Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಅಕ್ಕ ಪಕ್ಕದ ಮನೆಯವರು ಗಲಾಟೆ ಮಾಡಿಕೊಂಡಿದ್ದಾರೆ. ಇದೆ ವಿಷಯ ಇಟ್ಟುಕೊಂಡು ವ್ಯಕ್ತಿಯೊರ್ವನನ್ನು ಕೊಲ್ಲಲು ತೆರಳಿದಾಗ, ಮಹಿಳೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಮನೆಯೊಂದರ ಕಂಪೌಂಡ್ ಮೇಲೆ ನೇತಾಡಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಹೌದು ಈ ಒಂದು ದೃಶ್ಯ ನೋಡುಗರನ್ನು ಬೆಚ್ಚಿ ಬೀಳಿಸುತ್ತೆ. ಮುರಳಿ ಪ್ರಸಾದ್ ಎನ್ನುವಾತ ಬೈಕ್ ಮೇಲೆ ತೆರಳತ್ತಿದ್ದು, ಈತನಿಗೆ ಗುದ್ದಿ ಹತ್ಯೆ ಮಾಡುವ ಪ್ಲ್ಯಾನ್ ಇತ್ತು. ಆದ್ರೆ, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಕಾರು ಗುದ್ದಿದೆ. ಪರಿಣಾಮ ಮಹಿಳೆ ಕಾಂಪೌಂಡ್ ಮೇಲೆ ಬಿದ್ದು ನೇತಾಡಿದ್ದಾಳೆ. ಬಳಿಕ ಸ್ಥಳೀಯರು ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಕಾರು ಚಾಲಕ ಸತೀಶ್ ಕುಮಾರ್ ಈ ಕೃತ್ಯ ಎಸಗಿದ್ದಾನೆ. ಅಕ್ಕಪಕ್ಕದ ಮನೆಯವರ ನಡುವೆ ತಕರಾರು ಇದ್ದು, ಇದೇ ವಿಚಾರಕ್ಕೆ ಮುರಳಿ ಪ್ರಸಾದ್ನನ್ನು ಕೊಲ್ಲಲು ಸತೀಶ್ ಕುಮಾರ್ ಸ್ಕೆಚ್ ಹಾಕಿದ್ದ. ಅದರಂತೆ ಇಂದು (ಮಾರ್ಚ್ 13) ಮುರಳಿ ಪ್ರಸಾದ್ ಬೈಕ್ನಲ್ಲಿ ಹೋಗುತ್ತಿರುವುದನ್ನು ನೋಡಿ ಸತೀಶ್ ಕುಮಾರ್ ಕಾರಿನಿಂದ…
ತುಮಕೂರು : KSRTC ಬಸ್ ಚಾಲಕ, ಕಂಡಕ್ಟರ್ ಹಾಗು ಪ್ರಯಾಣಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ KSRTC ಬಸ್ ಚಾಲಕ ಹಾಗು ಕಂಡಕ್ಟರ್ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡದಿಂದ ತುಮಕೂರಿಗೆ ಬಸ್ ತೆರಳುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರು- ನಿರ್ವಾಹಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ನಿರ್ವಾಹನಕ ಮೇಲೆ ಪ್ರಯಾಣಿಕರು ಹಲ್ಲೆ ನಡೆಸುತ್ತಿದ್ದಾಗ, ಗಲಾಟೆ ಬಿಡಿಸಿಲು ಬಂದ ಚಾಲಕನ ಮೇಲೂ ಕಿಡಿಗೇಡಿಗಳು ಥಳಿಸಿದ್ದಾರೆ. ಹಲ್ಲೆಗೆ ಸದ್ಯ ನಿಖರ ಕಾರಣ ಏನು ಎಂಬುವುದು ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾಲಕ ಹಾಗು ಕಂಡಕ್ಟರ್ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಬಹಳ ಮಹತ್ವ ಪಡೆದಿದೆ.ಈಗಾಗಲೇ ಖಾಸಗಿ ಹೋಟೆಲ್ ಗೆ ಡಿಕೆ ಶಿವಕುಮಾರ್ ಅವರು ಆಗಮಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಧ್ಯ ಇದೀಗ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 5 ವರ್ಷ ಪೂರೈಸಿದ ಖುಷಿಯಲ್ಲಿ ಈ ಒಂದು ಔತಣಕೂಟ ಏರ್ಪಡಿಸಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಖಾಸಗಿ ಹೋಟೆಲ್ಗೆ ಆಗಮಿಸಿದ್ದಾರೆ. ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ…
