Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಿನ್ನೆ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಗಳ ಬಳಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 25-30 ಜನರ ವಿರುದ್ಧ ಕೇಸ್ ದಾಖಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ಕರ್ತವ್ಯಕ್ಕೆ ಅಡ್ಡಿ ಪಡಿಸಿದ 30 ಜನರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೇ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ನಡೆದಿತ್ತು. ಇದೀಗ ನಾಟಿ ಔಷಧಿ ಸೇವಿಸಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಮನೋಹರ್ (30) ಎಂದು ತಿಳಿದುಬಂದಿದೆ. ನೀನೆಯು ಸಹ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿದ್ದರು. ಮೃತರನ್ನು ಸೇಡಂ ತಾಲ್ಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು(45) ಹಾಗೂ ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್(30) ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಇದೇ ಔಷಧಿ ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪನರಸಿಂಹಲು ಅವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೇ ಕುಡಿತದ ಚಟ ಬಿಡಿಸುತ್ತೇನೆ ಎಂಬುದಾಗಿ ಸಾಯಪ್ಪ ಮುತ್ಯಾ ಮದ್ಯ ವ್ಯಸನಿಗಳ ಮೂಗಿನಲ್ಲಿ ಔಷಧಿ ಹಾಕಿದ್ದರು. ಸಾಯಪ್ಪ ಮುತ್ಯಾ ನೀಡಿದಂತ ಔಷಧಿಯಿಂದ ಲಕ್ಷ್ಮೀ ಹಾಗೂ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇವತ್ತು ತಡರಾತ್ರಿ ಅಥವಾ ನಾಳೆ ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ…
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಅಪರಿಚಿತ ಶವದ ತುಂಡುಗಳು ಆತಂಕ ಸೃಷ್ಟಿಸಿವೆ. ರಸ್ತೆ ಯುದ್ಧಕ್ಕೂ ಕವರ್ ಗಳಲ್ಲಿ ಶವದ ತುಂಡುಗಳು ಪತ್ತೆಯಾಗಿವೆ. ಕೊಳ್ಳಾಲದ ಮುತ್ಕಾಲಮ್ಮ ದೇವಾಲಯದ ಬಳಿಯಲ್ಲಿ ರಸ್ತೆಯಲ್ಲಿ ಶವದ ತುಂಡುಗಳು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಲಾರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು 3 ಕಿ.ಮೀ ಅಂತರದಲ್ಲಿ ಐದು ಕಡೆ ಶವದ ತುಂಡುಗಳು ಪತ್ತೆಯಾಗಿವೆ. ಇದೀಗ ಶವದ ತುಂಡುಗಳನ್ನು ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಂಗಳೂರು, (ಆಗಸ್ಟ್ 7) : ಧರ್ಮಸ್ಥಳದಲ್ಲಿ ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್ಐಟಿ ಮಾಡಿದ್ದೇವೆ ಎಂದು ತಿಳಿಸಿದರು. ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ…
ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ವಾಚ್ ವಿಚಾರವಾಗಿ ಗಲಾಟೆ ನಡೆದು 5ನೇ ತರಗತಿ ಬಾಲಕನ ಮೇಲೆ ಹಲ್ಲೆ ನಡೆದಿದೆ. ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ವಿಜಯಪುರ ನಗರದ ಹೊರಭಾಗದ ಯೋಗಾಪುರದಲ್ಲಿ ನಡೆದಿದೆ. ಹೌದು ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ. ಪೋಷಕರು ಮಗ ಅನ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ…
