Subscribe to Updates
Get the latest creative news from FooBar about art, design and business.
Author: kannadanewsnow05
ಪಂಜಾಬ್ : ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮತ್ತೊಮ್ಮೆ ಉಗ್ರರು ಏನಾದರೂ ದಾಳಿ ಮಾಡಿದರೆ ಭಾರತದ ಪ್ರತಿ ದಾಳಿ ಇನ್ನೂ ಘೋರವಾಗಿರುತ್ತದೆ. ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ಇಡೀ ವಿಶ್ವವೇ ಭಾರತದ ಬೆಂಬಲಕ್ಕೆ ನಿಂತಿದೆ. ಉಗ್ರರು ಪಾಕಿಸ್ತಾನದೊಳಗೆ ಅಡಗಿದರು ಸಹ ನುಗ್ಗಿ ಹೊಡೆಯುತ್ತೇವೆ ಭಾರತೀಯ ಸೇನೆಯ ಕಾರ್ಯ ಕ್ಷಮತೆ ಅದ್ಭುತವಾಗಿದೆ ಎಂದರು. ಆಪರೇಷನ್ ಸಿಂಧೂರ ಸಾಮಾನ್ಯ ಮಿಲಿಟರಿ ಕಾರ್ಯಾಚರಣೆ ಅಲ್ಲ. ನಿಮ್ಮ ಶೌರ್ಯ ಪ್ರತಿಧ್ವನಿ ಎಲ್ಲೆಡೆ ಕೇಳಿ ಬರುತ್ತಿದೆ. ಉಗ್ರರ ಸದೆಬಡೆಯುವದಾಗಿ ಭಾರತ ಲಕ್ಷ್ಮಣ ರೇಖೆ ಎಳೆದಿದೆ. ಭಾರತದ ಶಸ್ತ್ರಾಸ್ತ್ರಗಳಿಂದ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಆಗಿದೆ. ಭಾರತೀಯ ಸೇನೆಗೆ ಆಧುನಿಕ ತಂತ್ರಜ್ಞಾನದ ಶಕ್ತಿ ಇದೆ. ಪಾಕಿಸ್ತಾನದ ಸೇನೆಯನ್ನು ನಮ್ಮ ಸೇನೆ ಧೂಳಿಪಟ ಮಾಡಿದೆ. ಆಪರೇಷನ್…
ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಆದಂಪುರ ಏರ್ ಬೇಸ್ ನಲ್ಲಿ ಪ್ರಧಾನಿ ಮೋದಿ ಸೈನಿಕರ ಉದ್ದೇಶಿಸಿ ಮಾತನಾಡಿ, ಉಗ್ರರು ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿದರು. ಸಿಂಧೂರ ಅಳಿಸಿದ್ದ ಉಗ್ರರನ್ನು ಸದೆ ಬಡಿದಿದ್ದೇವೆ. ಉಗ್ರರನ್ನು ಭಾರತೀಯ ಸೇನೆ ಮಣ್ಣಲ್ಲಿ ಹೂತುಹಾಕಿದೆ. ಭಾರತೀಯ ಸೇನೆ ಉಗ್ರ ಹುಟ್ಟಡಗಿಸಿದೆ. ಉಗ್ರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಉಗ್ರರ ಮಹಾವಿನಾಶ ಇಲ್ಲಿಂದ ಆರಂಭವಾಗಿದೆ. ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ ಪಾಕಿಸ್ತಾನ ನಡುಕ ಹುಟ್ಟಿಸಿದ್ದೇವೆ. ಪಾಕಿಸ್ತಾನಕ್ಕೆ ತಿನ್ನುವುದಕ್ಕೆ ಅನ್ನವಿಲ್ಲ ಆದರೆ ಉಗ್ರರನ್ನು ಪೋಷಿಸುತ್ತಿದೆ. 100ಕ್ಕೂ ಹೆಚ್ಚು ಉಗ್ರರನ್ನು ಸದೆ ಬಡಿದಿದ್ದೇವೆ. ಪಾಕಿಸ್ತಾನದ ಒಳಗೆ ನುಗ್ಗಿ ಭಾರತೀಯ ಸೇನಾಪಡೆ ಉಗ್ರರನ್ನು ಹೊಡೆದಿದೆ. ಡ್ರೋನ್ ಮತ್ತು ಜೆಟ್ ವಿಮಾನಗಳನ್ನು ಹೊಡೆದುರಿಸಿಳಿದ್ದೇವೆ. ನಮ್ಮ ವೀರಯೋಧರು…