ಬೆಂಗಳೂರು : ಬೊಮ್ಮನಹಳ್ಳಿ ಕ್ಷೇತ್ರದ ಅಪಾರ್ಟ್ಮೆಂಟ್ ನಲ್ಲಿ ನಾಯಿ ಹಾವಳಿ ವಿಚಾರವಾಗಿ ಈ ಒಂದು ನಾಯಿ ಹಾವಳಿಯ ಬಗ್ಗೆ ಇಂದು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪವಾಯಿತು. ವಿಧಾನಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪವಾದ ಬೆನ್ನಲ್ಲೆ ಬೆಳ್ಳಂದೂರು ಠಾಣೆಯ ಪೊಲೀಸರು ಇದೀಗ ಇಬ್ಬರ ವಿರುದ್ಧ FIR ದಾಖಲು ಮಾಡಿಕೊಂಡಿದ್ದಾರೆ. ಮೀನು ಸಿಂಗ್ ಹಾಗೂ ದೀಪ ಬಲ್ವಾಲಿ ವಿರುದ್ಧ FIR ದಾಖಲಾಗಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಚಿತ್ರಮಂದಿರ ಒಂದದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಈ ಒಂದು ಅಗ್ನಿ ದುರಂತದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಈ ಬೆಂಕಿ ದುರಂತವು ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದ ಹೃದಯ ಭಾಗದಲ್ಲಿರುವ ಗಣೇಶ್ ಚಿತ್ರಮಂದಿರದಲ್ಲಿ ಸಂಭವಿಸಿದೆ. ತಡರಾತ್ರಿ ಚಿತ್ರಮಂದಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ದಟ್ಟ ಹೊಗೆ ಹಾಗೂ ಕೆಟ್ಟ ವಾಸನೆ ಬರುತ್ತಿದ್ದಂತೆ ಸ್ಥಳೀಯರು ಗಮನಿಸಿದ್ದಾರೆ. ಅಗ್ನಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ, ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಹರಿಹರದಿಂದ ಅಗ್ನಿಶಾಮಕದಳದ ಸಿಬ್ಬಂದಿ ಅಗಮಿಸಿ ಅಗ್ನಿ ನಂದಿಸಿದ್ದಾರೆ. ಇದು ಪಟ್ಟಣದ ಮೊಟ್ಟ ಮೊದಲ ಚಿತ್ರಮಂದಿರ. ಕಲೆಕ್ಷನ್ ಇಲ್ಲದೇ, ಒಟಿಟಿ ಹೊಡೆತದಿಂದ ನಷ್ಟಕ್ಕೆ ಸಿಲುಕಿದ್ದ ಗಣೇಶ್ ಚಿತ್ರಮಂದಿರ ಕೆಲ ಸಮಯದ ಹಿಂದೆ ಮುಚ್ಚಲ್ಪಟ್ಟಿತ್ತು. 60ರ ದಶಕದಿಂದ ಕಾರ್ಯಾರಂಭಿಸಿದ್ದ ಚಿತ್ರಮಂದಿರ, ಕೆಲ ವರ್ಷಗಳಿಂದ ಪ್ರದರ್ಶನ ಸ್ಥಗಿತಗೊಳಿಸಿತ್ತು. ಆದ್ರೀಗ ಕಟ್ಟಡಕ್ಕೆ ಹಾನಿ ಸಂಭವಿಸಿದೆ. ಅವಘಡಕ್ಕೆ ಸ್ಪಷ್ಟ ಕಾರಣ ಹಾಗೂ ನಷ್ಟದ ಅಂದಾಜು ಮೊತ್ತ ತಿಳಿದು…
