Author: kannadanewsnow05

ಮೈಸೂರು : ಕಳೆದ ಮಾರ್ಚ್ 5 ರಂದು ಮೈಸೂರಲ್ಲಿ ವೃದ್ದೆಯೊಬ್ಬರ ಸಾವಾಗಿತ್ತು. ಆದರೆ ವೃದ್ದೆಯ ಮಗ ತಾಯಿಯ ಸಾವಿನ ಕುರಿತು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ವೃದ್ದೆಯ ಸ್ನೇಹಿತೆನೆ ಆಕೆಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು ಮೈಸೂರು ವೃದ್ದೆಯ ಮರ್ಡರ್ ಬೆಚ್ಚಿ ಬೀಳಿಸುತ್ತೆ. ಕೊಟ್ಟ ಸಾಲ ಕೇಳಿದಕ್ಕೆ ಎದೆ ಮೇಲೆ ಕುಳಿತು ವೃದ್ದೆಯ ಉಸಿರುಗಟ್ಟಿಸಿ ಹತ್ಯೆಗೈಯ್ಯಲಾಗಿದೆ. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ಆಯುಕ್ತೆ ಸಿಮಾ ಲಾಟ್ಕರ್ ಸ್ಪೋಟಕವಾದ ಮಾಹಿತಿ ನೀಡಿದ್ದಾರೆ. ಕೊಲೆ ಮಾಡಿದ್ದಾಗಿ ಆರೋಪಿ ಶಕುಂತಲಾ ತಪ್ಪು ಒಪ್ಪಿಕೊಂಡಿದ್ದಾಳೆ.ಸದ್ಯ ಆಕೆಯನ್ನು ಜೈಲಿಗೆ ಅಟ್ಟಲಾಗಿದೆ. ಶಕುಂತಲಾ ಗೆ 2.5 ಲಕ್ಷ ಸಾಲ ಕೊಟ್ಟಿದ್ದ ಮೃತ ಸುಲೋಚನಾ ಮಾರ್ಚ್ 5 ರಂದು ಸಾಲ ಕೇಳಲು ಶಕುಂತಲಾ ಮನೆಗೆ ತೆರಳಿದ್ದಾಳೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರ ಮಧ್ಯ ಗಲಾಟೆ ಆಗಿದೆ. ಗಲಾಟಿ ನಂತರ ಶಕುಂತಲಾ ಉಸಿರು ಕಟ್ಟಿಸಿ ಸುಲೋಚನಾಳನ್ನು…

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ರನ್ಯಾ ರಾವ್ ಮನೆಯ ಮೇಲೆ ಇಡಿ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಆದರೆ ನಟಿ ರನ್ಯಾ ರಾವ್ ಪತಿಗು ಡಿ ಆರ್ ಐ ಶಾಕ್ ನೀಡಿದೆ. ಹೌದು ರನ್ಯಾ ಪತಿ ಜತಿನ್ ನಿವಾಸ ಸೇರಿದಂತೆ ಒಟ್ಟು 9 ಕಡೆ DRI ದಾಳಿ ನಡೆಸಿದೆ. ಆಡುಗೋಡಿ ಠಾಣೆ ವ್ಯಾಪ್ತಿಯಲ್ಲಿನ ಫ್ಲ್ಯಾಟ್ ಸೇರಿದಂತೆ 9 ಸ್ಥಳಗಳಲ್ಲಿ ದಾಳಿ ನಡೆಸಿದೆ. ಅಲ್ಲದೇ ರನ್ಯಾ ರಾವ್ ವಿದೇಶಿ ಪ್ರಯಾಣಕ್ಕೆ ಫ್ಲೈಟ್ ಟಿಕೆಟ್ ಬುಕ್ ಮಾಡಲು ಜತಿನ್ ಕ್ರೆಡಿಟ್ ಕಾರ್ಡ್ ಬಳಸಿದ್ದ ಹಿನ್ನೆಲೆಯಲ್ಲಿ DRI ದಾಳಿ ನಡೆಸಿದೆ.