ಪಂಜಾಬ್ : ಆಪರೇಷನ್ ಸಿಂಧೂರ್ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಬೇಟಿ ನೀಡಿದ್ದಾರೆ. ಪಂಜಾಬಿನ ಆದಂಪುರ ವಾಯುನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೈನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಆದಂಪುರ ಏರ್ ಬೇಸ್ ನಲ್ಲಿ ಪ್ರಧಾನಿ ಮೋದಿ ಸೈನಿಕರ ಉದ್ದೇಶಿಸಿ ಮಾತನಾಡಿ, ಭಾರತ್ ಮಾತಾ ಕೀ ಅನ್ನೋದು ಉದ್ಘೋಷ ಅಷ್ಟೇ ಅಲ್ಲ. ಇದು ದೇಶದ ಪ್ರತಿಯೊಬ್ಬ ಸೈನಿಕರ ಶಪಥವಾಗಿದೆ. ಇಡೀ ದೇಶದ ನಾಗರೀಕರ ಧ್ವನಿಯಾಗಿದೆ. ಭಾರತ್ ಮಾತಾ ಕೀ ಜೈ ಅನ್ನು ತಾಕತ್ತನ್ನು ಇಡೀ ವಿಶ್ವವೇ ನೋಡಿದೆ. ಅಣ್ವಸ್ತ್ರ ಬಳಕೆ ಬೆದರಿಕೆಗೆ ಭಾರತ ಎಂದಿಗೂ ಜಗ್ಗುವುದಿಲ್ಲ ಎಂದು ಮತ್ತೊಮ್ಮೆ ಮೋದಿ ಪಾಕಿಸ್ತಾನ ವಿರುದ್ಧ ಗುಡುಗಿದರು. ನಿಮ್ಮ ಶಕ್ತಿಯಿಂದ ಆಪರೇಷನ್ ಸಿಂಧೂರ್ ಯಶಸ್ವಿಯಾಗಿದೆ ಮೂರು ಸೇನಾಪಡೆಗೆ ನಾನು ಸಲ್ಯೂಟ್ ಮಾಡುತ್ತೇನೆ ನಿಮ್ಮ ದರ್ಶನ ಪಡೆಯುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ನಾವು ಹೊಸ ಇತಿಹಾಸವನ್ನು ರಚಿಸಿದ್ದೇವೆ. ಭಾರತ್ ಮಾತಾ ಕಿ ಜೈ ಎಂದರೆ ಉಗ್ರರಿಗೆ…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದೇ ತಟ್ಟೆಯಲ್ಲಿ ಊಟ ಮಾಡಿ, ಒಬ್ಬರನ್ನು ಒಬ್ಬರು ಬಿಟ್ಟಿರಲಾರದ ಸ್ನೇಹಿತರ ಮಧ್ಯ ಗಲಾಟೆ ಆಗಿದೆ. 13 ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ 15 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಹುಬ್ಬಳ್ಳಿ ನಗರದ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ನಿನ್ನೆ ಸಂಜೆ 7 ಗಂಟೆಗೆ ಈ ಒಂದು ಘಟನೆ ನಡೆದಿದ್ದು, ಗುರುಸಿದ್ದೇಶ್ವರ ನಗರದ ನಿವಾಸಿಯಾಗಿರೋ ಚೇತನ್ ರಕ್ಕಸಗಿ (15) ಕೊಲೆಯಾದ ಬಾಲಕ. ಇನ್ನು ಕೊಲೆ ಮಾಡಿದ್ದು, ಆತನ ಮನೆ ಮುಂದೆಯೇ ಇರು ಗೆಳೆಯ ಹದಿಮೂರು ವರ್ಷದ ಬಾಲಕ ಎಂದು ತಿಳಿದುಬಂದಿದೆ.ಇನ್ನು ಕೊಲೆಯಾದ ಚೇತನ್ ಈಗಷ್ಟೇ ಒಂಬತ್ತನೇ ತರಗತಿ ಪಾಸ್ ಆಗಿದ್ದ. ಕೊಲೆ ಮಾಡಿದ ಬಾಲಕ ಆರನೇ ತರಗತಿ ಪಾಸ್ ಉತ್ತೀರ್ಣನಾಗಿದ್ದು, ಇಬ್ಬರು ಎದುರು ಬಿದುರು ಮನೆಯ ಸ್ನೇಹಿತರು ಎನ್ನಲಾಗಿದೆ. ನಿನ್ನೆ ಸಂಜೆ 7 ಗಂಟೆ ಸಮಯದಲ್ಲಿ ಮನೆಯಿಂದ ಚಾಕುತಂದು, ಚೇತನ್ ನ ಹೊಟ್ಟೆಯ ಎಡಬಾಗದಲ್ಲಿ…
BREAKING : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯ ಲಿಫ್ಟ್ ನಲ್ಲಿ 8 ಜನ ಸಿಬ್ಬಂದಿ ಸಿಲುಕಿ ಪರದಾಟ : ರಕ್ಷಣೆ ಮಾಡಿದ್ದೆ ರೋಚಕ!