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಗ್ಗನ ವಿರುದ್ಧ ಕ್ಲೋಸ್ ಆಗಿದ್ದ ರೌಡಿಶೀಟರ್ ಪೊಲೀಸರು ಮತ್ತೆ ರೀ ಓಪನ್ ಮಾಡಿದ್ದಾರೆ. ಹೌದು ಬೆಂಗಳೂರಿನ ಪೂರ್ವ ವಿಭಾಗ ಪೊಲೀಸರು ಆರೋಪಿ ಜಗ್ಗನ ವಿರುದ್ಧ ರೌಡಿಶೀಟರ್ ಓಪನ್ ಮಾಡಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಜಗ್ಗನ ವಿರುದ್ಧ ರೌಡಿ ಪಟ್ಟಿ ಭಾರತಿ ನಗರ ಠಾಣೆಯಲ್ಲಿ ಬಿ ರೌಡಿ ಪಟ್ಟಿ ತೆರೆಯಲಿದ್ದಾರೆ ಈ ಒಂದು ಕೊಲೆ ಪ್ರಕರಣದಲ್ಲಿ ಬಂಧನವಾದ ಎಲ್ಲಾ ಆರೋಪಿಗಳ ವಿರುದ್ಧ ಕೂಡ ರೌಡಿಶೀಟರ್ ಓಪನ್ ಆಗಲಿದೆ ಆರೋಪಿಗಳ ವಿರುದ್ಧ ಭಾರತೀಯ ನಗರ ಪೊಲೀಸ್ರಿಂದ ರೌಡಿ ಶೀಟ್ ಓಪನ್ ಆಗಲಿದೆ ಮುಂದಿನ ದಿನದಲ್ಲಿ ಪೊಲೀಸರು ಓಪನ್ ಮಾಡಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದಾರೆ. ಆರೋಪಿ ಜಗ್ಗ ಎಲ್ಲಿ ಇದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ…
ಬೆಂಗಳೂರು : ರಾಜ್ಯದ ಹಲವಡೆ ರಸಗೊಬ್ಬರ ಅಭಾವ ವಿಚಾರವಾಗಿ ಕೇಂದ್ರ ಗೊಬ್ಬರ ಪೂರೈಕೆ ಮಾಡುವವರೆಗೂ ಈ ಸಮಸ್ಯೆ ಇರುತ್ತದೆ. ಒಂದುವರೆ ಲಕ್ಷ ಬ್ಯಾಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಆಗಬೇಕು ಏನು ಮಾಡಬೇಕು ಅಂತ ನನಗೂ ಗೊಂದಲ ಆಗಿದೆ ನನ್ನ ರಾಜೀನಾಮೆ ಯಾಕೆ ಕೇಳ್ತಾರೆ.? ಎಂದು ಎಸ್ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ರಸಗೊಬ್ಬರ ನೀಡದಿರುವ ಜೆಪಿ ನಡ್ದ ಅವರ ರಾಜೀನಾಮೆ ಕೇಳಲಿ. ವಿಧಾನಸಭೆ ವಿಪಕ್ಷ ನಾಯಕ ಅಶೋಕಗೆ ಆ ತಾಕತ್ ಇದೆಯಾ? ಒಂದುವರೆ ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಬರಬೇಕು ಇದಕ್ಕೆ ಯಾರು ಹೊಣೆ? ಜೆಪಿ ನಡ್ಡಾಗೆ ರಾಜ್ಯದ ಸಮಸ್ಯೆ ಬಗ್ಗೆ ಹರಿಸಲು ಸಮಯ ಕೊಟ್ಟಿಲ್ಲ. ಖಾಸಗಿ ಕಾರ್ಯಕ್ರಮವಾದರೂ 2 ನಿಮಿಷ ಟೈಮ್ ಕೊಡಬಹುದಾಗಿತ್ತು ಅಲ್ವಾ? ಎಂದು ಪ್ರಶ್ನಿಸಿದರು ದೆಹಲಿಯಲ್ಲಿ ಅಧಿಕೃತ ಭೇಟಿಗೂ ಜೆಪಿ ನಡ್ದ ಅವಕಾಶ ಕೊಡುತ್ತಿಲ್ಲ. ನಾವು ಮೋದಿ ಅವರ ಬಳಿ ರಸಗೊಬ್ಬರ ಕೇಳುವುದು ಸೂಕ್ತವಲ್ಲ. ಬಿಜೆಪಿ ಅವರೇ ಪ್ರತಿ ಗೊಬ್ಬರ…
ಬೆಂಗಳೂರು : ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ ಕಾನೂನು ಎಲ್ಲರಿಗೂ ಒಂದೇ ಎಂದು ನಿನ್ನೆಯ ಧರ್ಮಸ್ಥಳ ಗಲಾಟೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು : ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿರುವ ಮಾಹಿತಿ ಬಂದಿದೆ. ಏಕೆ ಆಗಿದೆ? ಕಾರಣ ಏನು? ಉದ್ದೇಶ ಏನು? ಎಂಬ ವರದಿ ನೀಡಲು ಸೂಚನೆ ನೀಡಿದ್ದೇನೆ. ಈ ಒಂದು ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾಕೆ ಗಲಾಟೆ ಆಗುತ್ತಿದೆ ಅನ್ನುವುದು ನನಗೆ ಗೊತ್ತಿಲ್ಲ. ಜನರ ಆಗ್ರಹ ಹಿನ್ನೆಲೆಯಲ್ಲಿ ತನಿಖೆಗೆ ಎಸ್ ಐ ಟಿ ರಚನೆ ಮಾಡಿದ್ದೇವೆ. ವ್ಯಕ್ತಿಯೊಬ್ಬ ಅನೇಕ ಶವ ಹೂತಿದ್ದೇನೆ ಎಂಬ ಮಾಹಿತಿ ನೀಡಿದ್ದಾನೆ. ಸುಮಾರು 13 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆದಿದೆ 6ನೇ ಪಾಯಿಂಟ್ ನಲ್ಲಿ ಪುರುಷನ ಅಸ್ತಿ ಪಂಜರ ಸಿಕ್ಕಿದೆ ಎಂದಿದ್ದಾರೆ. ಬೇರೆ ಗುಡ್ಡದಲ್ಲಿ ಮೂಳೆಗಳು ಸಿಕ್ಕಿವೆ. ಈ ಕುರಿತು ಎಫ್ ಎಸ್ಎಲ್ಗೆ ಮೂಳೆಗಳನ್ನು ಕಳುಹಿಸಿದ್ದಾರೆ. ನಿನ್ನೆ ಗಲಾಟೆ ಸಂಬಂಧ ಎರಡು ಗುಂಪಿನವರು ದೂರ ಕೊಟ್ಟಿದ್ದಾರೆ. ತನಿಖೆ ಮಾಡಿ…