Author: kannadanewsnow05

ಶಿವಮೊಗ್ಗ : ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡುವ ಬಗ್ಗೆ ಸಮಿತಿ ತೀರ್ಮಾನಿಸುತ್ತದೆ. ಕೇಂದ್ರ ಸರ್ಕಾರದ ಸಮಿತಿ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡುವ ಕುರಿತು ತೀರ್ಮಾನ ಕೈಗೊಳ್ಳುತ್ತದೆ ಎಂದು ಶಿವಮೊಗ್ಗದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಅಭಿಮಾನಿಗಳು ಡಿಕೆ ಶಿವಕುಮಾರ್ ಪರ ಘೋಷಣೆ ಕೂಗಿದರು. ಈ ವೇಳೆ ಮೆಟ್ರೋ ಪ್ರಯಾಣದ ದರ ಹೆಚ್ಚಳ ಕುರಿತು ಮಾತನಾಡಿದ ಅವರು, ಮೆಟ್ರೋ ಪ್ರಯಾಣ ದರದ ಬಗ್ಗೆ ನಾವು ತೀರ್ಮಾನಿಸಲ್ಲ. BMRCL ಹಾಗೂ ಕೇಂದ್ರ ಸರ್ಕಾರ ತೀರ್ಮಾನಿಸಬೇಕು ಎಂದು ಅವರು ತಿಳಿಸಿದರು. ಇನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮೃತ ಕುಟುಂಬಸ್ಥರಿಗೆ ಪರಿಹಾರ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರೆ ಕುಂಭಮೇಳದಲ್ಲಿ ಅಗ್ನಿ ಅವಘಡದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಡಿಕೆ ಶಿವಕುಮಾರ್…

Read More

ಯಾದಗಿರಿ : ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂದು ಪತಿಯನ್ನೇ ಪ್ರಿಯಕರನ ಜೊತೆಗೆ ಸೇರಿ ಪತ್ನಿ ಒಬ್ಬಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ನಡೆದಿದೆ. ಹತ್ಯೆಯಾದ ಪತಿಯನು ಮಾನಪ್ಪ ಬಂಕಲದೊಡ್ಡಿ (34) ಎಂದು ತಿಳಿದುಬಂದಿದೆ. ಪತ್ನಿ ಲಕ್ಷ್ಮಿಯ ಜೊತೆಗೆ ಮಾನಪ್ಪ ಕಳೆದ 11 ವರ್ಷಗಳ ಹಿಂದೆ ಮದುವೆಯಾಗಿದ್ದ.ಆದರೆ ಇತ್ತೀಚೆ ಲಕ್ಷ್ಮೀ ದಾರಿ ತಪ್ಪಿದ್ದಳು. ಕೆಲವರ ಜತೆ ಅಕ್ರಮ ಸಂಬಂಧ ಇಟ್ಕೊಂಡಿದ್ದಳು. ಈ ವಿಷಯ ಗಂಡನಿಗೆ ಗೊತ್ತಾಗಿ ಜಗಳ ಆಗಿತ್ತು. ಮೊನ್ನೆ ರಾತ್ರಿ ದಂಪತಿ ನಡುವೆ ಮತ್ತೆ ಗಲಾಟೆ ಆಗಿದೆ. ಅದೇ ರಾತ್ರಿ ಪ್ರಿಯಕರನನ್ನ ಮನೆಗೆ ಕರೆಸಿಕೊಂಡಿರುವ ಲಕ್ಷ್ಮೀ, ದಿಂಬಿನಿಂದ ಪತಿಯ ಉಸಿರು ಗಟ್ಟಿಸಿಕೊಂದಿದ್ದಾಳೆ. ಬಳಿಕ ಹೃದಯಾಘಾತದ ನಾಟಕವಾಡಿದ್ದಾಳೆ.ಕೊಲೆ ಬಳಿಕ ತನಗೇನು ಗೊತ್ತೇ ಇಲ್ಲ ಎನ್ನುವಂತೆ ಮೃತ ಗಂಡನ ಮುಂದೆ ಕುಳಿತು ಕಣ್ಣೀರ ಕೋಡಿ ಹರಿಸಿದ್ದಾಳೆ. ಹೃದಯಾಘಾತದಿಂದ ಸತ್ತ ಎಂದು ಸಂಬಂಧಿಕರನ್ನ ನಂಬಿಸೋಕೆ ಯತ್ನಿಸಿದ್ದಾಳೆ. ಆದರೆ ಮಾನಪ್ಪನ ಮುಖದ ಮೇಲೆ ಅಲ್ಲಲ್ಲಿ ಗಾಯಗಳಾಗಿರುವುದನ್ನು ಊರಿನವರು ಗಮನಿಸಿದ್ದಾರೆ.ಈ ವೇಳೆ ಊರಿನವರಿಗೆ…

