Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ರಾಜ್ಯದಲ್ಲಿ 3 ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಬಿರುಸಾಗಿದ್ದು, ಉಭಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರದಲ್ಲಿ NDA ಅಭ್ಯರ್ಥಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಯಾರು ಏನೇ ಕುತಂತ್ರ ಮಾಡಿದರು ಜನ ನನ್ನನ್ನು ಕೈ ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಅಣಿಗೇರೆ ಗ್ರಾಮದಲ್ಲಿ ಮಾತನಾಡಿದ ಅವರು,ರೈತರ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. HD ಕುಮಾರಸ್ವಾಮಿ ಎರೆಡು ಬಾರಿ ಚನ್ನಪಟ್ಟಣ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕೆಲವರು 17 ಕೆರೆ ತುಂಬಿಸಿದ್ದೇವೆ ಅಂತ ಪ್ರಚಾರ ತೆಗೆದುಕೊಳ್ಳುತ್ತಾರೆ. ಆದರೆ ಡಿವಿ ಸದಾನಂದ ಗೌಡ ಅವರ ಕಾಲದಲ್ಲಿ ಆ ಕೆರೆಗಳನ್ನು ತುಂಬಿಸಿದ್ದು ಈ ಸೋಮಣ್ಣ ಅನುದಾನ ಕೊಟ್ಟು ಕೆರೆಗಳಿಗೆ ಮರುಜೀವ ನೀಡಿದರು. ಕುಮಾರಸ್ವಾಮಿ ಕೂಡ 100ಕ್ಕೂ…
ದಾವಣಗೆರೆ : ವಕ್ಫ್ ಬೋರ್ಡ್ ವತಿಯಿಂದ ರೈತರಿಗೆ ನೋಟಿಸ್ ನೀಡಿದ ವಿಚಾರವಾಗಿ, ಇಂದು ರಾಜ್ಯಾದ್ಯಂತ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುತ್ತಿದೆ. ಇದೆ ವಿಚಾರವಾಗಿ ದಾವಣಗೆರೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಅವರು, ಜಮೀರ್ ಹುಚ್ಚಾಟ ನಡೆಸಿದರೆ ಪಾಕಿಸ್ತಾನಕ್ಕೆ ಓಡಿಸುತ್ತೇವೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟ ತುಘಲಕ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ಅಲ್ಪಸಂಖ್ಯಾತರ ವಿರುದ್ಧ ಹೋರಾಟ ಅಲ್ಲ. ಇದು ಹಕ್ಕುಗಳಿಗಾಗಿ ಹೋರಾಟ.ರೈತರು ಮಠದ ಜಮೀನುಗಳನ್ನು ಕಬಳಿಸಿದವರ ವಿರುದ್ಧ ಹೋರಾಟ ಎಂದು ಅವರು ತಿಳಿಸಿದರು. ಜಮೀರ್ ಅಹ್ಮದ್ ಖಾನ್ ಒಬ್ಬ ಮತಾಂಧ. ವಸತಿ ಖಾತೆ ಸಚಿವ ಎನ್ನುವುದನ್ನು ಮರೆತು ಆಸ್ತಿ ಕಬಳಿಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕುರ್ಚಿ ಕಂಟಕ ಇದೆ. ಉಪಚುನಾವಣೆಯ ಬಳಿಕ ನಿಮ್ಮವರೇ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ಉಪಚುನಾವಣೆಯ ಗೋಸ್ಕರ ರೈತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದಾರೆ. ಜಮೀರ್ ಅಹ್ಮದ್ ಹುಚ್ಚಾಟ…
ಧಾರವಾಡ : ಹಸುವಿನ ಮೈ ತೊಳೆಯಲು ಕೆರೆಯಲ್ಲಿ ನೀರಿಗೆ ಇಳಿದಿದ್ದ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿಸರಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಜ್ಜಯ್ಯ ಹಿರೇಮಠ (15) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ದೀಪಾವಳಿ ಹಬ್ಬದ ಅಂಗವಾಗಿ ಅಜ್ಜಯ್ಯ ಹಸುವಿನ ಮೈತೊಳೆಯಲು ಗ್ರಾಮದ ಬಸ್ ನಿಲ್ದಾಣ ಸಮೀಪದ ಕೆರೆಗೆ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಜ್ಜಯ್ಯ ಹಿರೇಮಠ ಗ್ರಾಮದ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಎನ್ನಲಾಗುತ್ತಿದೆ. ದೀಪಾವಳಿ ಹಬ್ಬದ ವೇಳೆ ಸಂಭ್ರಮ ಪಡುವ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಮೃತ ದೇಹವನ್ನು ಹೊರಗಡೆ ತೆಗೆದಿದ್ದಾರೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಜೀವನದಲ್ಲಿ ಏನಾದರೂ ನಿಮಗೆ ಶತ್ರುಗಳಿಂದ ತೊಂದರೆ ಉಂಟಾಗುತ್ತ ಇರುವುದು ಸಮಸ್ಯೆ ಹೆಚ್ಚಾಗಿದ್ದರೆ ಈ ಶಕ್ತಿಶಾಲಿಯಾದ ತಂತ್ರವನ್ನು ಮಾಡಬಹುದಾಗಿದೆ. ಜೀವನದಲ್ಲೂ ಕೂಡ ಶತ್ರುಗಳು ಎಂಬುವವರು ಇದ್ದೇ ಇರುತ್ತಾರೆ. ನಮ್ಮ ಜೀವನದಲ್ಲಿ ನಮಗೆ ತೊಂದರೆಯನ್ನು ಉಂಟು ಮಾಡುವ ಮೋಸವನ್ನು ಉಂಟು ಮಾಡುವವರು ಇದ್ದೇ ಇರುತ್ತಾರೆ ಅಂತಹ ಶತ್ರುಗಳಿಂದ ನಾವು ದೂರ ಇರಬೇಕು ಅದು ಅ ಶತ್ರುಗಳು ನಮ್ಮಿಂದ ನಾಶವಾಗಬೇಕು ಎಂದರೆ ಈ ತಂತ್ರವನ್ನು ಮಾಡಬೇಕು. ನಿಮ್ಮ ಪಾಡಿಗೆ ನಿಮ್ಮನ್ನ ಇರಲು ಬಿಡುವುದಿಲ್ಲ ನೀವು ಅಭಿವೃದ್ಧಿ ಆಗುವುದಿಲ್ಲ ಅವರು ಸಹಿಸುತ್ತಾ ಇಲ್ಲ ಎಂದರೆ ಈ ತಂತ್ರವನ್ನು ಮಾಡುವುದು ಉತ್ತಮ. ಒಂದು ಸರಳವಾದ ಬೀಜ ಮಂತ್ರದಿಂದ ನಿಮ್ಮ ಜೀವನದಲ್ಲಿ ಇರುವಂತಹ ಶತ್ರುಗಳನ್ನು ಸಂಪೂರ್ಣವಾಗಿ ದೂರ ಮಾಡಿಕೊಳ್ಳಬಹುದಾಗಿದೆ. ಸರಳವಾದ ಬೀಜ ಮಂತ್ರವನ್ನು ಪಠಣೆ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಶತ್ರುಗಳು ಸಂಪೂರ್ಣವಾಗಿ ನಾಶವಾಗುತ್ತಾರೆ. ಎಂದಿಗೂ ಕೂಡ ನಿಮಗೆ ತೊಂದರೆಯನ್ನು…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಲಗುವ ಕೋಣೆ ವಾಸ್ತು ಶಾಸ್ತ್ರ: ಮಲಗುವ ಕೋಣೆ ಮನೆಯ ಪ್ರಮುಖ ಭಾಗವಾಗಿದೆ. ಪ್ರತಿಯೊಬ್ಬರೂ ತಮ್ಮ ಮಲಗುವ ಕೋಣೆಯನ್ನು ಸುಂದರವಾಗಿ ಮತ್ತು ಸುಂದರವಾಗಿಸಲು ಬಯಸುತ್ತಾರೆ. ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾದ ಮಲಗುವ ಕೋಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ. ಈ ವಿಷಯಗಳನ್ನು ಗಮನಿಸುವುದರಿಂದ ಸಂತೋಷ ಮತ್ತು ಶಾಂತಿಯುತ ಜೀವನಕ್ಕೆ ಕಾರಣವಾಗುತ್ತದೆ. ಮಲಗುವ ಕೋಣೆಗೆ ವಾಸ್ತು ಸಲಹೆಗಳು: ಮಲಗುವ ಕೋಣೆ ಮನೆಯ ಪ್ರಮುಖ ಭಾಗವಾಗಿದೆ. ಪ್ರತಿಯೊಬ್ಬರೂ ತಮ್ಮ ಮಲಗುವ ಕೋಣೆಯನ್ನು ಸುಂದರವಾಗಿ ಮತ್ತು ಸುಂದರವಾಗಿರಿಸಿಕೊಳ್ಳುತ್ತಾರೆ. ವಾಸ್ತು ಶಾಸ್ತ್ರವು ಮಲಗುವ ಕೋಣೆಗೆ ನಿಯಮಗಳನ್ನು ಉಲ್ಲೇಖಿಸಿದೆ. ಗಂಡ ಮತ್ತು ಹೆಂಡತಿಯ ನಡುವೆ ಇಲ್ಲದಿರುವಾಗ ಈ ವಿಷಯಗಳನ್ನು ಪರಿಗಣಿಸುವುದು ಮುಖ್ಯ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ವ್ಯತ್ಯಾಸಗಳು ಯಾವಾಗಲೂ ಇರುತ್ತದೆ. ವಾಸ್ತವವಾಗಿ, ವಾಸ್ತು…
ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ದಿನ ಪಟಾಕಿ ಸಿಡಿದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಣನಕುಂಟೆ ಪೊಲೀಸಣ್ಣ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಸಿಡಿದು ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಬಳಿಕ ಆಸ್ಪತ್ರೆಗೆ ದಾಖಲಾದಗ ನವೆಂಬರ್ 2 ರಂದು ಯುವಕ ಸಾವನ್ನಪ್ಪಿದ್ದಾನೆ. ಹೌದು ದೀಪಾವಳಿ ಹಬ್ಬದಂದು ರಾತ್ರಿ ವೇಳೆ ಪಟಾಕಿ ಹೊಡೆದಿದ್ದ ಶಬರೀಶ್ ಹಾಗೂ ಸ್ನೇಹಿತರು. ಡಬ್ಬಿಗೆ ಪಟಾಕಿ ಅಂಟಿಸಿ ಅದರ ಮೇಲೆ ಕೂರಲು ಚಾಲೆಂಜ್ ಮಾಡಿದ್ದರು. ಕುಡಿದ ಮತ್ತಿನಲ್ಲಿ ಶಬರೀಶ್ ಪಟಾಕಿಯ ಡಬ್ಬ ಇಟ್ಟು ಕುಳಿತಿದ್ದ. ಪಟಾಕಿ ಸಿಡಿದ ರಭಸಕ್ಕೆ ಶಬರೀಶ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ನವೆಂಬರ್ 2ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಶಬರೀಶ್ ಸಾವನ್ನಪ್ಪಿದ್ದಾನೆ.ಘಟನೆಗೆ ಸಂಬಂಧಿಸಿದಂತೆ 6 ಜನರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. https://twitter.com/HAchrappady/status/1853341042050810251 https://kannadanewsnow.com/kannada/waqf-property-issue-was-not-just-yesterday-notices-were-issued-during-bjp-government-too-siddaramaiah/ https://kannadanewsnow.com/kannada/book-that-exposed-my-life-bjp-is-going-to-tarnish-it-do-you-believe-it-siddaramaiah/
ಹುಬ್ಬಳ್ಳಿ : ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯ ಆಗಿದೆ.15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ 11,495 ಸಾವಿರ ಕೋಟಿ ಅನ್ಯಾಯ ಆಗಿದೆ. 5,495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂಥ ಹೇಳಿದ್ದರು.ಕೇಂದ್ರ ಈ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟು ಬಿಡುತ್ತೇನೆ. ಅವರು ರಾಜಕೀಯ ಬಿಡುತ್ತಾರಾ? ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ 4.5 ಲಕ್ಷ ಕೋಟಿ ರೂ. ತೆರಿಗೆಯನ್ನು ರಾಜ್ಯದಿಂದ ಕೋಡುತ್ತಿದ್ದೇವೆ. ಆದರೆ ರಾಜ್ಯಕ್ಕೆ ಸಿಗುತ್ತಿರುವುದು 55-60 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯ ಏನ್ರೀ? ಇದನ್ನು ಕೇಳಿದ್ರೆ ರಾಜಕೀಯ ಅಂತಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿ ಕಾರಿದರು. ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ಬೊಮ್ಮಾಯಿ ಮಾತನಾಡಿದ್ದಾರಾ? ನಾಲ್ಕೂವರೆ ಲಕ್ಷ ಕೋಟಿ…
ಹಾವೇರಿ : ಇದೇ ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ರಾಜಕೀಯ ನಾಯಕರು ತಮ್ಮ ಪಕ್ಷಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಅವರ ಪರವಾಗಿ ಮತಯಾಚಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಹುಲಗೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ಹೆಣಗಳ ಮೇಲೂ ಹಣ ಮಾಡಿದವರ ಮಗ ಗೆಲ್ಲಬೇಕಾ? ಯಾಸಿರ್ ಪಠಣ ಗೆಲ್ಲಬೇಕಾ? ನೀವೇ ನಿರ್ಧಾರ ಮಾಡಿ. 160 ಬರವಸೆಗಳ ಪೈಕಿ 158 ಭರವಸೆ ಈಡೇರಿಸಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಅಂತ ಪ್ರಧಾನ ಮಂತ್ರಿಗಳು ಹೇಳಿದ್ದರು.…
ಕಲಬುರ್ಗಿ : ರಸ್ತೆಯ ಡಿವೈಡರ್ ಬಳಿ ನಿಂತಿದ್ದವೃದ್ಧೆಗೆ ವೇಗವಾಗಿ ಬಂದಂತಹ ಡೀಸೆಲ್ ಟ್ಯಾಂಕರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆ ವೃದ್ಧೆ ಸಾವನಪ್ಪಿರುವ ಘಟನೆ ಕಲಬುರ್ಗಿ ನಗರದ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತ ವೃದ್ಧೆಯನ್ನು ಕುಷ್ಠ ರೋಗಿಗಳ ಕಾಲೋನಿಯ ಮಲ್ಲಮ್ಮ ಸಾಯಬಣ್ಣ (65) ಎಂದು ತಿಳಿದುಬಂದಿದೆ. ಇಂದು ಅವರು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದಾಗ ಡೀಸೆಲ್ ಟ್ಯಾಂಕರ್ವೊಂದು ವೃದ್ಧೆಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅದರ ಚಕ್ರದ ಅಡಿ ಸಿಲುಕಿ ವೃದ್ಧೆಯ ಎಡಗಾಲಿನ ತೊಡೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದಾಗಿ ವೃದ್ಧೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತಂತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ ರಾತ್ರಿ ನಡೆದಿದೆ. ಇನ್ನು ಕೊಲೆಯಾದ ಯುವಕನನ್ನು ರವಿ ತಿಮ್ಮನ್ನವರ(23) ಎಂದು ತಿಳಿದುಬಂದಿದೆ. ಯುವಕನ ಮೇಲೆ ದುಷ್ಕರ್ಮಿಗಳು, ಕುಡಗೋಲು, ಮದ್ಯದ ಬಾಟಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಕ್ತ ಮಡುವಿನಲ್ಲಿ ಪ್ರಜ್ಞೆತಪ್ಪಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.