ಬೆಂಗಳೂರು : ಇತ್ತೀಚಿಗೆ ಪ್ಲಾಸ್ಟಿಕ್ ನಲ್ಲಿ ತಯಾರಿಸುವಂತಹ ಇಡ್ಲಿ ಹಾಗೂ ಕಲ್ಲಂಗಡಿಯಲ್ಲಿ ಬಣ್ಣ ಹೆಚ್ಚು ಕಾಣಲು ಕೃತಕ ಬಣ್ಣ ಬಳಕೆ ಹಾಗೂ ಬೆಲ್ಲದಲ್ಲಿ ಸಹ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಾನಿಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ ಹೆಣ್ಣು ಮಕ್ಕಳ ಅಚ್ಚುಮೆಚ್ಚು ಆಗಿರುವಂತಹ ಮಲ್ಲಿಗೆ ಹೂವಿನಲ್ಲಿ ಕೂಡ ಇದೀಗ ಕೆಮಿಕಲ್ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೌದು ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಮಲ್ಲಿಗೆ ಹೂವೆಂದರೆ ಪಂಚಪ್ರಾಣ.ಎಷ್ಟೇ ದೊಡ್ಡದಾದ ಸಭೆ, ಸಮಾರಂಭಗಳಿರಲಿ ಯಾವುದೇ ಒಂದು ಕಾರ್ಯಕ್ರಮವಿರಲಿ ಮಹಿಳೆಯರು ಮಲ್ಲಿಗೆ ಹೂವು ಮುಡಿದುಕೊಳ್ಳುವುದನ್ನು ಮಾತ್ರ ಮರೆಯಲ್ಲ. ಇದೀಗ ಮಲ್ಲಿಗೆ ಹೂ ಬಾಡದಿರಲಿ ಅಂತ ಬಳಸುವ ಕೆಮಿಕಲ್ ಹೆಣ್ಣುಮಕ್ಕಳಿಗೆ ಕಂಟಕ ಎಂಬ ಅಘಾತಕಾರಿ ಮಾಹಿತಿ ಬಯಲಾಗಿದೆ. ಮಲ್ಲಿಗೆ ಹೂವಿನ ಮೇಲೂ ಈ ಕೃತಕ ಬಣ್ಣ ಬಳಕೆಯ ಕರಾಳತೆ ಬಯಲಾಗಿದ್ದು, ಹೂ ಬಾಡದಿರಲಿ ಅಂತ ಬಳಸುವ ಈ ಕೃತಕ ಬಣ್ಣ, ಆರೋಗ್ಯದ ಮೇಲೆ ದಷ್ಪರಿಣಾಮ ಬೀರಲಿದೆ ಅನ್ನೋ ವರದಿ ಬೆಚ್ಚಿ ಬೀಳಿಸಿದೆ. ಹೂ ಬಾಡದಿರಲಿ ಅಂತ ಕೆಮಿಕಲ್ ಬಳಕೆ…
BIG NEWS : ಸಿಎಂ ಅವರೇ ‘ಅಂಗೈ ಹುಣ್ಣಿಗೆ ಕನ್ನಡಿ ಬೇಡ’ 40% ಕಮಿಷನ್ ಆರೋಪದ ಕುರಿತು ಕ್ರಮ ಕೈಗೊಳ್ಳಿ : MLC ಸಿಟಿ ರವಿ
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಮಾಡಿದ 40 ಶೇಕಡ ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವಿಚಾರವಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ 40 ಪರ್ಸೆಂಟ್ ಕಮಿಷನ್ ನಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಈಗ 60 ರಿಂದ 80 ಪರ್ಸೆಂಟ್ ದಾಟಿದೆ ಎಂದು ಹೇಳುತ್ತಿದ್ದಾರೆ ಮಾನ್ಯ ಮುಖ್ಯಮಂತ್ರಿಗಳೇ ಅಂಗೈ ಹುಣ್ಣಿಗೆ ಕನ್ನಡಿ ಬೇಡ 60% ಕಮಿಷನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಹೋಗುತ್ತಿದೆ? ಇದು ನಮ್ಮ ಆರೋಪವಲ್ಲ ಗುತ್ತಿಗೆದಾರರು ಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ NOC ಗೆ 20% ಕೊಡಬೇಕು. ದಲ್ಲಾಳಿ ಅಧಿಕಾರಿಗಳಿಗೆ ಎಷ್ಟು ಪರ್ಸೆಂಟ್ ಕೊಡಬೇಕು? ನೀವು ಪ್ರಾಮಾಣಿಕರಾಗಿದ್ದರೆ ಕ್ರಮ ಕೈಗೊಳ್ಳಿ. 40% ಕಮಿಷನ್ ವಿರುದ್ಧ ಕ್ರಮ ಕೈಗೊಳ್ಳದಂತೆ ನಿಮ್ಮನ್ನು ಯಾರು ತಡೆದಿದ್ದಾರೆ? ತಪ್ಪಿತಸ್ಥರು…
