Subscribe to Updates
Get the latest creative news from FooBar about art, design and business.
Author: kannadanewsnow05
ಲಕ್ನೋ : ಉತ್ತರ ಪ್ರದೇಶದ ಲಕ್ನೋ ನಲ್ಲಿ ಘೋರವಾದ ದುರಂತ ನಡೆದಿದ್ದು ಬಾಲಕನೊಬ್ಬ ನದಿಯ ದಂಡೆಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿರುವಾಗಲೇ ಏಕಾಏಕಿ ಮೊಸಳೆ ದಾಳಿ ಮಾಡಿ ಬಾಲಕನನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಹೌದು ಈ ಒಂದು ಘಟನೆಯಿಂದ ಸ್ಥಳಿಯರು ಬೆಚ್ಚಿ ಬಿದ್ದಿದ್ದಾರೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಾಜಾ ಬಾಬು ಅಲಿಯಾಸ್ ನ್ಯಾನ್ ಯಾದವ್ ನಾಪತ್ತೆಯಾಗಿರುವ ಬಾಲಕ ಎನ್ನಲಾಗಿದೆ.ರಾಜಾ ಬಾಬು ತನ್ನ ಎಮ್ಮೆಗಳನ್ನು ಸ್ನಾನ ಮಾಡಿಸಲು ನದಿಗೆ ಕರೆದುಕೊಂಡು ಹೋಗಿದ್ದ.ಈ ವೇಳೆ ನದಿ ತೀರದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಬಾಲಕನನ್ನು ಘಾಗ್ರಾ ನದಿಗೆ ಎಳೆದುಕೊಂಡು ಹೋಗಿದೆ. ಮೊಬೈಲ್ನಲ್ಲಿ ಈ ಆಘಾತಕಾರಿ ಘಟನೆಯ ವಿಡಿಯೋ ಸೆರೆಯಾಗಿದ್ದು, ಮೊಸಳೆ ಹಾಗೂ ಬಾಲಕನ ತಲೆ ವಿಡಿಯೋದಲ್ಲಿ ಕಾಣಿಸುತ್ತದೆ.ಮೊಸಳೆ ನದಿ ಆಳಕ್ಕೆ ಹೋದ ಬಳಿಕ ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿ ಬಾಲಕನ ಪತ್ತೆ ಕಾರ್ಯ ಶುರು ಮಾಡಿದ್ದಾರೆ. ಆದರೆ ಗಂಟೆಗಟ್ಟಲೇ ಹುಡುಕಿದರೂ ಬಾಲಕ ಪತ್ತೆಯಾಗಿಲ್ಲವೆಂದು ವರದಿ ತಿಳಿಸಿದೆ. https://twitter.com/sirajnoorani/status/1936882908905775596?t=5MQTLhh0wcEODQLqPcSKew&s=19
ಆಂಧ್ರಪ್ರದೇಶ : ಇತ್ತೀಚಿಗೆ ನವ ವಿವಾಹಿತ ಗಂಡು ಮಕ್ಕಳ ಕೊಲೆ ಪ್ರಕರಣಗಳು ಇಡೀ ದೇಶವನ್ನೇ ಬಿಚ್ಚಿಬಿಳಿಸುತ್ತಿವೆ. ಮದುವೆಯಾದ ಬಳಿಕ ಅಕ್ರಮ ಸಂಬಂಧ ಹೊಂದಿದ ಪತ್ನಿಯರು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮೇಘಾಲಯಕ್ಕೆ ಹನಿಮೂನ್ ಗೆ ಎಂದು ತೆರಳಿದ್ದ ರಾಜಾ ರಘುವಂಶಿಯ ಕೊಲೆ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಈ ಒಂದು ಕೊಲೆ ಮಾದರಿಯಲ್ಲಿಯೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆಂಧ್ರಪ್ರದೇಶದ ಗದ್ವಾಲ್ ಪಟ್ಟಣದಲ್ಲಿ ನವವಿವಾಹಿತರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಕೊಲೆಯನ್ನು ನೆನಪಿಸುತ್ತದೆ. ತೆಲಂಗಾಣದ ಗದ್ವಾಲ್ನ ರಾಜವೀಧಿನಗರದ 32 ವರ್ಷದ ತೇಜೇಶ್ವರ್ ನಂದ್ಯಾಲ್ ಜಿಲ್ಲೆಯ ಪನ್ಯಂ ಪೊಲೀಸ್ ಠಾಣೆ ವ್ಯಾಪ್ತಿಯ ಸುಗಲಿಮೆಟ್ಟದ ಎಚ್ಎನ್ಎಸ್ಎಸ್ ಕಾಲುವೆಯ ಬಳಿ ಶವವಾಗಿ ಪತ್ತೆಯಾಗಿದ್ದು, ಅವರ ಪತ್ನಿ ಮೇಲೆ ಅನುಮಾನ ಮೂಡಿದೆ. ಹೌದು ತೆಜೇಶ್ವರ್ ಕರ್ನೂಲಿನ ಐಶ್ವರ್ಯಾ ಎಂಬುವವರನ್ನು ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.…
ಬೆಳಗಾವಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು, ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕರಾದಂತಹ ರಾಜು ಕಾಗೆ ರಾಜ್ಯದ ಇಂತಹ ಆಡಳಿತ ವ್ಯವಸ್ತೆಯಿಂದ ನನಗೆ ತುಂಬಾ ನೋವಾಗಿದೆ. ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಹೌದು ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಧಾನ ಹೊರ ಹಾಕಿದ ಅವರು, ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಇದೀಗ ಅಸಮಾಧಾನ ಹೊರ ಬೀಳುತ್ತಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ರಾಜು ಕಾಗೆ ಅಸಮಾಧಾನ…
ಬೆಂಗಳೂರು : ಪ್ರೀತಿಸಿದ ಯುವತಿಯಿಂದ ಕಿರುಕುಳ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ನಡೆದಿದೆ. ಮಾತ್ರೆ ಸೇವಿಸಿ ಕುಂಬಳಗೋಡು ಮೂಲದ ಮಂಜುನಾಥ್ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಜೂನ್ 13 ರಂದು ಮಂಜುನಾಥ್ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆಯ ಬಳಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಯುವಕನ ಆತ್ಮಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ನಂಬಿಸಿ ನನಗೆ ಮೋಸ ಮಾಡಿದ್ದಾಳೆ ಹಾಗಾಗಿ ಬೇರೊಬ್ಬನ ಜೊತೆಗೆ ಸಂಬಂಧ ಇದೆ ಎಂದು ಯುವಕ ಆರೋಪಿಸಿದ್ದಾನೆ. ಮಾತ್ರೆ ಸೇವಿಸಿದ ಮಂಜುನಾಥನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೆ ಯುವಕ ಮಂಜುನಾಥ್ ಸಾವನಪ್ಪಿದ್ದಾನೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆಯ ಕುಟುಂಬಸ್ಥರು ಇದೀಗ…
ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ನದಿ ಹಳ್ಳಕೊಳ್ಳಲು ತುಂಬಿ ಹರಿಯುತ್ತಿವೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಒಟ್ಟು 9 ಜನರು ಜಲ ಸಮಾಧಿ ಆಗಿದ್ದದ್ದಾರೆ. ಇದರ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಫಾಲ್ಸ್ ನೋಡಲು ಬಂದಿದ್ದ ಯುವಕ ಕಾಲು ಜಾರಿ ಹಳ್ಳಕ್ಕೆ ಬಿದ್ದು ನಿರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತಕ್ಕೆ ಸ್ನೇಹಿತ ವಾಸುದೇವ್ ಜೊತೆ ಪವನ್ ನಿನ್ನೆ ಸಂಜೆ ತೆರಳಿದ್ದಾನೆ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ಇದೀಗ ಮಾಜಿ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಿದ್ದಾರೆ.ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಕೆ ಸುರೇಶ್ ಅವರು, ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಹಲವರಿಗೆ ವಂಚನೆ ಮಾಡಿದ್ದಾರೆ, ಧ್ವನಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ವಿಚಾರಣೆಗು ಮುನ್ನ ವಕೀಲರ ಮೂಲಕ ಮಾಹಿತಿ ಪಡೆದು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ. ಪ್ರಕರಣಕ್ಕೆ ಸಂಬಂಧವಿಲ್ಲದೆ ನನಗೆ ನೋಟಿಸ್ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾರೋ ಒಬ್ಬ ಮಹಿಳೆ ಮೌಖಿಕವಾಗಿ ನನ್ನ ಸಹೋದರಿ ಅಂತ ಹೇಳಿ ವಂಚನೆ ಮಾಡಿದ್ದಾರೆ. ಈ ವಿಚಾರವಾಗಿ ನಾನೇ ಪೊಲೀಸ್ ಕಮಿಷನರ್ ಗೆ ದೂರು ಸಹ ನೀಡಿದ್ದೆ. ಅವರು ಮಾಡಿದ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ವಿಧವಾದ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಅಂತ ಎರಡು ಮೂರು ಬಾರಿ ಭೇಟಿಯಾಗಿದ್ದಾರೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ…