ಕಲಬುರ್ಗಿ : ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಯಡವಟ್ಟು ಆಗಿದ್ದು, ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಇಂದು ಬೆಳಿಗ್ಗೆ ಲಿಫ್ಟ್ ನಲ್ಲಿ ತೆರಳುವಾಗ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ಲಾಕ್ ಆಗಿದೆ. ಈ ವೇಳೆ ಲಿಫ್ಟ್ ನಲ್ಲಿದ್ದ 8 ಜನ ಸಿಬ್ಬಂದಿಗಳು ಪರದಾಟ ನಡೆಸಿದ್ದಾರೆ. ಹೌದು ಇಂದು ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಲಿಫ್ಟ್ ತಾಂತ್ರಿಕ ದೋಷದಿಂದ 8 ಸಿಬ್ಬಂದಿ ಸಿಲುಕಿ ಒಂದು ಗಂಟೆಗೂ ಹೆಚ್ಚು ಕಾಲ ಆತಂಕ ಅನುಭವಿಸಿದ್ದಾರೆ. ಮೂರನೇ ಮಹಡಿಯಲ್ಲಿ ಸ್ಥಗಿತಗೊಂಡ ಲಿಫ್ಟ್ನಿಂದ ಸಿಬ್ಬಂದಿಯನ್ನು ರಕ್ಷಿಸಲು ಗೋಡೆ ಒಡೆಯಬೇಕಾಯಿತು.ಬೆಳಿಗ್ಗೆ 10 ಗಂಟೆ ಸುಮಾರಿಗೆ, ಗ್ರೌಂಡ್ ಫ್ಲೋರ್ನಿಂದ 6ನೇ ಮಹಡಿಗೆ ತೆರಳಲು 8 ಜನ ಸಿಬ್ಬಂದಿ ಲಿಫ್ಟ್ ಹತ್ತಿದ್ದಾರೆ. ಆದರೆ ಕೊಂಡೊಯ್ಯುತ್ತಿದ್ದ ಲಿಫ್ಟ್, ಮೂರನೇ ಮಹಡಿಯಲ್ಲಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದೆ. ಈ ಲಿಫ್ಟ್ ಮೂರನೇ ಮಹಡಿಗೆ ಸಂಪರ್ಕವಿಲ್ಲದ ಕಾರಣ, ಆ ಮಹಡಿಯ ಬಾಗಿಲಿಗೆ ಗೋಡೆ ನಿರ್ಮಿಸಲಾಗಿತ್ತು. ಇದರಿಂದ ಲಿಫ್ಟ್ನ ದ್ವಾರ ತೆರೆಯಲು ಸಾಧ್ಯವಾಗದೆ, ಸಿಬ್ಬಂದಿ ಗಾಳಿ ಮತ್ತು ಬೆಳಕಿಲ್ಲದ ವಾತಾವರಣದಲ್ಲಿ ತಾಸುಗಟ್ಟಲೇ ನಿಂತಲ್ಲೇ…
ದಾವಣಗೆರೆ : ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆ ಪ್ರಕರಣದ ಸಂಬಂಧ ಈಗಾಗಲೇ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ. ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಮತ್ತೆ 10 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಪೀಟ್ ಕ್ಲಬ್ ಗೆ ನುಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಕಣುಮಾ ಹತ್ಯೆ ಮಾಡಲಾಗಿದೆ. ಬಳಿಕ ಹತ್ಯೆ ಮಾಡಿದ ವಿಡಿಯೋವನ್ನು ಆರೋಪಿಗಳು ವೈರಲ್ ಮಾಡಿದ್ದರು. ಮೇ 5 ರಂದು ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿತ್ತು.ಸೋಮೇಶ್ವರ ಆಸ್ಪತ್ರೆಯ ಮುಂದೆ ಇಸ್ಪೀಟ್ ಕ್ಲಬ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಚವಳಿ ಸಂತೋಷ್ ಸೇರಿ 10 ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇದೀಗ ಮತ್ತೆ 10 ಆರೋಪಿಗಳನ್ನು ದಾವಣಗೆರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ…