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾರಾವ್ ಈಗಾಗಲೇ ಜೈಲು ಪಾಲಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ಅವರ ಬಾಯ್ ಫ್ರೆಂಡ್ ಆಗಿರುವ ತರುಣ್ ರಾಜು ಮೇಲು ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ಇಂದು ಇಡಿ ಅಧಿಕಾರಿಗಳು ಬೆಂಗಳೂರಿನ ಲ್ಯಾವೆಲ್ಲಿ ಮೆನ್ಷನ್ ಅಪಾರ್ಟ್ಮೆಂಟಲ್ಲಿ ಇಡೀಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೀಗ ಆಕೆ ಬಾಯ್ ಫ್ರೆಂಡ್ ಆಗಿದ್ದ ತರುಣ ರಾಜು ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ತರುಣ್ ರಾಜು ಯಾರು? ನಟಿ ರನ್ಯಾ ರಾವ್ ಅವರು ಟಾಲಿವುಡ್ ನಟ ತರುಣ್ ಎಂಬುವರು ಬಾಯ್ ಫ್ರೆಂಡ್ ಎಂಬುದಾಗಿ ಹೇಳಲಾಗುತ್ತಿದೆ. ತೆಲುಗು ಸಿನಿಮಾಕ್ಕೆ ಎಂಟ್ರಿ ಕೊಡುವ ಮೊದಲು ಸಿನಿಮಾಗಾಗಿ ತನ್ನ ಹೆಸರನ್ನು ತರುಣ್ ಎಂಬುದಾಗಿ ಬದಲಿಸಿಕೊಂಡಿದ್ದನಂತೆ. ತರುಣ್ ಮೂಲ ಹೆಸರು ವಿರಾಟ್ ಕೊಂಡೂರು ರಾಜ್ ಎಂಬುದಾಗಿದೆ. 2018ರಲ್ಲಿ ತೆರೆ ಕಂಡಂತ ಪರಿಚಯಂ…

Read More

ಮೈಸೂರು : ಪತಿ ಹಾಗೂ ಆತನ ಮನೆಯವರಿಂದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಒಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಿಂಡೇನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರೇಷ್ಮಾ (25) ಎಂದು ತಿಳಿದುಬಂದಿದ್ದು, ಬರೀ ಶ್ರೀನಿವಾಸ್ ಹಿರೇ ವಿಚಾರವಾಗಿ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಕಳೆದ ಆರು ವರ್ಷಗಳ ಹಿಂದೆ ಶ್ರೀನಿವಾಸ ಹಾಗೂ ರೇಷ್ಮಾ ಅವರ ಮದುವೆ ಆಗಿತ್ತು. ಈರಯ್ಯನ ಕೊಪ್ಪಲು ನಿವಾಸಿ ಚಂದ್ರೇಗೌಡ, ಶಾಂತಮ್ಮ ದಂಪತಿಯ ಪುತ್ರಿ ರೇಷ್ಮಾ ಸಾವಿಗೆ ಪತಿ ಶ್ರೀನಿವಾಸ್ ಮತ್ತು ಆತನ ಸಹೋದರ ಶ್ರೀಧರ್, ಮಾವ ಮಾದೇಗೌಡ, ಅತ್ತೆ ಸರಸಮ್ಮ ಕಾರಣ ಎಂದು ಆರೋಪ ಕೇಳಿಬಂದಿದೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂಜೆ 7:00 ಗೆ ನಡೆಯಬೇಕಿದ್ದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಾಳೆಗೆ ಮುಂದೂಡಿಕೆಯಾಗಿದೆ. ಹೌದು ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ 7 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ನಾಳೆ ಈ ಒಂದು ಸಚಿವ ಸಂಪುಟ ಸಭೆ ಮುಂದೂಡಲಾಗಿದ್ದು, ನಾಳೆ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಸಂಜೆ 7 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಿಗದಿ ಪಡಿಸಲಾಗಿದೆ. ಈ ಒಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಿದ್ದಾರೆ. ಅಂದು ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯೂ ಅಸ್ತು ಎನ್ನಲಿದ್ದಾರೆ ಎನ್ನಲಾಗುತ್ತಿದೆ.