ಕಲಬುರ್ಗಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದು ಮನೆಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಇದೀಗ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟೀಕಾರ್ ಹೊಸ ಬಾಂಬ್ ಸಿಡಿಸಿದ್ದು, ಈ ಒಂದು ಪ್ರಕರಣದಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಹೊಸ ಬಾಂಬ್ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ ಪುರ ತಾಲೂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಯೋಜನೆಯ ಮನೆ ಹಂಚಿಕೆಯಲ್ಲಿ 10 ಕೋಟಿ ಅವ್ಯವಹಾರವಾಗಿದ್ದು, ಇದಕ್ಕೆಲ್ಲ ಅಫಜಲಪುರ ತಾಲ್ಲೂಕಿನ ಬಳುಂಡಗಿ ಗ್ರಾಮ ಸರ್ಕಾರಿ ನೌಕರನೊಬ್ಬ ಕಿಂಗ್ಪಿನ್ ಆಗಿದ್ದಾನೆ. ಈತ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸಚಿವ ಜಮೀರ್ ಅಹ್ಮದ್ರ ಆಪ್ತ ಎಂದು ಹೇಳಿಕೊಂಡು, ಹಣದ ವ್ಯವಹಾರ ಮಾಡುತ್ತಿದ್ದಾರೆ.ಆತನನ್ನು ಬಂಧಿಸಿ, ತನಿಖೆ ನಡೆಸಿದರೆ ಸತ್ಯ ಹೊರಬೀಳಲಿದೆ ಎಂದು ಆರೋಪಿಸಿದರು. ಲೋಕೋಪಯೋಗಿ ಮತ್ತು ಕೆಆರ್ ಐಡಿಎಲ್ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿದೆ. ಗುತ್ತಿಗೆದಾರರು ಶಾಸಕರ ಸುಪುತ್ರ ಅರುಣಕುಮಾರ ಪಾಟೀಲ್ ಅವರಿಗೆ ಕಮಿಷನ್ ಕೊಡದಿದ್ದರೆ ಕಾಮಗಾರಿ…
ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ಕೆಲವೇ ಕ್ಷಣಗಳಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾಜರಾಗಲಿದ್ದಾರೆ.ವಿಚಾರಣೆಗೆ ಹಾಜರಾಗುವುದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಡಿಕೆ ಸುರೇಶ್ ಅವರು, ಯಾರೋ ಒಬ್ಬ ನಟ ನನ್ನ ಧ್ವನಿಯನ್ನು ಮಿಮಿಕ್ರಿ ಮಾಡಿ ಹಲವರಿಗೆ ವಂಚನೆ ಮಾಡಿದ್ದಾರೆ, ಧ್ವನಿ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ವಿಚಾರಣೆಗು ಮುನ್ನ ವಕೀಲರ ಮೂಲಕ ಮಾಹಿತಿ ಪಡೆದು ಇಡಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ. ಪ್ರಕರಣಕ್ಕೆ ಸಂಬಂಧವಿಲ್ಲದೆ ನನಗೆ ನೋಟಿಸ್ ಯಾಕೆ ಕೊಟ್ಟಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಯಾರೋ ಒಬ್ಬ ಮಹಿಳೆ ಮೌಖಿಕವಾಗಿ ನನ್ನ ಸಹೋದರಿ ಅಂತ ಹೇಳಿ ವಂಚನೆ ಮಾಡಿದ್ದಾರೆ. Iವಿಚಾರವಾಗಿ ನಾನೇ ಪೊಲೀಸ್ ಕಮಿಷನರ್ ಗೆ ದೂರು ಸಹ ನೀಡಿದ್ದೆ. ಅವರು ಮಾಡಿದ ವಂಚನೆ ಪ್ರಕರಣಕ್ಕೂ ನನಗೂ ಯಾವುದೇ ವಿಧವಾದ ಸಂಬಂಧವಿಲ್ಲ. ನನ್ನ ಕ್ಷೇತ್ರದವರು ಅಂತ ಎರಡು ಮೂರು ಬಾರಿ ಭೇಟಿಯಾಗಿದ್ದಾರೆ. ನಾನು ಅವರ ಎರಡು ಕಾರ್ಯಕ್ರಮಗಳಿಗೆ ಭೇಟಿ ಕೊಟ್ಟಿದ್ದೆ…
BREAKING : ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ನಶೆಯಲ್ಲಿ ಮೈಕ್ ಸೆಟ್ ಬಾಕ್ಸ್ ನಿಂದ ತಲೆಗೆ ಹೊಡೆದು, ಭಿಕ್ಷುಕನ ಹತ್ಯೆ!
