ಹೇಳಿ ಬ್ಯೂಟಿ ಪಾರ್ಲರ್ ಗೆ ಹೋಗಿದ್ದಳು. ಆದರೆ ತಡರಾತ್ರಿಯಾದರೂ ಆಕೆಯು ಮನೆಗೆ ವಾಪಾಸಾಗಿಲ್ಲ. ಕಳೆದ ಏಪ್ರಿಲ್ 15 ರಂದು ಈ ಒಂದು ಉಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಏಪ್ರಿಲ್ 16 ರಂದು ಮದುವೆಯು ನಡೆಯಬೇಕಿತ್ತು. ಆದರೆ ಒಂದು ದಿನ ಮುಂಚೆಯೇ ಅಂದರೆ ಏಪ್ರಿಲ್ 15 ರಂದು ಈ ಯುವತಿಯು ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಕೂಡ ಸ್ವಿಚ್ ಆಫ್ ಎಂದು ಬಂದಿದೆ. ಮದುವೆಗೆ ಒಂದು ದಿನ ಇರುವಾಗಲೇ ಯುವತಿಯು ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮನೆಯವರು ಪಲ್ಲವಿಯ ಒಪ್ಪಿಗೆಯ ಮೇರೆಗೆ ಈ ಮದುವೆ ನಿಶ್ಚಯ ಮಾಡಿದ್ದರು.ಯುವಕನ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳಲ್ಲಿ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆಗೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಣಿಪಾಲ್ ಆಸ್ಪತ್ರೆಯಲ್ಲಿ ಪೊಲೀಸರು ರಿಕ್ಕಿ ರೈ ಹೇಳಿಕೆಯನ್ನು ಪಡೆದಿದ್ದಾರೆ. ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ಅವರು ರಿಕ್ಕಿ ರೈ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ರಿಕ್ಕಿ ರೈ ಸಂಪೂರ್ಣವಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಯಾರ ಮೇಲೆ ಅವಮಾನವಿದೆ ಅಂತಲೂ ಕೂಡ ರಿಕ್ಕಿ ರೈ ಹೇಳಿದ್ದಾರೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಿರುವ ಆರೋಪಿಗಳೆ ಅಟ್ಯಾಕ್ ಮಾಡಿಸಿದ್ದಾಗಿ ರಿಕ್ಕಿ ರೈ ಹೇಳಿದ್ದಾರೆ. ರಾಕೇಶ್ ಮಲ್ಲಿ, ಅನುರಾಧ, ನಿತೀಶ್, ವೈದ್ಯನಾಥನ್ ಹೆಸರು ಪ್ರಸ್ತಾಪಿಸಿದ್ದಾರೆ ಆಸ್ತಿ ವಿಚಾರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ರಿಕ್ಕಿ ರೈ ಆರೋಪಿಸಿದ್ದಾರೆ. ನಾನು ರಷ್ಯಾದಲ್ಲಿದ್ದೆ. ಜಮೀನು ವಿವಾದ ಸಂಬಂಧ ನ್ಯಾಯಾಲಯದಲ್ಲಿ ಕೇಸ್ ಇತ್ತು. ಹೀಗಾಗಿ ನಾನು ರಷ್ಯಾದಿಂದ ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿಗೆ ಬಂದಾಗ ಸದಾಶಿವ ನಗರ ಮತ್ತು ಬಿಡದಿಯಲ್ಲಿ ಇರುತ್ತೇನೆ. ಬಿಡದಿಯಿಂದ ಸದಾಶಿವ ನಗರಕ್ಕೆ ಹೋಗುವಾಗ ಗುಂಡಿನ ದಾಳಿ ನಡೆದಿದೆ ಗಾಯಗೊಂಡಿದ್ದ…
ದಕ್ಷಿಣಕನ್ನಡ : ನಾನೊಂದು ಸರ್ವೇ ಮಾಡಿದ್ದೇನೆ. ಆ ಸರ್ವೇ ಪ್ರಕಾರ ಮುಂದಿನ 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಬರೆದಿಟ್ಟುಕೊಳ್ಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಬಂದೇ ಬರುತ್ತದೆ ಬರೆದಿಟ್ಟುಕೊಳ್ಳಿ. ನಾನೊಂದು ಸರ್ವೇ ಮಾಡಿದ್ದೇನೆ. ಇಲ್ಲಿ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲ್ಲಲಿದೆ. ಸರ್ವೇ ಪ್ರಕಾರ ಬೆಳ್ತಂಗಡಿಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ. ಆತ್ಮಶಕ್ತಿಯ ಮತಗಳು ಇನ್ಮುಂದೆ ನಮಗೆ ಬೀಳುತ್ತದೆ. ಬಿಜೆಪಿಯವರು ಗ್ಯಾರಂಟಿಗಳನ್ನು ತೆಗೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಐದು ಬೆರಳುಗಳು ಸೇರಿ ಮುಷ್ಟಿ ಆದಂತೆ, 5 ಗ್ಯಾರಂಟಿ ಯೋಜನೆಗಳು ಸೇರಿ ಕಾಂಗ್ರೆಸ್ ಗಟ್ಟಿಯಾಗಿದೆ. ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ ವಿಚಾರದಲ್ಲಿ ಯೋಜನೆ ಹಾಕಿದ್ದೇವೆ. ಎಲ್ಲಾ ಧರ್ಮದವರನ್ನು ನಾವು ಇಲ್ಲಿ ರಕ್ಷಣೆ ಮಾಡುತ್ತೇವೆ. ಕಾರ್ಕಳದಲ್ಲಿ ಒಬ್ಬರು ಹಿಂದೂ ಧರ್ಮ ನಮ್ಮ ಆಸ್ತಿ ಅಂತ ತಿರುಗುತ್ತಾರೆ.ಆದರೆ ಕಾರ್ಕಳದಲ್ಲಿ…
ದಕ್ಷಿಣಕನ್ನಡ : ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಬರುತ್ತದೆ ಸಿದ್ಧವಾಗಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಮಾತ್ರ ಎಲ್ಲ ಧರ್ಮಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತದೆ. ಗಾಂಧೀಜಿ ತತ್ವ ಸಂವಿಧಾನವನ್ನು ಉಳಿಸಿಕೊಂಡು ಹೋಗಬೇಕಿದೆ. ಈ ವರ್ಷ ಸಂಘಟನೆ ವರ್ಷ ಎಂದು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಘೋಷಿಸಿದ್ದಾರೆ. ನಾವು 5 ಗ್ಯಾರಂಟಿ ಘೋಷಿಸಿದಾಗ ಬಿಜೆಪಿಯವರು ಸಾಧ್ಯವಿಲ್ಲ ಅಂತ ಅಂದರು. ಬಿಜೆಪಿಗೆ ವೋಟ್ ಹಾಕಿದವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದ ಹೇಳಿದ್ದಾರೆ. ಈ ಹಿಂದೆ ಕರಾವಳಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿತ್ತು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಭರವಸೆ ಇದೆ. ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಬರುತ್ತದೆ ಸಿದ್ಧವಾಗಿರಿ. ಕಾಂಗ್ರೆಸ್ ಪಕ್ಷ ಮಾತ್ರ ಈ ದೇಶಕ್ಕೆ ಒಳ್ಳೆಯದನ್ನು ಮಾಡುತ್ತದೆ. ಬೇರೆಯವರು…
ಮಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಕೆ ಹೇಳಿದ್ದೇನೆ. ಆರೋಪಿಗಳು ವಿರುದ್ಧ ಮುಲಾಜಿಲ್ಲದೆ ಕ್ರಮ ಆಗಲಿ ಎಂದು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ನ ಬಸವೇಶ್ವರನಗರದ ಗಾಯತ್ರಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಕರವೇ ಕಾರ್ಯಕರ್ತೆ ಮಂಗಳಮುಖಿ ತನುಶ್ರೀ (40) ಭೀಕರವಾಗಿ ಕೊಲೆಯಾಗಿದ್ದಾರೆ. ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
SHOCKING : ‘ಲಿವಿಂಗ್ ಟುಗೆದರ್’ ಗೆ ಕುಟುಂಬಸ್ಥರಿಂದ ವಿರೋಧ : ಕಲಬುರ್ಗಿಯಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!
ಕಲಬುರ್ಗಿ : ಲಿವಿಂಗ್ ಟೂಗೆದರ್ ಸಂಬಂಧಕ್ಕೆ ಕುಟುಂಬಸ್ಥರು ವಿರೋಧ ಮಾಡಿದ್ದಕ್ಕೆ ಯುವಕನೊಬ್ಬ ಮನನೊಂದು ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ನಾಗನಹಳ್ಳಿ ರೇಲ್ವೆ ಹಳಿ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಶಿವಕುಮಾರ್ (28) ಎಂದು ತಿಳಿದುಬಂದಿದೆ. ಶಿವಕುಮಾರ್ ಮತ್ತು ಆ ಮಹಿಳೆ ಲಿವಿಂಗ್ ಟೂಗೆದರ್ ಸಂಬಂಧದಲ್ಲಿದ್ದರು. ಆದರೆ, ಈ ಸಂಬಂಧಕ್ಕೆ ಶಿವಕುಮಾರ್ನ ಕುಟುಂಬದವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದಿಂದ ಮನನೊಂದ ಶಿವಕುಮಾರ್ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದನೆಂದು ತಿಳಿದುಬಂದಿದೆ. ಶಿವಕುಮಾರ್ ಆತ್ಮಹತ್ಯೆಗು ಮುನ್ನ ಮಹಿಳೆಗೆ ಕರೆ ಮಾಡಿದ್ದ. ಈ ಕರೆಯನ್ನು ಸ್ವೀಕರಿಸಿದ ಮಹಿಳೆ, ಶಿವಕುಮಾರ್ನನ್ನು ರಕ್ಷಿಸಲು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾಳೆ. ಆದರೆ, ರೈಲ್ವೆ ಹಳಿಯಲ್ಲಿ ರಕ್ಷಣೆಗೆ ಮುಂದಾದಾಗ ಮಹಿಳೆ ಕೂಡ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ.ತಕ್ಷಣ ಆಕೆಯನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.