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇಂದು ‘ED’ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಈ ಒಂದು ಪ್ರಕರಣಕ್ಕೆ ಸಿಬಿಐ ಎಂಟ್ರಿ ಆಗಿದ್ದು, ಇದೀಗ ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡಿದೆ. ಹೌದು ನಟಿ ರನ್ಯಾ ರಾವ್ ಗೋಲ್ಡ್ ಮಾಗಲಿ ಪ್ರಕರಣದಲ್ಲಿ ಸಿಬಿಐ ಎಂಟ್ರಿ ಕೊಟ್ಟಿದ್ದು, ಸಿಬಿಐ ಪ್ರಧಾನ ಕಚೇರಿಯಲ್ಲಿ ಸಿಬಿಐ FIR ದಾಖಲಿಸಿದೆ. DRI ಅಧಿಕಾರಿಗಳ ದೂರು ಆಧರಿಸಿ ಸಿಬಿಐ FIR ದಾಖಲಿಸಿಕೊಂಡಿದೆ. ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಹಿನ್ನೆಲೆಯಲ್ಲಿ FIR ದಾಖಲಾಗಿದೆ. ಬೆಂಗಳೂರು ಮತ್ತು ಮುಂಬೈಗೆ ಅಕ್ರಮವಾಗಿ ಚಿನ್ನ ಸಾಗಾಟ ಹಿನ್ನೆಲೆಯಲ್ಲಿ FIR ದಾಖಲಾಗಿದೆ.

Read More

ಬೆಂಗಳೂರು : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜಕುಮಾರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಡಿವೈಡರ್ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ನಾಲ್ವರಿಗೆ ಗಾಯಗಳಾಗಿವೆ. ದಿಕ್ಕಿಯ ರಭಸಕ್ಕೆ 20 ಮೀಟರ್ ನಷ್ಟು ಕಾರು ಬಿದ್ದಿದೆ. ಕೂಡಲೇ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ಅವರನ್ನು ದಾಖಲಿಸಿ ನೀಡಲಾಗುತ್ತಿದೆ ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೊದಲಗಟ್ಟೆ ಗ್ರಾಮದ ಬಳಿ ನಡೆದಿದೆ. ನೀರು ಪಾಲಾಗಿರುವ ಯುವಕನನ್ನು ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ಎಂದು ತಿಳಿದುಬಂದಿದೆ. ಈತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದವ ಎಂದು ತಿಳಿದುಬಂದಿದೆ.ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಇಂದು ಮತ್ತೊಂದು ದುರ್ಘಟನೆ ನಡೆದಿದೆ. ಘಟನೆ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಉಡುಪಿಯಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಆಗಿದೆ. ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಶೂಟ್ ಔಟ್ ನಡೆದಿದೆ. ಇಸಾಕ್ ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಎಂದು ತಿಳಿದುಬಂದಿದೆ. ಮಣಿಪಾಲ್ ಪೊಲೀಸರು ಇದೀಗ ಇಸಾಕ್ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಣಿಪಾಲ್ ಠಾಣೆಯ ಇನ್ಸ್ಪೆಕ್ಟರ್ ದೇವರಾಜ್ ಅವರು ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ನಡೆಸಿದ ಬಳಿಕ ತಕ್ಷಣ ಪೊಲೀಸರು ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Read More

ಬೀದರ್ : ಬೀದರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಭಾಲ್ಕಿ ಪೊಲೀಸರು, ಆತನಿಂದ ಬರೋಬ್ಬರಿ 14 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಪವನ್ ಎಂದು ತಿಳಿದುಬಂದಿದೆ. ಈತ ಹೈದ್ರಾಬಾದ್ ಮೂಲದವನು ಎಂದು ತಿಳಿದುಬಂದಿದೆ.ಪವನ್ ರೈಲು ಮೂಲಕ ಮಹಾರಾಷ್ಟ್ರದಿಂದ ಹೈದರಾಬಾದ್​ಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದರ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿದ ಭಾಲ್ಕಿ ಪೊಲೀಸರು, ಆತನ ಬ್ಯಾಗನಲ್ಲಿದ್ದ 14 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.

Read More