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಮೈಕ್ ಸೆಟ್ ಬಾಕ್ಸ್ ನಿಂದ ಹೊಡೆದು ಬಿಕ್ಷುಕನನ್ನು ಕೊಲೆ ಮಾಡಲಾಗಿದೆ.ಬಿಹಾರ ಮೂಲದ ವಿಕಲಚೇತನ ಮಿತೇಶ್ (36) ಎನ್ನುವ ವ್ಯಕ್ತಿಯನ್ನು ರಾಜೇಶ್ ಹತ್ಯೆಗೈದಿದ್ದಾನೆ. ಹತ್ಯೆಯಾದ ಮಿತೇಶ್ ಹಾಗು ಕೊಲೆ ಆರೋಪಿ ರಾಜೇಶ್ ಕುಮಾರ್ ಇಬ್ಬರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಒಂದೇ ಬಾಡಿಗೆ ಮನೆಯಲ್ಲಿ ಮೀತೇಶ್ ಮತ್ತು ರಾಜೇಶ್ ವಾಸವಿದ್ದರು. ಇಬ್ಬರು ವಿಶೇಷ ಚೇತನರಾಗಿದ್ದು, ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ನಿನ್ನೆ ಮದ್ಯ ಸೇವಿಸಿ ಬಂದು ರಾಜೇಶ್ ತಾಯಿಗೆ ಮಿತೇಶ್ ಬೈದಿದ್ದ. ಇದರಿಂದ ಕೋಪಗೊಂಡು ರಾಜೇಶ್ ಮಿತೇಶ್ ತಲೆಗೆ ಹೊಡೆದಿದ್ದಾನೆ. ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮಿತೇಶ ಸಾವನಪ್ಪಿದ್ದಾನೆ, ಆರೋಪಿ ರಾಜೇಶ್ ಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಗೆ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಆಳಂದ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಸರ್ಕಾರದ ಭ್ರಷ್ಟಾಚಾರ ಹೊರಬಂದಿದೆ. ಬಡವರಿಗೆ ಹಂಚುವ ಮನೆಗಳಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಬಿ.ಆರ್ ಪಾಟೀಲ್ ಅಧಿಕೃತ ಹೇಳಿಕೆಯನ್ನು ಆಧಾರವಾಗಿ ಪರಿಗಣಿಸಿ. ಕೇವಲ ಒಂದು ಇಲಾಖೆ ಅಥವಾ ನಿರ್ದಿಷ್ಟ ಅಧಿಕಾರಿಗಳ ವೈಫಲ್ಯವಲ್ಲ ಇದು ಸರ್ಕಾರದ ಆಡಳಿತಾತ್ಮಕ ವೈಫಲ್ಯ. ಹಾಗಾಗಿ ಈ ಒಂದು ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಎಂದು ದಿನೇಶ್ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ ಎಂದು ಬಿ.ಆರ್ ಪಾಟೀಲ್ ಹೇಳಿಕೆ ಆಡಿಯೋ ಸಮೇತ ದಿನೇಶ್ ಕಲಹಳ್ಳಿ ರಾಜಪಾಲರಿಗೆ ದೂರು ನೀಡಿದ್ದಾರೆ. ಸಂಬಂಧಪಟ್ಟ…