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದು ಈ ಮಧ್ಯ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2 ದೇಶಗಳು ಕದನ ವಿರಾಮ ಘೋಷಿಸದೆ ಇದ್ದರೆ ವ್ಯಾಪಾರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಈ ವಿಚಾರವಾಗಿ ಬೆಂಗಳೂರಲ್ಲಿ ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ಪ್ರತಿಕ್ರಿಯ ನೀಡಿ ಈಗಿನ ಪರಿಸ್ಥಿತಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಂತೆ ಡಿಸಿಷನ್ ಬರುವವರು ಕಷ್ಟ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ಉಗ್ರ ಚಟುವಟಿಕೆಗೆ ಪಾಕಿಸ್ತಾನ್ ಪ್ರಚೋದನೆ ನೀಡುತ್ತಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಿವೆ. ಟ್ರಂಪ್ ಒಂದು ಹೇಳಿಕೆ ನೀಡಿ ಮಧ್ಯಸ್ಥಿಕೆ ಮಾಡಿದ್ದೇನೆ ಎಂದಿದ್ದಾರೆ. ಆದರೆ ಪ್ರಧಾನಿ ಮೋದಿ ಅವರ ಬಾಗಿಲಿಗೆ ಹೋಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗಿಂತ, ನಮ್ಮ…
ಪಂಜಾಬ್ : ಮದ್ಯ ಸೇವನೆ ಮಾಡೋದೇ ತಪ್ಪು ಆದರೂ ಕೆಲವರು ಫ್ಯಾಷನ್ ಗಾಗಿ ಮದ್ಯ ಸೇವಿಸಿದರೆ, ಇನ್ನು ಕೆಲವರು ಒತ್ತಡದಿಂದ ಮದ್ಯ ಸೇವಿಸುತ್ತಾರೆ. ಇನ್ನು ಕೆಲವು ಜನರಂತೂ ಮದ್ಯದಲ್ಲೇ ಈಜಾಡುತ್ತಿರುತ್ತಾರೆ. ಇತ್ತೀಚಿಗೆ ಮದ್ಯದಲ್ಲೂ ಕೆಮಿಕಲ್ ಮಿಶ್ರಿತ ಮದ್ಯ ಮಾರಾಟ ಆಗುತ್ತಿದ್ದು, ಪಂಜಾಬ್ ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಬಲಿಯಾಗಿದ್ದಾರೆ. ಹೌದು ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಮೃತಸರದ ಮಜಿತಿಯಾ ಪ್ರದೇಶದಲ್ಲಿ ನಡೆದಿದೆ. ನಿನ್ನೆ ಸಂಜೆಯಿಂದ ಸಾವುಗಳ ಸರಣಿ ಪ್ರಾರಂಭವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಇವೆ ಎನ್ನಲಾಗಿದೆ. ಪಂಜಾಬ್ ನ ಥೆರ್ವಾಲ್, ಮರ್ರಿ, ಪಟಲ್ ಪುರಿ, ಭಂಗಾಲಿ ಗ್ರಾಮಗಳಿಂದ ಇದುವರೆಗೂ 12 ಸಾವುಗಳು ವರದಿಯಾಗಿದೆ. ಪಂಜಾಬ್ ನಲ್ಲಿ ವಿಷಪೂರಿತ , ಅಕ್ರಮ ಮದ್ಯದ ಹಾವಳಿ ಹೆಚ್ಚಾಗಿದ್ದು ಅದನ್ನು ತಡೆಗಟ್ಟಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನೆ ಕುರಿತಂತೆ ತನಿಖೆ ಜಾರಿಯಲ್ಲಿದೆ.
ಬೀದರ್ : ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ಹೊಸ ಮನೆಯ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ತಗುಲಿ ಸ್ಥಳದಲ್ಲಿಯೇ 8ನೇ ತರಗತಿಯ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹುಲಸೂರ ತಾಲ್ಲುಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಆಘಾತದಿಂದ ಈ ಘಟನೆ ನಡೆದಿದೆ ಎಂದು ಪೋಲಿಸ್ ಇಲಾಖೆಯಿಂದ ತಿಳಿದು ಬಂದಿದೆ. ಈ ಕುರಿತು ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದೆ. ಇದೀಗ ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ರಾಜ್ಯದ ಯಜಮಾನೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಈ ಕುರಿತು ಸಿಹಿ ಸುದ್ದಿ ನೀಡಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಬಾಕಿ ಇರುವ ಮೂರು ತಿಂಗಳ—ಜನವರಿ, ಫೆಬ್ರವರಿ ಮತ್ತು ಮಾರ್ಚ್—ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ…