Author: kannadanewsnow05

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಹಲವು ಎಕ್ಸಿಟ್ ಪೋಲ್ ಗಳ ಪ್ರಕಾರ ಈ ಬಾರಿ ಬಿಜೆಪಿ ಬಹುಮತ ಪಡೆದುಕೊಂಡು ಗೆಲುವು ಸಾಧಿಸಲಿದೆ, ಅಲ್ಲದೇ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ ಎಂದು ಹಲವು ಸಮೀಕ್ಷೆ ಗಳ ಎಕ್ಸಿಟ್ ಪೋಲ್ ನಲ್ಲಿ ತಿಳಿದು ಬಂದಿದೆ. ಮ್ಯಾಟ್ರಿಜ್ ಸಮೀಕ್ಷೆ ಪ್ರಕಾರ ಬಿಜೆಪಿಗೆ ಹೆಚ್ಚಿನ ಸ್ಥಾನ ದೊರೆಯಲಿದ್ದು, ಬಿಜೆಪಿ ಈ ಬಾರಿ 35 ರಿಂದ 40 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಡಿವಿ ರಿಸರ್ಚ್ ಅಂತೆ ಆಪ್ ಗೆ 26 ರಿಂದ 34 ಸ್ಥಾನ, ಬಿಜೆಪಿಗೆ 36 ರಿಂದ 34 ಸ್ಥಾನ ಹಾಗೂ ಕಾಂಗ್ರೆಸ್ ಗೆ 0 ಮತ್ತು ಇತರರು 0 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇನ್ನು ಅದೇ ರೀತಿಯಾಗಿ ಪೀಪಲ್ಸ್ ಇನ್ಸೈಟ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಇದ್ದು, 40 ರಿಂದ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಸಾಧ್ಯತೆ…

Read More

ಬೆಂಗಳೂರು : ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ. ಹೌದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು, ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಸುಗ್ರೀವಾಜ್ಞೆ ಜಾರಿ ಮಾಡಲು ನಿರ್ಧರಿಸಿತ್ತು. ಇದೀಗ ಈ ಒಂದು ಸುಗ್ರೀವಾಜ್ಞೆ ಜಾರಿ ಮಾಡೋಕೆ ಮುಂಚೆ ರಾಜ್ಯ ಸರ್ಕಾರ ಹಲವು ಅಂಶಗಳನ್ನು ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ, ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ, ಸುಗ್ರೀವಾಜ್ಞೆ…

Read More

ರಾಯಚೂರು : ಮನೆಯಲ್ಲಿ ಪೇಟಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಇಟ್ಟಿದ್ದ ಥಿನ್ನರ್ ಅನ್ನು ಕುಡಿದು ಮೂರು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಹಿರೇಕೊತ್ನೇಕರ್ ಎಂಬಲ್ಲಿ ನಡೆದಿದೆ. ಹೌದು ಆಕಸ್ಮಿಕವಾಗಿ ಮನೆಯಲ್ಲಿಟ್ಟಿದ್ದ ಥಿನ್ನರ್ ಕುಡಿದು ಬಾಲಕ ಸಾವನ್ನಪ್ಪಿದ್ದಾನೆ.ಮೃತ ಬಾಲಕನ ಮನೆಯಲ್ಲಿ ಪೇಂಟಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮನೆಯಲ್ಲಿ ಇಟ್ಟಿದ್ದ ಥಿನ್ನರ್ ಅನ್ನು ಶಿವರ್ಜುನ್ (3) ಬಾಲಕ ಕುಡಿದಿದ್ದಾನೆ. ಅಸ್ವಸ್ಥನಾಗಿದ್ದ ಶಿವಾರ್ಜುನ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಇದೀಗ ಮೂರು ವರ್ಷದ ಬಾಲಕ ಶಿವರ್ಜುನ್ ಸಾವನ್ನಪ್ಪಿದ್ದಾನೆ. ರಾಯಚೂರು ಜಿಲ್ಲೆಯ ಹಿರೇಕೊತ್ನೇಕರ್ ಎಂಬಲ್ಲಿ ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ವೀಲ್ಗಳನ್ನು ಕದ್ದು ಅಂಗಡಿಗಳಿಗೆ ಹಾಗೂ ಆನ್ಲೈನ್ ಮುಖಾಂತರ ಮಾರಾಟ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಲ್ಲಿ ಕಾರ್ ಟೈರ್ ಕದಿಯುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮನೆಯ ಮುಂದೆ ನಿಲ್ಲಿಸಿದಂತಹ ಕಾರ್ ಟೈರ್ ಗಳನ್ನು ಕದಿಯುತ್ತಿದ್ದ ಹೈದರ್ ಅಲಿ ಹಾಗೂ ಗೌಸ್ ಬೇಗ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾತ್ರಿಯಲ್ಲಿ ಸ್ಕೂಟಿಯಲ್ಲಿ ಬಂದು ವ್ಹಿಲ್ ಕದ್ದು ಪರಾರಿಯಾಗುತ್ತಿದ್ದರು. ಅಂಗಡಿ ಹಾಗೂ ಆನ್ಲೈನ್ ಮೂಲಕ ವ್ಹಿಲ್ ಗಳನ್ನು ಸೇಲ್ ಮಾಡುತ್ತಿದ್ದರು. ಸದ್ಯ ಆರೋಪಿಗಳಿಂದ 60 ಮ್ಯಾಗ್ ವೀಲ್‌ಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಬಂಧನದಿಂದ 20 ಪ್ರಕರಣಗಳು ಇದೀಗ ಪತ್ತೆಯಾಗಿವೆ.

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಬೈಕ್ಗೆ ವೇಗವಾಗಿ ಬಂದು ಸಾರಿಗೆ ಬಸ್ ಗುದ್ದಿದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಹೌದು ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಆಂಜನೇಯ (35) ಪತ್ನಿ ಗಂಗಮ್ಮ (28) ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬ್ರಾಂಡೆಡ್ ಉತ್ಪನ್ನಗಳನ್ನು ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಬೆಂಗಳೂರಿನ ಕಾಟನಪೇಟೆ ಗೋದಾಮಿನಲ್ಲಿ ನಕಲಿ FMCG ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಒಂದು ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಅಧಿಕಾರಿಗಳು ಮಾಡಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ ಕಾರ್ಖಾನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ನಕಲಿ ಡಿಟರ್ಜೆಂಟ್, ಟೀ ಪುಡಿ, ಮಸ್ಕಿಟೋ ಕಾಯಿಲ್ ಪತ್ತೆಯಾಗಿದೆ. 1. 75 ಕೋಟಿ ಮೌಲ್ಯದ ನಕಲಿ ಉತ್ಪನ್ನಗಳನ್ನು ಜಪ್ತಿ ಮಾಡಿದ ಸಿಸಿಬಿ ನಕಲಿ ಉತ್ಪನ್ನ ಮಾರಾಟ ಮಾಡುತ್ತಿದ್ದ ದಳಪತ್ ಸಿಂಗ್ ನನ್ನ ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಹಾಸನ : ಕಾರಿನ ಟೈರ್ ಪಂಚರ್ ಆಗಿ ನಿಯಂತ್ರಣ ಕಳೆದ ಕೊಂಡು ರಸ್ತೆ ಬದಿಯಲ್ಲಿದ್ದಂತಹ ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮುದ್ದೆನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯಗಳಿವೆ. ತಕ್ಷಣ ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಸಿಲುಕಿದವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣೆಗೇರಿಯಲ್ಲಿ ನಡೆದಿದೆ. ಆದರೆ ಪತಿಯ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಮೃತ ಗೃಹಿಣಿಯನ್ನು ಶಭನಮ್ ಎಂದು ತಿಳಿದುಬಂದಿದೆ. ನಿನ್ನೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅಣ್ಣಿಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆಯ ಕತ್ತಿನ ಬಾಗದಲ್ಲಿ ಗಾಯಗಳಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇನ್ನು ಮಹಿಳೆಯ ಮಗ ಅಮ್ಮನಿಗೆ ತಂದೆ ಹಾಗೂ ಅಜ್ಜಿ ಹೊಡೆದಿರುವುದಾಗಿ ಕಣ್ಣೀರಿಟ್ಟಿದ್ದಾನೆ.ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಶಭನಮ್ ಗೆ ಪತಿ ಹಾಗೂ ಕುಟುಂಬದವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಅನುಮಾನಾಸ್ಪದವಾಗಿ ಶಭನಮ್ ಸಾವನ್ನಪ್ಪಿದ್ದು, ಶಭನಮ್ ಪತಿ ಸಾಮದಾನಿ ಗೌಸುಸಾಬ್, ಫಾತಿಮ ಅಮಾಬುಸಾಬ್, ದಾವಲ್ಮಾ ರಫಿಕ್ ವಿರುದ್ಧ FIR ದಾಖಲಾಗಿದೆ.

Read More

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಬೈಕ್ಗೆ ವೇಗವಾಗಿ ಬಂದು ಸಾರಿಗೆ ಬಸ್ ಗುದ್ದಿದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಹೌದು ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಇತ್ತೀಚಿಗೆ ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಂದ ಅನೇಕ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.ಇದೀಗ ಆನ್ಲೈನ್ ಗೆ ನಲ್ಲಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದ ಇದರಿಂದ ಮನನೊಂದ ಯುವಕ ನೀಡೋ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು ನಾಗರಾಜ್ ಶಿವಪ್ಪ ಉಳವಣ್ಣವರ(30) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆನ್ ಲೈನ್ ಗೇಮ್ ಚಟದಿಂದ ನೇಣಿಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಮೃತ ನಾಗರಾಜ್‌ ಅನ್ ಲೈನ್ ಗೇಮ್ ನಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಳೆದುಕೊಂಡಿದ್ದು, ತೀವ್ರ ನಷ್ಟಕ್ಕೊಳಗಾಗಿದ್ದ. ಅಲ್ಲದೇ ಈತ ಐಐಟಿ ಸ್ಟಾಫ್ ನರ್ಸ್ ಎಂದು ತಿಳಿದುಬಂದಿದೆ.ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More