Read More

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇತ್ತೀಚಿಗೆ ನಡೆದ ಕಾಲ್ತುಳಿತ ದುರಂತದಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದರು. ಇದೀಗ ಇಬ್ಬರ ಮೃತದೇಹ ಏರ್ ಲಿಫ್ಟ್ ಮೂಲಕ ಬೆಳಗಾವಿಗೆ ತಲುಪಿವೆ.ಅರುಣ್ ಕೊಪರ್ಡೆ ಹಾಗೂ ಮಹದೇವಿ ಬಾವನೂರ್ ಅವರ ಮೃತದೇಹಗಳು ಆಗಮಿಸಿವೆ. ಹೌದು ಮಹಾಕುಂಭ ಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಪೈಕಿ ಮಹಾದೇವಿ ಬಾವನೂರ ಹಾಗೂ ಅರುಣ ಕೋಪರ್ಡೆ ಅವರ ಶವಗಳು ಸರಿಯಾದ ಸಮಯಕ್ಕೆ ದೆಹಲಿಗೆ ತಲುಪಿವೆ. ಹೀಗಾಗಿ‌ ಮಧ್ಯಾಹ್ನದ ವಿಮಾ‌ನದಲ್ಲಿ ‌ದೆಹಲಿಯಿಂದ ನೇರವಾಗಿ ಬೆಳಗಾವಿಗೆ ತರಲಾಗುತ್ತಿದ್ದು, 3.20ಕ್ಕೆ ವಿಮಾನ ದೆಹಲಿಯಿಂದ ಹಾರಿದ್ದು, ಇದೀಗ ಬೆಳಗಾವಿಗೆ ಬೆಳಗಾವಿ ಮೃತದೇಹಗಳು ತಲುಪಿವೆ. ಏರ್ಪೋರ್ಟ್ ನಿಂದ ನೇರವಾಗಿ ಬಿಮ್ಸ್ ಆಸ್ಪತ್ರೆಗೆ ಇಬ್ಬರ ಮೃತದೇಹಗಳನ್ನು ಸ್ಥಳಾಂತರಿಸಲಾಗುತ್ತದೆ. ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಇಬ್ಬರು ಮೃತದೇಹಗಳನ್ನು ಸ್ಥಳಾಂತರಿಸಲಾಗುತ್ತದೆ. ಬಳಿಕ ಜಿಲ್ಲಾಡಳಿತ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಿದೆ. ಈಗಾಗಲೇ ಏರ್ ಪೋರ್ಟ್ ಗೆ ಸಂಸದ ಜಗದೀಶ್ ಶೆಟ್ಟರ್ ಹಾಗೂ ಸರ್ಕಾರದ ಪರವಾಗಿ ಡಿಸಿ ಮಹಮ್ಮದ್ ರೋಷನ್ ಅವರು ಆಗಮಿಸಿದ್ದಾರೆ.…

Read More

ಬೆಂಗಳೂರು : ಕಳೆದ ಜನವರಿ 21ರಂದು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಯುವಕನನ್ನು ಗ್ಯಾಂಗ್ ಒಂದು ಅಪಹರಿಸಿ, ಆತನ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಆತನಿಂದ ಮೊಬೈಲ್, ಹಣ ಹಾಗೂ ಬೈಕ್ ಕದ್ದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನೇಕಲ್ ತಾಲೂಕಿನ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಯುವಕನ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಯುವಕನನ್ನು ಅರೆಸ್ಟ್ ಮಾಡಿ ಹಲ್ಲೆ ಮಾಡಿದ್ದ ಗ್ಯಾಂಗ್ ಇದೀಗ ಬಂಧನವಾಗಿದೆ. ಬಂಧಿತರನ್ನು ಅನಿಲ್ (21) ಸಿದ್ದಾರ್ಥ್ (21) ದರ್ಶನ (20) ಎಂದು ತಿಳಿದು ಬಂದಿದೆ. ಇನ್ನೋರ್ವ ಆರೋಪಿ ಶಶಾಂಕ್ ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.ಜನವರಿ 21ರಂದು ಮುರುಳಿ ಎಂಬುವ ಯುವಕನನ್ನು ಅಪಹರಿಸಿ ಈ ಒಂದು ಗ್ಯಾಂಗ್ ದರೋಡೆ ಮಾಡಿತ್ತು ಅಲ್ಲಿ ಮಾಡಿ ಬೈಕ್ ಮತ್ತು ಹಣ ಮೊಬೈಲ್ ಕಿತ್ತುಕೊಂಡು ಯುವಕರು ಪರಾರಿಯಾಗಿದ್ದರು. ಇದೀಗ ಮೂವರನ್ನು ಆನೇಕಲ್…

Read More

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ದರೋಡೆ, ಕಳ್ಳತನ ಕೊಲೆ ಸುಲಿಗೆಗಳಂತಹ ಘಟನೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿಗೆ ಉಡುಪಿ ಮೂಲದ ಗರುಡ ಗ್ಯಾಂಗ್​​ ಎಂಟ್ರಿ ಕೊಟ್ಟಿದೆ. ಪೆಟ್ರೋಲ್ ಟ್ರಾನ್ಸ್ ಪೋರ್ಟ್ ಉದ್ಯಮಿಯನ್ನು ಅಪಹರಿಸಿದ ಇವರು ಲಕ್ಷಾಂತರ ರೂಪಾಯಿ ಹಣ ದೋಚಿ ಪಾರಿ ಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ನಡೆದಿದೆ. ಹೌದು ಗರುಡಾ ಗ್ಯಾಂಫ್ ನೆಲಮಂಗಲದ ಬಳಿ ಉದ್ಯಮಿ ಇಕ್ಬಾಲ್​ನನ್ನು ಸಿನಿಮೀಯ ರೀತಿಯಲ್ಲಿ ಕಿಡ್ಯ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ.ಹಣ ಕಸಿದುಕೊಂಡು ಉಡುಪಿ ಮೂಲದ ಗರುಡ ಗ್ಯಾಂಗ್ ಇದೀಗ ಪರಾರಿ ಆಗಿದೆ. ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ಉದ್ಯಮಿಯನ್ನು ಅಪಹರಿಸಿ ಹಣ ದೋಚಿದ್ದಾರೆ. ಕಳೆದ ಶನಿವಾರ ರಾತ್ರಿ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ವೃತ್ತದ ಬಳಿ ಇರುವ ಸಿಮ್ ಬಿರಿಯಾನಿ ಹೋಟೆಲ್‌ನಲ್ಲಿ ಊಟ ಮುಗಿಸಿ ನೆಲಮಂಗಲದಿಂದ ಮಂಗಳೂರು ಮಾರ್ಗವಾಗಿ…

Read More

ಬೆಳಗಾವಿ : ಬೆಳಗಾವಿಯ ಖಡೆ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವಂತಹ ಹಳೆ ಪಾಲಿಕೆ ಕಚೇರಿಯಲ್ಲಿ ಇಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದೆ. ಈ ಒಂದು ಅಗ್ನಿ ದುರಂತದಲ್ಲಿ ಕಚೇರಿ ದಾಖಲೆ ಕೊಠಡಿಯಲ್ಲಿ ಇದ್ದಂತಹ ಕೆಲವು ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿರುವ ಮಾಹಿತಿ ಒದಗಿ ಬಂದಿದೆ. ಹೌದು ಹಳೆ ಪಾಲಿಕೆ ಕಚೇರಿಯಲ್ಲಿ ದಾಖಲಾತಿ ಕೊಠಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಗಾವಿಯ ಖಡೆ ಬಜಾರ್ ನಲ್ಲಿರುವ ಹಳೆಯ ಪಾಲಿಗೆ ಕಚೇರಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಕೊಠಡಿಯಲ್ಲಿದ್ದ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಸಿಗರೇಟ್ ಸೇದಿ ಕೊಠಡಿಗೆ ಎಸೆದು ಹೋಗಿರುವ ಶಂಕೆ ಇದೀಗ ವ್ಯಕ್ತವಾಗಿದೆ.ಘಟನೆ ಕುರಿತಂತೆ ಖಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸಂಸದ ಡಾ. ಕೆ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದರು. ನನ್ನನ್ನು ರಾಜಕೀಯವಾಗಿ ಮುಗಿಸಲು ವಿಜಯೇಂದ್ರ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿ ವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಈ ಬಚ್ಚಾ ನಿಂದ ನಾವು ಕಲಿಬೇಕಾ ನಮ್ಮನ್ನು ಪಕ್ಷದಿಂದ ಹೊರಗೆ ಹಾಕಿದರೆ ಹಾಕಿ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರೇ ಅಧ್ಯಕ್ಷ ಘೋಷಣೆ ಮಾಡಲಿ. ಚುನಾವಣೆ ಯಾಕೆ ಬೇಕು? ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಸಂಘಟನೆ ಮಾಡಿದ್ದೇನೆ. ವಿಜಯೇಂದ್ರ ಬಚ್ಚಾ, ನಾವು ಅವನಿಂದ ಕಲಿಯಬೇಕಿಲ್ಲ.ನಮಗೆ ಯಾವುದೇ ಭಯ ಇಲ್ಲ. ಪಕ್ಷದಿಂದ ತೆಗೆದು ಹಾಕ್ತೀರಾ ಹಾಕಲಿ. ನಾವು ಹೆದರೊಲ್ಲ ಎಂದು ಸವಾಲು ಹಾಕಿದರು. ವಿಜಯೇಂದ್ರ ಅವರ ಒರಿಜಿನಲ್ ಬಣ್ಣ ಹೊರಗೆ ಬಂದಿದೆ. ವಿಜಯೇಂದ್ರ ಯಾಕೆ ಸರ್ಕಸ್ ಮಾಡ್ತಿದ್ದೀರಾ ಚುನಾವಣೆ ಅಂತ. ರಾಧಾಮೋಹನ್‌ಗೆ ಹೇಳಿ ರಾಜ್ಯಾಧ್ಯಕ್ಷ ನೀವೇ ಅಂತ…

