Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಇತ್ತೀಚಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಡ್ರಗ್ಸ್ ಸಿಗರೇಟ್ ಮಧ್ಯದ ನಶೆಯಲ್ಲಿ ಸಾಂಗ್ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಅದಾದ ಬಳಿಕ ಇದೀಗ ಮೈಸೂರಿನಲ್ಲಿ ಕೈದಿಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದಲೇ ಸಪ್ಲೈ ಆಗುತ್ತಿರುವುದು ಬೆಳಕಿಗೆ ಬಂದಿದೆ. ಹೌದು ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗಾಂಜಾ ಘಾಟು ಜೋರಾಗಿದ್ದು, ಕೈದಿಗಳಿಗೆ ಪೇಸ್ಟ್ ರೂಪದಲ್ಲಿ ಗಾಂಜಾ ಸಪ್ಲೈ ಮಾಡಲಾಗುತ್ತಿದೆ. ಆಕಾಶ್ ಎಂಬ ಕೈದಿಗೆ ಪೇಸ್ಟ್ ನಲ್ಲಿ ಗಾಂಜಾ ಸಪ್ಲೈ ಆಗಿದೆ. KSISF ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಗಾಂಜಾ ಪೂರೈಕೆ ಆಗಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿಗಳನ್ನು ತಪಾಸಣೆ ಮಾಡುವಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ ರೂಪ ಎನ್ನುವ ಸಿಬ್ಬಂದಿ ಪ್ಯಾಂಟ್ ಬೆಲ್ಟ್ ನಲ್ಲಿ ಗಾಂಜಾ ಅಡಗಿಸಿಕೊಂಡು ಬಂದಿದ್ದಾರೆ ಬೆಲ್ಟ್ ಪರಿಶೀಲನೆ ಮಾಡಿದಾಗ ಗಾಂಜಾ 6 ಪ್ಯಾಕೆಟ್ ನಲ್ಲಿ ಪತ್ತೆಯಾಗಿದೆ.
ಕಲಬುರ್ಗಿ : ಆಳಂದ್ ಕ್ಷೇತ್ರದಲ್ಲಿ ಮತಗಳ್ಳತನದ ಕುರಿತು ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸರ್ಕಾರ ಇರೋದ್ರಿಂದ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ನಮ್ಮ ತಂದೆಯ ಹೆಸರು ನಮ್ಮ ಹೆಸರು ನಲ್ಲಿ ಹಾಕಿದ್ದಾರೆ ಯಾವಾಗ ರಾಹುಲ್ ಗಾಂಧಿ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ಅವಾಗಿನಿಂದಲೂ ಕೂಡ ಈ ಮತಗಳ್ಳತನದ ವಿಚಾರವಾಗಿ ನಮ್ಮ ಮೇಲೆ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಹರ್ಷಾನಂದ ಗುತ್ತೇದಾರ್ ಆರೋಪಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಒಂದು ಸುಳ್ಳು ಪ್ರಕರಣ ಆಗಿದ್ದು ನಮ್ಮ ಮೇಲೆ ಸೃಷ್ಟಿ ಮಾಡಿ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ತಮ್ಮ ಸೋಲನ್ನು ವೋಟ್ ಚೋರಿ, ಬಿಜೆಪಿ ಅವರು ಮಾಡುತ್ತಿದ್ದಾರೆ ಅಂತ ಷಡ್ಯಂತ್ರ ಮಾಡಿದ್ದಾರೆ. ಆಳಂದದಲ್ಲಿ ಗೆದ್ದಿರುವುದು ಬಿ ಆರ್ ಪಾಟೀಲ್ 2023ರಲ್ಲಿ ಕೇಸ್ ದಾಖಲಾಗಿದೆ. ಕೇಸ್ ನಲ್ಲಿ ಇಲ್ಲಿಯವರೆಗೂ ಯಾವುದೇ ಪ್ರಗತಿ ಕಂಡಿಲ್ಲ. ಏಕಾಏಕಿ ಬಿಹಾರ್ ಎಲೆಕ್ಷನ್ ಬರುತ್ತೋ ಯಾವಾಗ ರಾಹುಲ್ ಗಾಂಧಿ ಬಿಜೆಪಿ ಓಟ್ ಚೋರಿ ಮಾಡ್ತಿದೆ ಅಂತ ದೇಶದಲ್ಲಿ…
BREAKING : ಚಿತ್ರದುರ್ಗದಲ್ಲಿ 10 ವರ್ಷದ ಬಾಲಕಿಯನ್ನು ಬೆದರಿಸಿ, 1 ವರ್ಷದಿಂದ ನಿರಂತರ ಅತ್ಯಾಚಾರ : ಇಬ್ಬರು ಅರೆಸ್ಟ್!
ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 10 ವರ್ಷದ ಬಾಲಕಿಯನ್ನು ಬೆದರಿಸಿ 1 ವರ್ಷದಿಂದ ನಿರಂತರವಾಗಿ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸೆಗಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಕಳೆದ ಒಂದು ವರ್ಷದಿಂದ 24 ವರ್ಷದ ಹಾಗೂ 40 ವರ್ಷದ ಇಬ್ಬರು ವ್ಯಕ್ತಿಗಳು ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಎಸಗಿದ್ದ ಬಳಿಕ ಈ ವಿಷಯ ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಕೊಲೆ ಮಾಡುತ್ತಿವೆ ಎಂದು ಬೆದರಿಸಿದ್ದಾರೆ. ಬಳಿಕ ಈ ವಿಚಾರ ಬಾಲಕಿ ಶಾಲೆಯಲ್ಲಿ ತಮ್ಮ ಶಿಕ್ಷಕರಿಗೆ ತಿಳಿಸಿದ್ದು ಶಿಕ್ಷಕಿ ಪೋಷಕರಿಗೆ ತಿಳಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಪಲ್ಟಿಯಾಗಿ ಆರು ಮಂದಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸುಮಾರು 25ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನರಿಪುರ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿ ಮೇಕೆಗಳು ಹಾಗೂ ಕುರಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದು ಕ್ಯಾಂಟರ್ ಪಲ್ಟಿಯಾಗಿದೆ. ಗಾಯಗೊಂಡ ಆರು ಜನರನ್ನು ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಡಿಕ್ಕಿಯಾಗಿ ಕೆಎಸ್ಆರ್ಟಿಸಿ ಚೆಕಿಂಗ್ ಇನ್ಸ್ಪೆಕ್ಟರ್ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಚೆಕಿಂಗ್ ಇನ್ಸ್ಪೆಕ್ಟರ್ ಶಕುನಿಗೌಡ (57) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆದ್ದಾರಿಯಲ್ಲಿ ಬಸ್ ತಡೆದು ಶಕುನಿ ಗೌಡ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಶಕುನಿಗೌಡ ಸಾವನ್ನಪ್ಪಿದ್ದಾರೆ.ಅಪಘಾತದ ಕುರಿತು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮೈಸೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಬರಬರವಾಗಿ ಕೊಲೆ ಮಾಡಿದ್ದಾರೆ ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ಈ ಒಂದು ಕೊಲೆ ನಡೆದಿದೆ. ಟಿ ನರಸೀಪುರ ಹಳೆ ತಿರುಮಕೂಡಲಿನ ವಿನೋದ್ (32) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿ ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದ್ದು ಇದೀಗ ಜನರಲ್ಲಿ ಆತಂಕ ಮನೆ ಮಾಡಿದೆ. ಮೈಸೂರು, ಚಿಕ್ಕಮಗಳೂರು ಹಾಗು ಚಾಮರಾಜನಗರದಲ್ಲಿ ಹುಲಿ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ ಆಗಿದೆ. ಹೌದು ಬೆಂಗಳೂರಿನ ಕಡಬಗೆರೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಆಗಿದೆ. ಲಾರಿ ರಾಮಣ್ಣ ಎಂಬವರ ಮನೆಯ ಬಳಿ ಚಿರತೆ ಓಡಾಡಿದೆ.ಡಿಸೆಂಬರ್ 11ರಂದು ಚಿರತೆ ನಾಯಿಮರಿ ಎಳೆದೋಯ್ದಿದೆ. ಚಿರತೆ ಕಾಣಿಸಿಕೊಂಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಾಗಾಗಿ ಗ್ರಾಮಸ್ಥರಿಗೆ ಹಾಗೂ ಎಲ್ಲರಿಗೂ ಎಚ್ಚರಿಕೆಯಿಂದ ಇರಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ
ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಒಂದು ನಡೆದಿದ್ದು ವಿದ್ಯುತ್ ಶಾಕ್ನಿಂದ ಯುವಕನೊಬ್ಬ ಸಾವನಪ್ಪಿದ್ದಾನೆ ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನಪ್ಪಿದ್ದಾನೆ.ಮೃತನನ್ನು ಅರುಣ್ ಕುಮಾರ್ (32) ಎಂದು ತಿಳಿದುಬಂದಿದೆ. ಬೆಂಗಳೂರಿನ ಗಿರಿನಗರದ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ಘಟನೆ ನಡೆದಿದೆ ಅಪಾರ್ಟ್ಮೆಂಟ್ ನಲ್ಲಿ ಹೈಟೆನ್ಶನ್ ವೈರ್ ಮೇಲೆ ಬಿಳಿ ಕೂತಿರುತ್ತೆ ಆ ಗಿಳಿಯನ್ನ ರಕ್ಷಣೆ ಮಾಡಲು ಅರುಣ್ ಪ್ರಯತ್ನ ಮಾಡುತ್ತಾರೆ. ಸ್ಟೀಲ್ ಪೈಪ್ ಗೆ ಕಡ್ಡಿ ಕಟ್ಟಿ ಅದನ್ನು ಓಡಿಸಲು ಮುಂದಾಗುತ್ತಾರೆ. ಆಗ ವಿದ್ಯುತ್ ತಂತಿ ಪೈಪ್ ಗೆ ವಿದ್ಯುತ್ ತಂತಿ ತಗುಲಿ ಅರುಣ್ ಕುಮಾರ್ ಸ್ಥಳದಲ್ಲೇ ಸಾವನಪುತ್ತಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಕೂಡ ಚಿಕಿತ್ಸೆ ಫಲಕರಿಯಾಗಿದೆ ಅರುಣ್ ಕುಮಾರ್ ಸಾವನ್ನಪ್ಪಿದ್ದಾರೆ.
ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕೋಲಾರ ಹೊರವಲಯದ ಟಮಕ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯದಳ ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ತೆರಳಿ ಶೋಧ ನಡೆಸುತ್ತಿದ್ದಾರೆ. ಇ-ಮೇಲ್ ಸಂದೇಶ ಬಂದ ತಕ್ಷಣ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಕಳೆದ ಎರಡು ದಿನಗಳ ಹಿಂದೆ ಗದಗದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಥಳಿಸಿದ್ದ ಘಟನೆ ನಡೆದಿತ್ತು. ಇದೀಗ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ಪ್ರೌಢ ಶಾಲೆಯ ಪ್ರಾಂಶುಪಾಲ ಕಲ್ಲಪ್ಪ ಬೆಳಗಾವ್ಕರಿಗೆ ಪೋಷಕರು ಥಳಿಸಿದ್ದಾರೆ ಬೆಳಗುಂದಿ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಇರುವ ಹೈಸ್ಕೂಲ್ನಲ್ಲಿ ಇಂದು ಈ ಘಟನೆ ನಡೆದಿದೆ. ಘಟನೆ ತಿಳಿದು ಶಾಲೆಗೆ ನುಗ್ಗಿ ಸ್ಥಳೀಯರು ಮತ್ತು ಪೋಷಕರು ಪ್ರಾಂಶುಪಾಲನಿಗೆ ಥಳಿಸಿದ್ದಾರೆ. ಪ್ರಾಂಶುಪಾಲನ ವಿರುದ್ಧ ವಿದ್ಯಾರ್ಥಿನಿಯರು ಕೂಡ ಆಕ್ರೋಶ ಹೊರಹಾಕಿದ್ದಾರೆ. ಪ್ರಾಂಶುಪಾಲ ಕಲ್ಲಪ್ಪನನ್ನು ವಶಕ್ಕೆ ಪಡೆದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಘಟನೆ ಕುರಿತು ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ