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ SEP-TSP ಹಣವನ್ನು ಬಳಸಲಾಗುತ್ತಿದೆ ಎಂದು ಕಳೆದ ಹಲವು ದಿನಗಳಿಂದ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಆರೋಪ ಮಾಡಿದ್ದು, ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಕುರಿತು ಚರ್ಚೆ ನಡೆಸಲಾಯಿತು ಈ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದರು. ಕಾಡಿನಲ್ಲಿ ಪ್ರಾಣಿಗಳನ್ನು ಕಾಯುವ ಜನರಿಗೆ ಎಸ್ ಸಿ, ಎಸ್ ಟಿ ಹಣ ಬಳಸಿದ್ದಾರೆ ಎಂದು ಅಶೋಕ್ ಹೇಳಿದಾಗ ಅಲ್ಲಿ ಎಸ್ ಸಿ ಎಸ್ ಟಿ ಸಮುದಾಯದವರಿದ್ದಾರೆ ಹಾಗಾಗಿ ಅವರಿಗೆ ಕೊಟ್ಟಿದ್ದಾರೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಈ ವೇಳೆ ಕಾಡಿನಲ್ಲಿನೂ ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳು ಇವೆಯಾ ಎಂದು ಹುಲಿ ದಾಳಿ ಮಾಡುವ ರೀತಿ ಅನುಕರಣೆ ಮಾಡಿ ಸ್ಪೀಕರ್ ಕಾಲೆಳೆದ ಶಾಸಕ ಯತ್ನಾಳ್, ಸ್ಪೀಕರ್ ತಮ್ಮ ಮಾತನ್ನು ವಾಪಸ್ ಪಡೆಯುತ್ತೇನೆ ಅಂದರು ಬಿಡದೆ ಶಾಸಕ ಯತ್ನಾಳ್ ಮಾತನಾಡಿದರು. ಕೊನೆಗೆ ಸ್ಪೀಕರ್ ಯುಟಿ ಖಾದರ್ ಯತ್ನಾಳ್ ಅವರಿಗೆ ಕೈ ಮುಗಿದರು.
ಕಲಬುರ್ಗಿ : ಮನೆ ಇಲ್ಲದವರಿಗೆ ಸರ್ಕಾರದಿಂದ ಮಂಜೂರಾದ ಮನೆಗಳನ್ನು ಹಂಚಲಾಗುತ್ತದೆ. ಆದರೆ ಈ ಒಂದು ಮನೆಗಾಗಿ ಮಹಿಳೆಯೊಬ್ಬರು ಗ್ರಾಮ ಪಂಚಾಯತ್ ಸದಸ್ಯನ ಬಳಿಗೆ ಮನೆ ನೀಡಿ ಎಂದು ಮನವಿ ಮಾಡಿದಾಗ, ಮೊದಲು ಆತ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಬಳಿಕ ಹಣದ ಬದಲು ನೀನು ಬಾ ಇಲ್ಲ ನಿನ್ನ ಮಗಳನ್ನು ಕಳಿಸು ಎಂದು ಮಂಚಕ್ಕೆ ಕರೆದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ. ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ…
ಬೆಂಗಳೂರು : ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ಮಾಡುತ್ತೇವೆ. ವೀರಶೈವ ಲಿಂಗಾಯತ ಸಮುದಾಯ ಯಾರ ಸ್ವತ್ತು ಅಲ್ಲ ಹಾಗಾಗಿ ಈ ಒಂದು ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರಬಹುದು ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯ ಒಗ್ಗೂಡಿಸಲು ಸಮಾವೇಶ ಆಯೋಜನೆ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ. ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬರಬಹುದು ಎಂದರು. ವೀರಶೈವ ಲಿಂಗಾಯತ ಸಮುದಾಯ ಯಾರ ಸ್ವತ್ತು ಅಲ್ಲ. ಈ ಒಂದು ಸಮಾವೇಶದಿಂದ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ನಾನು ಈ ಹಿಂದೆ ಬೇರೆಯವರ ಮಾತು ಕೇಳಿ ಹಿನ್ನಡೆ ಅನುಭವಿಸಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿ ಮಾಡೋಕೆ ಹೋಗಬಾರದು. ವೀರಶೈವ ಲಿಂಗಾಯತ ಸಮಾವೇಶಕ್ಕೆ ಶಾಸಕ ಯತ್ನಾಳ್ ಬರಬೇಕು…