Read More

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚಿಗೆ ಕಾಲ್ತುಳಿತ ಸಂಭವಿಸಿ ಭಾರಿ ದುರಂತ ಸಂಭವಿಸಿತ್ತು. ಇದರಲ್ಲಿ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನಪ್ಪಿದ್ದರು. ಇದೀಗ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದು, ಪ್ರಯಾಗ್ ರಾಜ್ ನಿಂದ ಬೆಳಗಾವಿಗೆ ಆಗಮಿಸುತ್ತಿರುವ ವೇಳೆ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಹೌದು ಪ್ರಯಾಗ್ರಾಜ್ ಯಾತ್ರೆಗೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿ ಮೂಲದ ದೇಶಪಾಂಡೆ ಗಲ್ಲಿಗೆ ನಿವಾಸಿ ರವಿ ಜಟಾರ (61) ಇದೀಗ ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ದಿಂದ ಬೆಳಗಾವಿಗೆ ವಾಪಸ್ ಆಗುವಾಗ ಪುಣೆಯಲ್ಲಿ ರೈಲಿನಲ್ಲಿ ಅವರಿಗೆ ಹೃದಯಘಾತವಾಗಿ ರವಿ ಜಠಾರ ಸಾವನಪ್ಪಿದ್ದಾರೆ.

Read More

ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ ಎಂ ಎಸ್ ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಮುಬೀನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರೀತಿಯ ವಿಚಾರಕ್ಕೆ ಆರೋಪಿ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಸಿಫಾ (22) ಎಂದು ತಿಳಿದುಬಂದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂ ಎಸ್ ಸಿ ಓದುತ್ತಿದ್ದ ಶಿಫಾ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ನಿವಾಸಿಯಾಗಿದ್ದಾಳೆ. ಇದೀಗ ಪರಿಚಯಸ್ತ ಮುಬೀನ್ ನಿಂದಲೇ ವಿದ್ಯಾರ್ಥಿನಿ ಸಿಫಾ ಕೊಲೆಯಾಗಿದ್ದಾಳೆ. ಸದ್ಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಒಂದು ಕಡೆ ಲೋಕಾಯುಕ್ತ ಸಂಸ್ಥೆ ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ (ED) ಸಂಸ್ಥೆ ಕೂಡ ಸಂಪೂರ್ಣ ತನಿಖೆ ನಡೆಸಿದ್ದು ಇದೀಗ ಇಡಿ ತಾತ್ಕಾಲಿಕ ಶಕ್ತಿ ಆದೇಶದಲ್ಲಿ ಸ್ಪೋಟಕವಾದ ಮಾಹಿತಿ ಬಹಿರಂಗವಾಗಿದ್ದು, ಮುಡಾದಲ್ಲಿ ಸೈಟ್ ಗಳ ಹಂಚಿಕೆಯ ಪರಿಹಾರಾರ್ಥವಾಗಿ ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ ಆಗಿರುವ ಬಗ್ಗೆ ಇಡಿಯು ದಾಖಲೆಗಳಲ್ಲಿ ಉಲ್ಲೇಖಿಸಿದ್ದು ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು 102 ಪುಟಗಳ ಇಡಿಯ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ ಎಂದು ತಿಳಿದುಬಂದಿದೆ. ಜಮೀನನ್ನು 3,24,700 ಮುಡಾದಿಂದ ಸ್ವಾಧೀನ ಪಡೆದುಕೊಂಡಿದ್ದಾರೆ. ಜಮೀನನ್ನು ತಪ್ಪು ಮಾಹಿತಿ ಪ್ರಭಾವ ಬಳಸಿ ಡಿನೋಟಿಫಿಕೇಶನ್ ಮಾಡಲಾಗಿದೆ. ಬಿಎಂ ಮಲ್ಲಿಕಾರ್ಜುನಸ್ವಾಮಿ ಕೃಷಿ ಜಮೀನು ಎಂದು ಖರೀದಿ…

Read More